Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

ಚಂಡೀಗಢ ಮೇಯರ್ ಚುನಾವಣೆ: ಮತಪತ್ರ ತಿರುಚಿದ್ದನ್ನು ಒಪ್ಪಿಕೊಂಡ ಚುನಾವಣಾಧಿಕಾರಿ

- Advertisement -
- Advertisement -

ವಿವಾದಾತ್ಮಕ ಚಂಡೀಗಢ ಮೇಯರ್ ಚುನಾವಣೆ ಕುರಿತಂತೆ ಇಂದು ಸುಪ್ರೀಂ ಕೋರ್ಟ್‌ಗೆ ಹಾಜರಾದ ಚುನಾವಣಾಧಿಕಾರಿ ಅನಿಲ್ ಮಾಸಿಹ್, ತಾನು ಮತಪತ್ರಗಳನ್ನು ತಿರುಚಿರುವುದನ್ನು ಒಪ್ಪಿಕೊಂಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ಸೂಚಿಸಿದೆ.

ಮರು ಚುನಾವಣೆ ನಡೆಸುವ ಬದಲು ರಿಟರ್ನಿಂಗ್ ಅಧಿಕಾರಿ ಮಾಡಿದ ಗುರುತುಗಳನ್ನು ಗಣನೆಗೆ ತೆಗದುಕೊಳ್ಳದೆ ಮತಪತ್ರಗಳನ್ನು ಮರು ಎಣಿಕೆ ಮಾಡಿ ಫಲಿತಾಂಶ ಪ್ರಕಟಿಸಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಕುದುರೆ ವ್ಯಾಪಾರದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ ನ್ಯಾಯಾಲಯ, ನಾಳೆ ಎಲ್ಲಾ ಮತಪತ್ರಗಳನ್ನು ಹಾಜರುಪಡಿಸುವಂತೆ ಆದೇಶಿಸಿದೆ. ಲಭ್ಯ ಮತಪತ್ರಗಳನ್ನು ಕೂಲಂಕುಷ ಪರಿಶೀಲನೆ ನಡೆಸಬೇಕೆಂದು ಸೂಚಿಸಿದೆ.

ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಚುನಾವಣಾ ಅಧಿಕಾರಿಯೊಬ್ಬರನ್ನು ದೇಶದ ಮುಖ್ಯ ನ್ಯಾಯಾಧೀಶರು ಅಡ್ಡ ಪ್ರಶ್ನೆಗೆ ಒಳಪಡಿಸಿರುವುದು ಎಂದು ಮಾಸಿಹ್ ಅವರಿಂದ ಉತ್ತರವನ್ನು ಕೇಳಿದ ನಂತರ ನ್ಯಾಯಾಲಯವು ವಿಷಾದ ವ್ಯಕ್ತಪಡಿಸಿದೆ.

ಜನವರಿ 30ರಂದು ನಡೆದ ಚಂಡೀಗಢ ಮುನ್ಸಿಪಲ್ ಕಾರ್ಪೋರೇಷನ್‌ನ ಮೇಯರ್ ಚುನಾವಣೆಯ ಮತ ಎಣಿಕೆಯಲ್ಲಿ ಎಂಟು ಮತಗಳು ಅಸಿಂಧು ಎಂದು ಚುನಾವಣಾಧಿಕಾರಿ ಅನಿಲ್ ಮಾಸಿಹ್ ಘೋಷಿಸಿದ್ದರು. ಈ ಮೂಲಕ ಎಎಪಿಯ ಮೇಯರ್ ಅಭ್ಯರ್ಥಿಯನ್ನು ಬಿಜೆಪಿಯ ಮನೋಜ್ ಸೋಂಕರ್ ನಾಲ್ಕು ಮತಗಳ ಅಂತರದಿಂದ ಸೋಲಿಸಿದ್ದರು. ಬಿಜೆಪಿಯ ಅಲ್ಪಸಂಖ್ಯಾತ ಘಟಕದ ಸದಸ್ಯರಾದ ಮಾಸಿಹ್ ಅವರು ಉದ್ದೇಶಪೂರ್ವಕವಾಗಿ ಮತಗಳನ್ನು ಅಮಾನ್ಯಗೊಳಿಸಿದ್ದಾರೆ ಎಂದು ಎಎಪಿ ಆರೋಪಿಸಿತ್ತು.

ಎಎಪಿಯ ಆರೋಪಕ್ಕೆ ಪುಷ್ಠಿ ನೀಡುವಂತೆ ಮಾಸಿಹ್ ಅವರು ಎಎಪಿಯ ಕೆಲ ಕೌನ್ಸಿಲರ್‌ಗಳ ಮತ ಪತ್ರಗಳಿಗೆ ಮಾರ್ಕ್‌ ಮಾಡಿರುವುದು ಕ್ಯಾಮಾರದಲ್ಲಿ ರೆಕಾರ್ಡ್‌ ಆಗಿತ್ತು. ಈ ಸಂಬಂಧ ಎಎಪಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಫೆಬ್ರವರಿ 5 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಮಾಸಿಹ್ ಅವರ ಕೃತ್ಯ “ಪ್ರಜಾಪ್ರಭುತ್ವದ ಅಪಹಾಸ್ಯ” ಎಂದಿತ್ತು.

ಇಂದು (ಫೆ.19) ವಿಚಾರಣೆ ಮುಂದುವರೆಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರ ಪೀಠ, ನಿನ್ನೆ(ಫೆ.18) ಸಂಜೆ ಬಿಜೆಪಿಯ ಮನೋಜ್ ಸೋಂಕರ್ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿರುವುದನ್ನು ಗಮನಿಸಿತು ಮತ್ತು ಮಾಸಿಹ್ ಅವರು ಮುಂದೆ ಬಂದು ಕೆಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿತು.

ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು “ಮಿಸ್ಟರ್ ಮಾಸಿಹ್, ನಾನು ನಿಮಗೆ ಕೆಲವು ಪ್ರಶ್ನೆಗಳನ್ನು ಕೇಳುತ್ತಿದ್ದೇನೆ. ನೀವು ಸತ್ಯವಾದ ಉತ್ತರಗಳನ್ನು ನೀಡದಿದ್ದರೆ ನಿಮ್ಮ ಮೇಲೆ ಕಾನೂನು ಕ್ರಮ ಜರುಗಿಸಲಾಗುವುದು. ಇದು ಗಂಭೀರ ವಿಚಾರ. ನೀವು ಕ್ಯಾಮರಾ ನೋಡುತ್ತಾ ಬ್ಯಾಲೆಟ್‌ ಪೇಪರ್‌ಗಳ ಮೇಲೆ ಮಾರ್ಕ್‌ ಮಾಡಿರುವ ವಿಡಿಯೋವನ್ನು ನಾವು ನೋಡಿದ್ದೇವೆ. ನೀವು ಮಾರ್ಕ್‌ ಯಾಕೆ ಮಾಡಿದ್ದು? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಮಾಸಿಹ್, ಎಂಟು ಬ್ಯಾಲೆಟ್ ಪೇಪರ್‌ಗಳಲ್ಲಿ ಕ್ರಾಸ್ (X)ಮಾಡಿರುವುದು ನಿಜ. ಅವುಗಳನ್ನು ವಿರೂಪಗೊಂಡಿದ್ದರಿಂದ ಪ್ರತ್ಯೇಕಿಸಲು ಹಾಗೆ ಮಾಡಿದೆ ಎಂದಿದ್ದಾರೆ.

ಮರು ಪ್ರಶ್ನೆ ಹಾಕಿದ ನ್ಯಾಯಮೂರ್ತಿಗಳು, “ನೀವು ಬ್ಯಾಲೆಟ್ ಪೇಪರ್‌ಗಳನ್ನು ವಿರೂಪಗೊಳಿಸಿದ್ದು ಯಾಕೆ? ನೀವು ಬ್ಯಾಲೆಟ್ ಪೇಪರ್‌ಗಳ ಮೇಲೆ ಸಹಿ ಮಾತ್ರ ಮಾಡಬಹುದು. ಅವುಗಳ ಮೇಲೆ ಮಾರ್ಕ್‌ ಮಾಡಬಹುದು ಎಂದು ನಿಯಮಗಳಲ್ಲಿ ಎಲ್ಲಿದೆ? ಎಂದು ಕೇಳಿದ್ದಾರೆ.

ಬಳಿಕ, ಚಂಡೀಗಢ ಆಡಳಿತವನ್ನು ಪ್ರತಿನಿಧಿಸುತ್ತಿದ್ದ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ಕಡೆಗೆ ತಿರುಗಿದ ನ್ಯಾಯಮೂರ್ತಿಗಳು “ಮಿಸ್ಟರ್ ಸಾಲಿಸಿಟರ್, ಮಾಸಿಹ್ ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡಿದ್ದಾರೆ. ಹಾಗಾಗಿ, ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಇದನ್ನೂ ಓದಿ :  ‘RAW’ ಕುರಿತ ದಿ ಪ್ರಿಂಟ್ ವರದಿಗೆ ನಿರ್ಬಂಧ ಕೋರಿದ್ದ ಪಿಐಎಲ್‌ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...