Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

- Advertisement -
- Advertisement -

‘ಚುನಾವಣಾ ಅಧಿಕಾರಿ ಫಲಿತಾಂಶ ಪ್ರಕಟಿಸಿದಾಗ, ಬಿಜೆಪಿ ವಿಜೇತ ಅಭ್ಯರ್ಥಿ ಓಡಿಬಂದು ಮೇಯರ್ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾರೆ. ಕೂಡಲೇ ಚುನಾವಣಾ ಅಧಿಕಾರಿಯು ತಾನು ತಿರಸ್ಕರಿಸಿದ ಮತಗಳನ್ನು ಸದಸ್ಯರ ಏಜೆಂಟಿಗೆ ತೋರಿಸದೆ ನಿರ್ಗಮಿಸಿದ್ದು, ಸ್ಥಳದಲ್ಲಿ ವಾದವಿವಾದ ಉಂಟಾಗಿದೆ’. ಇದಿಷ್ಟು ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆ ಸಂದರ್ಭದಲ್ಲಿ ಕಂಡುಬಂದ ಚಿತ್ರಣ. ಕಾಂಗ್ರೆಸ್-ಎಎಪಿ ಮೈತ್ರಿ ಪಕ್ಷವು 20 ಸದಸ್ಯರನ್ನು ಹೊಂದಿದ್ದರೂ, ಕೇವಲ 14 ಸದಸ್ಯರಿರುವ ಬಿಜೆಪಿ ಮೇಯರ್ ಸ್ಥಾನ ಪಡೆದುಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಪ್ರತಿಪಕ್ಷಗಳ ಆಕ್ರೋಶದ ನಡುವೆಯೆ ಬಿಜೆಪಿ ನಾಯಕ ಮನೋಜ್ ಸೋಂಕರ್ ಅವರು ಮಂಗಳವಾರ ಚಂಡೀಗಢ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 36 ಮತಗಳ ಪೈಕಿ ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಯಿತು. ಎಎಪಿ-ಕಾಂಗ್ರೆಸ್ ಗುಂಪು ಈ ವಿಷಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನಲ್ಲಿ ಪ್ರಶ್ನಿಸಲು ತೀರ್ಮಾನ ತೆಗೆದುಕೊಂಡಿವೆ.

36 ಮತಗಳಲ್ಲಿ ಸೋಂಕರ್ 16 ಮತಗಳನ್ನು ಪಡೆದು ಉನ್ನತ ಸ್ಥಾನವನ್ನು ಪಡೆದುಕೊಂಡರೆ, ಇಂಡಿಯಾ ಬ್ಲಾಕ್‌ನ ಎಎಪಿ ಅಭ್ಯರ್ಥಿ ಕುಲದೀಪ್ ಸಿಂಗ್ 12 ಮತಗಳನ್ನು ಪಡೆದರು. ವಿರೋಧ ಪಕ್ಷಗಳ ಎಂಟು ಮತಗಳನ್ನು ಚುನಾವಣಾ ಅಧಿಕಾರ ಅಮಾನ್ಯವೆಂದು ಘೋಷಿಸಿದರು. ಆದರೆ, ಅದಕ್ಕೆ ಕಾರಣ ತಿಳಿಸದೆ ಅಲ್ಲಿಂದ ನಿರ್ಗಮಿಸಿದರು.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್ 35 ಸದಸ್ಯರನ್ನು ಹೊಂದಿದೆ ಮತ್ತು ಮತದಾನದ ಹಕ್ಕು ಹೊಂದಿರುವ ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ. ಪ್ರಸ್ತುತ ಬಿಜೆಪಿ ಸಂಸದ ಕಿರಣ್ ಖೇರ್ ಅವರು ಈ ಹುದ್ದೆಯನ್ನು ಹೊಂದಿದ್ದಾರೆ. ಎಎಪಿ ಪ್ರಸ್ತುತ 13 ಕೌನ್ಸಿಲರ್‌ಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿದೆ. ಬಿಜೆಪಿ 14 ಸದಸ್ಯರು ಮತ್ತು ಶಿರೋಮಣಿ ಅಕಾಲಿದಳದ ಇಬ್ಬರು ಸದಸ್ಯರಿದ್ದಾರೆ.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೊದಲ ಬಾರಿಗೆ 36 ಮತಗಳಲ್ಲಿ ಎಂಟು ಅಸಿಂಧು ಎಂದು ಘೋಷಿಸಲಾಯಿತು. ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಕೂಟ 20 ಮತಗಳನ್ನು ಪಡೆಯಬೇಕಿತ್ತು. ನಮಗೆ 12 ಮತಗಳು ಬಂದಿದ್ದು, ಎಂಟು ಮತಗಳು ಅಸಿಂಧುವಾಗಿವೆ. ಬಿಜೆಪಿಯ ಒಂದು ಮತವೂ ಅಸಿಂಧು ಎಂದು ಘೋಷಣೆಯಾಗಿಲ್ಲ… ಮುಂಬರುವ 2024ರ ಚುನಾವಣೆಯಲ್ಲಿ ಏನಾಗುತ್ತದೋ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಬಿಜೆಪಿಯು ಇಂತಹ ಕೀಳು ಮಟ್ಟಕ್ಕೆ ಇಳಿದು ನಕಲಿ ಮತ್ತು ಅಕ್ರಮ ಎಸಗಲು ಸಾಧ್ಯವಾದರೆ… ಅದು ಯಾವುದೇ ಹಂತಕ್ಕೆ ಹೋಗಬಹುದು’ ಎಂದು ಆಪ್ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

‘ಇದು ದರೋಡೆ. ಚಂಡೀಗಢದಲ್ಲಿ 36 ಕೌನ್ಸಿಲರ್ ಸ್ಥಾನಗಳಿದ್ದು, ಅದರಲ್ಲಿ 14 ಸ್ಥಾನಗಳು ಬಿಜೆಪಿ. 13 ಸ್ಥಾನಗಳು ಎಎಪಿ ಮತ್ತು ಏಳು ಸ್ಥಾನಗಳು ಕಾಂಗ್ರೆಸ್. ಒಟ್ಟು ಎಎಪಿ (13 + 7) 20 ಸ್ಥಾನಗಳನ್ನು ಹೊಂದಿದೆ…ಬಿಜೆಪಿ ಬಣ್ಣ ಮತ್ತೆ ಬಹಿರಂಗವಾಗಿದೆ…” ಎಂದು ಪಕ್ಷದ ಸಹ ನಾಯಕ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು ಎಂದ ಬಿಜೆಪಿಗರು

ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕೇಸರಿ ಪಕ್ಷದ ನಾಯಕರು, “ಪ್ರಜಾಪ್ರಭುತ್ವದ ಗೆಲುವು ಮತ್ತು ಎಎಪಿ ಮತ್ತು ಕಾಂಗ್ರೆಸ್‌ನ ‘ತಗ್ಬಂಧನ್’ ಸೋಲು” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಇಂಡಿಯಾ ಬಣದ ಸೋಲು; ಅವರ ಅಂಕಗಣಿತವು ಕಾರ್ಯನಿರ್ವಹಿಸುತ್ತಿಲ್ಲ ಅಥವಾ ಅವರ ರಸಾಯನಶಾಸ್ತ್ರ ಕೆಲಸ ಮಾಡುತ್ತಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಲೇವಡಿ ಮಾಡಿದ್ದಾರೆ.

‘ಚಂಡೀಗಢ ಮೇಯರ್ ಚುನಾವಣೆಯಲ್ಲಿ ಹಗಲು ಹೊತ್ತಿನಲ್ಲಿ ಅಪ್ರಾಮಾಣಿಕತೆ ನಡೆಸಿರುವ ರೀತಿ ಅತ್ಯಂತ ಕಳವಳಕಾರಿಯಾಗಿದೆ. ಈ ಜನರು ಮೇಯರ್ ಚುನಾವಣೆಯಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿದರೆ, ದೇಶದ ಚುನಾವಣೆಯಲ್ಲಿ ಅವರು ಯಾವುದೇ ಮಟ್ಟಕ್ಕೆ ಹೋಗಬಹುದು. ಇದು ತುಂಬಾ ಕಳವಳಕಾರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ‘ಹಿರಿಯ ಅಧಿಕಾರಿಯೊಬ್ಬರು ಮತಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದು ಅವರ ಹಳೆಯ ಅಭ್ಯಾಸ

‘ಇಂದು ನಮ್ಮ ದೇಶದ ಪ್ರಜಾಪ್ರಭುತ್ವದಲ್ಲಿ “ಕಪ್ಪು ದಿನ” ಎಂದು ಬರೆಯಲಾಗುತ್ತದೆ. ದುರದೃಷ್ಟವಶಾತ್, ನಾವು ಗಣರಾಜ್ಯೋತ್ಸವವನ್ನು ಆಚರಿಸುವುದು ಇದೇ ತಿಂಗಳು. ಇಂದು ಸಂವಿಧಾನ ಛಿದ್ರಗೊಂಡಿದೆ. ಚಂಡೀಗಢ ಮೇಯರ್ ಚುನಾವಣೆಯನ್ನು ಬಿಜೆಪಿಯವರು ಮಾಧ್ಯಮಗಳ ಮುಂದೆ, ಕ್ಯಾಮರಾಗಳ ಮುಂದೆ ‘ಲೂಟಿ’ ಮಾಡಿದ ರೀತಿ. ಅವರು ಈ ಮೊದಲು ಮಧ್ಯಪ್ರದೇಶ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳಲ್ಲಿ ಇದನ್ನು ಮಾಡಿದರು. ಹಾಗಾಗಿ, ಇದು ಅವರ ಹಳೆಯ ಅಭ್ಯಾಸ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಕ್ರೋಶ ಹೊರಹಾಕಿದ್ದಾರೆ.

ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಬಿಜೆಪಿ ಮತ್ತು ಇಂಡಿಯಾ ಮೈತ್ರಿಕೂಟದ ನಡುವಿನ ಮೊದಲ ಪ್ರಮುಖ ಸ್ಪರ್ಧೆ ಎಂದು ಬಿಂಬಿಸಲಾಗಿದ್ದ ಆಘಾತಕಾರಿ ಹಿನ್ನಡೆಯ ನಂತರ, ಚಂಡೀಗಢದ ಮೇಯರ್ ಚುನಾವಣೆಗೆ ಎಎಪಿ ಅಭ್ಯರ್ಥಿ ಕ್ಯಾಮರಾಗಳ ಮುಂದೆ ಅಳಲು ತೋಡಿಕೊಂಡರು. ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದ ಕುಲದೀಪ್ ಕುಮಾರ್ ಅವರು ಬಿಜೆಪಿಯ ಮನೋಜ್ ಸೋಂಕರ್ ಅವರಿಂದ ಪರಾಭವಗೊಂಡಿದ್ದು, ಸುತ್ತಮುತ್ತಲಿನ ಜನರು ಅವರನ್ನು ಸಮಾಧಾನಪಡಿಸಿ ಘೋಷಣೆಗಳನ್ನು ಕೂಗುತ್ತಿದ್ದರೂ ಅವರು ಕಣ್ಣೀರು ಸುರಿಸುವುದನ್ನು ನಿಲ್ಲಿಸಲಿಲ್ಲ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...