Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

- Advertisement -
- Advertisement -

‘ಚುನಾವಣಾ ಅಧಿಕಾರಿ ಫಲಿತಾಂಶ ಪ್ರಕಟಿಸಿದಾಗ, ಬಿಜೆಪಿ ವಿಜೇತ ಅಭ್ಯರ್ಥಿ ಓಡಿಬಂದು ಮೇಯರ್ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾರೆ. ಕೂಡಲೇ ಚುನಾವಣಾ ಅಧಿಕಾರಿಯು ತಾನು ತಿರಸ್ಕರಿಸಿದ ಮತಗಳನ್ನು ಸದಸ್ಯರ ಏಜೆಂಟಿಗೆ ತೋರಿಸದೆ ನಿರ್ಗಮಿಸಿದ್ದು, ಸ್ಥಳದಲ್ಲಿ ವಾದವಿವಾದ ಉಂಟಾಗಿದೆ’. ಇದಿಷ್ಟು ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆ ಸಂದರ್ಭದಲ್ಲಿ ಕಂಡುಬಂದ ಚಿತ್ರಣ. ಕಾಂಗ್ರೆಸ್-ಎಎಪಿ ಮೈತ್ರಿ ಪಕ್ಷವು 20 ಸದಸ್ಯರನ್ನು ಹೊಂದಿದ್ದರೂ, ಕೇವಲ 14 ಸದಸ್ಯರಿರುವ ಬಿಜೆಪಿ ಮೇಯರ್ ಸ್ಥಾನ ಪಡೆದುಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಪ್ರತಿಪಕ್ಷಗಳ ಆಕ್ರೋಶದ ನಡುವೆಯೆ ಬಿಜೆಪಿ ನಾಯಕ ಮನೋಜ್ ಸೋಂಕರ್ ಅವರು ಮಂಗಳವಾರ ಚಂಡೀಗಢ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 36 ಮತಗಳ ಪೈಕಿ ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಯಿತು. ಎಎಪಿ-ಕಾಂಗ್ರೆಸ್ ಗುಂಪು ಈ ವಿಷಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನಲ್ಲಿ ಪ್ರಶ್ನಿಸಲು ತೀರ್ಮಾನ ತೆಗೆದುಕೊಂಡಿವೆ.

36 ಮತಗಳಲ್ಲಿ ಸೋಂಕರ್ 16 ಮತಗಳನ್ನು ಪಡೆದು ಉನ್ನತ ಸ್ಥಾನವನ್ನು ಪಡೆದುಕೊಂಡರೆ, ಇಂಡಿಯಾ ಬ್ಲಾಕ್‌ನ ಎಎಪಿ ಅಭ್ಯರ್ಥಿ ಕುಲದೀಪ್ ಸಿಂಗ್ 12 ಮತಗಳನ್ನು ಪಡೆದರು. ವಿರೋಧ ಪಕ್ಷಗಳ ಎಂಟು ಮತಗಳನ್ನು ಚುನಾವಣಾ ಅಧಿಕಾರ ಅಮಾನ್ಯವೆಂದು ಘೋಷಿಸಿದರು. ಆದರೆ, ಅದಕ್ಕೆ ಕಾರಣ ತಿಳಿಸದೆ ಅಲ್ಲಿಂದ ನಿರ್ಗಮಿಸಿದರು.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್ 35 ಸದಸ್ಯರನ್ನು ಹೊಂದಿದೆ ಮತ್ತು ಮತದಾನದ ಹಕ್ಕು ಹೊಂದಿರುವ ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ. ಪ್ರಸ್ತುತ ಬಿಜೆಪಿ ಸಂಸದ ಕಿರಣ್ ಖೇರ್ ಅವರು ಈ ಹುದ್ದೆಯನ್ನು ಹೊಂದಿದ್ದಾರೆ. ಎಎಪಿ ಪ್ರಸ್ತುತ 13 ಕೌನ್ಸಿಲರ್‌ಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿದೆ. ಬಿಜೆಪಿ 14 ಸದಸ್ಯರು ಮತ್ತು ಶಿರೋಮಣಿ ಅಕಾಲಿದಳದ ಇಬ್ಬರು ಸದಸ್ಯರಿದ್ದಾರೆ.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೊದಲ ಬಾರಿಗೆ 36 ಮತಗಳಲ್ಲಿ ಎಂಟು ಅಸಿಂಧು ಎಂದು ಘೋಷಿಸಲಾಯಿತು. ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಕೂಟ 20 ಮತಗಳನ್ನು ಪಡೆಯಬೇಕಿತ್ತು. ನಮಗೆ 12 ಮತಗಳು ಬಂದಿದ್ದು, ಎಂಟು ಮತಗಳು ಅಸಿಂಧುವಾಗಿವೆ. ಬಿಜೆಪಿಯ ಒಂದು ಮತವೂ ಅಸಿಂಧು ಎಂದು ಘೋಷಣೆಯಾಗಿಲ್ಲ… ಮುಂಬರುವ 2024ರ ಚುನಾವಣೆಯಲ್ಲಿ ಏನಾಗುತ್ತದೋ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಬಿಜೆಪಿಯು ಇಂತಹ ಕೀಳು ಮಟ್ಟಕ್ಕೆ ಇಳಿದು ನಕಲಿ ಮತ್ತು ಅಕ್ರಮ ಎಸಗಲು ಸಾಧ್ಯವಾದರೆ… ಅದು ಯಾವುದೇ ಹಂತಕ್ಕೆ ಹೋಗಬಹುದು’ ಎಂದು ಆಪ್ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

‘ಇದು ದರೋಡೆ. ಚಂಡೀಗಢದಲ್ಲಿ 36 ಕೌನ್ಸಿಲರ್ ಸ್ಥಾನಗಳಿದ್ದು, ಅದರಲ್ಲಿ 14 ಸ್ಥಾನಗಳು ಬಿಜೆಪಿ. 13 ಸ್ಥಾನಗಳು ಎಎಪಿ ಮತ್ತು ಏಳು ಸ್ಥಾನಗಳು ಕಾಂಗ್ರೆಸ್. ಒಟ್ಟು ಎಎಪಿ (13 + 7) 20 ಸ್ಥಾನಗಳನ್ನು ಹೊಂದಿದೆ…ಬಿಜೆಪಿ ಬಣ್ಣ ಮತ್ತೆ ಬಹಿರಂಗವಾಗಿದೆ…” ಎಂದು ಪಕ್ಷದ ಸಹ ನಾಯಕ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು ಎಂದ ಬಿಜೆಪಿಗರು

ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕೇಸರಿ ಪಕ್ಷದ ನಾಯಕರು, “ಪ್ರಜಾಪ್ರಭುತ್ವದ ಗೆಲುವು ಮತ್ತು ಎಎಪಿ ಮತ್ತು ಕಾಂಗ್ರೆಸ್‌ನ ‘ತಗ್ಬಂಧನ್’ ಸೋಲು” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಇಂಡಿಯಾ ಬಣದ ಸೋಲು; ಅವರ ಅಂಕಗಣಿತವು ಕಾರ್ಯನಿರ್ವಹಿಸುತ್ತಿಲ್ಲ ಅಥವಾ ಅವರ ರಸಾಯನಶಾಸ್ತ್ರ ಕೆಲಸ ಮಾಡುತ್ತಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಲೇವಡಿ ಮಾಡಿದ್ದಾರೆ.

‘ಚಂಡೀಗಢ ಮೇಯರ್ ಚುನಾವಣೆಯಲ್ಲಿ ಹಗಲು ಹೊತ್ತಿನಲ್ಲಿ ಅಪ್ರಾಮಾಣಿಕತೆ ನಡೆಸಿರುವ ರೀತಿ ಅತ್ಯಂತ ಕಳವಳಕಾರಿಯಾಗಿದೆ. ಈ ಜನರು ಮೇಯರ್ ಚುನಾವಣೆಯಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿದರೆ, ದೇಶದ ಚುನಾವಣೆಯಲ್ಲಿ ಅವರು ಯಾವುದೇ ಮಟ್ಟಕ್ಕೆ ಹೋಗಬಹುದು. ಇದು ತುಂಬಾ ಕಳವಳಕಾರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ‘ಹಿರಿಯ ಅಧಿಕಾರಿಯೊಬ್ಬರು ಮತಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದು ಅವರ ಹಳೆಯ ಅಭ್ಯಾಸ

‘ಇಂದು ನಮ್ಮ ದೇಶದ ಪ್ರಜಾಪ್ರಭುತ್ವದಲ್ಲಿ “ಕಪ್ಪು ದಿನ” ಎಂದು ಬರೆಯಲಾಗುತ್ತದೆ. ದುರದೃಷ್ಟವಶಾತ್, ನಾವು ಗಣರಾಜ್ಯೋತ್ಸವವನ್ನು ಆಚರಿಸುವುದು ಇದೇ ತಿಂಗಳು. ಇಂದು ಸಂವಿಧಾನ ಛಿದ್ರಗೊಂಡಿದೆ. ಚಂಡೀಗಢ ಮೇಯರ್ ಚುನಾವಣೆಯನ್ನು ಬಿಜೆಪಿಯವರು ಮಾಧ್ಯಮಗಳ ಮುಂದೆ, ಕ್ಯಾಮರಾಗಳ ಮುಂದೆ ‘ಲೂಟಿ’ ಮಾಡಿದ ರೀತಿ. ಅವರು ಈ ಮೊದಲು ಮಧ್ಯಪ್ರದೇಶ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳಲ್ಲಿ ಇದನ್ನು ಮಾಡಿದರು. ಹಾಗಾಗಿ, ಇದು ಅವರ ಹಳೆಯ ಅಭ್ಯಾಸ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಕ್ರೋಶ ಹೊರಹಾಕಿದ್ದಾರೆ.

ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಬಿಜೆಪಿ ಮತ್ತು ಇಂಡಿಯಾ ಮೈತ್ರಿಕೂಟದ ನಡುವಿನ ಮೊದಲ ಪ್ರಮುಖ ಸ್ಪರ್ಧೆ ಎಂದು ಬಿಂಬಿಸಲಾಗಿದ್ದ ಆಘಾತಕಾರಿ ಹಿನ್ನಡೆಯ ನಂತರ, ಚಂಡೀಗಢದ ಮೇಯರ್ ಚುನಾವಣೆಗೆ ಎಎಪಿ ಅಭ್ಯರ್ಥಿ ಕ್ಯಾಮರಾಗಳ ಮುಂದೆ ಅಳಲು ತೋಡಿಕೊಂಡರು. ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದ ಕುಲದೀಪ್ ಕುಮಾರ್ ಅವರು ಬಿಜೆಪಿಯ ಮನೋಜ್ ಸೋಂಕರ್ ಅವರಿಂದ ಪರಾಭವಗೊಂಡಿದ್ದು, ಸುತ್ತಮುತ್ತಲಿನ ಜನರು ಅವರನ್ನು ಸಮಾಧಾನಪಡಿಸಿ ಘೋಷಣೆಗಳನ್ನು ಕೂಗುತ್ತಿದ್ದರೂ ಅವರು ಕಣ್ಣೀರು ಸುರಿಸುವುದನ್ನು ನಿಲ್ಲಿಸಲಿಲ್ಲ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...