Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಚಂಡೀಗಢ ಮೇಯರ್ ಚುನಾವಣೆ: ತಿರಸ್ಕೃತ ಮತಗಳನ್ನು ತೋರಿಸದ ಚುನಾವಣಾ ಅಧಿಕಾರಿ, ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

- Advertisement -
- Advertisement -

‘ಚುನಾವಣಾ ಅಧಿಕಾರಿ ಫಲಿತಾಂಶ ಪ್ರಕಟಿಸಿದಾಗ, ಬಿಜೆಪಿ ವಿಜೇತ ಅಭ್ಯರ್ಥಿ ಓಡಿಬಂದು ಮೇಯರ್ ಕುರ್ಚಿಯ ಮೇಲೆ ಕುಳಿತುಕೊಳ್ಳುತ್ತಾರೆ. ಕೂಡಲೇ ಚುನಾವಣಾ ಅಧಿಕಾರಿಯು ತಾನು ತಿರಸ್ಕರಿಸಿದ ಮತಗಳನ್ನು ಸದಸ್ಯರ ಏಜೆಂಟಿಗೆ ತೋರಿಸದೆ ನಿರ್ಗಮಿಸಿದ್ದು, ಸ್ಥಳದಲ್ಲಿ ವಾದವಿವಾದ ಉಂಟಾಗಿದೆ’. ಇದಿಷ್ಟು ಇಂದು ನಡೆದ ಚಂಡೀಗಢ ಮೇಯರ್ ಚುನಾವಣೆ ಸಂದರ್ಭದಲ್ಲಿ ಕಂಡುಬಂದ ಚಿತ್ರಣ. ಕಾಂಗ್ರೆಸ್-ಎಎಪಿ ಮೈತ್ರಿ ಪಕ್ಷವು 20 ಸದಸ್ಯರನ್ನು ಹೊಂದಿದ್ದರೂ, ಕೇವಲ 14 ಸದಸ್ಯರಿರುವ ಬಿಜೆಪಿ ಮೇಯರ್ ಸ್ಥಾನ ಪಡೆದುಕೊಂಡಿರುವುದು ಚರ್ಚೆಗೆ ಕಾರಣವಾಗಿದೆ.

ಪ್ರತಿಪಕ್ಷಗಳ ಆಕ್ರೋಶದ ನಡುವೆಯೆ ಬಿಜೆಪಿ ನಾಯಕ ಮನೋಜ್ ಸೋಂಕರ್ ಅವರು ಮಂಗಳವಾರ ಚಂಡೀಗಢ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. 36 ಮತಗಳ ಪೈಕಿ ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಯಿತು. ಎಎಪಿ-ಕಾಂಗ್ರೆಸ್ ಗುಂಪು ಈ ವಿಷಯವನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟಿನಲ್ಲಿ ಪ್ರಶ್ನಿಸಲು ತೀರ್ಮಾನ ತೆಗೆದುಕೊಂಡಿವೆ.

36 ಮತಗಳಲ್ಲಿ ಸೋಂಕರ್ 16 ಮತಗಳನ್ನು ಪಡೆದು ಉನ್ನತ ಸ್ಥಾನವನ್ನು ಪಡೆದುಕೊಂಡರೆ, ಇಂಡಿಯಾ ಬ್ಲಾಕ್‌ನ ಎಎಪಿ ಅಭ್ಯರ್ಥಿ ಕುಲದೀಪ್ ಸಿಂಗ್ 12 ಮತಗಳನ್ನು ಪಡೆದರು. ವಿರೋಧ ಪಕ್ಷಗಳ ಎಂಟು ಮತಗಳನ್ನು ಚುನಾವಣಾ ಅಧಿಕಾರ ಅಮಾನ್ಯವೆಂದು ಘೋಷಿಸಿದರು. ಆದರೆ, ಅದಕ್ಕೆ ಕಾರಣ ತಿಳಿಸದೆ ಅಲ್ಲಿಂದ ನಿರ್ಗಮಿಸಿದರು.

ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್ 35 ಸದಸ್ಯರನ್ನು ಹೊಂದಿದೆ ಮತ್ತು ಮತದಾನದ ಹಕ್ಕು ಹೊಂದಿರುವ ನಾಮನಿರ್ದೇಶಿತ ಸದಸ್ಯರನ್ನು ಹೊಂದಿದೆ. ಪ್ರಸ್ತುತ ಬಿಜೆಪಿ ಸಂಸದ ಕಿರಣ್ ಖೇರ್ ಅವರು ಈ ಹುದ್ದೆಯನ್ನು ಹೊಂದಿದ್ದಾರೆ. ಎಎಪಿ ಪ್ರಸ್ತುತ 13 ಕೌನ್ಸಿಲರ್‌ಗಳನ್ನು ಹೊಂದಿದ್ದರೆ, ಕಾಂಗ್ರೆಸ್ ಏಳು ಸದಸ್ಯರನ್ನು ಹೊಂದಿದೆ. ಬಿಜೆಪಿ 14 ಸದಸ್ಯರು ಮತ್ತು ಶಿರೋಮಣಿ ಅಕಾಲಿದಳದ ಇಬ್ಬರು ಸದಸ್ಯರಿದ್ದಾರೆ.

ಚಂಡೀಗಢದ ಮೇಯರ್ ಚುನಾವಣೆಯಲ್ಲಿ ಮೊದಲ ಬಾರಿಗೆ 36 ಮತಗಳಲ್ಲಿ ಎಂಟು ಅಸಿಂಧು ಎಂದು ಘೋಷಿಸಲಾಯಿತು. ಕಾಂಗ್ರೆಸ್ ಮತ್ತು ಎಎಪಿ ಮೈತ್ರಿಕೂಟ 20 ಮತಗಳನ್ನು ಪಡೆಯಬೇಕಿತ್ತು. ನಮಗೆ 12 ಮತಗಳು ಬಂದಿದ್ದು, ಎಂಟು ಮತಗಳು ಅಸಿಂಧುವಾಗಿವೆ. ಬಿಜೆಪಿಯ ಒಂದು ಮತವೂ ಅಸಿಂಧು ಎಂದು ಘೋಷಣೆಯಾಗಿಲ್ಲ… ಮುಂಬರುವ 2024ರ ಚುನಾವಣೆಯಲ್ಲಿ ಏನಾಗುತ್ತದೋ ಎಂಬ ಆತಂಕ ನಮ್ಮನ್ನು ಕಾಡುತ್ತಿದೆ. ಬಿಜೆಪಿಯು ಇಂತಹ ಕೀಳು ಮಟ್ಟಕ್ಕೆ ಇಳಿದು ನಕಲಿ ಮತ್ತು ಅಕ್ರಮ ಎಸಗಲು ಸಾಧ್ಯವಾದರೆ… ಅದು ಯಾವುದೇ ಹಂತಕ್ಕೆ ಹೋಗಬಹುದು’ ಎಂದು ಆಪ್ ಸಂಸದ ರಾಘವ್ ಚಡ್ಡಾ ಹೇಳಿದ್ದಾರೆ.

‘ಇದು ದರೋಡೆ. ಚಂಡೀಗಢದಲ್ಲಿ 36 ಕೌನ್ಸಿಲರ್ ಸ್ಥಾನಗಳಿದ್ದು, ಅದರಲ್ಲಿ 14 ಸ್ಥಾನಗಳು ಬಿಜೆಪಿ. 13 ಸ್ಥಾನಗಳು ಎಎಪಿ ಮತ್ತು ಏಳು ಸ್ಥಾನಗಳು ಕಾಂಗ್ರೆಸ್. ಒಟ್ಟು ಎಎಪಿ (13 + 7) 20 ಸ್ಥಾನಗಳನ್ನು ಹೊಂದಿದೆ…ಬಿಜೆಪಿ ಬಣ್ಣ ಮತ್ತೆ ಬಹಿರಂಗವಾಗಿದೆ…” ಎಂದು ಪಕ್ಷದ ಸಹ ನಾಯಕ ಸೌರಭ್ ಭಾರದ್ವಾಜ್ ವಾಗ್ದಾಳಿ ನಡೆಸಿದ್ದಾರೆ.

ಪ್ರಜಾಪ್ರಭುತ್ವದ ಗೆಲುವು ಎಂದ ಬಿಜೆಪಿಗರು

ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಕೇಸರಿ ಪಕ್ಷದ ನಾಯಕರು, “ಪ್ರಜಾಪ್ರಭುತ್ವದ ಗೆಲುವು ಮತ್ತು ಎಎಪಿ ಮತ್ತು ಕಾಂಗ್ರೆಸ್‌ನ ‘ತಗ್ಬಂಧನ್’ ಸೋಲು” ಎಂದು ಹೇಳಿದ್ದಾರೆ. ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರು ಇಂಡಿಯಾ ಬಣದ ಸೋಲು; ಅವರ ಅಂಕಗಣಿತವು ಕಾರ್ಯನಿರ್ವಹಿಸುತ್ತಿಲ್ಲ ಅಥವಾ ಅವರ ರಸಾಯನಶಾಸ್ತ್ರ ಕೆಲಸ ಮಾಡುತ್ತಿಲ್ಲ ಎಂಬುದನ್ನು ತೋರಿಸುತ್ತದೆ” ಎಂದು ಲೇವಡಿ ಮಾಡಿದ್ದಾರೆ.

‘ಚಂಡೀಗಢ ಮೇಯರ್ ಚುನಾವಣೆಯಲ್ಲಿ ಹಗಲು ಹೊತ್ತಿನಲ್ಲಿ ಅಪ್ರಾಮಾಣಿಕತೆ ನಡೆಸಿರುವ ರೀತಿ ಅತ್ಯಂತ ಕಳವಳಕಾರಿಯಾಗಿದೆ. ಈ ಜನರು ಮೇಯರ್ ಚುನಾವಣೆಯಲ್ಲಿ ಇಷ್ಟು ಕೆಳಮಟ್ಟಕ್ಕೆ ಇಳಿದರೆ, ದೇಶದ ಚುನಾವಣೆಯಲ್ಲಿ ಅವರು ಯಾವುದೇ ಮಟ್ಟಕ್ಕೆ ಹೋಗಬಹುದು. ಇದು ತುಂಬಾ ಕಳವಳಕಾರಿಯಾಗಿದೆ’ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಅವರು ‘ಹಿರಿಯ ಅಧಿಕಾರಿಯೊಬ್ಬರು ಮತಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ’ ಎಂದು ಪ್ರತಿಪಾದಿಸಲು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಇದು ಅವರ ಹಳೆಯ ಅಭ್ಯಾಸ

‘ಇಂದು ನಮ್ಮ ದೇಶದ ಪ್ರಜಾಪ್ರಭುತ್ವದಲ್ಲಿ “ಕಪ್ಪು ದಿನ” ಎಂದು ಬರೆಯಲಾಗುತ್ತದೆ. ದುರದೃಷ್ಟವಶಾತ್, ನಾವು ಗಣರಾಜ್ಯೋತ್ಸವವನ್ನು ಆಚರಿಸುವುದು ಇದೇ ತಿಂಗಳು. ಇಂದು ಸಂವಿಧಾನ ಛಿದ್ರಗೊಂಡಿದೆ. ಚಂಡೀಗಢ ಮೇಯರ್ ಚುನಾವಣೆಯನ್ನು ಬಿಜೆಪಿಯವರು ಮಾಧ್ಯಮಗಳ ಮುಂದೆ, ಕ್ಯಾಮರಾಗಳ ಮುಂದೆ ‘ಲೂಟಿ’ ಮಾಡಿದ ರೀತಿ. ಅವರು ಈ ಮೊದಲು ಮಧ್ಯಪ್ರದೇಶ, ಕರ್ನಾಟಕ, ಗೋವಾ, ಮಹಾರಾಷ್ಟ್ರ, ಈಶಾನ್ಯ ರಾಜ್ಯಗಳಲ್ಲಿ ಇದನ್ನು ಮಾಡಿದರು. ಹಾಗಾಗಿ, ಇದು ಅವರ ಹಳೆಯ ಅಭ್ಯಾಸ’ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆಕ್ರೋಶ ಹೊರಹಾಕಿದ್ದಾರೆ.

ಕಣ್ಣೀರಿಟ್ಟ ಎಎಪಿ ಅಭ್ಯರ್ಥಿ

ಬಿಜೆಪಿ ಮತ್ತು ಇಂಡಿಯಾ ಮೈತ್ರಿಕೂಟದ ನಡುವಿನ ಮೊದಲ ಪ್ರಮುಖ ಸ್ಪರ್ಧೆ ಎಂದು ಬಿಂಬಿಸಲಾಗಿದ್ದ ಆಘಾತಕಾರಿ ಹಿನ್ನಡೆಯ ನಂತರ, ಚಂಡೀಗಢದ ಮೇಯರ್ ಚುನಾವಣೆಗೆ ಎಎಪಿ ಅಭ್ಯರ್ಥಿ ಕ್ಯಾಮರಾಗಳ ಮುಂದೆ ಅಳಲು ತೋಡಿಕೊಂಡರು. ಮೇಯರ್ ಸ್ಥಾನಕ್ಕೆ ಅಭ್ಯರ್ಥಿಯಾಗಿದ್ದ ಕುಲದೀಪ್ ಕುಮಾರ್ ಅವರು ಬಿಜೆಪಿಯ ಮನೋಜ್ ಸೋಂಕರ್ ಅವರಿಂದ ಪರಾಭವಗೊಂಡಿದ್ದು, ಸುತ್ತಮುತ್ತಲಿನ ಜನರು ಅವರನ್ನು ಸಮಾಧಾನಪಡಿಸಿ ಘೋಷಣೆಗಳನ್ನು ಕೂಗುತ್ತಿದ್ದರೂ ಅವರು ಕಣ್ಣೀರು ಸುರಿಸುವುದನ್ನು ನಿಲ್ಲಿಸಲಿಲ್ಲ.

ಇದನ್ನೂ ಓದಿ; ಇಂಡಿಯಾ ಬಣಕ್ಕೆ ಆರಂಭಿಕ ಆಘಾತ; ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...