Homeಮುಖಪುಟಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

ಚಂಡೀಗಢ ಮೇಯರ್ ಚುನಾವಣೆ: ಬಿಜೆಪಿಗೆ ಮುಖಭಂಗ, ವಿರೂಪಗೊಂಡ 8 ಮತಗಳು ಮಾನ್ಯ ಎಂದ ಸುಪ್ರೀಂ

- Advertisement -
- Advertisement -

ಚಂಡೀಗಢ ಮೇಯರ್ ಚುನಾವಣೆ ವಿವಾದ ಪ್ರಕರಣದ ಬಗ್ಗೆ ಇಂದು ತನ್ನ ತೀರ್ಪು ನೀಡಿರುವ ಸುಪ್ರೀಂ ಕೋರ್ಟ್‌, ವಿರೂಪಗೊಂಡ ಎಂಟು ಮತಗಳು ಮಾನ್ಯವಾಗಿವೆ ಎಂದು ಹೇಳಿ, ಮರು ಎಣಿಕೆಗೆ ಆದೇಶ ನೀಡಿದೆ.

ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿಜಯಶಾಲಿಯಾಯಿತು. ಎಎಪಿ-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯ ವಿರುದ್ಧ ಗೆಲುವು ಸಾಧಿಸಿತು. ಚುನಾವಣಾಧಿಕಾರಿಯು ಸಮ್ಮಿಶ್ರ ಪಾಲುದಾರ ಪಕ್ಷಗಳ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಿ, ಮತಪತ್ರಗಳನ್ನು ತಿದ್ದಿದ ಆರೋಪ ಎದುರಿಸುತ್ತಿದ್ದಾರೆ.

ಬಿಜೆಪಿಯ ಮನೋಜ್ ಸೋಂಕರ್ ಅವರು ತಮ್ಮ ಪ್ರತಿಸ್ಪರ್ಧಿಯ 12 ವಿರುದ್ಧ 16 ಮತಗಳೊಂದಿಗೆ ಮೇಯರ್ ಸ್ಥಾನವನ್ನು ಅಲಂಕರಿಸಿದರು. ಆದರೆ, ಸುಪ್ರೀಂ ಕಿಡಿಕಾರಿದ ನಂತರ ನಿನ್ನೆ ಅವರು ರಾಜೀನಾಮೆ ನೀಡಿದರು. ಈ ನಡುವೆ ಮೂವರು ಎಎಪಿ ಕೌನ್ಸಿಲರ್‌ಗಳು ಬಿಜೆಪಿಗೆ ಬೆಂಬಲಿಸಿ, ಕುದುರೆ ವ್ಯಾಪಾರವಾಗಿರುವುದು ಬಹಿರಂಗವಾಗಿತ್ತು.

ಕಳೆದ ತಿಂಗಳು ನಡೆದ ಮೇಯರ್ ಚುನಾವಣೆಯ ಮತಗಳ ಮರು ಎಣಿಕೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಲಿದೆ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಇಂದು ಹೇಳಿದರು. ಸಿಕ್ಕಿಬಿದ್ದಿರುವ ಚುನಾವಣಾಧಿಕಾರಿ ಅನಿಲ್ ಮಸಿಹ್ ಅವರು ಆಮ್ ಆದ್ಮಿ ಪಕ್ಷದ ಪರವಾಗಿ ಎಂಟು ಮತಗಳನ್ನು ಸೇರಿಸಿ, ಬ್ಯಾಲೆಟ್ ಪೇಪರ್‌ಗಳನ್ನು ತಿರುಚಿರುವುದು ಕ್ಯಾಮರಾದಲ್ಲಿ ಗುರುತಿಸಲಾಗಿದೆ.

ಎಂಟು ಮತಪತ್ರಗಳನ್ನು ವಿರೂಪಗೊಳಿಸಲಾಗಿದೆ ಎಂಬುದನ್ನು ಸೂಚಿಸಲು ಮಸಿಹ್ ಅವರನ್ನು ಕೇಳುವ ಮೂಲಕ ನ್ಯಾಯಾಲಯವು ಇಂದಿನ ವಿಚಾರಣೆಯನ್ನು ಪ್ರಾರಂಭಿಸಿತು. ಈ ವೇಳೆ ಮಸಿಹ್ ಅವರು, ‘ಈ ವಿರೂಪಗೊಂಡ ಮತಪತ್ರಗಳನ್ನು ಎಣಿಕೆ ಮಾಡಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಬಯಸಿದ್ದೆ’ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ‘ನಿನ್ನೆ ಈ ಬ್ಯಾಲೆಟ್ ಪೇಪರ್ ಅನ್ನು ವಿರೂಪಗೊಳಿಸಲಾಗಿದೆ ಎಂದು ನೀವು ಹೇಳಿದ್ದೀರಿ. ಎಲ್ಲಿ ಎಂದು ನಮಗೆ ತೋರಿಸುತ್ತೀರಾ?’ ಎಂದು ಅವರು ಎಂಟು ಮತಪತ್ರಗಳನ್ನು ಮಸಿಹ್ ಮತ್ತು ಅವರ ವಕೀಲರಿಗೆ, ವಿಚಾರಣೆಯಲ್ಲಿ ಹಾಜರಿದ್ದ ಇತರ ಪಕ್ಷಗಳಿಗೆ ತೋರಿಸಿದರು.

‘ಎಲ್ಲ ಎಂಟು ಮಂದಿ ಕುಲದೀಪ್ ಕುಮಾರ್ (ಎಎಪಿ ಅಭ್ಯರ್ಥಿ) ಗಾಗಿ ಮುದ್ರೆಯನ್ನು ಒತ್ತಿದ್ದಾರೆ… ಮತಗಳು  ಕುಮಾರ್‌ಗೆ ಹಾಕಲ್ಪಟ್ಟಿವೆ. ನೋಡಿದಂತೆ ವಿಡಿಯೋದಲ್ಲಿ ನೋಡಿದಂತೆ ಅವರು (ಶ್ರೀ ಮಸಿಹ್) ಏನು ಮಾಡುತ್ತಾರೆ ಎಂದರೆ… ಅವರು ಒಂದೇ ಸಾಲನ್ನು ಹಾಕುತ್ತಾರೆ. ಕೇವಲ ಒಂದು ಸಾಲು’ ಎಂದರು.

ಈ ಹಂತದಲ್ಲಿ ದಿಲೀಪ್ ಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅಳಲು ತೋಡಿಕೊಂಡರು, ಮಸಿಹ್ ಅವರ ಕ್ರಮಗಳು ನ್ಯಾಯಾಲಯದ ನಿಂದನೆ, ಇದು ಘೋರ ಅಪರಾಧ…’ ಎಂದು ಅವರು ಹೇಳಿದರು.

ಇದನ್ನೂ ಓದಿ; ಮರಾಠ ಮೀಸಲಾತಿ ಮಸೂದೆ; ಸರ್ವಾನುಮತದಿಂದ ಅಂಗೀಕರಿಸಿದ ಮಹಾರಾಷ್ಟ್ರ ವಿಧಾನಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...