HomeUncategorizedಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

- Advertisement -
- Advertisement -

ಚಂಡೀಗಢ ಮೇಯರ್‌ ಚುನಾವಣೆಯ ಚುನಾವಣಾಧಿಕಾರಿ ಆಗಿದ್ದ ಅನಿಲ್‌ ಮಸೀಹ್‌ ಮತಪತ್ರಗಳನ್ನು ತಿರುಚಿದ್ದ ತಮ್ಮ ನಡವಳಿಕೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ.

ಜನವರಿ 30ರಂದು ನಡೆದಿದ್ದ ಚಂಡೀಗಢ ಮೇಯರ್ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದ ಅನಿಲ್ ಮಸಿಹ್ ಮತಪತ್ರಗಳು ಅಮಾನ್ಯವಾಗಿದೆ ಎಂದು “ಸುಳ್ಳು ಹೇಳಿಕೆ” ನೀಡಿದ್ದಕ್ಕೆ ಅವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಬಾರದು ಎಂದು ಸುಪ್ರೀಂಕೋರ್ಟ್‌ ಪ್ರಶ್ನಿಸಿತ್ತು. ಮಸಿಹ್ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ, “ನಾನು ಸಂಪೂರ್ಣವಾಗಿ ಬೇಷರತ್ ಕ್ಷಮೆಯಾಚಿಸಿದ್ದೇನೆ” ಎಂದು ಮಸಿಹ್‌ ತಿಳಿಸಿರುವುದಾಗಿ ಹೇಳಿದ್ದಾರೆ.

ಅವರು ಮೊದಲ ಅಫಿಡವಿಟ್‌ನ್ನು ಹಿಂತೆಗೆದುಕೊಳ್ಳುತ್ತಾರೆ ಮತ್ತು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂದು ರೋಹಟಗಿ ಹೇಳಿದರು. ಇದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ನ್ಯಾಯಾಲಯವು ಮುಂದಿನ ಜುಲೈನಲ್ಲಿ ಈ ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

ಮೇಯರ್ ಚುನಾವಣೆಯ ಸಂದರ್ಭದಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿದ ಆರೋಪದ ಮೇಲೆ ಫೆಬ್ರವರಿ 19ರಂದು ಸುಪ್ರೀಂ ಕೋರ್ಟ್‌ನಿಂದ ಟೀಕೆಗೆ ಗುರಿಯಾಗಿದ್ದ ಮಸಿಹ್ ಅವರು ತಮ್ಮ ಮೊದಲ ಅಫಿಡವಿಟ್‌ನಲ್ಲಿ ನ್ಯಾಯಾಲಯಕ್ಕೆ ಹಾಜರಾಗುವ ಮೊದಲು ರಾಜಕೀಯ ಪಕ್ಷಗಳಿಂದ ಟೀಕೆಗೆ ಒಳಗಾಗಿರುವುದಾಗಿ ಹೇಳಿದ್ದರು. ಇದು ಕುಟುಂಬದ ಸದಸ್ಯರನ್ನು ಅಪಾರ ಮಾನಸಿಕ ಆಘಾತಕ್ಕೆ ತಳ್ಳಿದೆ ಎಂದು ಹೇಳಿದ್ದರು. ನಾನು ಆತಂಕದಲ್ಲಿದ್ದು, ಖಿನ್ನತೆ ಎದುರಿಸುತ್ತಿದ್ದೇನೆ. ಮತಪತ್ರಗಳನ್ನು ತಿದ್ದಿದ ಆರೋಪವನ್ನು ನಿರಾಕರಿಸಿ ಈ ಹಿಂದೆ ಸಲ್ಲಿಸಿದ್ದ ಅಫಿಡವಿಟ್‌ನ್ನು ಹಿಂಪಡೆಯುವುದಾಗಿ ಮಸೀಹ್‌ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಮನೋಜ ಸೋನ್ಕರ್ ಅವರನ್ನು ಮೇಯರ್ ಹುದ್ದೆಗೆ ಆಯ್ಕಯಾಗಿದ್ದಾರೆ ಎಂದು ಮಸೀಹ್ ಪ್ರಕಟಿಸಿದ್ದ ಚುನಾವಣಾ ಫಲಿತಾಂಶವನ್ನು ಫೆ.20ರಂದು ರದ್ದುಗೊಳಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಚಂಡಿಗಡ ಮೇಯರ್ ಚುನಾವಣೆಯಲ್ಲಿ ಆಪ್ ಅಭ್ಯರ್ಥಿ ಕುಲದೀಪ್ ಕುಮಾರ್ ಗೆದ್ದಿದ್ದಾರೆ ಎಂದು ಘೋಷಿಸಿತ್ತು. ಮಸೀಹ್‌ ಅವರಿಗೆ ಶೋಕಾಸ್ ನೋಟಿಸ್ ಹೊರಡಿಸಿದ್ದ ಸಂದರ್ಭದಲ್ಲಿ ನ್ಯಾಯಾಲಯವು, ಅವರು ಆಪ್ ನ ಕುಲದೀಪ್‌ ಕುಮಾರ್‌ ಪರವಾಗಿ ಚಲಾವಣೆಯಾಗಿದ್ದ ಮತಪತ್ರಗಳನ್ನು ಉದ್ದೇಶಪೂರ್ವಕವಾಗಿ ವಿರೂಪಗೊಳಿಸಿದ್ದಾರೆ ಎಂದು ಹೇಳಿತ್ತು.

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಹುಮತವಿದ್ದರೂ ‘ಇಂಡಿಯಾ’ ಬ್ಲಾಕ್‌ನ ಎಎಪಿ ಅಭ್ಯರ್ಥಿ ಪರಾಭವಗೊಂಡಿದ್ದರು. ಮೈತ್ರಿ ಅಭ್ಯರ್ಥಿ ಪರವಾಗಿ ಚಲಾವಣೆಯಾಗಿದ್ದ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದ್ದು, ಚುನಾವಣಾಧಿಕಾರಿ ವಿರುದ್ಧ ‘ಟ್ಯಾಂಪರಿಂಗ್’ ಆರೋಪ ಕೇಳಿಬಂದಿತ್ತು. ಮತಪತ್ರಗಳನ್ನು ತಿದ್ದುತ್ತಿರುವ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಎಎಪಿಯ ಕುಲದೀಪ್ ಕುಮಾರ್ ಅವರ 12 ಮತಗಳಿಗೆ ಹೋಲಿಸಿದರೆ ಸೋಂಕರ್ ಅವರು 16 ಮತಗಳನ್ನು ಪಡೆದರು, ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು. ಈ ಫಲಿತಾಂಶದ ಘೋಷಣೆಯು ಎಎಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್‌ಗಳಿಂದ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...