HomeUncategorizedಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

ಚಂಡೀಗಢ: ಮೇಯರ್‌ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಕಾರಣವಾಗಿದ್ದ ಚುನಾವಣಾಧಿಕಾರಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚನೆ

- Advertisement -
- Advertisement -

ಚಂಡೀಗಢ ಮೇಯರ್‌ ಚುನಾವಣೆಯ ಚುನಾವಣಾಧಿಕಾರಿ ಆಗಿದ್ದ ಅನಿಲ್‌ ಮಸೀಹ್‌ ಮತಪತ್ರಗಳನ್ನು ತಿರುಚಿದ್ದ ತಮ್ಮ ನಡವಳಿಕೆಗಾಗಿ ಸುಪ್ರೀಂ ಕೋರ್ಟ್‌ನಲ್ಲಿ ಬೇಷರತ್‌ ಕ್ಷಮೆಯಾಚಿಸಿದ್ದಾರೆ.

ಜನವರಿ 30ರಂದು ನಡೆದಿದ್ದ ಚಂಡೀಗಢ ಮೇಯರ್ ಚುನಾವಣೆಗೆ ಚುನಾವಣಾಧಿಕಾರಿಯಾಗಿದ್ದ ಅನಿಲ್ ಮಸಿಹ್ ಮತಪತ್ರಗಳು ಅಮಾನ್ಯವಾಗಿದೆ ಎಂದು “ಸುಳ್ಳು ಹೇಳಿಕೆ” ನೀಡಿದ್ದಕ್ಕೆ ಅವರ ವಿರುದ್ಧ ಏಕೆ ನ್ಯಾಯಾಂಗ ನಿಂದನೆ ಪ್ರಕ್ರಿಯೆಗಳನ್ನು ಪ್ರಾರಂಭಿಸಬಾರದು ಎಂದು ಸುಪ್ರೀಂಕೋರ್ಟ್‌ ಪ್ರಶ್ನಿಸಿತ್ತು. ಮಸಿಹ್ ಪರವಾಗಿ ಹಾಜರಾದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠಕ್ಕೆ, “ನಾನು ಸಂಪೂರ್ಣವಾಗಿ ಬೇಷರತ್ ಕ್ಷಮೆಯಾಚಿಸಿದ್ದೇನೆ” ಎಂದು ಮಸಿಹ್‌ ತಿಳಿಸಿರುವುದಾಗಿ ಹೇಳಿದ್ದಾರೆ.

ಅವರು ಮೊದಲ ಅಫಿಡವಿಟ್‌ನ್ನು ಹಿಂತೆಗೆದುಕೊಳ್ಳುತ್ತಾರೆ ಮತ್ತು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂದು ರೋಹಟಗಿ ಹೇಳಿದರು. ಇದನ್ನು ಗಮನಿಸಿದ ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ, ನ್ಯಾಯಾಲಯವು ಮುಂದಿನ ಜುಲೈನಲ್ಲಿ ಈ ಬಗ್ಗೆ ವಿಚಾರಣೆ ನಡೆಸಲಿದೆ ಎಂದು ಹೇಳಿದೆ.

ಮೇಯರ್ ಚುನಾವಣೆಯ ಸಂದರ್ಭದಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿದ ಆರೋಪದ ಮೇಲೆ ಫೆಬ್ರವರಿ 19ರಂದು ಸುಪ್ರೀಂ ಕೋರ್ಟ್‌ನಿಂದ ಟೀಕೆಗೆ ಗುರಿಯಾಗಿದ್ದ ಮಸಿಹ್ ಅವರು ತಮ್ಮ ಮೊದಲ ಅಫಿಡವಿಟ್‌ನಲ್ಲಿ ನ್ಯಾಯಾಲಯಕ್ಕೆ ಹಾಜರಾಗುವ ಮೊದಲು ರಾಜಕೀಯ ಪಕ್ಷಗಳಿಂದ ಟೀಕೆಗೆ ಒಳಗಾಗಿರುವುದಾಗಿ ಹೇಳಿದ್ದರು. ಇದು ಕುಟುಂಬದ ಸದಸ್ಯರನ್ನು ಅಪಾರ ಮಾನಸಿಕ ಆಘಾತಕ್ಕೆ ತಳ್ಳಿದೆ ಎಂದು ಹೇಳಿದ್ದರು. ನಾನು ಆತಂಕದಲ್ಲಿದ್ದು, ಖಿನ್ನತೆ ಎದುರಿಸುತ್ತಿದ್ದೇನೆ. ಮತಪತ್ರಗಳನ್ನು ತಿದ್ದಿದ ಆರೋಪವನ್ನು ನಿರಾಕರಿಸಿ ಈ ಹಿಂದೆ ಸಲ್ಲಿಸಿದ್ದ ಅಫಿಡವಿಟ್‌ನ್ನು ಹಿಂಪಡೆಯುವುದಾಗಿ ಮಸೀಹ್‌ ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ಮನೋಜ ಸೋನ್ಕರ್ ಅವರನ್ನು ಮೇಯರ್ ಹುದ್ದೆಗೆ ಆಯ್ಕಯಾಗಿದ್ದಾರೆ ಎಂದು ಮಸೀಹ್ ಪ್ರಕಟಿಸಿದ್ದ ಚುನಾವಣಾ ಫಲಿತಾಂಶವನ್ನು ಫೆ.20ರಂದು ರದ್ದುಗೊಳಿಸಿದ್ದ ಸರ್ವೋಚ್ಚ ನ್ಯಾಯಾಲಯವು, ಚಂಡಿಗಡ ಮೇಯರ್ ಚುನಾವಣೆಯಲ್ಲಿ ಆಪ್ ಅಭ್ಯರ್ಥಿ ಕುಲದೀಪ್ ಕುಮಾರ್ ಗೆದ್ದಿದ್ದಾರೆ ಎಂದು ಘೋಷಿಸಿತ್ತು. ಮಸೀಹ್‌ ಅವರಿಗೆ ಶೋಕಾಸ್ ನೋಟಿಸ್ ಹೊರಡಿಸಿದ್ದ ಸಂದರ್ಭದಲ್ಲಿ ನ್ಯಾಯಾಲಯವು, ಅವರು ಆಪ್ ನ ಕುಲದೀಪ್‌ ಕುಮಾರ್‌ ಪರವಾಗಿ ಚಲಾವಣೆಯಾಗಿದ್ದ ಮತಪತ್ರಗಳನ್ನು ಉದ್ದೇಶಪೂರ್ವಕವಾಗಿ ವಿರೂಪಗೊಳಿಸಿದ್ದಾರೆ ಎಂದು ಹೇಳಿತ್ತು.

ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಹುಮತವಿದ್ದರೂ ‘ಇಂಡಿಯಾ’ ಬ್ಲಾಕ್‌ನ ಎಎಪಿ ಅಭ್ಯರ್ಥಿ ಪರಾಭವಗೊಂಡಿದ್ದರು. ಮೈತ್ರಿ ಅಭ್ಯರ್ಥಿ ಪರವಾಗಿ ಚಲಾವಣೆಯಾಗಿದ್ದ ಎಂಟು ಮತಗಳನ್ನು ಅಸಿಂಧು ಎಂದು ಘೋಷಿಸಲಾಗಿದ್ದು, ಚುನಾವಣಾಧಿಕಾರಿ ವಿರುದ್ಧ ‘ಟ್ಯಾಂಪರಿಂಗ್’ ಆರೋಪ ಕೇಳಿಬಂದಿತ್ತು. ಮತಪತ್ರಗಳನ್ನು ತಿದ್ದುತ್ತಿರುವ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಎಎಪಿಯ ಕುಲದೀಪ್ ಕುಮಾರ್ ಅವರ 12 ಮತಗಳಿಗೆ ಹೋಲಿಸಿದರೆ ಸೋಂಕರ್ ಅವರು 16 ಮತಗಳನ್ನು ಪಡೆದರು, ಎಂಟು ಮತಗಳು ಅಸಿಂಧು ಎಂದು ಘೋಷಿಸಲಾಗಿತ್ತು. ಈ ಫಲಿತಾಂಶದ ಘೋಷಣೆಯು ಎಎಪಿ ಮತ್ತು ಕಾಂಗ್ರೆಸ್ ಕೌನ್ಸಿಲರ್‌ಗಳಿಂದ ಪ್ರತಿಭಟನೆಗೆ ಕಾರಣವಾಗಿತ್ತು.

ಇದನ್ನು ಓದಿ: ಲೋಕಸಭೆ ಚುನಾವಣೆ: ಪಂಜಾಬ್‌ನ ಎಲ್ಲಾ ಹಳ್ಳಿಗಳಲ್ಲಿ ಬಿಜೆಪಿ ವಿರುದ್ಧ ಅಭಿಯಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...