Homeಮುಖಪುಟಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ಎಎಪಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದ ಬಿಜೆಪಿಯು ನಂತರದಲ್ಲಿ ಉರುಳಿಸಿದ ರಾಜಕೀಯ ದಾಳದಿಂದಾಗಿ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.

- Advertisement -
- Advertisement -

ಶನಿವಾರ (ಜನವರಿ 8) ನಡೆದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇಯರ್‌ ಆಗಿ ಹೊರಹೊಮ್ಮಿದ್ದಾರೆ.

ಅತಿ ಹೆಚ್ಚು ಸದಸ್ಯ ಸ್ಥಾನಗಳನ್ನು ಹೊಂದಿದ್ದ ಆಮ್ ಆದ್ಮಿ ಪಾರ್ಟಿಗೆ ಮೇಯರ್‌ ಸ್ಥಾನ ದೊರಕಲಿಲ್ಲ. ಎಎಪಿ ಸದಸ್ಯರೊಬ್ಬರ ಮತವೊಂದನ್ನು ಅಸಿಂಧುಗೊಳಿಸಿದ್ದರಿಂದ ಬಿಜೆಪಿ ಅಭ್ಯರ್ಥಿಗೆ ಗೆಲುವಾಯಿತು. ಇದನ್ನು ಎಎಪಿ “ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಬಣ್ಣಿಸಿದೆ.

ಕಳೆದ ತಿಂಗಳು ನಡೆದ ಚಂಡೀಗಢದ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನದ ಹೊರತಾಗಿಯೂ, ಬಿಜೆಪಿ ಅಭ್ಯರ್ಥಿ ಸರಬ್ಜಿತ್ ಕೌರ್ ಕೇವಲ ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿ ಮೇಯರ್‌ ಆಗಿದ್ದಾರೆ.

ಮೊದಲ ಬಾರಿಗೆ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಎಪಿ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ ಮೇಯರ್ ಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ ನಂತರದ ಬೆಳವಣಿಗೆಗಳು ಬಿಜೆಪಿಯನ್ನು ಅಧಿಕಾರಕ್ಕೆ ತಂದಿವೆ.

ಶನಿವಾರ ನಡೆದ ಮೇಯರ್‌ ಚುನಾವಣೆಯಲ್ಲಿ ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಏಕೈಕ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸದಸ್ಯರು ಗೈರುಹಾಜರಾಗಿದ್ದರಿಂದ ಒಟ್ಟು 36 ಮತಗಳಲ್ಲಿ 28 ಮತಗಳು ಮಾತ್ರ ಚಲಾವಣೆಯಾದವು.

ಎಎಪಿ ಮತ್ತು ಬಿಜೆಪಿ ಅಭ್ಯರ್ಥಿಗಳು ತಲಾ 14 ಮತಗಳನ್ನು ಹೊಂದಿದ್ದರೂ, ನಂತರ ಎಎಪಿ ಪರವಾಗಿದ್ದ ಒಂದು ಮತವನ್ನು ಅಸಿಂಧು ಎಂದು ಘೋಷಿಸಲಾಯಿತು. ಇದು ಸರಬ್ಜಿತ್ ಕೌರ್ ಅವರ ಗೆಲುವಿಗೆ ದಾರಿ ಮಾಡಿಕೊಟ್ಟಿತು.

ಮತವನ್ನು ಅಸಿಂಧು ಎಂದು ಘೋಷಿಸಲು ಯಾವುದೇ ಕಾನೂನುಬದ್ಧ ಕಾರಣವಿಲ್ಲ ಎಂದು ಎಎಪಿ ಆರೋಪಿಸಿದರೆ, ಮತಪತ್ರದ ಹಿಂಭಾಗದಲ್ಲಿ ‘ಟಿಕ್’ ಚಿಹ್ನೆ ಇದ್ದ ಕಾರಣ ಮತವನ್ನು ಅಸಿಂಧು ಎಂದು ಘೋಷಿಸಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿಕೊಂಡಿವೆ. ಎಎಪಿ ಇದನ್ನು ಅಲ್ಲಗಳೆದಿದೆ.

ಬಿಜೆಪಿ ಲಾಭ ಗಳಿಸಿದ್ದು ಹೇಗೆ?

ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಎಎಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಎಎಪಿ ಪಡೆದುಕೊಂಡಿತು. ಆಡಳಿತಾರೂಢ ಬಿಜೆಪಿ ಕೇವಲ 12 ಗೆದ್ದಿತ್ತು. 2016ರ ಚುನಾವಣೆಯಲ್ಲಿ ಬಿಜೆಪಿಗೆ ದೊರೆತ ಮತಪ್ರಮಾಣ ಶೇ. 80ರಷ್ಟಿತ್ತು. ಆದರೆ ಈ ಭಾರಿ ಆ ಸಂಖ್ಯೆ ಕೇವಲ ಶೇ. 34ಕ್ಕೆ ಕುಸಿದಿತ್ತು. ಉಳಿದ ಸ್ಥಾನಗಳಲ್ಲಿ ಎಂಟು ಕಾಂಗ್ರೆಸ್‌ಗೆ ಮತ್ತು ಒಂದು ಎಸ್‌ಎಡಿ ಪಾಲಾಗಿವೆ.

ಫಲಿತಾಂಶಗಳು ಪ್ರಕಟವಾದ ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ಅವರು ತಮ್ಮ ಪಕ್ಷ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ ಎಂದು ದಿ ವೈರ್‌ಗೆ ತಿಳಿಸಿದ್ದರು. ಆದಾಗ್ಯೂ, ನಂತರದ ಬೆಳವಣಿಗೆಯಲ್ಲಿ ಬಿಜೆಪಿಯು ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಅವರು ಘೋಷಿಸಿದ್ದರು.

ಸೂದ್ ಅವರ ಘೋಷಣೆಯ ನಂತರದ ಹಲವು ಊಹಾಪೋಹಗಳು ಹರಿದಾಡಿದ್ದವು. ಕಾಂಗ್ರೆಸ್ ಮತ್ತು ಎಎಪಿ ಎರಡೂ ಪಕ್ಷಗಳ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ತಮ್ಮ ಪಕ್ಷಗಳ ಅಭ್ಯರ್ಥಿಗಳಿಗೆ ಆಮಿಷಗಳನ್ನು ಒಡ್ಡುತ್ತಿದೆ ಎಂದು ಆರೋಪಿಸಿದ್ದರು. ಬಿಜೆಪಿ ನಾಯಕರು ಆರೋಪವನ್ನು ನಿರಾಕರಿಸಿದ್ದಾರೆ.

ಹೊಸದಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಮುನ್ಸಿಪಲ್‌ ಸದಸ್ಯರಾದ ಹರ್‌ಪ್ರೀತ್ ಕೌರ್ ಬಬ್ಲಾ ಬಿಜೆಪಿಗೆ ಸೇರಿದ್ದು, ಬಿಜೆಪಿ ಅಧಿಕಾರಕ್ಕೆ ಬರುವ ಊಹಾಪೋಹಗಳಿಗೆ ರೆಕ್ಕೆಪುಕ್ಕ ನೀಡಿತು. ಕಾಂಗ್ರೆಸ್ ಅಭ್ಯರ್ಥಿಯ ಬೆಂಬಲದಿಂದಾಗಿ ಕೌನ್ಸಿಲ್‌ನಲ್ಲಿ ಬಿಜೆಪಿ ಸಂಖ್ಯೆ 13ಕ್ಕೆ ಏರಿತು. ಚಂಡೀಗಢ ಲೋಕಸಭಾ ಸದಸ್ಯ ಬಿಜೆಪಿ ಅಭ್ಯರ್ಥಿಯಾಗಿದ್ದು ಮುನ್ಸಿಪಲ್‌ನಲ್ಲಿ ಪದನಿಮಿತ್ತ ಮತವನ್ನು ಹೊಂದಿದ್ದಾರೆ. ಹೀಗಾಗಿ ಬಿಜೆಪಿಯು ಎಎಪಿಗೆ ಸಮನಾಗಿ ಮತಗಳನ್ನು ಗಳಿಸಲು ಸಫಲವಾಯಿತು. ನಂತರದ ಬೆಳವಣಿಗೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿ ಮೇಯರ್‌ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್‌ ಸದಸ್ಯರಾದ ಹರ್‌ಪ್ರೀತ್ ಕೌರ್ ಬಬ್ಲಾ (ಎಡದಿಂದ ಮೂರನೇಯವರು) ಬಿಜೆಪಿ ಸೇರಿರುವುದು (ಚಿತ್ರ ಕೃಪೆ: ದಿ ವೈರ್‌)

ಪಕ್ಷಾಂತರ ನಿಷೇಧ ಕಾನೂನು ಇಲ್ಲದ ಕಾರಣ ಕಾಂಗ್ರೆಸ್ ಕೌನ್ಸಿಲರ್‌ನ ಪಕ್ಷಾಂತರವು ಬಿಜೆಪಿಗೆ ವರದಾನವಾಯಿತು. ಪಕ್ಷಾಂತರದ ವಿರುದ್ಧ ನಿಬಂಧನೆಗಳನ್ನು ಸೇರಿಸಲು 2018ರಲ್ಲಿ ಕಾನೂನನ್ನು ತಿದ್ದುಪಡಿ ಮಾಡುವ ಪ್ರಯತ್ನಗಳು ನಡೆದಿದ್ದವು. ಆದರೆ ಆ ಸಮಯದಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಹೊಂದಿದ್ದ ಬಿಜೆಪಿಯು ಶಾಸನವನ್ನು ತಿದ್ದುಪಡಿ ಮಾಡಲು ಹೆಚ್ಚಿನ ಉತ್ಸಾಹವನ್ನು ತೋರಿಸಲಿಲ್ಲ.

ಕಾಂಗ್ರೆಸ್ ಕೌನ್ಸಿಲರ್ ನಿಷ್ಠೆ ಬದಲಿಸಿದ ನಂತರದಲ್ಲಿ ಹೈ ಡ್ರಾಮಾ ನಡೆಯಿತು. ಕಾಂಗ್ರೆಸ್ ತನ್ನ ಉಳಿದ ಏಳು ಕೌನ್ಸಿಲರ್‌ಗಳನ್ನು ಜೈಪುರಕ್ಕೆ ಕರೆದೊಯ್ದಿತು. ಎಎಪಿ ತನ್ನ ಕೌನ್ಸಿಲರ್‌ಗಳನ್ನು ತನ್ನ ಅಧಿಕಾರದ ಕೇಂದ್ರವಾದ ದೆಹಲಿಗೆ ಕರೆದೊಯ್ದಿತು. ಬಿಜೆಪಿ ಕೂಡ ಅದನ್ನೇ ಅನುಸರಿಸಿ, ತಮ್ಮ ಕೌನ್ಸಿಲರ್‌ಗಳು ಬಿಜೆಪಿ ಆಡಳಿತವಿರುವ ಶಿಮ್ಲಾದಲ್ಲಿ ಉಳಿಯಲು ವ್ಯವಸ್ಥೆ ಮಾಡಿತು.

ಮೇಯರ್ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಎಸ್‌ಎಡಿ ಬಹಿಷ್ಕರಿಸಲು ನಿರ್ಧರಿಸಿದಾಗ ಚುನಾವಣೆ ಇನ್ನಷ್ಟು ಕುತೂಹಲಕಾರಿಯಾಯಿತು. ಬಿಜೆಪಿ ಮತ್ತು ಎಎಪಿ ಎರಡೂ ಪಕ್ಷಗಳು 14 ಕೌನ್ಸಿಲರ್‌ಗಳ ಬೆಂಬಲವನ್ನು ಹೊಂದಿದ್ದವು. “ಬಿಜೆಪಿ ಮತ್ತು ಎಎಪಿ ಅಭ್ಯರ್ಥಿಗಳು ಸಮಾನ ಮತಗಳನ್ನು ಗಳಿಸಿದ ಸಂದರ್ಭದಲ್ಲಿ ಒಂದು ಪ್ರಮಾಣಿತ ವಿಧಾನದ ಮೂಲಕ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ” ಚಂಡೀಗಢದ ಎಎಪಿ ಸಂಚಾಲಕ ಪ್ರೇಮ್ ಗಾರ್ಗ್ ನಿರೀಕ್ಷಿಸಿದ್ದರು.

ಎಎಪಿ ಮತ ಅಸಿಂಧು

ಉಭಯ ಪಕ್ಷಗಳ ಅಭ್ಯರ್ಥಿಗಳು ತಲಾ 14 ಮತಗಳ ಸಮಬಲ ಸಾಧಿಸಿದರು. ಎಎಪಿ ಕೌನ್ಸಿಲರ್‌ನ ಒಂದು ಮತವನ್ನು ಅಸಿಂಧು ಎಂದು ಘೋಷಿಸಿದಾಗ ಸರಬ್ಜಿತ್ ಗೆದ್ದರು. ಚುನಾವಣೆಯ ಅಧ್ಯಕ್ಷರಾದ ಮಹೇಶ್ ಇಂದರ್ ಸಿಂಗ್ (ಸ್ವತಃ ಬಿಜೆಪಿ ಕೌನ್ಸಿಲರ್, ಮುನ್ಸಿಪಲ್ ಚುನಾವಣೆಯಲ್ಲಿ ಒಂಬತ್ತು ಮತಗಳ ಕಡಿಮೆ ಅಂತರದಿಂದ ಗೆದ್ದವರು) ಮತವನ್ನು ಅಸಿಂಧು ಎಂದು ಘೋಷಿಸಿದರು.

ಎಎಪಿ ಅಭ್ಯರ್ಥಿ ಅಂಜು ಕತ್ಯಾಲ್ ಈಗ ಕೇವಲ 13 ಮತಗಳನ್ನು ಹೊಂದಿದ್ದರು. ಸರಬ್ಜಿತ್ ಕೌರ್ ಅವರು 14 ಮತಗಳನ್ನು ಹೊಂದಿದ್ದರು. ಇದರಿಂದ ಕೆರಳಿದ ಎಎಪಿ ಕೌನ್ಸಿಲರ್‌ಗಳು ನೂತನ ಮೇಯರ್ ಅವರನ್ನು ಕೂರಿಸಿದ ಸ್ಥಳಕ್ಕೆ ನುಗ್ಗಿ ಪ್ರತಿಭಟನೆ ಆರಂಭಿಸಿದರು. ಅಲ್ಲಿದ್ದ ಮಾರ್ಷಲ್‌ಗಳಿಗೂ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸಾಧ್ಯವಾಗದ ಕಾರಣ ಚಂಡೀಗಢ ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ಎಎಪಿ ಶಾಸಕ ಮತ್ತು ಪಂಜಾಬ್ ವ್ಯವಹಾರಗಳ ಸಹ-ಪ್ರಭಾರಿ ರಾಘವ್ ಚಡ್ಡಾ ಕೂಡ ಮುನ್ಸಿಪಲ್‌ನಲ್ಲಿ ಧ್ವನಿ ಎತ್ತಿದ್ದಾರೆ. ಮರುಮತದಾನಕ್ಕೆ ಆಗ್ರಹಿಸಿದ ಅವರು, ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸ ಮಾಡಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಚುನಾವಣೆಯಲ್ಲಿ ಎಸ್‌ಎಡಿ ಮತ್ತು ಕಾಂಗ್ರೆಸ್‌ನ ನಿಜಬಣ್ಣ ಬಯಲಾಗಿವೆ. ಚಂಡೀಗಢದಲ್ಲಿ ಉದ್ದೇಶಪೂರ್ವಕವಾಗಿ ಆಪ್ ಅನ್ನು ದೂರವಿಡಲು ಬಿಜೆಪಿ, ಎಸ್‌ಎಡಿ ಮತ್ತು ಕಾಂಗ್ರೆಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ನಾನು ಪಂಜಾಬ್ ಜನರಿಗೆ ಹೇಳಲು ಬಯಸುತ್ತೇನೆ” ‌ಎಂದಿದ್ದಾರೆ.

(ಕೃಪೆ: ದಿ ವೈರ್‌)


ಇದನ್ನೂ ಓದಿರಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...