Homeಮುಖಪುಟಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ಎಎಪಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದ ಬಿಜೆಪಿಯು ನಂತರದಲ್ಲಿ ಉರುಳಿಸಿದ ರಾಜಕೀಯ ದಾಳದಿಂದಾಗಿ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.

- Advertisement -
- Advertisement -

ಶನಿವಾರ (ಜನವರಿ 8) ನಡೆದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇಯರ್‌ ಆಗಿ ಹೊರಹೊಮ್ಮಿದ್ದಾರೆ.

ಅತಿ ಹೆಚ್ಚು ಸದಸ್ಯ ಸ್ಥಾನಗಳನ್ನು ಹೊಂದಿದ್ದ ಆಮ್ ಆದ್ಮಿ ಪಾರ್ಟಿಗೆ ಮೇಯರ್‌ ಸ್ಥಾನ ದೊರಕಲಿಲ್ಲ. ಎಎಪಿ ಸದಸ್ಯರೊಬ್ಬರ ಮತವೊಂದನ್ನು ಅಸಿಂಧುಗೊಳಿಸಿದ್ದರಿಂದ ಬಿಜೆಪಿ ಅಭ್ಯರ್ಥಿಗೆ ಗೆಲುವಾಯಿತು. ಇದನ್ನು ಎಎಪಿ “ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಬಣ್ಣಿಸಿದೆ.

ಕಳೆದ ತಿಂಗಳು ನಡೆದ ಚಂಡೀಗಢದ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನದ ಹೊರತಾಗಿಯೂ, ಬಿಜೆಪಿ ಅಭ್ಯರ್ಥಿ ಸರಬ್ಜಿತ್ ಕೌರ್ ಕೇವಲ ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿ ಮೇಯರ್‌ ಆಗಿದ್ದಾರೆ.

ಮೊದಲ ಬಾರಿಗೆ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಎಪಿ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ ಮೇಯರ್ ಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ ನಂತರದ ಬೆಳವಣಿಗೆಗಳು ಬಿಜೆಪಿಯನ್ನು ಅಧಿಕಾರಕ್ಕೆ ತಂದಿವೆ.

ಶನಿವಾರ ನಡೆದ ಮೇಯರ್‌ ಚುನಾವಣೆಯಲ್ಲಿ ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಏಕೈಕ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸದಸ್ಯರು ಗೈರುಹಾಜರಾಗಿದ್ದರಿಂದ ಒಟ್ಟು 36 ಮತಗಳಲ್ಲಿ 28 ಮತಗಳು ಮಾತ್ರ ಚಲಾವಣೆಯಾದವು.

ಎಎಪಿ ಮತ್ತು ಬಿಜೆಪಿ ಅಭ್ಯರ್ಥಿಗಳು ತಲಾ 14 ಮತಗಳನ್ನು ಹೊಂದಿದ್ದರೂ, ನಂತರ ಎಎಪಿ ಪರವಾಗಿದ್ದ ಒಂದು ಮತವನ್ನು ಅಸಿಂಧು ಎಂದು ಘೋಷಿಸಲಾಯಿತು. ಇದು ಸರಬ್ಜಿತ್ ಕೌರ್ ಅವರ ಗೆಲುವಿಗೆ ದಾರಿ ಮಾಡಿಕೊಟ್ಟಿತು.

ಮತವನ್ನು ಅಸಿಂಧು ಎಂದು ಘೋಷಿಸಲು ಯಾವುದೇ ಕಾನೂನುಬದ್ಧ ಕಾರಣವಿಲ್ಲ ಎಂದು ಎಎಪಿ ಆರೋಪಿಸಿದರೆ, ಮತಪತ್ರದ ಹಿಂಭಾಗದಲ್ಲಿ ‘ಟಿಕ್’ ಚಿಹ್ನೆ ಇದ್ದ ಕಾರಣ ಮತವನ್ನು ಅಸಿಂಧು ಎಂದು ಘೋಷಿಸಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿಕೊಂಡಿವೆ. ಎಎಪಿ ಇದನ್ನು ಅಲ್ಲಗಳೆದಿದೆ.

ಬಿಜೆಪಿ ಲಾಭ ಗಳಿಸಿದ್ದು ಹೇಗೆ?

ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಎಎಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಎಎಪಿ ಪಡೆದುಕೊಂಡಿತು. ಆಡಳಿತಾರೂಢ ಬಿಜೆಪಿ ಕೇವಲ 12 ಗೆದ್ದಿತ್ತು. 2016ರ ಚುನಾವಣೆಯಲ್ಲಿ ಬಿಜೆಪಿಗೆ ದೊರೆತ ಮತಪ್ರಮಾಣ ಶೇ. 80ರಷ್ಟಿತ್ತು. ಆದರೆ ಈ ಭಾರಿ ಆ ಸಂಖ್ಯೆ ಕೇವಲ ಶೇ. 34ಕ್ಕೆ ಕುಸಿದಿತ್ತು. ಉಳಿದ ಸ್ಥಾನಗಳಲ್ಲಿ ಎಂಟು ಕಾಂಗ್ರೆಸ್‌ಗೆ ಮತ್ತು ಒಂದು ಎಸ್‌ಎಡಿ ಪಾಲಾಗಿವೆ.

ಫಲಿತಾಂಶಗಳು ಪ್ರಕಟವಾದ ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ಅವರು ತಮ್ಮ ಪಕ್ಷ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ ಎಂದು ದಿ ವೈರ್‌ಗೆ ತಿಳಿಸಿದ್ದರು. ಆದಾಗ್ಯೂ, ನಂತರದ ಬೆಳವಣಿಗೆಯಲ್ಲಿ ಬಿಜೆಪಿಯು ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಅವರು ಘೋಷಿಸಿದ್ದರು.

ಸೂದ್ ಅವರ ಘೋಷಣೆಯ ನಂತರದ ಹಲವು ಊಹಾಪೋಹಗಳು ಹರಿದಾಡಿದ್ದವು. ಕಾಂಗ್ರೆಸ್ ಮತ್ತು ಎಎಪಿ ಎರಡೂ ಪಕ್ಷಗಳ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ತಮ್ಮ ಪಕ್ಷಗಳ ಅಭ್ಯರ್ಥಿಗಳಿಗೆ ಆಮಿಷಗಳನ್ನು ಒಡ್ಡುತ್ತಿದೆ ಎಂದು ಆರೋಪಿಸಿದ್ದರು. ಬಿಜೆಪಿ ನಾಯಕರು ಆರೋಪವನ್ನು ನಿರಾಕರಿಸಿದ್ದಾರೆ.

ಹೊಸದಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಮುನ್ಸಿಪಲ್‌ ಸದಸ್ಯರಾದ ಹರ್‌ಪ್ರೀತ್ ಕೌರ್ ಬಬ್ಲಾ ಬಿಜೆಪಿಗೆ ಸೇರಿದ್ದು, ಬಿಜೆಪಿ ಅಧಿಕಾರಕ್ಕೆ ಬರುವ ಊಹಾಪೋಹಗಳಿಗೆ ರೆಕ್ಕೆಪುಕ್ಕ ನೀಡಿತು. ಕಾಂಗ್ರೆಸ್ ಅಭ್ಯರ್ಥಿಯ ಬೆಂಬಲದಿಂದಾಗಿ ಕೌನ್ಸಿಲ್‌ನಲ್ಲಿ ಬಿಜೆಪಿ ಸಂಖ್ಯೆ 13ಕ್ಕೆ ಏರಿತು. ಚಂಡೀಗಢ ಲೋಕಸಭಾ ಸದಸ್ಯ ಬಿಜೆಪಿ ಅಭ್ಯರ್ಥಿಯಾಗಿದ್ದು ಮುನ್ಸಿಪಲ್‌ನಲ್ಲಿ ಪದನಿಮಿತ್ತ ಮತವನ್ನು ಹೊಂದಿದ್ದಾರೆ. ಹೀಗಾಗಿ ಬಿಜೆಪಿಯು ಎಎಪಿಗೆ ಸಮನಾಗಿ ಮತಗಳನ್ನು ಗಳಿಸಲು ಸಫಲವಾಯಿತು. ನಂತರದ ಬೆಳವಣಿಗೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿ ಮೇಯರ್‌ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್‌ ಸದಸ್ಯರಾದ ಹರ್‌ಪ್ರೀತ್ ಕೌರ್ ಬಬ್ಲಾ (ಎಡದಿಂದ ಮೂರನೇಯವರು) ಬಿಜೆಪಿ ಸೇರಿರುವುದು (ಚಿತ್ರ ಕೃಪೆ: ದಿ ವೈರ್‌)

ಪಕ್ಷಾಂತರ ನಿಷೇಧ ಕಾನೂನು ಇಲ್ಲದ ಕಾರಣ ಕಾಂಗ್ರೆಸ್ ಕೌನ್ಸಿಲರ್‌ನ ಪಕ್ಷಾಂತರವು ಬಿಜೆಪಿಗೆ ವರದಾನವಾಯಿತು. ಪಕ್ಷಾಂತರದ ವಿರುದ್ಧ ನಿಬಂಧನೆಗಳನ್ನು ಸೇರಿಸಲು 2018ರಲ್ಲಿ ಕಾನೂನನ್ನು ತಿದ್ದುಪಡಿ ಮಾಡುವ ಪ್ರಯತ್ನಗಳು ನಡೆದಿದ್ದವು. ಆದರೆ ಆ ಸಮಯದಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಹೊಂದಿದ್ದ ಬಿಜೆಪಿಯು ಶಾಸನವನ್ನು ತಿದ್ದುಪಡಿ ಮಾಡಲು ಹೆಚ್ಚಿನ ಉತ್ಸಾಹವನ್ನು ತೋರಿಸಲಿಲ್ಲ.

ಕಾಂಗ್ರೆಸ್ ಕೌನ್ಸಿಲರ್ ನಿಷ್ಠೆ ಬದಲಿಸಿದ ನಂತರದಲ್ಲಿ ಹೈ ಡ್ರಾಮಾ ನಡೆಯಿತು. ಕಾಂಗ್ರೆಸ್ ತನ್ನ ಉಳಿದ ಏಳು ಕೌನ್ಸಿಲರ್‌ಗಳನ್ನು ಜೈಪುರಕ್ಕೆ ಕರೆದೊಯ್ದಿತು. ಎಎಪಿ ತನ್ನ ಕೌನ್ಸಿಲರ್‌ಗಳನ್ನು ತನ್ನ ಅಧಿಕಾರದ ಕೇಂದ್ರವಾದ ದೆಹಲಿಗೆ ಕರೆದೊಯ್ದಿತು. ಬಿಜೆಪಿ ಕೂಡ ಅದನ್ನೇ ಅನುಸರಿಸಿ, ತಮ್ಮ ಕೌನ್ಸಿಲರ್‌ಗಳು ಬಿಜೆಪಿ ಆಡಳಿತವಿರುವ ಶಿಮ್ಲಾದಲ್ಲಿ ಉಳಿಯಲು ವ್ಯವಸ್ಥೆ ಮಾಡಿತು.

ಮೇಯರ್ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಎಸ್‌ಎಡಿ ಬಹಿಷ್ಕರಿಸಲು ನಿರ್ಧರಿಸಿದಾಗ ಚುನಾವಣೆ ಇನ್ನಷ್ಟು ಕುತೂಹಲಕಾರಿಯಾಯಿತು. ಬಿಜೆಪಿ ಮತ್ತು ಎಎಪಿ ಎರಡೂ ಪಕ್ಷಗಳು 14 ಕೌನ್ಸಿಲರ್‌ಗಳ ಬೆಂಬಲವನ್ನು ಹೊಂದಿದ್ದವು. “ಬಿಜೆಪಿ ಮತ್ತು ಎಎಪಿ ಅಭ್ಯರ್ಥಿಗಳು ಸಮಾನ ಮತಗಳನ್ನು ಗಳಿಸಿದ ಸಂದರ್ಭದಲ್ಲಿ ಒಂದು ಪ್ರಮಾಣಿತ ವಿಧಾನದ ಮೂಲಕ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ” ಚಂಡೀಗಢದ ಎಎಪಿ ಸಂಚಾಲಕ ಪ್ರೇಮ್ ಗಾರ್ಗ್ ನಿರೀಕ್ಷಿಸಿದ್ದರು.

ಎಎಪಿ ಮತ ಅಸಿಂಧು

ಉಭಯ ಪಕ್ಷಗಳ ಅಭ್ಯರ್ಥಿಗಳು ತಲಾ 14 ಮತಗಳ ಸಮಬಲ ಸಾಧಿಸಿದರು. ಎಎಪಿ ಕೌನ್ಸಿಲರ್‌ನ ಒಂದು ಮತವನ್ನು ಅಸಿಂಧು ಎಂದು ಘೋಷಿಸಿದಾಗ ಸರಬ್ಜಿತ್ ಗೆದ್ದರು. ಚುನಾವಣೆಯ ಅಧ್ಯಕ್ಷರಾದ ಮಹೇಶ್ ಇಂದರ್ ಸಿಂಗ್ (ಸ್ವತಃ ಬಿಜೆಪಿ ಕೌನ್ಸಿಲರ್, ಮುನ್ಸಿಪಲ್ ಚುನಾವಣೆಯಲ್ಲಿ ಒಂಬತ್ತು ಮತಗಳ ಕಡಿಮೆ ಅಂತರದಿಂದ ಗೆದ್ದವರು) ಮತವನ್ನು ಅಸಿಂಧು ಎಂದು ಘೋಷಿಸಿದರು.

ಎಎಪಿ ಅಭ್ಯರ್ಥಿ ಅಂಜು ಕತ್ಯಾಲ್ ಈಗ ಕೇವಲ 13 ಮತಗಳನ್ನು ಹೊಂದಿದ್ದರು. ಸರಬ್ಜಿತ್ ಕೌರ್ ಅವರು 14 ಮತಗಳನ್ನು ಹೊಂದಿದ್ದರು. ಇದರಿಂದ ಕೆರಳಿದ ಎಎಪಿ ಕೌನ್ಸಿಲರ್‌ಗಳು ನೂತನ ಮೇಯರ್ ಅವರನ್ನು ಕೂರಿಸಿದ ಸ್ಥಳಕ್ಕೆ ನುಗ್ಗಿ ಪ್ರತಿಭಟನೆ ಆರಂಭಿಸಿದರು. ಅಲ್ಲಿದ್ದ ಮಾರ್ಷಲ್‌ಗಳಿಗೂ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸಾಧ್ಯವಾಗದ ಕಾರಣ ಚಂಡೀಗಢ ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ಎಎಪಿ ಶಾಸಕ ಮತ್ತು ಪಂಜಾಬ್ ವ್ಯವಹಾರಗಳ ಸಹ-ಪ್ರಭಾರಿ ರಾಘವ್ ಚಡ್ಡಾ ಕೂಡ ಮುನ್ಸಿಪಲ್‌ನಲ್ಲಿ ಧ್ವನಿ ಎತ್ತಿದ್ದಾರೆ. ಮರುಮತದಾನಕ್ಕೆ ಆಗ್ರಹಿಸಿದ ಅವರು, ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸ ಮಾಡಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಚುನಾವಣೆಯಲ್ಲಿ ಎಸ್‌ಎಡಿ ಮತ್ತು ಕಾಂಗ್ರೆಸ್‌ನ ನಿಜಬಣ್ಣ ಬಯಲಾಗಿವೆ. ಚಂಡೀಗಢದಲ್ಲಿ ಉದ್ದೇಶಪೂರ್ವಕವಾಗಿ ಆಪ್ ಅನ್ನು ದೂರವಿಡಲು ಬಿಜೆಪಿ, ಎಸ್‌ಎಡಿ ಮತ್ತು ಕಾಂಗ್ರೆಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ನಾನು ಪಂಜಾಬ್ ಜನರಿಗೆ ಹೇಳಲು ಬಯಸುತ್ತೇನೆ” ‌ಎಂದಿದ್ದಾರೆ.

(ಕೃಪೆ: ದಿ ವೈರ್‌)


ಇದನ್ನೂ ಓದಿರಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...