Homeಮುಖಪುಟಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ಚಂಡೀಗಢ: ಹೆಚ್ಚು ಸ್ಥಾನ ಗೆದ್ದರೂ ಎಎಪಿಗೆ ಒಲಿಯದ ಮೇಯರ್‌ ಸ್ಥಾನ; ಬಿಜೆಪಿ ಅಭ್ಯರ್ಥಿ ಆಯ್ಕೆ

ಎಎಪಿಗಿಂತ ಕಡಿಮೆ ಸ್ಥಾನಗಳನ್ನು ಗಳಿಸಿದ್ದ ಬಿಜೆಪಿಯು ನಂತರದಲ್ಲಿ ಉರುಳಿಸಿದ ರಾಜಕೀಯ ದಾಳದಿಂದಾಗಿ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.

- Advertisement -
- Advertisement -

ಶನಿವಾರ (ಜನವರಿ 8) ನಡೆದ ಚಂಡೀಗಢ ಮುನ್ಸಿಪಲ್ ಕಾರ್ಪೊರೇಷನ್‌ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮೇಯರ್‌ ಆಗಿ ಹೊರಹೊಮ್ಮಿದ್ದಾರೆ.

ಅತಿ ಹೆಚ್ಚು ಸದಸ್ಯ ಸ್ಥಾನಗಳನ್ನು ಹೊಂದಿದ್ದ ಆಮ್ ಆದ್ಮಿ ಪಾರ್ಟಿಗೆ ಮೇಯರ್‌ ಸ್ಥಾನ ದೊರಕಲಿಲ್ಲ. ಎಎಪಿ ಸದಸ್ಯರೊಬ್ಬರ ಮತವೊಂದನ್ನು ಅಸಿಂಧುಗೊಳಿಸಿದ್ದರಿಂದ ಬಿಜೆಪಿ ಅಭ್ಯರ್ಥಿಗೆ ಗೆಲುವಾಯಿತು. ಇದನ್ನು ಎಎಪಿ “ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ಬಣ್ಣಿಸಿದೆ.

ಕಳೆದ ತಿಂಗಳು ನಡೆದ ಚಂಡೀಗಢದ ಚುನಾವಣೆಯಲ್ಲಿ ಬಿಜೆಪಿ ಕಳಪೆ ಪ್ರದರ್ಶನದ ಹೊರತಾಗಿಯೂ, ಬಿಜೆಪಿ ಅಭ್ಯರ್ಥಿ ಸರಬ್ಜಿತ್ ಕೌರ್ ಕೇವಲ ಒಂದು ಮತದ ಅಂತರದಲ್ಲಿ ಗೆಲುವು ಸಾಧಿಸಿ ಮೇಯರ್‌ ಆಗಿದ್ದಾರೆ.

ಮೊದಲ ಬಾರಿಗೆ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಎಎಪಿ, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ ನಂತರ ಮೇಯರ್ ಚುನಾವಣೆಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿತ್ತು. ಆದರೆ ನಂತರದ ಬೆಳವಣಿಗೆಗಳು ಬಿಜೆಪಿಯನ್ನು ಅಧಿಕಾರಕ್ಕೆ ತಂದಿವೆ.

ಶನಿವಾರ ನಡೆದ ಮೇಯರ್‌ ಚುನಾವಣೆಯಲ್ಲಿ ಏಳು ಕಾಂಗ್ರೆಸ್ ಕೌನ್ಸಿಲರ್‌ಗಳು ಮತ್ತು ಏಕೈಕ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಸದಸ್ಯರು ಗೈರುಹಾಜರಾಗಿದ್ದರಿಂದ ಒಟ್ಟು 36 ಮತಗಳಲ್ಲಿ 28 ಮತಗಳು ಮಾತ್ರ ಚಲಾವಣೆಯಾದವು.

ಎಎಪಿ ಮತ್ತು ಬಿಜೆಪಿ ಅಭ್ಯರ್ಥಿಗಳು ತಲಾ 14 ಮತಗಳನ್ನು ಹೊಂದಿದ್ದರೂ, ನಂತರ ಎಎಪಿ ಪರವಾಗಿದ್ದ ಒಂದು ಮತವನ್ನು ಅಸಿಂಧು ಎಂದು ಘೋಷಿಸಲಾಯಿತು. ಇದು ಸರಬ್ಜಿತ್ ಕೌರ್ ಅವರ ಗೆಲುವಿಗೆ ದಾರಿ ಮಾಡಿಕೊಟ್ಟಿತು.

ಮತವನ್ನು ಅಸಿಂಧು ಎಂದು ಘೋಷಿಸಲು ಯಾವುದೇ ಕಾನೂನುಬದ್ಧ ಕಾರಣವಿಲ್ಲ ಎಂದು ಎಎಪಿ ಆರೋಪಿಸಿದರೆ, ಮತಪತ್ರದ ಹಿಂಭಾಗದಲ್ಲಿ ‘ಟಿಕ್’ ಚಿಹ್ನೆ ಇದ್ದ ಕಾರಣ ಮತವನ್ನು ಅಸಿಂಧು ಎಂದು ಘೋಷಿಸಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳಿಕೊಂಡಿವೆ. ಎಎಪಿ ಇದನ್ನು ಅಲ್ಲಗಳೆದಿದೆ.

ಬಿಜೆಪಿ ಲಾಭ ಗಳಿಸಿದ್ದು ಹೇಗೆ?

ಕಳೆದ ತಿಂಗಳು ನಡೆದ ಚುನಾವಣೆಯಲ್ಲಿ ಎಎಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಎಎಪಿ ಪಡೆದುಕೊಂಡಿತು. ಆಡಳಿತಾರೂಢ ಬಿಜೆಪಿ ಕೇವಲ 12 ಗೆದ್ದಿತ್ತು. 2016ರ ಚುನಾವಣೆಯಲ್ಲಿ ಬಿಜೆಪಿಗೆ ದೊರೆತ ಮತಪ್ರಮಾಣ ಶೇ. 80ರಷ್ಟಿತ್ತು. ಆದರೆ ಈ ಭಾರಿ ಆ ಸಂಖ್ಯೆ ಕೇವಲ ಶೇ. 34ಕ್ಕೆ ಕುಸಿದಿತ್ತು. ಉಳಿದ ಸ್ಥಾನಗಳಲ್ಲಿ ಎಂಟು ಕಾಂಗ್ರೆಸ್‌ಗೆ ಮತ್ತು ಒಂದು ಎಸ್‌ಎಡಿ ಪಾಲಾಗಿವೆ.

ಫಲಿತಾಂಶಗಳು ಪ್ರಕಟವಾದ ಕೂಡಲೇ ಬಿಜೆಪಿ ರಾಜ್ಯಾಧ್ಯಕ್ಷ ಅರುಣ್ ಸೂದ್ ಅವರು ತಮ್ಮ ಪಕ್ಷ ವಿರೋಧ ಪಕ್ಷದಲ್ಲಿ ಕುಳಿತುಕೊಳ್ಳಲು ನಿರ್ಧರಿಸಿದೆ ಎಂದು ದಿ ವೈರ್‌ಗೆ ತಿಳಿಸಿದ್ದರು. ಆದಾಗ್ಯೂ, ನಂತರದ ಬೆಳವಣಿಗೆಯಲ್ಲಿ ಬಿಜೆಪಿಯು ಮೇಯರ್ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ಅವರು ಘೋಷಿಸಿದ್ದರು.

ಸೂದ್ ಅವರ ಘೋಷಣೆಯ ನಂತರದ ಹಲವು ಊಹಾಪೋಹಗಳು ಹರಿದಾಡಿದ್ದವು. ಕಾಂಗ್ರೆಸ್ ಮತ್ತು ಎಎಪಿ ಎರಡೂ ಪಕ್ಷಗಳ ಸದಸ್ಯರು ಪತ್ರಿಕಾಗೋಷ್ಠಿ ನಡೆಸಿ ಬಿಜೆಪಿ ತಮ್ಮ ಪಕ್ಷಗಳ ಅಭ್ಯರ್ಥಿಗಳಿಗೆ ಆಮಿಷಗಳನ್ನು ಒಡ್ಡುತ್ತಿದೆ ಎಂದು ಆರೋಪಿಸಿದ್ದರು. ಬಿಜೆಪಿ ನಾಯಕರು ಆರೋಪವನ್ನು ನಿರಾಕರಿಸಿದ್ದಾರೆ.

ಹೊಸದಾಗಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದ ಮುನ್ಸಿಪಲ್‌ ಸದಸ್ಯರಾದ ಹರ್‌ಪ್ರೀತ್ ಕೌರ್ ಬಬ್ಲಾ ಬಿಜೆಪಿಗೆ ಸೇರಿದ್ದು, ಬಿಜೆಪಿ ಅಧಿಕಾರಕ್ಕೆ ಬರುವ ಊಹಾಪೋಹಗಳಿಗೆ ರೆಕ್ಕೆಪುಕ್ಕ ನೀಡಿತು. ಕಾಂಗ್ರೆಸ್ ಅಭ್ಯರ್ಥಿಯ ಬೆಂಬಲದಿಂದಾಗಿ ಕೌನ್ಸಿಲ್‌ನಲ್ಲಿ ಬಿಜೆಪಿ ಸಂಖ್ಯೆ 13ಕ್ಕೆ ಏರಿತು. ಚಂಡೀಗಢ ಲೋಕಸಭಾ ಸದಸ್ಯ ಬಿಜೆಪಿ ಅಭ್ಯರ್ಥಿಯಾಗಿದ್ದು ಮುನ್ಸಿಪಲ್‌ನಲ್ಲಿ ಪದನಿಮಿತ್ತ ಮತವನ್ನು ಹೊಂದಿದ್ದಾರೆ. ಹೀಗಾಗಿ ಬಿಜೆಪಿಯು ಎಎಪಿಗೆ ಸಮನಾಗಿ ಮತಗಳನ್ನು ಗಳಿಸಲು ಸಫಲವಾಯಿತು. ನಂತರದ ಬೆಳವಣಿಗೆಯಲ್ಲಿ ಬಿಜೆಪಿ ಮೇಲುಗೈ ಸಾಧಿಸಿ ಮೇಯರ್‌ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

ಕಾಂಗ್ರೆಸ್‌ ಸದಸ್ಯರಾದ ಹರ್‌ಪ್ರೀತ್ ಕೌರ್ ಬಬ್ಲಾ (ಎಡದಿಂದ ಮೂರನೇಯವರು) ಬಿಜೆಪಿ ಸೇರಿರುವುದು (ಚಿತ್ರ ಕೃಪೆ: ದಿ ವೈರ್‌)

ಪಕ್ಷಾಂತರ ನಿಷೇಧ ಕಾನೂನು ಇಲ್ಲದ ಕಾರಣ ಕಾಂಗ್ರೆಸ್ ಕೌನ್ಸಿಲರ್‌ನ ಪಕ್ಷಾಂತರವು ಬಿಜೆಪಿಗೆ ವರದಾನವಾಯಿತು. ಪಕ್ಷಾಂತರದ ವಿರುದ್ಧ ನಿಬಂಧನೆಗಳನ್ನು ಸೇರಿಸಲು 2018ರಲ್ಲಿ ಕಾನೂನನ್ನು ತಿದ್ದುಪಡಿ ಮಾಡುವ ಪ್ರಯತ್ನಗಳು ನಡೆದಿದ್ದವು. ಆದರೆ ಆ ಸಮಯದಲ್ಲಿ ಮೂರನೇ ಎರಡರಷ್ಟು ಬಹುಮತವನ್ನು ಹೊಂದಿದ್ದ ಬಿಜೆಪಿಯು ಶಾಸನವನ್ನು ತಿದ್ದುಪಡಿ ಮಾಡಲು ಹೆಚ್ಚಿನ ಉತ್ಸಾಹವನ್ನು ತೋರಿಸಲಿಲ್ಲ.

ಕಾಂಗ್ರೆಸ್ ಕೌನ್ಸಿಲರ್ ನಿಷ್ಠೆ ಬದಲಿಸಿದ ನಂತರದಲ್ಲಿ ಹೈ ಡ್ರಾಮಾ ನಡೆಯಿತು. ಕಾಂಗ್ರೆಸ್ ತನ್ನ ಉಳಿದ ಏಳು ಕೌನ್ಸಿಲರ್‌ಗಳನ್ನು ಜೈಪುರಕ್ಕೆ ಕರೆದೊಯ್ದಿತು. ಎಎಪಿ ತನ್ನ ಕೌನ್ಸಿಲರ್‌ಗಳನ್ನು ತನ್ನ ಅಧಿಕಾರದ ಕೇಂದ್ರವಾದ ದೆಹಲಿಗೆ ಕರೆದೊಯ್ದಿತು. ಬಿಜೆಪಿ ಕೂಡ ಅದನ್ನೇ ಅನುಸರಿಸಿ, ತಮ್ಮ ಕೌನ್ಸಿಲರ್‌ಗಳು ಬಿಜೆಪಿ ಆಡಳಿತವಿರುವ ಶಿಮ್ಲಾದಲ್ಲಿ ಉಳಿಯಲು ವ್ಯವಸ್ಥೆ ಮಾಡಿತು.

ಮೇಯರ್ ಚುನಾವಣೆಯನ್ನು ಕಾಂಗ್ರೆಸ್ ಮತ್ತು ಎಸ್‌ಎಡಿ ಬಹಿಷ್ಕರಿಸಲು ನಿರ್ಧರಿಸಿದಾಗ ಚುನಾವಣೆ ಇನ್ನಷ್ಟು ಕುತೂಹಲಕಾರಿಯಾಯಿತು. ಬಿಜೆಪಿ ಮತ್ತು ಎಎಪಿ ಎರಡೂ ಪಕ್ಷಗಳು 14 ಕೌನ್ಸಿಲರ್‌ಗಳ ಬೆಂಬಲವನ್ನು ಹೊಂದಿದ್ದವು. “ಬಿಜೆಪಿ ಮತ್ತು ಎಎಪಿ ಅಭ್ಯರ್ಥಿಗಳು ಸಮಾನ ಮತಗಳನ್ನು ಗಳಿಸಿದ ಸಂದರ್ಭದಲ್ಲಿ ಒಂದು ಪ್ರಮಾಣಿತ ವಿಧಾನದ ಮೂಲಕ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ” ಚಂಡೀಗಢದ ಎಎಪಿ ಸಂಚಾಲಕ ಪ್ರೇಮ್ ಗಾರ್ಗ್ ನಿರೀಕ್ಷಿಸಿದ್ದರು.

ಎಎಪಿ ಮತ ಅಸಿಂಧು

ಉಭಯ ಪಕ್ಷಗಳ ಅಭ್ಯರ್ಥಿಗಳು ತಲಾ 14 ಮತಗಳ ಸಮಬಲ ಸಾಧಿಸಿದರು. ಎಎಪಿ ಕೌನ್ಸಿಲರ್‌ನ ಒಂದು ಮತವನ್ನು ಅಸಿಂಧು ಎಂದು ಘೋಷಿಸಿದಾಗ ಸರಬ್ಜಿತ್ ಗೆದ್ದರು. ಚುನಾವಣೆಯ ಅಧ್ಯಕ್ಷರಾದ ಮಹೇಶ್ ಇಂದರ್ ಸಿಂಗ್ (ಸ್ವತಃ ಬಿಜೆಪಿ ಕೌನ್ಸಿಲರ್, ಮುನ್ಸಿಪಲ್ ಚುನಾವಣೆಯಲ್ಲಿ ಒಂಬತ್ತು ಮತಗಳ ಕಡಿಮೆ ಅಂತರದಿಂದ ಗೆದ್ದವರು) ಮತವನ್ನು ಅಸಿಂಧು ಎಂದು ಘೋಷಿಸಿದರು.

ಎಎಪಿ ಅಭ್ಯರ್ಥಿ ಅಂಜು ಕತ್ಯಾಲ್ ಈಗ ಕೇವಲ 13 ಮತಗಳನ್ನು ಹೊಂದಿದ್ದರು. ಸರಬ್ಜಿತ್ ಕೌರ್ ಅವರು 14 ಮತಗಳನ್ನು ಹೊಂದಿದ್ದರು. ಇದರಿಂದ ಕೆರಳಿದ ಎಎಪಿ ಕೌನ್ಸಿಲರ್‌ಗಳು ನೂತನ ಮೇಯರ್ ಅವರನ್ನು ಕೂರಿಸಿದ ಸ್ಥಳಕ್ಕೆ ನುಗ್ಗಿ ಪ್ರತಿಭಟನೆ ಆರಂಭಿಸಿದರು. ಅಲ್ಲಿದ್ದ ಮಾರ್ಷಲ್‌ಗಳಿಗೂ ಪರಿಸ್ಥಿತಿಯನ್ನು ಹತೋಟಿಯಲ್ಲಿಡಲು ಸಾಧ್ಯವಾಗದ ಕಾರಣ ಚಂಡೀಗಢ ಪೊಲೀಸರು ಮಧ್ಯ ಪ್ರವೇಶಿಸಬೇಕಾಯಿತು.

ಎಎಪಿ ಶಾಸಕ ಮತ್ತು ಪಂಜಾಬ್ ವ್ಯವಹಾರಗಳ ಸಹ-ಪ್ರಭಾರಿ ರಾಘವ್ ಚಡ್ಡಾ ಕೂಡ ಮುನ್ಸಿಪಲ್‌ನಲ್ಲಿ ಧ್ವನಿ ಎತ್ತಿದ್ದಾರೆ. ಮರುಮತದಾನಕ್ಕೆ ಆಗ್ರಹಿಸಿದ ಅವರು, ಮೇಯರ್ ಚುನಾವಣೆಯಲ್ಲಿ ಬಿಜೆಪಿ ಮೋಸ ಮಾಡಿದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಚುನಾವಣೆಯಲ್ಲಿ ಎಸ್‌ಎಡಿ ಮತ್ತು ಕಾಂಗ್ರೆಸ್‌ನ ನಿಜಬಣ್ಣ ಬಯಲಾಗಿವೆ. ಚಂಡೀಗಢದಲ್ಲಿ ಉದ್ದೇಶಪೂರ್ವಕವಾಗಿ ಆಪ್ ಅನ್ನು ದೂರವಿಡಲು ಬಿಜೆಪಿ, ಎಸ್‌ಎಡಿ ಮತ್ತು ಕಾಂಗ್ರೆಸ್ ಪಕ್ಷಗಳು ಅಪವಿತ್ರ ಮೈತ್ರಿ ಮಾಡಿಕೊಂಡಿವೆ ಎಂದು ನಾನು ಪಂಜಾಬ್ ಜನರಿಗೆ ಹೇಳಲು ಬಯಸುತ್ತೇನೆ” ‌ಎಂದಿದ್ದಾರೆ.

(ಕೃಪೆ: ದಿ ವೈರ್‌)


ಇದನ್ನೂ ಓದಿರಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...