Homeಮುಖಪುಟಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

- Advertisement -
- Advertisement -

ರೈತರ ಒಂದು ವರ್ಷ ನಿರಂತರ ನಡೆಸಿದ ಹೋರಾಟದ ಫಲವಾಗಿ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ರದ್ದುಗೊಳಿಸಿದ್ದಾರೆ. ವಿಶೇಷವೆಂದರೆ ಒಂದು ವರ್ಷ ಕಾಲ ರೈತರನ್ನು ಚಳವಳಿಗೆ ದೂಡಿದ್ದು, ಚುನಾವಣೆಗಳಲ್ಲಿ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಚಂಡೀಗಢ ಮುನ್ಸಿಪಲ್‌ ಕಾರ್ಪೋರೇಷನ್‌ ಚುನಾವಣೆಯ ಫಲಿತಾಂಶವನ್ನು ಬಹು ಆಯಾಮದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಎಂಬ ಕಾರಣಕ್ಕೂ ಈ ಚುನಾವಣೆ ಗಮನ ಸೆಳೆದಿದ್ದು, ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡು ಮುಖಭಂಗ ಅನುಭವಿಸಿದೆ. ಮೊದಲ ಭಾರಿಗೆ ಇಲ್ಲಿ ಕಣಕ್ಕಿಳಿದಿದ್ದ ಆಮ್‌ ಆದ್ಮಿ ಪಕ್ಷ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಹೊರ ಹೊಮ್ಮಿದೆ.

ಬಿಜೆಪಿ-ವಿರೋಧಿ ಮತಗಳನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತದೆ ಎಂದು ಊಹಿಸಲಾಗಿದ್ದರೂ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸದಸ್ಯ ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಗಮನ ಸೆಳೆದಿದೆ.

ಆಡಳಿತಾರೂಢ ಬಿಜೆಪಿ 12 ಸ್ಥಾನಗಳಿಗೆ ಕುಸಿದಿದ್ದರೆ, ಕಾಂಗ್ರೆಸ್ 8 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲು ಸಾಧ್ಯವಾಗಲಿಲ್ಲ. ಒಂದು ಸ್ಥಾನವನ್ನು ಶಿರೋಮಣಿ ಅಕಾಲಿದಳ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ಅಸ್ತ್ರವಾಗುವ ಸಾಧ್ಯತೆ ಇದೆ.

“ಕೃಷಿ ಕಾನೂನುಗಳ ಜಾರಿ ಮತ್ತು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಫಲಿತಾಂಶದಿಂದ ಸ್ಪಷ್ಟವಾಗುತ್ತದೆ” ಎಂದು ಎಎಪಿಯ ಚಂಡೀಗಢ ಸಂಚಾಲಕ ಪ್ರೇಮ್ ಗಾರ್ಗ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ಬಿಜೆಪಿಯ ದುರಾಡಳಿತಕ್ಕೆ ಚಂಡೀಗಢದಲ್ಲಿ ಜನರು ದೊಡ್ಡ ಪಾಠವನ್ನು ಕಲಿಸಿದ್ದಾರೆ. ಇದರಲ್ಲಿ ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯಗಳನ್ನು ಬಿಜೆಪಿ ಕಲ್ಪಿಸಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್‌ಗೆ ಮತ ಹಾಕದಿರುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಭಿನ್ನ ರಾಜಕಾರಣ ಬೇಕು ಎಂಬ ಸ್ಪಷ್ಟ ಸಂದೇಶವನ್ನು ಜನರು ರವಾನಿಸಿದ್ದಾರೆ. ಚಂಡೀಗಢ ಕೇವಲ ಟ್ರೇಲರ್. ಪಂಜಾಬ್ ನಮ್ಮ ಮುಂದಿನ ಗುರಿಯಾಗಿದೆ. ಅಲ್ಲಿ ಜನರು ಸಾಂಪ್ರದಾಯಿಕ ಪಕ್ಷಗಳಿಂದ ದೂರವಿದ್ದು, ಬದಲಾವಣೆಗೆ ಮತ ಹಾಕುತ್ತಾರೆ ಎಂದಿದ್ದಾರೆ.

2016ರ ಚುನಾವಣೆಯಲ್ಲಿ 26 ವಾರ್ಡ್‌‌ಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ ಪಡೆದಿತ್ತು. (ಈ ಬಾರಿ ಸದಸ್ಯ ಸ್ಥಾನಗಳನ್ನು 35 ಸ್ಥಾನಗಳಿಗೆ ಹೆಚ್ಚಿಸಲಾಯಿತು). ಮೇಯರ್ ಸ್ಥಾನಕ್ಕಾಗಿ ಬಿಜೆಪಿಯೊಳಗೆ ನಿರಂತರವಾದ ಒಳಜಗಳಗಳು ನಡೆಯುತ್ತಿದ್ದವು. ಅಭಿವೃದ್ಧಿಯತ್ತ ಗಮನ ಹರಿಸದೆ ಇದ್ದದ್ದು ಬಿಜೆಪಿಗೆ ಮುಳವಾಯಿತು ಎಂದು ರಾಜಕೀಯ ವಿಶ್ಲೇಷಣೆಗಳು ಮೂಡಿಬಂದಿವೆ.

ಹಲವಾರು ಕಾಂಗ್ರೆಸ್ ಮುಖಂಡರು ಎಎಪಿಗೆ ಪಕ್ಷಾಂತರಗೊಂಡಿದ್ದು ಎಎಪಿ ಗೆಲುವಿಗೆ ಕಾರಣವಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ, ಇಲ್ಲಿ ಎಎಪಿಗೆ ಮತ ಹಂಚಿಕೆ ಕೇವಲ 3.8% ಆಗಿತ್ತು. ಪಾಲಿಕೆ ಚುನಾವಣೆಯಲ್ಲಿ ಮತ ಹಂಚಿಕೆ ಶೇ.27ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿರಿ: ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...