Homeಮುಖಪುಟಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

- Advertisement -
- Advertisement -

ರೈತರ ಒಂದು ವರ್ಷ ನಿರಂತರ ನಡೆಸಿದ ಹೋರಾಟದ ಫಲವಾಗಿ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ರದ್ದುಗೊಳಿಸಿದ್ದಾರೆ. ವಿಶೇಷವೆಂದರೆ ಒಂದು ವರ್ಷ ಕಾಲ ರೈತರನ್ನು ಚಳವಳಿಗೆ ದೂಡಿದ್ದು, ಚುನಾವಣೆಗಳಲ್ಲಿ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಚಂಡೀಗಢ ಮುನ್ಸಿಪಲ್‌ ಕಾರ್ಪೋರೇಷನ್‌ ಚುನಾವಣೆಯ ಫಲಿತಾಂಶವನ್ನು ಬಹು ಆಯಾಮದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಎಂಬ ಕಾರಣಕ್ಕೂ ಈ ಚುನಾವಣೆ ಗಮನ ಸೆಳೆದಿದ್ದು, ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡು ಮುಖಭಂಗ ಅನುಭವಿಸಿದೆ. ಮೊದಲ ಭಾರಿಗೆ ಇಲ್ಲಿ ಕಣಕ್ಕಿಳಿದಿದ್ದ ಆಮ್‌ ಆದ್ಮಿ ಪಕ್ಷ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಹೊರ ಹೊಮ್ಮಿದೆ.

ಬಿಜೆಪಿ-ವಿರೋಧಿ ಮತಗಳನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತದೆ ಎಂದು ಊಹಿಸಲಾಗಿದ್ದರೂ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸದಸ್ಯ ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಗಮನ ಸೆಳೆದಿದೆ.

ಆಡಳಿತಾರೂಢ ಬಿಜೆಪಿ 12 ಸ್ಥಾನಗಳಿಗೆ ಕುಸಿದಿದ್ದರೆ, ಕಾಂಗ್ರೆಸ್ 8 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲು ಸಾಧ್ಯವಾಗಲಿಲ್ಲ. ಒಂದು ಸ್ಥಾನವನ್ನು ಶಿರೋಮಣಿ ಅಕಾಲಿದಳ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ಅಸ್ತ್ರವಾಗುವ ಸಾಧ್ಯತೆ ಇದೆ.

“ಕೃಷಿ ಕಾನೂನುಗಳ ಜಾರಿ ಮತ್ತು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಫಲಿತಾಂಶದಿಂದ ಸ್ಪಷ್ಟವಾಗುತ್ತದೆ” ಎಂದು ಎಎಪಿಯ ಚಂಡೀಗಢ ಸಂಚಾಲಕ ಪ್ರೇಮ್ ಗಾರ್ಗ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ಬಿಜೆಪಿಯ ದುರಾಡಳಿತಕ್ಕೆ ಚಂಡೀಗಢದಲ್ಲಿ ಜನರು ದೊಡ್ಡ ಪಾಠವನ್ನು ಕಲಿಸಿದ್ದಾರೆ. ಇದರಲ್ಲಿ ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯಗಳನ್ನು ಬಿಜೆಪಿ ಕಲ್ಪಿಸಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್‌ಗೆ ಮತ ಹಾಕದಿರುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಭಿನ್ನ ರಾಜಕಾರಣ ಬೇಕು ಎಂಬ ಸ್ಪಷ್ಟ ಸಂದೇಶವನ್ನು ಜನರು ರವಾನಿಸಿದ್ದಾರೆ. ಚಂಡೀಗಢ ಕೇವಲ ಟ್ರೇಲರ್. ಪಂಜಾಬ್ ನಮ್ಮ ಮುಂದಿನ ಗುರಿಯಾಗಿದೆ. ಅಲ್ಲಿ ಜನರು ಸಾಂಪ್ರದಾಯಿಕ ಪಕ್ಷಗಳಿಂದ ದೂರವಿದ್ದು, ಬದಲಾವಣೆಗೆ ಮತ ಹಾಕುತ್ತಾರೆ ಎಂದಿದ್ದಾರೆ.

2016ರ ಚುನಾವಣೆಯಲ್ಲಿ 26 ವಾರ್ಡ್‌‌ಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ ಪಡೆದಿತ್ತು. (ಈ ಬಾರಿ ಸದಸ್ಯ ಸ್ಥಾನಗಳನ್ನು 35 ಸ್ಥಾನಗಳಿಗೆ ಹೆಚ್ಚಿಸಲಾಯಿತು). ಮೇಯರ್ ಸ್ಥಾನಕ್ಕಾಗಿ ಬಿಜೆಪಿಯೊಳಗೆ ನಿರಂತರವಾದ ಒಳಜಗಳಗಳು ನಡೆಯುತ್ತಿದ್ದವು. ಅಭಿವೃದ್ಧಿಯತ್ತ ಗಮನ ಹರಿಸದೆ ಇದ್ದದ್ದು ಬಿಜೆಪಿಗೆ ಮುಳವಾಯಿತು ಎಂದು ರಾಜಕೀಯ ವಿಶ್ಲೇಷಣೆಗಳು ಮೂಡಿಬಂದಿವೆ.

ಹಲವಾರು ಕಾಂಗ್ರೆಸ್ ಮುಖಂಡರು ಎಎಪಿಗೆ ಪಕ್ಷಾಂತರಗೊಂಡಿದ್ದು ಎಎಪಿ ಗೆಲುವಿಗೆ ಕಾರಣವಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ, ಇಲ್ಲಿ ಎಎಪಿಗೆ ಮತ ಹಂಚಿಕೆ ಕೇವಲ 3.8% ಆಗಿತ್ತು. ಪಾಲಿಕೆ ಚುನಾವಣೆಯಲ್ಲಿ ಮತ ಹಂಚಿಕೆ ಶೇ.27ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿರಿ: ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...