Homeಮುಖಪುಟಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

- Advertisement -
- Advertisement -

ರೈತರ ಒಂದು ವರ್ಷ ನಿರಂತರ ನಡೆಸಿದ ಹೋರಾಟದ ಫಲವಾಗಿ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ರದ್ದುಗೊಳಿಸಿದ್ದಾರೆ. ವಿಶೇಷವೆಂದರೆ ಒಂದು ವರ್ಷ ಕಾಲ ರೈತರನ್ನು ಚಳವಳಿಗೆ ದೂಡಿದ್ದು, ಚುನಾವಣೆಗಳಲ್ಲಿ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಚಂಡೀಗಢ ಮುನ್ಸಿಪಲ್‌ ಕಾರ್ಪೋರೇಷನ್‌ ಚುನಾವಣೆಯ ಫಲಿತಾಂಶವನ್ನು ಬಹು ಆಯಾಮದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಎಂಬ ಕಾರಣಕ್ಕೂ ಈ ಚುನಾವಣೆ ಗಮನ ಸೆಳೆದಿದ್ದು, ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡು ಮುಖಭಂಗ ಅನುಭವಿಸಿದೆ. ಮೊದಲ ಭಾರಿಗೆ ಇಲ್ಲಿ ಕಣಕ್ಕಿಳಿದಿದ್ದ ಆಮ್‌ ಆದ್ಮಿ ಪಕ್ಷ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಹೊರ ಹೊಮ್ಮಿದೆ.

ಬಿಜೆಪಿ-ವಿರೋಧಿ ಮತಗಳನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತದೆ ಎಂದು ಊಹಿಸಲಾಗಿದ್ದರೂ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸದಸ್ಯ ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಗಮನ ಸೆಳೆದಿದೆ.

ಆಡಳಿತಾರೂಢ ಬಿಜೆಪಿ 12 ಸ್ಥಾನಗಳಿಗೆ ಕುಸಿದಿದ್ದರೆ, ಕಾಂಗ್ರೆಸ್ 8 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲು ಸಾಧ್ಯವಾಗಲಿಲ್ಲ. ಒಂದು ಸ್ಥಾನವನ್ನು ಶಿರೋಮಣಿ ಅಕಾಲಿದಳ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ಅಸ್ತ್ರವಾಗುವ ಸಾಧ್ಯತೆ ಇದೆ.

“ಕೃಷಿ ಕಾನೂನುಗಳ ಜಾರಿ ಮತ್ತು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಫಲಿತಾಂಶದಿಂದ ಸ್ಪಷ್ಟವಾಗುತ್ತದೆ” ಎಂದು ಎಎಪಿಯ ಚಂಡೀಗಢ ಸಂಚಾಲಕ ಪ್ರೇಮ್ ಗಾರ್ಗ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ಬಿಜೆಪಿಯ ದುರಾಡಳಿತಕ್ಕೆ ಚಂಡೀಗಢದಲ್ಲಿ ಜನರು ದೊಡ್ಡ ಪಾಠವನ್ನು ಕಲಿಸಿದ್ದಾರೆ. ಇದರಲ್ಲಿ ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯಗಳನ್ನು ಬಿಜೆಪಿ ಕಲ್ಪಿಸಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್‌ಗೆ ಮತ ಹಾಕದಿರುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಭಿನ್ನ ರಾಜಕಾರಣ ಬೇಕು ಎಂಬ ಸ್ಪಷ್ಟ ಸಂದೇಶವನ್ನು ಜನರು ರವಾನಿಸಿದ್ದಾರೆ. ಚಂಡೀಗಢ ಕೇವಲ ಟ್ರೇಲರ್. ಪಂಜಾಬ್ ನಮ್ಮ ಮುಂದಿನ ಗುರಿಯಾಗಿದೆ. ಅಲ್ಲಿ ಜನರು ಸಾಂಪ್ರದಾಯಿಕ ಪಕ್ಷಗಳಿಂದ ದೂರವಿದ್ದು, ಬದಲಾವಣೆಗೆ ಮತ ಹಾಕುತ್ತಾರೆ ಎಂದಿದ್ದಾರೆ.

2016ರ ಚುನಾವಣೆಯಲ್ಲಿ 26 ವಾರ್ಡ್‌‌ಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ ಪಡೆದಿತ್ತು. (ಈ ಬಾರಿ ಸದಸ್ಯ ಸ್ಥಾನಗಳನ್ನು 35 ಸ್ಥಾನಗಳಿಗೆ ಹೆಚ್ಚಿಸಲಾಯಿತು). ಮೇಯರ್ ಸ್ಥಾನಕ್ಕಾಗಿ ಬಿಜೆಪಿಯೊಳಗೆ ನಿರಂತರವಾದ ಒಳಜಗಳಗಳು ನಡೆಯುತ್ತಿದ್ದವು. ಅಭಿವೃದ್ಧಿಯತ್ತ ಗಮನ ಹರಿಸದೆ ಇದ್ದದ್ದು ಬಿಜೆಪಿಗೆ ಮುಳವಾಯಿತು ಎಂದು ರಾಜಕೀಯ ವಿಶ್ಲೇಷಣೆಗಳು ಮೂಡಿಬಂದಿವೆ.

ಹಲವಾರು ಕಾಂಗ್ರೆಸ್ ಮುಖಂಡರು ಎಎಪಿಗೆ ಪಕ್ಷಾಂತರಗೊಂಡಿದ್ದು ಎಎಪಿ ಗೆಲುವಿಗೆ ಕಾರಣವಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ, ಇಲ್ಲಿ ಎಎಪಿಗೆ ಮತ ಹಂಚಿಕೆ ಕೇವಲ 3.8% ಆಗಿತ್ತು. ಪಾಲಿಕೆ ಚುನಾವಣೆಯಲ್ಲಿ ಮತ ಹಂಚಿಕೆ ಶೇ.27ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿರಿ: ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...