Homeಮುಖಪುಟಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

- Advertisement -
- Advertisement -

ರೈತರ ಒಂದು ವರ್ಷ ನಿರಂತರ ನಡೆಸಿದ ಹೋರಾಟದ ಫಲವಾಗಿ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ರದ್ದುಗೊಳಿಸಿದ್ದಾರೆ. ವಿಶೇಷವೆಂದರೆ ಒಂದು ವರ್ಷ ಕಾಲ ರೈತರನ್ನು ಚಳವಳಿಗೆ ದೂಡಿದ್ದು, ಚುನಾವಣೆಗಳಲ್ಲಿ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಚಂಡೀಗಢ ಮುನ್ಸಿಪಲ್‌ ಕಾರ್ಪೋರೇಷನ್‌ ಚುನಾವಣೆಯ ಫಲಿತಾಂಶವನ್ನು ಬಹು ಆಯಾಮದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಎಂಬ ಕಾರಣಕ್ಕೂ ಈ ಚುನಾವಣೆ ಗಮನ ಸೆಳೆದಿದ್ದು, ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡು ಮುಖಭಂಗ ಅನುಭವಿಸಿದೆ. ಮೊದಲ ಭಾರಿಗೆ ಇಲ್ಲಿ ಕಣಕ್ಕಿಳಿದಿದ್ದ ಆಮ್‌ ಆದ್ಮಿ ಪಕ್ಷ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಹೊರ ಹೊಮ್ಮಿದೆ.

ಬಿಜೆಪಿ-ವಿರೋಧಿ ಮತಗಳನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತದೆ ಎಂದು ಊಹಿಸಲಾಗಿದ್ದರೂ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸದಸ್ಯ ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಗಮನ ಸೆಳೆದಿದೆ.

ಆಡಳಿತಾರೂಢ ಬಿಜೆಪಿ 12 ಸ್ಥಾನಗಳಿಗೆ ಕುಸಿದಿದ್ದರೆ, ಕಾಂಗ್ರೆಸ್ 8 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲು ಸಾಧ್ಯವಾಗಲಿಲ್ಲ. ಒಂದು ಸ್ಥಾನವನ್ನು ಶಿರೋಮಣಿ ಅಕಾಲಿದಳ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ಅಸ್ತ್ರವಾಗುವ ಸಾಧ್ಯತೆ ಇದೆ.

“ಕೃಷಿ ಕಾನೂನುಗಳ ಜಾರಿ ಮತ್ತು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಫಲಿತಾಂಶದಿಂದ ಸ್ಪಷ್ಟವಾಗುತ್ತದೆ” ಎಂದು ಎಎಪಿಯ ಚಂಡೀಗಢ ಸಂಚಾಲಕ ಪ್ರೇಮ್ ಗಾರ್ಗ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ಬಿಜೆಪಿಯ ದುರಾಡಳಿತಕ್ಕೆ ಚಂಡೀಗಢದಲ್ಲಿ ಜನರು ದೊಡ್ಡ ಪಾಠವನ್ನು ಕಲಿಸಿದ್ದಾರೆ. ಇದರಲ್ಲಿ ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯಗಳನ್ನು ಬಿಜೆಪಿ ಕಲ್ಪಿಸಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್‌ಗೆ ಮತ ಹಾಕದಿರುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಭಿನ್ನ ರಾಜಕಾರಣ ಬೇಕು ಎಂಬ ಸ್ಪಷ್ಟ ಸಂದೇಶವನ್ನು ಜನರು ರವಾನಿಸಿದ್ದಾರೆ. ಚಂಡೀಗಢ ಕೇವಲ ಟ್ರೇಲರ್. ಪಂಜಾಬ್ ನಮ್ಮ ಮುಂದಿನ ಗುರಿಯಾಗಿದೆ. ಅಲ್ಲಿ ಜನರು ಸಾಂಪ್ರದಾಯಿಕ ಪಕ್ಷಗಳಿಂದ ದೂರವಿದ್ದು, ಬದಲಾವಣೆಗೆ ಮತ ಹಾಕುತ್ತಾರೆ ಎಂದಿದ್ದಾರೆ.

2016ರ ಚುನಾವಣೆಯಲ್ಲಿ 26 ವಾರ್ಡ್‌‌ಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ ಪಡೆದಿತ್ತು. (ಈ ಬಾರಿ ಸದಸ್ಯ ಸ್ಥಾನಗಳನ್ನು 35 ಸ್ಥಾನಗಳಿಗೆ ಹೆಚ್ಚಿಸಲಾಯಿತು). ಮೇಯರ್ ಸ್ಥಾನಕ್ಕಾಗಿ ಬಿಜೆಪಿಯೊಳಗೆ ನಿರಂತರವಾದ ಒಳಜಗಳಗಳು ನಡೆಯುತ್ತಿದ್ದವು. ಅಭಿವೃದ್ಧಿಯತ್ತ ಗಮನ ಹರಿಸದೆ ಇದ್ದದ್ದು ಬಿಜೆಪಿಗೆ ಮುಳವಾಯಿತು ಎಂದು ರಾಜಕೀಯ ವಿಶ್ಲೇಷಣೆಗಳು ಮೂಡಿಬಂದಿವೆ.

ಹಲವಾರು ಕಾಂಗ್ರೆಸ್ ಮುಖಂಡರು ಎಎಪಿಗೆ ಪಕ್ಷಾಂತರಗೊಂಡಿದ್ದು ಎಎಪಿ ಗೆಲುವಿಗೆ ಕಾರಣವಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ, ಇಲ್ಲಿ ಎಎಪಿಗೆ ಮತ ಹಂಚಿಕೆ ಕೇವಲ 3.8% ಆಗಿತ್ತು. ಪಾಲಿಕೆ ಚುನಾವಣೆಯಲ್ಲಿ ಮತ ಹಂಚಿಕೆ ಶೇ.27ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿರಿ: ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...