Homeಮುಖಪುಟಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

- Advertisement -
- Advertisement -

ರೈತರ ಒಂದು ವರ್ಷ ನಿರಂತರ ನಡೆಸಿದ ಹೋರಾಟದ ಫಲವಾಗಿ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ರದ್ದುಗೊಳಿಸಿದ್ದಾರೆ. ವಿಶೇಷವೆಂದರೆ ಒಂದು ವರ್ಷ ಕಾಲ ರೈತರನ್ನು ಚಳವಳಿಗೆ ದೂಡಿದ್ದು, ಚುನಾವಣೆಗಳಲ್ಲಿ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಚಂಡೀಗಢ ಮುನ್ಸಿಪಲ್‌ ಕಾರ್ಪೋರೇಷನ್‌ ಚುನಾವಣೆಯ ಫಲಿತಾಂಶವನ್ನು ಬಹು ಆಯಾಮದಲ್ಲಿ ವಿಶ್ಲೇಷಿಸಲಾಗುತ್ತಿದೆ.

ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬಳಿಕ ನಡೆದ ಮೊದಲ ಚುನಾವಣೆ ಎಂಬ ಕಾರಣಕ್ಕೂ ಈ ಚುನಾವಣೆ ಗಮನ ಸೆಳೆದಿದ್ದು, ಬಿಜೆಪಿ ತನ್ನ ಅಧಿಕಾರವನ್ನು ಕಳೆದುಕೊಂಡು ಮುಖಭಂಗ ಅನುಭವಿಸಿದೆ. ಮೊದಲ ಭಾರಿಗೆ ಇಲ್ಲಿ ಕಣಕ್ಕಿಳಿದಿದ್ದ ಆಮ್‌ ಆದ್ಮಿ ಪಕ್ಷ 35 ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷವಾಗಿ ಹೊರ ಹೊಮ್ಮಿದೆ.

ಬಿಜೆಪಿ-ವಿರೋಧಿ ಮತಗಳನ್ನು ಕಾಂಗ್ರೆಸ್ ಪಡೆದುಕೊಳ್ಳುತ್ತದೆ ಎಂದು ಊಹಿಸಲಾಗಿದ್ದರೂ, ಚಂಡೀಗಢ ಮುನ್ಸಿಪಲ್ ಕಾರ್ಪೊರೇಶನ್‌ನ 35 ಸದಸ್ಯ ಸ್ಥಾನಗಳಲ್ಲಿ 14 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಗಮನ ಸೆಳೆದಿದೆ.

ಆಡಳಿತಾರೂಢ ಬಿಜೆಪಿ 12 ಸ್ಥಾನಗಳಿಗೆ ಕುಸಿದಿದ್ದರೆ, ಕಾಂಗ್ರೆಸ್ 8 ಸ್ಥಾನಗಳಿಗಿಂತ ಹೆಚ್ಚು ಗೆಲ್ಲಲು ಸಾಧ್ಯವಾಗಲಿಲ್ಲ. ಒಂದು ಸ್ಥಾನವನ್ನು ಶಿರೋಮಣಿ ಅಕಾಲಿದಳ ಗೆದ್ದಿದೆ. ಈ ಚುನಾವಣೆ ಫಲಿತಾಂಶ ಮುಂಬರುವ ಚುನಾವಣೆಗೆ ಅಸ್ತ್ರವಾಗುವ ಸಾಧ್ಯತೆ ಇದೆ.

“ಕೃಷಿ ಕಾನೂನುಗಳ ಜಾರಿ ಮತ್ತು ಹಣದುಬ್ಬರವನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿರುವುದು ಫಲಿತಾಂಶದಿಂದ ಸ್ಪಷ್ಟವಾಗುತ್ತದೆ” ಎಂದು ಎಎಪಿಯ ಚಂಡೀಗಢ ಸಂಚಾಲಕ ಪ್ರೇಮ್ ಗಾರ್ಗ್ ‘ದಿ ವೈರ್‌’ಗೆ ತಿಳಿಸಿದ್ದಾರೆ.

“ಬಿಜೆಪಿಯ ದುರಾಡಳಿತಕ್ಕೆ ಚಂಡೀಗಢದಲ್ಲಿ ಜನರು ದೊಡ್ಡ ಪಾಠವನ್ನು ಕಲಿಸಿದ್ದಾರೆ. ಇದರಲ್ಲಿ ಕಳೆದ ಐದು ವರ್ಷಗಳ ಆಡಳಿತಾವಧಿಯಲ್ಲಿ ನಾಗರಿಕರಿಗೆ ಮೂಲಸೌಕರ್ಯಗಳನ್ನು ಬಿಜೆಪಿ ಕಲ್ಪಿಸಿಲ್ಲ” ಎಂದು ದೂರಿದ್ದಾರೆ.

ಕಾಂಗ್ರೆಸ್‌ಗೆ ಮತ ಹಾಕದಿರುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್‌ಗಿಂತ ಭಿನ್ನ ರಾಜಕಾರಣ ಬೇಕು ಎಂಬ ಸ್ಪಷ್ಟ ಸಂದೇಶವನ್ನು ಜನರು ರವಾನಿಸಿದ್ದಾರೆ. ಚಂಡೀಗಢ ಕೇವಲ ಟ್ರೇಲರ್. ಪಂಜಾಬ್ ನಮ್ಮ ಮುಂದಿನ ಗುರಿಯಾಗಿದೆ. ಅಲ್ಲಿ ಜನರು ಸಾಂಪ್ರದಾಯಿಕ ಪಕ್ಷಗಳಿಂದ ದೂರವಿದ್ದು, ಬದಲಾವಣೆಗೆ ಮತ ಹಾಕುತ್ತಾರೆ ಎಂದಿದ್ದಾರೆ.

2016ರ ಚುನಾವಣೆಯಲ್ಲಿ 26 ವಾರ್ಡ್‌‌ಗಳಲ್ಲಿ 21 ಸ್ಥಾನಗಳನ್ನು ಬಿಜೆಪಿ ಪಡೆದಿತ್ತು. (ಈ ಬಾರಿ ಸದಸ್ಯ ಸ್ಥಾನಗಳನ್ನು 35 ಸ್ಥಾನಗಳಿಗೆ ಹೆಚ್ಚಿಸಲಾಯಿತು). ಮೇಯರ್ ಸ್ಥಾನಕ್ಕಾಗಿ ಬಿಜೆಪಿಯೊಳಗೆ ನಿರಂತರವಾದ ಒಳಜಗಳಗಳು ನಡೆಯುತ್ತಿದ್ದವು. ಅಭಿವೃದ್ಧಿಯತ್ತ ಗಮನ ಹರಿಸದೆ ಇದ್ದದ್ದು ಬಿಜೆಪಿಗೆ ಮುಳವಾಯಿತು ಎಂದು ರಾಜಕೀಯ ವಿಶ್ಲೇಷಣೆಗಳು ಮೂಡಿಬಂದಿವೆ.

ಹಲವಾರು ಕಾಂಗ್ರೆಸ್ ಮುಖಂಡರು ಎಎಪಿಗೆ ಪಕ್ಷಾಂತರಗೊಂಡಿದ್ದು ಎಎಪಿ ಗೆಲುವಿಗೆ ಕಾರಣವಾಯಿತು. 2019ರ ಲೋಕಸಭಾ ಚುನಾವಣೆಯಲ್ಲಿ, ಇಲ್ಲಿ ಎಎಪಿಗೆ ಮತ ಹಂಚಿಕೆ ಕೇವಲ 3.8% ಆಗಿತ್ತು. ಪಾಲಿಕೆ ಚುನಾವಣೆಯಲ್ಲಿ ಮತ ಹಂಚಿಕೆ ಶೇ.27ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿರಿ: ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ: ಮಮತಾ ಬ್ಯಾನರ್ಜಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...