Homeಮುಖಪುಟಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ...

ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ - ಕಮಲ್ ಪಂತ್

- Advertisement -
- Advertisement -

ಬೆಂಗಳೂರಿನ ಚಂದ್ರು ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿ ಕೋಮು ದ್ವೇಷಕ್ಕೆ ಕಾರಣರಾಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಿದ್ದಾರೆ. ಆದರೆ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷದ ಪೋಸ್ಟ್‌ಗಳು ಹರಿದಾಡುತ್ತಲೇ ಇವೆ!

ಪ್ರಕರಣದ ಹಿನ್ನೆಲೆ

ಸೋಮವಾರ ತಡರಾತ್ರಿ ಹಳೇ ಗುಟ್ಟಳ್ಳಿಯಲ್ಲಿ ಬೈಕ್ ಡಿಕ್ಕಿ ಕಾರಣಕ್ಕೆ ಯುವಕರ ನಡುವೆ ಮಾರಾಮಾರಿ ನಡೆದಿತ್ತು. ಈ ಗಲಾಟೆಯಲ್ಲಿ ಚಂದ್ರು ಎಂಬ ವ್ಯಕ್ತಿ ಮೃತಪಟ್ಟಿದ್ದರು. ಈ ಕುರಿತು ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯಪ್ರವೇಶಿಸಿದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

“ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ (05.04.2022) ನಡೆದ ಕೊಲೆ ಪ್ರಕರಣದಲ್ಲಿ ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿವೆ. ಈ ವಿಷಯವು ಗಲಾಟೆಗೆ ಕಾರಣವಾಗಿದ್ದು, ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ” ಎಂದು ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.

ನಂತರ ಹಲವಾರು ಮಾಧ್ಯಮಗಳು ಅಂದು ನಡೆದ ಸತ್ಯ ಸುದ್ದಿಯನ್ನು ವರದಿ ಮಾಡಿದವು. ಆಗ ಎಚ್ಚೆತ್ತುಕೊಂಡು ಗೃಹ ಸಚಿವರು, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ. ರಾಜ್ಯದ ಗೃಹಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಲು ಸಾಧ್ಯವೇ? ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿ ತಾವೇ ಕೋಮು ಪ್ರಚೋದನೆ ಮಾಡಿದರೆ ಹೇಗೆ ಎಂದು ಹಲವರು ಟೀಕಿಸಿದ್ದಾರೆ.

ಗೃಹ ಸಚಿವರ ವಿರುದ್ಧ ಸಿದ್ದರಾಮಯ್ಯ ಕಿಡಿ

ಈ ಕುರಿತು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಯಾವುದೇ ಪ್ರಕರಣದ ಕುರಿತು ಹೇಳಿಕೆ ನೀಡುವ ಮುನ್ನ ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂಬ ಕನಿಷ್ಟ ಪ್ರಜ್ಞೆ ಇಲ್ಲದವರಿಗೆ ಉನ್ನತ ಹುದ್ದೆ ನೀಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಾಗ, ಶಿವಮೊಗ್ಗ ಹರ್ಷ ಕೊಲೆ ಪ್ರಕರಣ ನಡೆದಾಗ ಗೃಹ ಸಚಿವರ ಹೇಳಿಕೆ ಹೇಗಿತ್ತು ಎಂಬುದನ್ನು ನೋಡಿದ್ದೇವೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಮಾಜದ ಸಾಮರಸ್ಯ ಹಾಳು ಮಾಡುವಂತಹ ಹೇಳಿಕೆ ನೀಡಬಾರದು. ಆದರೆ ಅದನ್ನೆ ಮಾಡುತ್ತಿರುವವರನ್ನು ನಮ್ಮ ರಾಜ್ಯದ ಗೃಹ ಸಚಿವರಾಗಿ ಪಡೆದಿದ್ದು ಈ ನಾಡಿನ ದೌರ್ಭಾಗ್ಯ” ಎಂದು ಹೇಳಿದ್ದಾರೆ.

ಈ ವಿಷಯದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು, “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರೇ ಹೀಗೆ ಹೇಳಿಕೆ ಕೊಟ್ಟರೆ ಹೇಗೆ? ಅರೆಬರೆ ಮಾಹಿತಿ ಇಟ್ಟುಕೊಂಡು ಅತ್ಯಂತ ಬೇಜವಾಬ್ದಾರಿಯಿಂದ ಅವರು ಹೇಳಿಕೆ ನೀಡಿದ್ದಾರೆ” ಎಂದು ಟೀಕಿಸಿದ್ದಾರೆ.

ಕೊಲೆಯಾದ ಯುವಕನ್ನು ʼದಲಿತ ಯುವಕʼ ಎಂದು ಕರೆದ ಗೃಹ ಸಚಿವರು, ಎಲ್ಲಿಯೂ ಆತನನ್ನು ʼಹಿಂದೂ ಯುವಕʼ ಎಂದು ಕರೆಯಲಿಲ್ಲ. ಇದು ಏನನ್ನು ಸೂಚಿಸುತ್ತದೆ? ದಲಿತ ಯುವಕ ಹಿಂದೂ ಅಲ್ಲವೇ? ಯಾಕೆ ಈ ತಾರತಮ್ಯ? ಪ್ರತಿಯೊಂದು ವಿಚಾರವನ್ನು ಬಿಜೆಪಿಯವರು ರಾಜಕೀಕರಣಗೊಳಿಸುತ್ತಿದ್ದಾರೆ. ದಲಿತ ಯುವಕ ಕೊಲೆ ಆಗಿದ್ದಾನೆ ಎಂದು ಹೇಳುತ್ತಾ ಸಾಮರಸ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಪೋಲಿಸರು ಒಂದು ಹೇಳಿಕೆ ಕೊಟ್ಟರೆ, ಗೃಹ ಸಚಿವರು ಮತ್ತೊಂದು ಹೇಳಿಕೆ ಕೊಡುತ್ತಿದ್ದಾರೆ. ಯಾರ ಮಾತು ಸತ್ಯ? ಯಾರ ಮಾತು ಸುಳ್ಳು? ಜವಾಬ್ದಾರಿ ಸ್ಥಾನದಲ್ಲಿರುವ ಗೃಹ ಸಚಿವರು ಎಲ್ಲ ಮಾಹಿತಿಯನ್ನು ಪಡೆದುಕೊಂಡು ಮಾತನಾಡಬೇಕು. ಅದನ್ನು ಬಿಟ್ಟು ಹೊಣೆಗೇಡಿತನದಿಂದ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಲೆ ಮೇಲೆ BJP ಟೋಪಿ ಹೆಗಲ ಮೇಲೆ BJP ದುಪಟ್ಟ ಇದ್ದರೆ ಸಹಜವಾಗಿ ಇಂಥ ಹೇಳಿಕೆಗಳು ಓತ ಪ್ರೋತವಾಗಿ ಹೊರಬರುವುದೋ ಏನೋ. ಮಾನ್ಯ ಸಚಿವರ ತಪ್ಪಲ್ಲ. ಎಲ್ಲಾ ಟೋಪಿ ದುಪಟ್ಟಗಳ ಮಹಿಮೆ.

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...