Homeಮುಖಪುಟಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ...

ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ - ಕಮಲ್ ಪಂತ್

- Advertisement -
- Advertisement -

ಬೆಂಗಳೂರಿನ ಚಂದ್ರು ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿ ಕೋಮು ದ್ವೇಷಕ್ಕೆ ಕಾರಣರಾಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಿದ್ದಾರೆ. ಆದರೆ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷದ ಪೋಸ್ಟ್‌ಗಳು ಹರಿದಾಡುತ್ತಲೇ ಇವೆ!

ಪ್ರಕರಣದ ಹಿನ್ನೆಲೆ

ಸೋಮವಾರ ತಡರಾತ್ರಿ ಹಳೇ ಗುಟ್ಟಳ್ಳಿಯಲ್ಲಿ ಬೈಕ್ ಡಿಕ್ಕಿ ಕಾರಣಕ್ಕೆ ಯುವಕರ ನಡುವೆ ಮಾರಾಮಾರಿ ನಡೆದಿತ್ತು. ಈ ಗಲಾಟೆಯಲ್ಲಿ ಚಂದ್ರು ಎಂಬ ವ್ಯಕ್ತಿ ಮೃತಪಟ್ಟಿದ್ದರು. ಈ ಕುರಿತು ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯಪ್ರವೇಶಿಸಿದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

“ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ (05.04.2022) ನಡೆದ ಕೊಲೆ ಪ್ರಕರಣದಲ್ಲಿ ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿವೆ. ಈ ವಿಷಯವು ಗಲಾಟೆಗೆ ಕಾರಣವಾಗಿದ್ದು, ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ” ಎಂದು ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.

ನಂತರ ಹಲವಾರು ಮಾಧ್ಯಮಗಳು ಅಂದು ನಡೆದ ಸತ್ಯ ಸುದ್ದಿಯನ್ನು ವರದಿ ಮಾಡಿದವು. ಆಗ ಎಚ್ಚೆತ್ತುಕೊಂಡು ಗೃಹ ಸಚಿವರು, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ. ರಾಜ್ಯದ ಗೃಹಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಲು ಸಾಧ್ಯವೇ? ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿ ತಾವೇ ಕೋಮು ಪ್ರಚೋದನೆ ಮಾಡಿದರೆ ಹೇಗೆ ಎಂದು ಹಲವರು ಟೀಕಿಸಿದ್ದಾರೆ.

ಗೃಹ ಸಚಿವರ ವಿರುದ್ಧ ಸಿದ್ದರಾಮಯ್ಯ ಕಿಡಿ

ಈ ಕುರಿತು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಯಾವುದೇ ಪ್ರಕರಣದ ಕುರಿತು ಹೇಳಿಕೆ ನೀಡುವ ಮುನ್ನ ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂಬ ಕನಿಷ್ಟ ಪ್ರಜ್ಞೆ ಇಲ್ಲದವರಿಗೆ ಉನ್ನತ ಹುದ್ದೆ ನೀಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಾಗ, ಶಿವಮೊಗ್ಗ ಹರ್ಷ ಕೊಲೆ ಪ್ರಕರಣ ನಡೆದಾಗ ಗೃಹ ಸಚಿವರ ಹೇಳಿಕೆ ಹೇಗಿತ್ತು ಎಂಬುದನ್ನು ನೋಡಿದ್ದೇವೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಮಾಜದ ಸಾಮರಸ್ಯ ಹಾಳು ಮಾಡುವಂತಹ ಹೇಳಿಕೆ ನೀಡಬಾರದು. ಆದರೆ ಅದನ್ನೆ ಮಾಡುತ್ತಿರುವವರನ್ನು ನಮ್ಮ ರಾಜ್ಯದ ಗೃಹ ಸಚಿವರಾಗಿ ಪಡೆದಿದ್ದು ಈ ನಾಡಿನ ದೌರ್ಭಾಗ್ಯ” ಎಂದು ಹೇಳಿದ್ದಾರೆ.

ಈ ವಿಷಯದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು, “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರೇ ಹೀಗೆ ಹೇಳಿಕೆ ಕೊಟ್ಟರೆ ಹೇಗೆ? ಅರೆಬರೆ ಮಾಹಿತಿ ಇಟ್ಟುಕೊಂಡು ಅತ್ಯಂತ ಬೇಜವಾಬ್ದಾರಿಯಿಂದ ಅವರು ಹೇಳಿಕೆ ನೀಡಿದ್ದಾರೆ” ಎಂದು ಟೀಕಿಸಿದ್ದಾರೆ.

ಕೊಲೆಯಾದ ಯುವಕನ್ನು ʼದಲಿತ ಯುವಕʼ ಎಂದು ಕರೆದ ಗೃಹ ಸಚಿವರು, ಎಲ್ಲಿಯೂ ಆತನನ್ನು ʼಹಿಂದೂ ಯುವಕʼ ಎಂದು ಕರೆಯಲಿಲ್ಲ. ಇದು ಏನನ್ನು ಸೂಚಿಸುತ್ತದೆ? ದಲಿತ ಯುವಕ ಹಿಂದೂ ಅಲ್ಲವೇ? ಯಾಕೆ ಈ ತಾರತಮ್ಯ? ಪ್ರತಿಯೊಂದು ವಿಚಾರವನ್ನು ಬಿಜೆಪಿಯವರು ರಾಜಕೀಕರಣಗೊಳಿಸುತ್ತಿದ್ದಾರೆ. ದಲಿತ ಯುವಕ ಕೊಲೆ ಆಗಿದ್ದಾನೆ ಎಂದು ಹೇಳುತ್ತಾ ಸಾಮರಸ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಪೋಲಿಸರು ಒಂದು ಹೇಳಿಕೆ ಕೊಟ್ಟರೆ, ಗೃಹ ಸಚಿವರು ಮತ್ತೊಂದು ಹೇಳಿಕೆ ಕೊಡುತ್ತಿದ್ದಾರೆ. ಯಾರ ಮಾತು ಸತ್ಯ? ಯಾರ ಮಾತು ಸುಳ್ಳು? ಜವಾಬ್ದಾರಿ ಸ್ಥಾನದಲ್ಲಿರುವ ಗೃಹ ಸಚಿವರು ಎಲ್ಲ ಮಾಹಿತಿಯನ್ನು ಪಡೆದುಕೊಂಡು ಮಾತನಾಡಬೇಕು. ಅದನ್ನು ಬಿಟ್ಟು ಹೊಣೆಗೇಡಿತನದಿಂದ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಲೆ ಮೇಲೆ BJP ಟೋಪಿ ಹೆಗಲ ಮೇಲೆ BJP ದುಪಟ್ಟ ಇದ್ದರೆ ಸಹಜವಾಗಿ ಇಂಥ ಹೇಳಿಕೆಗಳು ಓತ ಪ್ರೋತವಾಗಿ ಹೊರಬರುವುದೋ ಏನೋ. ಮಾನ್ಯ ಸಚಿವರ ತಪ್ಪಲ್ಲ. ಎಲ್ಲಾ ಟೋಪಿ ದುಪಟ್ಟಗಳ ಮಹಿಮೆ.

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...