Homeಮುಖಪುಟಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ...

ಚಂದ್ರು ಕೊಲೆ ಪ್ರಕರಣ: ಕೋಮು ದ್ವೇಷದ ಹೇಳಿಕೆ ನೀಡಿ ನಂತರ ಕ್ಷಮೆ ಕೇಳಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ - ಕಮಲ್ ಪಂತ್

- Advertisement -
- Advertisement -

ಬೆಂಗಳೂರಿನ ಚಂದ್ರು ಎಂಬ ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ನೀಡಿ ಕೋಮು ದ್ವೇಷಕ್ಕೆ ಕಾರಣರಾಗಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳಿದ್ದಾರೆ. ಆದರೆ ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷದ ಪೋಸ್ಟ್‌ಗಳು ಹರಿದಾಡುತ್ತಲೇ ಇವೆ!

ಪ್ರಕರಣದ ಹಿನ್ನೆಲೆ

ಸೋಮವಾರ ತಡರಾತ್ರಿ ಹಳೇ ಗುಟ್ಟಳ್ಳಿಯಲ್ಲಿ ಬೈಕ್ ಡಿಕ್ಕಿ ಕಾರಣಕ್ಕೆ ಯುವಕರ ನಡುವೆ ಮಾರಾಮಾರಿ ನಡೆದಿತ್ತು. ಈ ಗಲಾಟೆಯಲ್ಲಿ ಚಂದ್ರು ಎಂಬ ವ್ಯಕ್ತಿ ಮೃತಪಟ್ಟಿದ್ದರು. ಈ ಕುರಿತು ಹೇಳಿಕೆ ನೀಡಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, “ಚಂದ್ರು ಎಂಬ ದಲಿತ ಯುವಕನಿಗೆ ಉರ್ದು ಮಾತನಾಡಲು ಬಾರದ ಕಾರಣಕ್ಕೆ ಕೆಲ ಮುಸ್ಲಿಂ ಯುವಕರು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ್ದಾರೆ” ಎಂದಿದ್ದರು.

ಗೃಹ ಸಚಿವರ ಹೇಳಿಕೆ ಬೆನ್ನಿಗೆ ಬಹುತೇಕ ಮಾಧ್ಯಮಗಳು ಅದನ್ನೆ ವರದಿ ಮಾಡಿದ್ದವು. ಇನ್ನು ಮಾಜಿ ಸಚಿವ ಸಿಟಿ ರವಿ ಇನ್ನು ಒಂದು ಹೆಜ್ಜೆ ಮುಂದೆ ಹೋಗಿ, “ಉರ್ದು ಭಾಷೆ ಮಾತನಾಡಲು ಬರುವುದಿಲ್ಲ ಎಂಬ ಕಾರಣಕ್ಕೆ ಒಬ್ಬ ಹಿಂದೂ ಯುವಕನ ಕೊಲೆ ಆಗುತ್ತೆ ಎಂದರೆ ನಾವು ಯಾವ ದೇಶದಲ್ಲಿದ್ದೇವೆ? ಮುಸ್ಲಿಮರು ಕೊಲೆಯಾದರೆ ಮಾತನಾಡುವ ಸಿದ್ದರಾಮನ್ಯನವರು ಹಿಂದೂಗಳ ಕೊಲೆ ಆದಾಗ ಏಕೆ ಮಾತನಾಡುವುದಿಲ್ಲ” ಎಂದು ಹೇಳಿಕೆ ನೀಡಿದ್ದರು.

ಬಿಜೆಪಿ ಮುಖಂಡರು ಮನಬಂದಂತೆ ಹೇಳಿಕೆ ನೀಡುವ ಮೂಲಕ ಕೋಮು ಪ್ರಚೋದನೆ ಕೊಡುತ್ತಿರುವುದನ್ನು ಗಮನಿಸಿ ಮಧ್ಯಪ್ರವೇಶಿಸಿದ ನಗರ ಪೋಲಿಸ್ ಆಯುಕ್ತರಾದ ಕಮಲ್ ಪಂತ್ “ಕೊಲೆ ನಡೆದಿರುವುದು ಬೈಕ್ ಅಪಘಾತದ ಕಾರಣಕ್ಕೆ ಹೊರತು ಉರ್ದು ಬಾರದಕ್ಕೆ ಕಾರಣಕ್ಕೆ ಅಥವಾ ಯಾವುದೇ ಕೋಮು ಆಯಾಮದಿಂದಲ್ಲ” ಎಂದು ಸ್ಪಷ್ಟೀಕರಣ ನೀಡಿದ್ದರು.

“ಜೆಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯರಾತ್ರಿ (05.04.2022) ನಡೆದ ಕೊಲೆ ಪ್ರಕರಣದಲ್ಲಿ ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿವೆ. ಈ ವಿಷಯವು ಗಲಾಟೆಗೆ ಕಾರಣವಾಗಿದ್ದು, ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ. ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ. ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ” ಎಂದು ಕಮಲ್ ಪಂತ್ ಟ್ವೀಟ್ ಮಾಡಿದ್ದಾರೆ.

ನಂತರ ಹಲವಾರು ಮಾಧ್ಯಮಗಳು ಅಂದು ನಡೆದ ಸತ್ಯ ಸುದ್ದಿಯನ್ನು ವರದಿ ಮಾಡಿದವು. ಆಗ ಎಚ್ಚೆತ್ತುಕೊಂಡು ಗೃಹ ಸಚಿವರು, “ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ತಕ್ಷಣಕ್ಕೆ ಸಿಕ್ಕ ಮಾಹಿತಿಗಳನ್ನು ಮಾಧ್ಯಮಗಳ ಎದುರು ಹೇಳಿಬಿಟ್ಟಿದ್ದೆ. ಆದರೆ ಇದು ಉರ್ದು ಭಾಷೆ ಬಾರದ ಕಾರಣಕ್ಕೆ ನಡೆದ ಕೊಲೆಯಲ್ಲ. ಬೈಕ್ ಡಿಕ್ಕಿ ಕಾರಣದಿಂದಾದ ಕೊಲೆಯಾಗಿದೆ ಎಂದು ಕ್ಷಮೆಯಾಚಿಸಿದ್ದಾರೆ. ರಾಜ್ಯದ ಗೃಹಸಚಿವರಾಗಿ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಲು ಸಾಧ್ಯವೇ? ಪೊಲೀಸ್ ಇಲಾಖೆಯ ಮುಖ್ಯಸ್ಥರಾಗಿ ತಾವೇ ಕೋಮು ಪ್ರಚೋದನೆ ಮಾಡಿದರೆ ಹೇಗೆ ಎಂದು ಹಲವರು ಟೀಕಿಸಿದ್ದಾರೆ.

ಗೃಹ ಸಚಿವರ ವಿರುದ್ಧ ಸಿದ್ದರಾಮಯ್ಯ ಕಿಡಿ

ಈ ಕುರಿತು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, “ಯಾವುದೇ ಪ್ರಕರಣದ ಕುರಿತು ಹೇಳಿಕೆ ನೀಡುವ ಮುನ್ನ ಅದರ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು ಎಂಬ ಕನಿಷ್ಟ ಪ್ರಜ್ಞೆ ಇಲ್ಲದವರಿಗೆ ಉನ್ನತ ಹುದ್ದೆ ನೀಡಲಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಈ ಹಿಂದೆ ಮೈಸೂರಿನ ಸಾಮೂಹಿಕ ಅತ್ಯಾಚಾರ ಪ್ರಕರಣ ನಡೆದಾಗ, ಶಿವಮೊಗ್ಗ ಹರ್ಷ ಕೊಲೆ ಪ್ರಕರಣ ನಡೆದಾಗ ಗೃಹ ಸಚಿವರ ಹೇಳಿಕೆ ಹೇಗಿತ್ತು ಎಂಬುದನ್ನು ನೋಡಿದ್ದೇವೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಮಾಜದ ಸಾಮರಸ್ಯ ಹಾಳು ಮಾಡುವಂತಹ ಹೇಳಿಕೆ ನೀಡಬಾರದು. ಆದರೆ ಅದನ್ನೆ ಮಾಡುತ್ತಿರುವವರನ್ನು ನಮ್ಮ ರಾಜ್ಯದ ಗೃಹ ಸಚಿವರಾಗಿ ಪಡೆದಿದ್ದು ಈ ನಾಡಿನ ದೌರ್ಭಾಗ್ಯ” ಎಂದು ಹೇಳಿದ್ದಾರೆ.

ಈ ವಿಷಯದ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿಯವರು, “ಗೃಹ ಸಚಿವರು ತಮ್ಮ ಜವಾಬ್ದಾರಿ ಮರೆತಿದ್ದಾರೆ. ಚುಚ್ಚಿ ಚುಚ್ಚಿ ಕೊಲೆ ಮಾಡಿದ್ದಾರೆ ಎಂದು ಪ್ರಚೋದಾನಾತ್ಮಕ ಹೇಳಿಕೆ ನೀಡಿದ್ದಾರೆ. ಗೃಹ ಸಚಿವರೇ ಹೀಗೆ ಹೇಳಿಕೆ ಕೊಟ್ಟರೆ ಹೇಗೆ? ಅರೆಬರೆ ಮಾಹಿತಿ ಇಟ್ಟುಕೊಂಡು ಅತ್ಯಂತ ಬೇಜವಾಬ್ದಾರಿಯಿಂದ ಅವರು ಹೇಳಿಕೆ ನೀಡಿದ್ದಾರೆ” ಎಂದು ಟೀಕಿಸಿದ್ದಾರೆ.

ಕೊಲೆಯಾದ ಯುವಕನ್ನು ʼದಲಿತ ಯುವಕʼ ಎಂದು ಕರೆದ ಗೃಹ ಸಚಿವರು, ಎಲ್ಲಿಯೂ ಆತನನ್ನು ʼಹಿಂದೂ ಯುವಕʼ ಎಂದು ಕರೆಯಲಿಲ್ಲ. ಇದು ಏನನ್ನು ಸೂಚಿಸುತ್ತದೆ? ದಲಿತ ಯುವಕ ಹಿಂದೂ ಅಲ್ಲವೇ? ಯಾಕೆ ಈ ತಾರತಮ್ಯ? ಪ್ರತಿಯೊಂದು ವಿಚಾರವನ್ನು ಬಿಜೆಪಿಯವರು ರಾಜಕೀಕರಣಗೊಳಿಸುತ್ತಿದ್ದಾರೆ. ದಲಿತ ಯುವಕ ಕೊಲೆ ಆಗಿದ್ದಾನೆ ಎಂದು ಹೇಳುತ್ತಾ ಸಾಮರಸ್ಯಕ್ಕೆ ಧಕ್ಕೆ ತರುತ್ತಿದ್ದಾರೆ. ಪೋಲಿಸರು ಒಂದು ಹೇಳಿಕೆ ಕೊಟ್ಟರೆ, ಗೃಹ ಸಚಿವರು ಮತ್ತೊಂದು ಹೇಳಿಕೆ ಕೊಡುತ್ತಿದ್ದಾರೆ. ಯಾರ ಮಾತು ಸತ್ಯ? ಯಾರ ಮಾತು ಸುಳ್ಳು? ಜವಾಬ್ದಾರಿ ಸ್ಥಾನದಲ್ಲಿರುವ ಗೃಹ ಸಚಿವರು ಎಲ್ಲ ಮಾಹಿತಿಯನ್ನು ಪಡೆದುಕೊಂಡು ಮಾತನಾಡಬೇಕು. ಅದನ್ನು ಬಿಟ್ಟು ಹೊಣೆಗೇಡಿತನದಿಂದ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಸುದರ್ಶನ್ ಟಿವಿ ಪತ್ರಕರ್ತೆಯನ್ನು ತರಾಟೆಗೆ ತೆಗೆದುಕೊಂಡ ಹಲ್ದಿರಾಮ್ಸ್ ಉದ್ಯೋಗಿ: ನೆಟ್ಟಿಗರ ಶ್ಲಾಘನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತಲೆ ಮೇಲೆ BJP ಟೋಪಿ ಹೆಗಲ ಮೇಲೆ BJP ದುಪಟ್ಟ ಇದ್ದರೆ ಸಹಜವಾಗಿ ಇಂಥ ಹೇಳಿಕೆಗಳು ಓತ ಪ್ರೋತವಾಗಿ ಹೊರಬರುವುದೋ ಏನೋ. ಮಾನ್ಯ ಸಚಿವರ ತಪ್ಪಲ್ಲ. ಎಲ್ಲಾ ಟೋಪಿ ದುಪಟ್ಟಗಳ ಮಹಿಮೆ.

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...