Homeಕರ್ನಾಟಕಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

ಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

- Advertisement -
- Advertisement -

ಆಂಧ್ರ ಪ್ರದೇಶದ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ತೆಲಂಗಾಣದ ಎ.ರೇವಂತ್ ರೆಡ್ಡಿ ಅವರು ಅತಿ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಮುಖ್ಯಮಂತ್ರಿ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ (ಎನ್‌ಇಡಬ್ಲ್ಯು) ವರದಿಗಳು ಹೇಳಿವೆ.

ಸೋಮವಾರ (ಡಿ.30) ಬಿಡುಗಡೆಯಾದ ವರದಿಯಲ್ಲಿ ಭಾರತದ 31 ರಾಜ್ಯಗಳ ಹಾಲಿ ಮುಖ್ಯಮಂತ್ರಿಗಳು ಚುನಾವಣೆಗೆ ಸ್ಪರ್ಧಿಸುವ ವೇಳೆ ಅಫಿಡವಿಟ್‌ನಲ್ಲಿ ಸ್ವಯಂ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳ ಸಂಗಾತಿ ಮತ್ತು ಅವಲಂಬಿತರ ಹೆಸರಿನಲ್ಲಿ ಘೋಷಿಸಿರುವ ಆಸ್ತಿಗಳೂ ಸೇರಿವೆ.

ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂ. ಘೋಷಿತ ಆಸ್ತಿಯ ಮೂಲಕ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಂಡರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಕೇವಲ 15 ಲಕ್ಷ ರೂ. ಘೋಷಿತ ಆಸ್ತಿಯೊಂದಿಗೆ ಅತಿ ಕಡಿಮೆ ಆಸ್ತಿ ಹೊಂದಿರುವ ಸಿಎಂ ಆಗಿ ಗುರುತಿಸಿಕೊಂಡಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಘೋಷಿಸಿಕೊಂಡಿರುವ 931 ಕೋಟಿ ರೂ. ಮೌಲ್ಯದ ಆಸ್ತಿಯಲ್ಲಿ 895 ಕೋಟಿ ರೂ. ಮೌಲ್ಯದ ಆಸ್ತಿ ನಾಯ್ಡು ಅವರ ಪತ್ನಿ, ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯೂ ಆಗಿರುವ ನಾರಾ ಭುವನೇಶ್ವರಿ ಅವರ ಹೆಸರಿನಲ್ಲಿದೆ. ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನಲ್ಲಿ ಭುವನೇಶ್ವರಿ ಅವರದ್ದು 764 ಕೋಟಿ ರೂ. ಮೌಲ್ಯದ ಷೇರುಗಳಿವೆ. ಇನ್ನುಳಿದಂತೆ ಸೆರಿಲಿಂಗಂಪಲ್ಲಿಯಲ್ಲಿ ಅವರು 55 ಕೋಟಿ ರೂ. ಮೌಲ್ಯದ ಕೃಷಿ ಭೂಮಿಯನ್ನು ಹೊಂದಿದ್ದಾರೆ.

ಅರುಣಾಚಲ ಪ್ರದೇಶದ ಸಿಎಂ ಹಾಗೂ ಬಿಜೆಪಿ ನಾಯಕ ಪೆಮಾ ಖಂಡು ಅವರು 332 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಮತ್ತು ಪೆಮಾ ಖಂಡು ಮಾತ್ರ ಈ ಪಟ್ಟಿಯಲ್ಲಿರುವ ಬಿಲಿಯನೇರ್ ಸಿಎಂಗಳಾಗಿದ್ದಾರೆ.

ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ 30 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಏಳನೇ ಶ್ರೀಮಂತರಾಗಿದ್ದಾರೆ. ಕೇವಲ 8 ಕೋಟಿ ರೂ. ಘೋಷಿತ ಆಸ್ತಿಯೊಂದಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ 14ನೇ ಸ್ಥಾನ ಪಡೆದಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ ಸುಮಾರು 1 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಪಟ್ಟಿಯಲ್ಲಿ ಕೆಳಗಡೆಯಿಂದ ಮೂರನೇ ಸ್ಥಾನದಲ್ಲಿದ್ದಾರೆ.

31 ಮುಖ್ಯಮಂತ್ರಿಗಳ ಒಟ್ಟು ಘೋಷಿತ ಆಸ್ತಿ ಮೌಲ್ಯ 1,630 ಕೋಟಿ ರೂ. ಇದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸರಾಸರಿ ಆಸ್ತಿ ಮೌಲ್ಯ 52.59 ಕೋಟಿ ರೂ. ಇದೆ.

2023-2024ರಲ್ಲಿ ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ ಅಥವಾ ಎನ್‌ಎನ್‌ಐ ಸರಿ ಸುಮಾರು ರೂ 1,85,854 ಆಗಿದ್ದರೆ, ಮುಖ್ಯಮಂತ್ರಿಗಳ ಸರಾಸರಿ ಸ್ವಯಂ ಆದಾಯವು ರೂ. 13,64,310 ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯದ 7.3 ಪಟ್ಟು ಹೆಚ್ಚು ಎಂದು ವರದಿ ಹೇಳಿದೆ.

ಅರುಣಾಚಲ ಸಿಎಂ ಪೆಮಾ ಖಂಡು ಅವರು ಅತಿ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಅವರ ಸಾಲದ ಮೊತ್ತ 180 ಕೋಟಿ ರೂ. ಇದೆ. ಖಂಡು ಬಳಿಕ 23 ಕೋಟಿ ರೂ. ಸಾಲದೊಂದಿಗೆ ಸಿದ್ದರಾಮಯ್ಯ ಎರಡನೇ ಸ್ಥಾನದಲ್ಲಿದ್ದು, ಚಂದ್ರಬಾಬು ನಾಯ್ಡು ಅವರು 10 ಕೋಟಿ ರೂ. ಸಾಲದಲ್ಲಿದ್ದಾರೆ.

ರೂ. 55 ಲಕ್ಷ ಮೌಲ್ಯದ ಘೋಷಿತ ಆಸ್ತಿ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನದಲ್ಲಿದ್ದಾರೆ.

ವರದಿಯ ಪ್ರಕಾರ, 31 ಮುಖ್ಯಮಂತ್ರಿಗಳ ಪೈಕಿ 13 ಮಂದಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಈ ಪೈಕಿ 10 ಸಿಎಂಗಳು ಕೊಲೆಯತ್ನ, ಅಪಹರಣ, ಲಂಚ, ಕ್ರಿಮಿನಲ್ ಬೆದರಿಕೆ ಇತ್ಯಾದಿ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ.

ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ವಿರುದ್ಧ ಬರೋಬ್ಬರಿ 89 ಪ್ರಕರಣಗಳಿವೆ. ವರದಿಯ ಪ್ರಕಾರ, ಈ ಪೈಕಿ 72 ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರು 11 ಗಂಭೀರ ಐಪಿಸಿ ಪ್ರಕರಣಗಳು ಸೇರಿದಂತೆ 47 ಪ್ರಕರಣಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳಿವೆ.

31 ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಅತಿಶಿ ಇವರಿಬ್ಬರು ಮಾತ್ರ ಮಹಿಳೆಯರು.

ವಯೋಮಾನದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 12 ಮುಖ್ಯಮಂತ್ರಿಗಳು 51-60 ವಯಸ್ಸಿನವರಿದ್ದಾರೆ. ಏಳು ಮಂದಿ 41 ರಿಂದ 50 ವರ್ಷದೊಳಗಿನವರು. ಆರು ಮಂದಿ 71-80ರ ವಯೋಮಾನದವರು ಮತ್ತು ಐವರು 61-70ರ ವಯೋಮಾನದವರು. ಒಬ್ಬರು ಮಾತ್ರ 31-40 ವಯೋಮಾನದವರಿದ್ದಾರೆ.

ಶಿಕ್ಷಣದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 10 ಮುಖ್ಯಮಂತ್ರಿಗಳು ಪದವೀಧರರು ಮತ್ತು ಒಂಬತ್ತು ಮಂದಿ ಸ್ನಾತಕೋತ್ತರ ಪದವೀಧರಿದ್ದಾರೆ. ಒಬ್ಬರು ಸಿಎಂ 10ನೇ ತರಗತಿ ಪಾಸಾಗಿದ್ದರೆ, ಮೂವರು 12ನೇ ತರಗತಿ ಪಾಸ್ ಆದವರಿದ್ದಾರೆ.

ಇದನ್ನೂ ಓದಿ : ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...