Homeಕರ್ನಾಟಕಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

ಚಂದ್ರಬಾಬು ನಾಯ್ಡು ಭಾರತದ ಅತ್ಯಂತ ಶ್ರೀಮಂತ ಸಿಎಂ : ಸಿದ್ದರಾಮಯ್ಯ ಅವರಿಗೆ ಎಷ್ಟನೇ ಸ್ಥಾನ?

- Advertisement -
- Advertisement -

ಆಂಧ್ರ ಪ್ರದೇಶದ ಎನ್. ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ. ತೆಲಂಗಾಣದ ಎ.ರೇವಂತ್ ರೆಡ್ಡಿ ಅವರು ಅತಿ ಹೆಚ್ಚು ಕ್ರಿಮಿನಲ್ ಪ್ರಕರಣಗಳನ್ನು ಹೊಂದಿರುವ ಮುಖ್ಯಮಂತ್ರಿ ಎಂದು ಅಸೋಸಿಯೇಶನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್ (ಎನ್‌ಇಡಬ್ಲ್ಯು) ವರದಿಗಳು ಹೇಳಿವೆ.

ಸೋಮವಾರ (ಡಿ.30) ಬಿಡುಗಡೆಯಾದ ವರದಿಯಲ್ಲಿ ಭಾರತದ 31 ರಾಜ್ಯಗಳ ಹಾಲಿ ಮುಖ್ಯಮಂತ್ರಿಗಳು ಚುನಾವಣೆಗೆ ಸ್ಪರ್ಧಿಸುವ ವೇಳೆ ಅಫಿಡವಿಟ್‌ನಲ್ಲಿ ಸ್ವಯಂ ಘೋಷಿಸಿಕೊಂಡಿರುವ ಆಸ್ತಿ ವಿವರಗಳನ್ನು ವಿಶ್ಲೇಷಿಸಲಾಗಿದೆ. ಇದರಲ್ಲಿ ಮುಖ್ಯಮಂತ್ರಿಗಳ ಸಂಗಾತಿ ಮತ್ತು ಅವಲಂಬಿತರ ಹೆಸರಿನಲ್ಲಿ ಘೋಷಿಸಿರುವ ಆಸ್ತಿಗಳೂ ಸೇರಿವೆ.

ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂ. ಘೋಷಿತ ಆಸ್ತಿಯ ಮೂಲಕ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಎನಿಸಿಕೊಂಡರೆ, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಅವರು ಕೇವಲ 15 ಲಕ್ಷ ರೂ. ಘೋಷಿತ ಆಸ್ತಿಯೊಂದಿಗೆ ಅತಿ ಕಡಿಮೆ ಆಸ್ತಿ ಹೊಂದಿರುವ ಸಿಎಂ ಆಗಿ ಗುರುತಿಸಿಕೊಂಡಿದ್ದಾರೆ.

ಚಂದ್ರಬಾಬು ನಾಯ್ಡು ಅವರು ಘೋಷಿಸಿಕೊಂಡಿರುವ 931 ಕೋಟಿ ರೂ. ಮೌಲ್ಯದ ಆಸ್ತಿಯಲ್ಲಿ 895 ಕೋಟಿ ರೂ. ಮೌಲ್ಯದ ಆಸ್ತಿ ನಾಯ್ಡು ಅವರ ಪತ್ನಿ, ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕಿಯೂ ಆಗಿರುವ ನಾರಾ ಭುವನೇಶ್ವರಿ ಅವರ ಹೆಸರಿನಲ್ಲಿದೆ. ಹೆರಿಟೇಜ್ ಫುಡ್ಸ್ ಲಿಮಿಟೆಡ್‌ನಲ್ಲಿ ಭುವನೇಶ್ವರಿ ಅವರದ್ದು 764 ಕೋಟಿ ರೂ. ಮೌಲ್ಯದ ಷೇರುಗಳಿವೆ. ಇನ್ನುಳಿದಂತೆ ಸೆರಿಲಿಂಗಂಪಲ್ಲಿಯಲ್ಲಿ ಅವರು 55 ಕೋಟಿ ರೂ. ಮೌಲ್ಯದ ಕೃಷಿ ಭೂಮಿಯನ್ನು ಹೊಂದಿದ್ದಾರೆ.

ಅರುಣಾಚಲ ಪ್ರದೇಶದ ಸಿಎಂ ಹಾಗೂ ಬಿಜೆಪಿ ನಾಯಕ ಪೆಮಾ ಖಂಡು ಅವರು 332 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಮತ್ತು ಪೆಮಾ ಖಂಡು ಮಾತ್ರ ಈ ಪಟ್ಟಿಯಲ್ಲಿರುವ ಬಿಲಿಯನೇರ್ ಸಿಎಂಗಳಾಗಿದ್ದಾರೆ.

ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ತೆಲಂಗಾಣ ಸಿಎಂ ರೇವಂತ್ ರೆಡ್ಡಿ 30 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಏಳನೇ ಶ್ರೀಮಂತರಾಗಿದ್ದಾರೆ. ಕೇವಲ 8 ಕೋಟಿ ರೂ. ಘೋಷಿತ ಆಸ್ತಿಯೊಂದಿಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ 14ನೇ ಸ್ಥಾನ ಪಡೆದಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್‌ ಸುಮಾರು 1 ಕೋಟಿ ರೂ. ಮೌಲ್ಯದ ಘೋಷಿತ ಆಸ್ತಿಯೊಂದಿಗೆ ಪಟ್ಟಿಯಲ್ಲಿ ಕೆಳಗಡೆಯಿಂದ ಮೂರನೇ ಸ್ಥಾನದಲ್ಲಿದ್ದಾರೆ.

31 ಮುಖ್ಯಮಂತ್ರಿಗಳ ಒಟ್ಟು ಘೋಷಿತ ಆಸ್ತಿ ಮೌಲ್ಯ 1,630 ಕೋಟಿ ರೂ. ಇದ್ದು, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಸರಾಸರಿ ಆಸ್ತಿ ಮೌಲ್ಯ 52.59 ಕೋಟಿ ರೂ. ಇದೆ.

2023-2024ರಲ್ಲಿ ಭಾರತದ ತಲಾ ನಿವ್ವಳ ರಾಷ್ಟ್ರೀಯ ಆದಾಯ ಅಥವಾ ಎನ್‌ಎನ್‌ಐ ಸರಿ ಸುಮಾರು ರೂ 1,85,854 ಆಗಿದ್ದರೆ, ಮುಖ್ಯಮಂತ್ರಿಗಳ ಸರಾಸರಿ ಸ್ವಯಂ ಆದಾಯವು ರೂ. 13,64,310 ಆಗಿದೆ. ಇದು ಭಾರತದ ಸರಾಸರಿ ತಲಾ ಆದಾಯದ 7.3 ಪಟ್ಟು ಹೆಚ್ಚು ಎಂದು ವರದಿ ಹೇಳಿದೆ.

ಅರುಣಾಚಲ ಸಿಎಂ ಪೆಮಾ ಖಂಡು ಅವರು ಅತಿ ಹೆಚ್ಚು ಸಾಲ ಹೊಂದಿರುವ ಮುಖ್ಯಮಂತ್ರಿ ಎನಿಸಿಕೊಂಡಿದ್ದಾರೆ. ಅವರ ಸಾಲದ ಮೊತ್ತ 180 ಕೋಟಿ ರೂ. ಇದೆ. ಖಂಡು ಬಳಿಕ 23 ಕೋಟಿ ರೂ. ಸಾಲದೊಂದಿಗೆ ಸಿದ್ದರಾಮಯ್ಯ ಎರಡನೇ ಸ್ಥಾನದಲ್ಲಿದ್ದು, ಚಂದ್ರಬಾಬು ನಾಯ್ಡು ಅವರು 10 ಕೋಟಿ ರೂ. ಸಾಲದಲ್ಲಿದ್ದಾರೆ.

ರೂ. 55 ಲಕ್ಷ ಮೌಲ್ಯದ ಘೋಷಿತ ಆಸ್ತಿ ಹೊಂದಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಕೊನೆಯಿಂದ ಎರಡನೇ ಸ್ಥಾನದಲ್ಲಿದ್ದಾರೆ.

ವರದಿಯ ಪ್ರಕಾರ, 31 ಮುಖ್ಯಮಂತ್ರಿಗಳ ಪೈಕಿ 13 ಮಂದಿ ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಈ ಪೈಕಿ 10 ಸಿಎಂಗಳು ಕೊಲೆಯತ್ನ, ಅಪಹರಣ, ಲಂಚ, ಕ್ರಿಮಿನಲ್ ಬೆದರಿಕೆ ಇತ್ಯಾದಿ ಸೇರಿದಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ.

ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ವಿರುದ್ಧ ಬರೋಬ್ಬರಿ 89 ಪ್ರಕರಣಗಳಿವೆ. ವರದಿಯ ಪ್ರಕಾರ, ಈ ಪೈಕಿ 72 ಪ್ರಕರಣಗಳು ಗಂಭೀರ ಸ್ವರೂಪದ್ದಾಗಿವೆ.

ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರು 11 ಗಂಭೀರ ಐಪಿಸಿ ಪ್ರಕರಣಗಳು ಸೇರಿದಂತೆ 47 ಪ್ರಕರಣಗಳೊಂದಿಗೆ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಅವರ ವಿರುದ್ಧ 19 ಕ್ರಿಮಿನಲ್ ಪ್ರಕರಣಗಳಿವೆ.

31 ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ದೆಹಲಿಯ ಅತಿಶಿ ಇವರಿಬ್ಬರು ಮಾತ್ರ ಮಹಿಳೆಯರು.

ವಯೋಮಾನದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 12 ಮುಖ್ಯಮಂತ್ರಿಗಳು 51-60 ವಯಸ್ಸಿನವರಿದ್ದಾರೆ. ಏಳು ಮಂದಿ 41 ರಿಂದ 50 ವರ್ಷದೊಳಗಿನವರು. ಆರು ಮಂದಿ 71-80ರ ವಯೋಮಾನದವರು ಮತ್ತು ಐವರು 61-70ರ ವಯೋಮಾನದವರು. ಒಬ್ಬರು ಮಾತ್ರ 31-40 ವಯೋಮಾನದವರಿದ್ದಾರೆ.

ಶಿಕ್ಷಣದ ಆಧಾರದಲ್ಲಿ ಮಾಡಿದ ವಿಶ್ಲೇಷಣೆ ಪ್ರಕಾರ, 10 ಮುಖ್ಯಮಂತ್ರಿಗಳು ಪದವೀಧರರು ಮತ್ತು ಒಂಬತ್ತು ಮಂದಿ ಸ್ನಾತಕೋತ್ತರ ಪದವೀಧರಿದ್ದಾರೆ. ಒಬ್ಬರು ಸಿಎಂ 10ನೇ ತರಗತಿ ಪಾಸಾಗಿದ್ದರೆ, ಮೂವರು 12ನೇ ತರಗತಿ ಪಾಸ್ ಆದವರಿದ್ದಾರೆ.

ಇದನ್ನೂ ಓದಿ : ಮಧ್ಯಪ್ರದೇಶ ಪೊಲೀಸ್ ಠಾಣೆಯಲ್ಲಿ ದಲಿತ ಯುವಕ ಸಾವು – ಬಿಜೆಪಿ ಸರ್ಕಾರದ ವಿರುದ್ಧ ರಾಹುಲ್, ಪ್ರಿಯಾಂಕಾ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...