Homeಕರ್ನಾಟಕನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

- Advertisement -
- Advertisement -

ನಮ್ಮ ಪ್ರೀತಿಯ ಚಂದ್ರಶೇಖರ ಪಾಟೀಲರು (ಚಂಪಾ, ಜೂನ್‌ 18, 1939– ಜನವರಿ 10, 2022) ಇಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಲ್ಲಿ ನಿಧನರಾಗಿದ್ದಾರೆ. ಅವರು 1980ರ ಬಂಡಾಯ ಚಳುವಳಿಯಲ್ಲಿ ಬರಗೂರರೊಡಗೂಡಿ ನಮಗೆಲ್ಲ ಮಾರ್ಗದರ್ಶನ ಮಾಡಿದವರು. ಚಂಪಾ ನಿಧನದೊಂದಿಗೆ ಜನಪರ ಚಳವಳಿಯ ಇನ್ನೊಂದು ಕೊಂಡಿ ಕಳಚಿತು. ನನ್ನಂಥ ಹಲವರು ಏನಾದರೂ ಚಿಕ್ಕ ಪುಟ್ಟ ಪ್ರತಿಭಟನೆಯ ಕಿಚ್ಚು ಉಳಿಸಿಕೊಂಡಿದ್ದರೆ ಅದಕ್ಕೆ ಚಂಪಾ ಮತ್ತು ಅವರು ತರುತ್ತಿದ್ದ ಸಂಕ್ರಮಣ ಪತ್ರಿಕೆ ಕಾರಣ. ಕವಿ, ನಾಟಕಕಾರ, ವಿಮರ್ಶಕ, ಭಾಷಣಕಾರ ಮತ್ತು ಕನ್ನಡ ಪರ ಹೋರಾಟಗಾರರಾಗಿ ಅವರು ಸದಾ ನಮ್ಮ ನೆನಪಲ್ಲಿ ಉಳಿಯುತ್ತಾರೆ.

ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, 1960ರಲ್ಲಿ ಬಿ.ಎ. ಪೂರೈಸಿದರು. 1962ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷಿನಲ್ಲಿ ಎಂ.ಎ. ಪದವಿ ಪಡೆದರು. 1996ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾದರು. 1980-83ರ ಅವಧಿಯಲ್ಲಿ ಧಾರವಾಡದ ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕ್ ಚಳವಳಿಗೆ ಪ್ರೇರಣೆ ನೀಡಿದರು. ಗೋಕಾಕ ಚಳವಳಿಯು ಅವರನ್ನು ನಾಡಿನ ಪ್ರಮುಖ ಹೋರಾಟಗಾರರೆಂದು ಗುರುತಿಸುವಂತೆ ಮಾಡಿತು. ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಅವರು ಸಾಹಿತಿಗಳ ಮೈ ಚಳಿ ಬಿಡಿಸಿದರು.

ಮಾತೃಭಾಷಾ ಮಾಧ್ಯಮ ಚಳುವಳಿಗೆ ಚಂಪಾ ಕೊಡುಗೆ ಬಹಳ ದೊಡ್ಡದು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವೇ ಬೋಧನಾ ಮಾಧ್ಯಮವಾಗಿರಬೇಕು, ಬೇಕಿದ್ದರೆ ಇಂಗ್ಲಿಷನ್ನು ಪ್ರಾಥಮಿಕ 5ನೇ ತರಗತಿಯಿಂದ ಕಲಿಸಬೇಕು, ಕೇಂದ್ರ ಪಠ್ಯಕ್ರಮದ ಮಾಧ್ಯಮಗಳ ಶಾಲೆಗಳು ಕರ್ನಾಟಕದಲ್ಲಿದ್ದರೆ ಅವು ಕನ್ನಡವನ್ನು ಕಲಿಸಬೇಕು- ಎಂಬ ವಿಷಯಗಳ ಬಗ್ಗೆ ಚಂಪಾ ಅವರು ನಿರಂತರವಾಗಿ ಹೋರಾಡಿದರು. ಕನ್ನಡ ಮಾಧ್ಯಮದಲ್ಲಿ ಶಾಲೆಯನ್ನು ನಡೆಸಲು ಅನುಮತಿ ಪಡೆದು ಆಂಗ್ಲಮಾಧ್ಯಮದಲ್ಲಿ ಶಾಲೆ ನಡೆಸುತ್ತಿದ್ದ ಸುಮಾರು 2215 ಶಾಲೆಗಳ ಮಾನ್ಯತೆಯನ್ನು ರದ್ದು ಮಾಡಿಸುವಲ್ಲಿ ಚಂಪಾ ಅವರು ಯಶಸ್ವಿಯಾಗಿದ್ದರು.

1979ರಲ್ಲಿ ಬಂಡಾಯ ಚಳವಳಿಯು ಕನ್ನಡ ಸಾಹಿತ್ಯ ಪರಿಷತ್ತಿಗೆ ಬಹಿಷ್ಕಾರ ಹಾಕಿದರೂ ಚಂಪಾ ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ( ನವೆಂಬರ್ 2004ರಿಂದ 2008ರವರೆಗೆ) ಸೇವೆ ಸಲ್ಲಿಸಿದರು. ಅವರ ನೇತೃತ್ವದಲ್ಲಿ ನಡೆದ ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಅನೇಕ ಘಟನೆಗಳಿಗೆ ಸಾಕ್ಷಿಯಾಯಿತು. ಕಸಾಪವನ್ನು ಜನರ ಹತ್ತಿರ ಕೊಂಡೊಯ್ಯಲು ಅವರು ಮಾಡಿದ ಕೆಲಸಗಳು ಹಲವು. ಅದರಲ್ಲಿ ಅವರು ಚಾಲ್ತಿಗೆ ತಂದ ಶನಿವಾರದ ಪುಸ್ತಕಸಂತೆ ಕಾರ್ಯಕ್ರಮವೂ ಒಂದು. ಪ್ರತಿ ಶನಿವಾರವೂ ಪರಿಷತ್ತಿನ ಅಂಗಳದಲ್ಲಿ ಕನ್ನಡ ಪುಸ್ತಕ ಪ್ರಕಾಶಕರನ್ನು ಮತ್ತು ಮಾರಾಟಗಾರರನ್ನು ಆಹ್ವಾನಿಸಿ ರಿಯಾಯಿತಿ ದರದಲ್ಲಿ ಓದುಗರಿಗೆ ಪುಸ್ತಕಗಳು ದೊರೆಯುವಂತೆ ವ್ಯವಸ್ಥೆ ಮಾಡಿದರು. ಈ ಪುಸ್ತಕಸಂತೆಯಲ್ಲಿ ಹೊಸ ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರ ಜತೆಗೆ ಹಳೆ ಪುಸ್ತಕ ವ್ಯಾಪಾರಿಗಳೂ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಅಷ್ಟೇ ಅಲ್ಲದೆ ತಮ್ಮ ಪುಸ್ತಕಗಳನ್ನು ತಾವೇ ಪ್ರಕಟಿಸುತ್ತಿದ್ದ ಲೇಖಕರೂ ಇಲ್ಲಿ ತಮ್ಮ ಪುಸ್ತಕಗಳನ್ನು ತಂದು ಮಾರುತ್ತಿದ್ದರು. ಅಪರೂಪದ ಮತ್ತು ಅಲಭ್ಯ ಗ್ರಂಥಗಳು ಇಲ್ಲಿ ಸಿಗುತ್ತಿದ್ದವು. ಇದರ ಜತೆಗೆ ಪರಿಷತ್ತಿನ ಮುಂಭಾಗದಲ್ಲಿ ಹಾಡು, ನೃತ್ಯ, ಭಾಷಣ ಇತ್ಯಾದಿ ಕಾರ್ಯಕ್ರಮಗಳೂ ನಡೆದುವು. ಅವರ ಅಧಿಕಾರಾವಧಿ ಮುಗಿಯುತ್ತಿದ್ದಂತೆ ಅದು ಯಾಕೋ ನಿಂತು ಹೋಯಿತು.

ಬಾನುಲಿ, ಮಧ್ಯಬಿಂದು, ಹೂವು ಹಣ್ಣು ತಾರೆ, ಓ ಎನ್ನ ದೇಶ ಬಾಂಧವರೇ, ಗುಂಡಮ್ಮನ ಹಾಡು ಮೊದಲಾದುವು ಅವರ ಕವನ ಸಂಗ್ರಹಗಳು. ಕೊಡೆಗಳು, ಗೋಕರ್ಣದ ಗೌಡಶಾನಿ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ಮೊದಲಾದುವು ಅವರ ಜನಪ್ರಿಯ ನಾಟಕಗಳು. ಅವರ ಕೆಲವು ನಾಟಕಗಳಲ್ಲಿ ನಾನು ಅಭಿನಯಿಸಿದ್ದೂ ಉಂಟು. ಬೇಂದ್ರೆ-ನಾನು ಕಂಡಂತೆ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ, ಚಂಪಾದಕೀಯ, ಮೊದಲಾದುವು ಅವರ ಇತರ ಕೃತಿಗಳು.

ನವ್ಯ ಸಾಹಿತ್ಯ ಸಂದರ್ಭದಲ್ಲಿ ಗೋಪಾಲಕೃಷ್ಣ ಅಡಿಗರನ್ನು ʼ ಒಂದು ಜನಾಂಗದ ಕಣ್ಣು ತೆರೆಸಿದʼ ಕವಿ ಎಂದು ಕೊಂಡಾಡಲಾಗುತ್ತಿತ್ತು. ಆದರೆ ನಾವೆಲ್ಲರೂ ಸಂಕ್ರಮಣ ಪತ್ರಿಕೆಯ ಮೂಲಕ ಅನೇಕ ಲೇಖಕರನ್ನು ಬೆಳೆಸಿದ ಚಂಪಾ ಅವರನ್ನು ʼಅಡಿಗರು ಕಣ್ಣು ಮುಚ್ಚಿಸಿದರು, ಚಂಪಾ ಕಣ್ಣು ತೆರೆಸಿದರುʼ ಎಂದು ಹೇಳಿಕೊಂಡು ಕರ್ನಾಟಕಾದ್ಯಂತ ಓಡಾಡುತ್ತಿದ್ದೆವು. ನಮ್ಮೆಲ್ಲರ ಓದಿನ ಕೇಂದ್ರವಾಗಿದ್ದ ಸಂಕ್ರಮಣವನ್ನು ಚಂದ್ರಶೇಖರ ಪಾಟೀಲರು ಗಿರಡ್ಡಿ ಗೋವಿಂದರಾಜ, ಮತ್ತು ಸಿದ್ಧಲಿಂಗ ಪಟ್ಟಣಶೆಟ್ಟಿಯವರ ಜೊತೆ ಸೇರಿ ಆರಂಭಿಸಿದರು. ಈ ಪತ್ರಿಕೆಯು ನವ್ಯದ ಉಚ್ಛ್ರಾಯ ಸ್ಥಿತಿಯಲ್ಲಿ ಪ್ರಾರಂಭವಾಗಿ, ಎಪ್ಪತ್ತರ ದಶಕದ ನಂತರ ದಲಿತ, ಬಂಡಾಯ ಸಾಹಿತ್ಯ ಚಳವಳಿಗೆ ಬೆಂಬಲ ನೀಡಿ ಹಲವಾರು ಯುವ ಬರಹಗಾರರಿಗೆ ವೇದಿಕೆಯನ್ನು ಒದಗಿಸಿತು. ಆ ಹೊತ್ತಿಗೆ ಗಿರಡ್ಡಿ, ಪಟ್ಟಣಶೆಟ್ಟರು ಸಂಕ್ರಮಣದಿಂದ ಕಳಚಿಕೊಂಡಿದ್ದರು.

ಚಂಪಾ ತಮ್ಮ ಹರಿತವಾದ ವ್ಯಂಗ್ಯಕ್ಕೆ ಹೆಸರಾದವರು.

‘ಕನ್ನಡ ಕಾವ್ಯದ ಭೂತ ಭವಿಷ್ಯವ ಬಣ್ಣಿಸಿ ಹೇಳೋ ಗಾಂಪಾ;

ನಮ್ಮ ಆದಿಕವಿ ಪಂಪಾ, ಗುರುವೇ ನಮ್ಮ ಅಂತ್ಯಕವಿ ಚಂಪಾ’

ಅಂದು ತಮ್ಮನ್ನೇ ತಾವು ವಿನೋದ ಮಾಡಿಕೊಳ್ಳುತ್ತಿದ್ದರು.

ನಿನ್ನೆ ಬಸವಲಿಂಗಯ್ಯ, ಇವತ್ತು ಚಂಪಾ, ಯಾಕೋ ಸಾವು ಹತ್ತಿರದಲ್ಲೆಲ್ಲೋ ಓಡಾಡುವಂತೆ ಭಾಸವಾಗುತ್ತಿದೆ.

ಸರ್‌, ಹೋಗಿ ಬನ್ನಿ, ನಮಸ್ಕಾರ…


ಇದನ್ನೂ ಓದಿರಿ: ಹಿರಿಯ ಸಾಹಿತಿ ಚಂಪಾ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...