Homeಕರ್ನಾಟಕನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

- Advertisement -
- Advertisement -

ನಮ್ಮ ಪ್ರೀತಿಯ ಚಂದ್ರಶೇಖರ ಪಾಟೀಲರು (ಚಂಪಾ, ಜೂನ್‌ 18, 1939– ಜನವರಿ 10, 2022) ಇಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಲ್ಲಿ ನಿಧನರಾಗಿದ್ದಾರೆ. ಅವರು 1980ರ ಬಂಡಾಯ ಚಳುವಳಿಯಲ್ಲಿ ಬರಗೂರರೊಡಗೂಡಿ ನಮಗೆಲ್ಲ ಮಾರ್ಗದರ್ಶನ ಮಾಡಿದವರು. ಚಂಪಾ ನಿಧನದೊಂದಿಗೆ ಜನಪರ ಚಳವಳಿಯ ಇನ್ನೊಂದು ಕೊಂಡಿ ಕಳಚಿತು. ನನ್ನಂಥ ಹಲವರು ಏನಾದರೂ ಚಿಕ್ಕ ಪುಟ್ಟ ಪ್ರತಿಭಟನೆಯ ಕಿಚ್ಚು ಉಳಿಸಿಕೊಂಡಿದ್ದರೆ ಅದಕ್ಕೆ ಚಂಪಾ ಮತ್ತು ಅವರು ತರುತ್ತಿದ್ದ ಸಂಕ್ರಮಣ ಪತ್ರಿಕೆ ಕಾರಣ. ಕವಿ, ನಾಟಕಕಾರ, ವಿಮರ್ಶಕ, ಭಾಷಣಕಾರ ಮತ್ತು ಕನ್ನಡ ಪರ ಹೋರಾಟಗಾರರಾಗಿ ಅವರು ಸದಾ ನಮ್ಮ ನೆನಪಲ್ಲಿ ಉಳಿಯುತ್ತಾರೆ.

ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, 1960ರಲ್ಲಿ ಬಿ.ಎ. ಪೂರೈಸಿದರು. 1962ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷಿನಲ್ಲಿ ಎಂ.ಎ. ಪದವಿ ಪಡೆದರು. 1996ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾದರು. 1980-83ರ ಅವಧಿಯಲ್ಲಿ ಧಾರವಾಡದ ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕ್ ಚಳವಳಿಗೆ ಪ್ರೇರಣೆ ನೀಡಿದರು. ಗೋಕಾಕ ಚಳವಳಿಯು ಅವರನ್ನು ನಾಡಿನ ಪ್ರಮುಖ ಹೋರಾಟಗಾರರೆಂದು ಗುರುತಿಸುವಂತೆ ಮಾಡಿತು. ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಅವರು ಸಾಹಿತಿಗಳ ಮೈ ಚಳಿ ಬಿಡಿಸಿದರು.

ಮಾತೃಭಾಷಾ ಮಾಧ್ಯಮ ಚಳುವಳಿಗೆ ಚಂಪಾ ಕೊಡುಗೆ ಬಹಳ ದೊಡ್ಡದು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವೇ ಬೋಧನಾ ಮಾಧ್ಯಮವಾಗಿರಬೇಕು, ಬೇಕಿದ್ದರೆ ಇಂಗ್ಲಿಷನ್ನು ಪ್ರಾಥಮಿಕ 5ನೇ ತರಗತಿಯಿಂದ ಕಲಿಸಬೇಕು, ಕೇಂದ್ರ ಪಠ್ಯಕ್ರಮದ ಮಾಧ್ಯಮಗಳ ಶಾಲೆಗಳು ಕರ್ನಾಟಕದಲ್ಲಿದ್ದರೆ ಅವು ಕನ್ನಡವನ್ನು ಕಲಿಸಬೇಕು- ಎಂಬ ವಿಷಯಗಳ ಬಗ್ಗೆ ಚಂಪಾ ಅವರು ನಿರಂತರವಾಗಿ ಹೋರಾಡಿದರು. ಕನ್ನಡ ಮಾಧ್ಯಮದಲ್ಲಿ ಶಾಲೆಯನ್ನು ನಡೆಸಲು ಅನುಮತಿ ಪಡೆದು ಆಂಗ್ಲಮಾಧ್ಯಮದಲ್ಲಿ ಶಾಲೆ ನಡೆಸುತ್ತಿದ್ದ ಸುಮಾರು 2215 ಶಾಲೆಗಳ ಮಾನ್ಯತೆಯನ್ನು ರದ್ದು ಮಾಡಿಸುವಲ್ಲಿ ಚಂಪಾ ಅವರು ಯಶಸ್ವಿಯಾಗಿದ್ದರು.

1979ರಲ್ಲಿ ಬಂಡಾಯ ಚಳವಳಿಯು ಕನ್ನಡ ಸಾಹಿತ್ಯ ಪರಿಷತ್ತಿಗೆ ಬಹಿಷ್ಕಾರ ಹಾಕಿದರೂ ಚಂಪಾ ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ( ನವೆಂಬರ್ 2004ರಿಂದ 2008ರವರೆಗೆ) ಸೇವೆ ಸಲ್ಲಿಸಿದರು. ಅವರ ನೇತೃತ್ವದಲ್ಲಿ ನಡೆದ ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಅನೇಕ ಘಟನೆಗಳಿಗೆ ಸಾಕ್ಷಿಯಾಯಿತು. ಕಸಾಪವನ್ನು ಜನರ ಹತ್ತಿರ ಕೊಂಡೊಯ್ಯಲು ಅವರು ಮಾಡಿದ ಕೆಲಸಗಳು ಹಲವು. ಅದರಲ್ಲಿ ಅವರು ಚಾಲ್ತಿಗೆ ತಂದ ಶನಿವಾರದ ಪುಸ್ತಕಸಂತೆ ಕಾರ್ಯಕ್ರಮವೂ ಒಂದು. ಪ್ರತಿ ಶನಿವಾರವೂ ಪರಿಷತ್ತಿನ ಅಂಗಳದಲ್ಲಿ ಕನ್ನಡ ಪುಸ್ತಕ ಪ್ರಕಾಶಕರನ್ನು ಮತ್ತು ಮಾರಾಟಗಾರರನ್ನು ಆಹ್ವಾನಿಸಿ ರಿಯಾಯಿತಿ ದರದಲ್ಲಿ ಓದುಗರಿಗೆ ಪುಸ್ತಕಗಳು ದೊರೆಯುವಂತೆ ವ್ಯವಸ್ಥೆ ಮಾಡಿದರು. ಈ ಪುಸ್ತಕಸಂತೆಯಲ್ಲಿ ಹೊಸ ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರ ಜತೆಗೆ ಹಳೆ ಪುಸ್ತಕ ವ್ಯಾಪಾರಿಗಳೂ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಅಷ್ಟೇ ಅಲ್ಲದೆ ತಮ್ಮ ಪುಸ್ತಕಗಳನ್ನು ತಾವೇ ಪ್ರಕಟಿಸುತ್ತಿದ್ದ ಲೇಖಕರೂ ಇಲ್ಲಿ ತಮ್ಮ ಪುಸ್ತಕಗಳನ್ನು ತಂದು ಮಾರುತ್ತಿದ್ದರು. ಅಪರೂಪದ ಮತ್ತು ಅಲಭ್ಯ ಗ್ರಂಥಗಳು ಇಲ್ಲಿ ಸಿಗುತ್ತಿದ್ದವು. ಇದರ ಜತೆಗೆ ಪರಿಷತ್ತಿನ ಮುಂಭಾಗದಲ್ಲಿ ಹಾಡು, ನೃತ್ಯ, ಭಾಷಣ ಇತ್ಯಾದಿ ಕಾರ್ಯಕ್ರಮಗಳೂ ನಡೆದುವು. ಅವರ ಅಧಿಕಾರಾವಧಿ ಮುಗಿಯುತ್ತಿದ್ದಂತೆ ಅದು ಯಾಕೋ ನಿಂತು ಹೋಯಿತು.

ಬಾನುಲಿ, ಮಧ್ಯಬಿಂದು, ಹೂವು ಹಣ್ಣು ತಾರೆ, ಓ ಎನ್ನ ದೇಶ ಬಾಂಧವರೇ, ಗುಂಡಮ್ಮನ ಹಾಡು ಮೊದಲಾದುವು ಅವರ ಕವನ ಸಂಗ್ರಹಗಳು. ಕೊಡೆಗಳು, ಗೋಕರ್ಣದ ಗೌಡಶಾನಿ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ಮೊದಲಾದುವು ಅವರ ಜನಪ್ರಿಯ ನಾಟಕಗಳು. ಅವರ ಕೆಲವು ನಾಟಕಗಳಲ್ಲಿ ನಾನು ಅಭಿನಯಿಸಿದ್ದೂ ಉಂಟು. ಬೇಂದ್ರೆ-ನಾನು ಕಂಡಂತೆ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ, ಚಂಪಾದಕೀಯ, ಮೊದಲಾದುವು ಅವರ ಇತರ ಕೃತಿಗಳು.

ನವ್ಯ ಸಾಹಿತ್ಯ ಸಂದರ್ಭದಲ್ಲಿ ಗೋಪಾಲಕೃಷ್ಣ ಅಡಿಗರನ್ನು ʼ ಒಂದು ಜನಾಂಗದ ಕಣ್ಣು ತೆರೆಸಿದʼ ಕವಿ ಎಂದು ಕೊಂಡಾಡಲಾಗುತ್ತಿತ್ತು. ಆದರೆ ನಾವೆಲ್ಲರೂ ಸಂಕ್ರಮಣ ಪತ್ರಿಕೆಯ ಮೂಲಕ ಅನೇಕ ಲೇಖಕರನ್ನು ಬೆಳೆಸಿದ ಚಂಪಾ ಅವರನ್ನು ʼಅಡಿಗರು ಕಣ್ಣು ಮುಚ್ಚಿಸಿದರು, ಚಂಪಾ ಕಣ್ಣು ತೆರೆಸಿದರುʼ ಎಂದು ಹೇಳಿಕೊಂಡು ಕರ್ನಾಟಕಾದ್ಯಂತ ಓಡಾಡುತ್ತಿದ್ದೆವು. ನಮ್ಮೆಲ್ಲರ ಓದಿನ ಕೇಂದ್ರವಾಗಿದ್ದ ಸಂಕ್ರಮಣವನ್ನು ಚಂದ್ರಶೇಖರ ಪಾಟೀಲರು ಗಿರಡ್ಡಿ ಗೋವಿಂದರಾಜ, ಮತ್ತು ಸಿದ್ಧಲಿಂಗ ಪಟ್ಟಣಶೆಟ್ಟಿಯವರ ಜೊತೆ ಸೇರಿ ಆರಂಭಿಸಿದರು. ಈ ಪತ್ರಿಕೆಯು ನವ್ಯದ ಉಚ್ಛ್ರಾಯ ಸ್ಥಿತಿಯಲ್ಲಿ ಪ್ರಾರಂಭವಾಗಿ, ಎಪ್ಪತ್ತರ ದಶಕದ ನಂತರ ದಲಿತ, ಬಂಡಾಯ ಸಾಹಿತ್ಯ ಚಳವಳಿಗೆ ಬೆಂಬಲ ನೀಡಿ ಹಲವಾರು ಯುವ ಬರಹಗಾರರಿಗೆ ವೇದಿಕೆಯನ್ನು ಒದಗಿಸಿತು. ಆ ಹೊತ್ತಿಗೆ ಗಿರಡ್ಡಿ, ಪಟ್ಟಣಶೆಟ್ಟರು ಸಂಕ್ರಮಣದಿಂದ ಕಳಚಿಕೊಂಡಿದ್ದರು.

ಚಂಪಾ ತಮ್ಮ ಹರಿತವಾದ ವ್ಯಂಗ್ಯಕ್ಕೆ ಹೆಸರಾದವರು.

‘ಕನ್ನಡ ಕಾವ್ಯದ ಭೂತ ಭವಿಷ್ಯವ ಬಣ್ಣಿಸಿ ಹೇಳೋ ಗಾಂಪಾ;

ನಮ್ಮ ಆದಿಕವಿ ಪಂಪಾ, ಗುರುವೇ ನಮ್ಮ ಅಂತ್ಯಕವಿ ಚಂಪಾ’

ಅಂದು ತಮ್ಮನ್ನೇ ತಾವು ವಿನೋದ ಮಾಡಿಕೊಳ್ಳುತ್ತಿದ್ದರು.

ನಿನ್ನೆ ಬಸವಲಿಂಗಯ್ಯ, ಇವತ್ತು ಚಂಪಾ, ಯಾಕೋ ಸಾವು ಹತ್ತಿರದಲ್ಲೆಲ್ಲೋ ಓಡಾಡುವಂತೆ ಭಾಸವಾಗುತ್ತಿದೆ.

ಸರ್‌, ಹೋಗಿ ಬನ್ನಿ, ನಮಸ್ಕಾರ…


ಇದನ್ನೂ ಓದಿರಿ: ಹಿರಿಯ ಸಾಹಿತಿ ಚಂಪಾ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...