Homeಕರ್ನಾಟಕನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

ನುಡಿನಮನ: ಕಳಚಿತು ಜನಪರ ಚಳವಳಿಯ ಮತ್ತೊಂದು ಕೊಂಡಿ

- Advertisement -
- Advertisement -

ನಮ್ಮ ಪ್ರೀತಿಯ ಚಂದ್ರಶೇಖರ ಪಾಟೀಲರು (ಚಂಪಾ, ಜೂನ್‌ 18, 1939– ಜನವರಿ 10, 2022) ಇಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಲ್ಲಿ ನಿಧನರಾಗಿದ್ದಾರೆ. ಅವರು 1980ರ ಬಂಡಾಯ ಚಳುವಳಿಯಲ್ಲಿ ಬರಗೂರರೊಡಗೂಡಿ ನಮಗೆಲ್ಲ ಮಾರ್ಗದರ್ಶನ ಮಾಡಿದವರು. ಚಂಪಾ ನಿಧನದೊಂದಿಗೆ ಜನಪರ ಚಳವಳಿಯ ಇನ್ನೊಂದು ಕೊಂಡಿ ಕಳಚಿತು. ನನ್ನಂಥ ಹಲವರು ಏನಾದರೂ ಚಿಕ್ಕ ಪುಟ್ಟ ಪ್ರತಿಭಟನೆಯ ಕಿಚ್ಚು ಉಳಿಸಿಕೊಂಡಿದ್ದರೆ ಅದಕ್ಕೆ ಚಂಪಾ ಮತ್ತು ಅವರು ತರುತ್ತಿದ್ದ ಸಂಕ್ರಮಣ ಪತ್ರಿಕೆ ಕಾರಣ. ಕವಿ, ನಾಟಕಕಾರ, ವಿಮರ್ಶಕ, ಭಾಷಣಕಾರ ಮತ್ತು ಕನ್ನಡ ಪರ ಹೋರಾಟಗಾರರಾಗಿ ಅವರು ಸದಾ ನಮ್ಮ ನೆನಪಲ್ಲಿ ಉಳಿಯುತ್ತಾರೆ.

ಚಂಪಾ ಹುಟ್ಟಿದ್ದು ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನಲ್ಲಿ. ಓದಿದ್ದು ಹತ್ತಿಮತ್ತೂರು-ಹಾವೇರಿಗಳಲ್ಲಿನ ಕನ್ನಡ ಶಾಲೆಗಳಲ್ಲಿ. 1956ರಲ್ಲಿ ಕರ್ನಾಟಕ ಕಾಲೇಜಿಗೆ ಸೇರಿ, 1960ರಲ್ಲಿ ಬಿ.ಎ. ಪೂರೈಸಿದರು. 1962ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಿಂದ ಇಂಗ್ಲಿಷಿನಲ್ಲಿ ಎಂ.ಎ. ಪದವಿ ಪಡೆದರು. 1996ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾದರು. 1980-83ರ ಅವಧಿಯಲ್ಲಿ ಧಾರವಾಡದ ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಗೋಕಾಕ್ ಚಳವಳಿಗೆ ಪ್ರೇರಣೆ ನೀಡಿದರು. ಗೋಕಾಕ ಚಳವಳಿಯು ಅವರನ್ನು ನಾಡಿನ ಪ್ರಮುಖ ಹೋರಾಟಗಾರರೆಂದು ಗುರುತಿಸುವಂತೆ ಮಾಡಿತು. ತುರ್ತು ಪರಿಸ್ಥಿತಿಯಲ್ಲಿ ಜೈಲು ಸೇರಿದ್ದ ಅವರು ಸಾಹಿತಿಗಳ ಮೈ ಚಳಿ ಬಿಡಿಸಿದರು.

ಮಾತೃಭಾಷಾ ಮಾಧ್ಯಮ ಚಳುವಳಿಗೆ ಚಂಪಾ ಕೊಡುಗೆ ಬಹಳ ದೊಡ್ಡದು. ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡವೇ ಬೋಧನಾ ಮಾಧ್ಯಮವಾಗಿರಬೇಕು, ಬೇಕಿದ್ದರೆ ಇಂಗ್ಲಿಷನ್ನು ಪ್ರಾಥಮಿಕ 5ನೇ ತರಗತಿಯಿಂದ ಕಲಿಸಬೇಕು, ಕೇಂದ್ರ ಪಠ್ಯಕ್ರಮದ ಮಾಧ್ಯಮಗಳ ಶಾಲೆಗಳು ಕರ್ನಾಟಕದಲ್ಲಿದ್ದರೆ ಅವು ಕನ್ನಡವನ್ನು ಕಲಿಸಬೇಕು- ಎಂಬ ವಿಷಯಗಳ ಬಗ್ಗೆ ಚಂಪಾ ಅವರು ನಿರಂತರವಾಗಿ ಹೋರಾಡಿದರು. ಕನ್ನಡ ಮಾಧ್ಯಮದಲ್ಲಿ ಶಾಲೆಯನ್ನು ನಡೆಸಲು ಅನುಮತಿ ಪಡೆದು ಆಂಗ್ಲಮಾಧ್ಯಮದಲ್ಲಿ ಶಾಲೆ ನಡೆಸುತ್ತಿದ್ದ ಸುಮಾರು 2215 ಶಾಲೆಗಳ ಮಾನ್ಯತೆಯನ್ನು ರದ್ದು ಮಾಡಿಸುವಲ್ಲಿ ಚಂಪಾ ಅವರು ಯಶಸ್ವಿಯಾಗಿದ್ದರು.

1979ರಲ್ಲಿ ಬಂಡಾಯ ಚಳವಳಿಯು ಕನ್ನಡ ಸಾಹಿತ್ಯ ಪರಿಷತ್ತಿಗೆ ಬಹಿಷ್ಕಾರ ಹಾಕಿದರೂ ಚಂಪಾ ಮುಂದೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ( ನವೆಂಬರ್ 2004ರಿಂದ 2008ರವರೆಗೆ) ಸೇವೆ ಸಲ್ಲಿಸಿದರು. ಅವರ ನೇತೃತ್ವದಲ್ಲಿ ನಡೆದ ಶಿವಮೊಗ್ಗ ಸಾಹಿತ್ಯ ಸಮ್ಮೇಳನ ಅನೇಕ ಘಟನೆಗಳಿಗೆ ಸಾಕ್ಷಿಯಾಯಿತು. ಕಸಾಪವನ್ನು ಜನರ ಹತ್ತಿರ ಕೊಂಡೊಯ್ಯಲು ಅವರು ಮಾಡಿದ ಕೆಲಸಗಳು ಹಲವು. ಅದರಲ್ಲಿ ಅವರು ಚಾಲ್ತಿಗೆ ತಂದ ಶನಿವಾರದ ಪುಸ್ತಕಸಂತೆ ಕಾರ್ಯಕ್ರಮವೂ ಒಂದು. ಪ್ರತಿ ಶನಿವಾರವೂ ಪರಿಷತ್ತಿನ ಅಂಗಳದಲ್ಲಿ ಕನ್ನಡ ಪುಸ್ತಕ ಪ್ರಕಾಶಕರನ್ನು ಮತ್ತು ಮಾರಾಟಗಾರರನ್ನು ಆಹ್ವಾನಿಸಿ ರಿಯಾಯಿತಿ ದರದಲ್ಲಿ ಓದುಗರಿಗೆ ಪುಸ್ತಕಗಳು ದೊರೆಯುವಂತೆ ವ್ಯವಸ್ಥೆ ಮಾಡಿದರು. ಈ ಪುಸ್ತಕಸಂತೆಯಲ್ಲಿ ಹೊಸ ಪುಸ್ತಕ ಪ್ರಕಾಶಕರು ಮತ್ತು ಮಾರಾಟಗಾರರ ಜತೆಗೆ ಹಳೆ ಪುಸ್ತಕ ವ್ಯಾಪಾರಿಗಳೂ ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದರು. ಅಷ್ಟೇ ಅಲ್ಲದೆ ತಮ್ಮ ಪುಸ್ತಕಗಳನ್ನು ತಾವೇ ಪ್ರಕಟಿಸುತ್ತಿದ್ದ ಲೇಖಕರೂ ಇಲ್ಲಿ ತಮ್ಮ ಪುಸ್ತಕಗಳನ್ನು ತಂದು ಮಾರುತ್ತಿದ್ದರು. ಅಪರೂಪದ ಮತ್ತು ಅಲಭ್ಯ ಗ್ರಂಥಗಳು ಇಲ್ಲಿ ಸಿಗುತ್ತಿದ್ದವು. ಇದರ ಜತೆಗೆ ಪರಿಷತ್ತಿನ ಮುಂಭಾಗದಲ್ಲಿ ಹಾಡು, ನೃತ್ಯ, ಭಾಷಣ ಇತ್ಯಾದಿ ಕಾರ್ಯಕ್ರಮಗಳೂ ನಡೆದುವು. ಅವರ ಅಧಿಕಾರಾವಧಿ ಮುಗಿಯುತ್ತಿದ್ದಂತೆ ಅದು ಯಾಕೋ ನಿಂತು ಹೋಯಿತು.

ಬಾನುಲಿ, ಮಧ್ಯಬಿಂದು, ಹೂವು ಹಣ್ಣು ತಾರೆ, ಓ ಎನ್ನ ದೇಶ ಬಾಂಧವರೇ, ಗುಂಡಮ್ಮನ ಹಾಡು ಮೊದಲಾದುವು ಅವರ ಕವನ ಸಂಗ್ರಹಗಳು. ಕೊಡೆಗಳು, ಗೋಕರ್ಣದ ಗೌಡಶಾನಿ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ಮೊದಲಾದುವು ಅವರ ಜನಪ್ರಿಯ ನಾಟಕಗಳು. ಅವರ ಕೆಲವು ನಾಟಕಗಳಲ್ಲಿ ನಾನು ಅಭಿನಯಿಸಿದ್ದೂ ಉಂಟು. ಬೇಂದ್ರೆ-ನಾನು ಕಂಡಂತೆ, ಕನ್ನಡ ಕನ್ನಡ ಬರ್ರಿ ನಮ್ಮ ಸಂಗಡ, ಚಂಪಾದಕೀಯ, ಮೊದಲಾದುವು ಅವರ ಇತರ ಕೃತಿಗಳು.

ನವ್ಯ ಸಾಹಿತ್ಯ ಸಂದರ್ಭದಲ್ಲಿ ಗೋಪಾಲಕೃಷ್ಣ ಅಡಿಗರನ್ನು ʼ ಒಂದು ಜನಾಂಗದ ಕಣ್ಣು ತೆರೆಸಿದʼ ಕವಿ ಎಂದು ಕೊಂಡಾಡಲಾಗುತ್ತಿತ್ತು. ಆದರೆ ನಾವೆಲ್ಲರೂ ಸಂಕ್ರಮಣ ಪತ್ರಿಕೆಯ ಮೂಲಕ ಅನೇಕ ಲೇಖಕರನ್ನು ಬೆಳೆಸಿದ ಚಂಪಾ ಅವರನ್ನು ʼಅಡಿಗರು ಕಣ್ಣು ಮುಚ್ಚಿಸಿದರು, ಚಂಪಾ ಕಣ್ಣು ತೆರೆಸಿದರುʼ ಎಂದು ಹೇಳಿಕೊಂಡು ಕರ್ನಾಟಕಾದ್ಯಂತ ಓಡಾಡುತ್ತಿದ್ದೆವು. ನಮ್ಮೆಲ್ಲರ ಓದಿನ ಕೇಂದ್ರವಾಗಿದ್ದ ಸಂಕ್ರಮಣವನ್ನು ಚಂದ್ರಶೇಖರ ಪಾಟೀಲರು ಗಿರಡ್ಡಿ ಗೋವಿಂದರಾಜ, ಮತ್ತು ಸಿದ್ಧಲಿಂಗ ಪಟ್ಟಣಶೆಟ್ಟಿಯವರ ಜೊತೆ ಸೇರಿ ಆರಂಭಿಸಿದರು. ಈ ಪತ್ರಿಕೆಯು ನವ್ಯದ ಉಚ್ಛ್ರಾಯ ಸ್ಥಿತಿಯಲ್ಲಿ ಪ್ರಾರಂಭವಾಗಿ, ಎಪ್ಪತ್ತರ ದಶಕದ ನಂತರ ದಲಿತ, ಬಂಡಾಯ ಸಾಹಿತ್ಯ ಚಳವಳಿಗೆ ಬೆಂಬಲ ನೀಡಿ ಹಲವಾರು ಯುವ ಬರಹಗಾರರಿಗೆ ವೇದಿಕೆಯನ್ನು ಒದಗಿಸಿತು. ಆ ಹೊತ್ತಿಗೆ ಗಿರಡ್ಡಿ, ಪಟ್ಟಣಶೆಟ್ಟರು ಸಂಕ್ರಮಣದಿಂದ ಕಳಚಿಕೊಂಡಿದ್ದರು.

ಚಂಪಾ ತಮ್ಮ ಹರಿತವಾದ ವ್ಯಂಗ್ಯಕ್ಕೆ ಹೆಸರಾದವರು.

‘ಕನ್ನಡ ಕಾವ್ಯದ ಭೂತ ಭವಿಷ್ಯವ ಬಣ್ಣಿಸಿ ಹೇಳೋ ಗಾಂಪಾ;

ನಮ್ಮ ಆದಿಕವಿ ಪಂಪಾ, ಗುರುವೇ ನಮ್ಮ ಅಂತ್ಯಕವಿ ಚಂಪಾ’

ಅಂದು ತಮ್ಮನ್ನೇ ತಾವು ವಿನೋದ ಮಾಡಿಕೊಳ್ಳುತ್ತಿದ್ದರು.

ನಿನ್ನೆ ಬಸವಲಿಂಗಯ್ಯ, ಇವತ್ತು ಚಂಪಾ, ಯಾಕೋ ಸಾವು ಹತ್ತಿರದಲ್ಲೆಲ್ಲೋ ಓಡಾಡುವಂತೆ ಭಾಸವಾಗುತ್ತಿದೆ.

ಸರ್‌, ಹೋಗಿ ಬನ್ನಿ, ನಮಸ್ಕಾರ…


ಇದನ್ನೂ ಓದಿರಿ: ಹಿರಿಯ ಸಾಹಿತಿ ಚಂಪಾ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...