Homeಮುಖಪುಟದೆಹಲಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಪೊಲೀಸ್‌ ವಶಕ್ಕೆ

ದೆಹಲಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಪೊಲೀಸ್‌ ವಶಕ್ಕೆ

- Advertisement -
- Advertisement -

ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ವೇಳೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮತ್ತು ದೆಹಲಿ ವಿಶ್ವವಿದ್ಯಾಲಯದ 80 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದೌಲತ್ ರಾಮ್ ಕಾಲೇಜಿನ ಮಾಜಿ ಸಹಾಯಕ ಪ್ರೊಫೆಸರ್ ರಿತು ಸಿಂಗ್ ಅವರನ್ನು ಬೆಂಬಲಿಸಿ ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಲಾಗಿದೆ. 2020ರಲ್ಲಿ ರೀತು ಸಿಂಗ್ ಅವರನ್ನು ದೌಲತ್ ರಾಮ್ ಕಾಲೇಜು ಸೇವೆಯಿಂದ ವಜಾಗೊಳಿಸಿತ್ತು. ಅವರು ಕಾಲೇಜು ಆಡಳಿತ ಮಂಡಳಿಯ ಜಾತಿ ಆಧಾರಿತ ತಾರತಮ್ಯ ಹಾಗೂ ಕಿರುಕುಳದ ವಿರುದ್ಧ ಪ್ರತಿಭಟಿಸುತ್ತಿದ್ದರು. ಈ ವಿಷಯವು ಇದೀಗ ನ್ಯಾಯಾಲಯದಲ್ಲಿದೆ.

ಆಜಾದ್ ತನ್ನ ಬೆಂಬಲಿಗರು ಮತ್ತು ಇತರ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಲು ಉತ್ತರ ಕ್ಯಾಂಪಸ್‌ಗೆ ಬಂದಿದ್ದರು. ಪ್ರತಿಭಟನೆ ನಡೆಸಲು ಅನುಮತಿ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಂದ್ರಶೇಖರ್‌ ಆಝಾದ್ ಸೇರಿದಂತೆ ಸುಮಾರು 80 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬುರಾರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ದೆಹಲಿ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್‌ನ ಸದಸ್ಯೆ ಮಾಯಾ ಜಾನ್ ಅವರು ಪ್ರತಿಕ್ರಿಯಿಸಿದ್ದು, ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಒಳಗೆ ಮತ್ತು ಕ್ಯಾಂಪಸ್‌ನ ಹೊರಗೆ ಪ್ರಜಾಪ್ರಭುತ್ವವು  ವೇಗವಾಗಿ ಕುಗ್ಗುತ್ತಿದೆ ಮತ್ತು ಇದು ಅತ್ಯಂತ ದುರದೃಷ್ಟಕರ. ಇಂದು ನಡೆದಿರುವುದು ನಿಜಕ್ಕೂ ಖಂಡನೀಯ ಅಧಿಕಾರಿಗಳು ಪ್ರತಿಭಟನೆಗೆ ಕಡಿವಾಣ ಹಾಕುತ್ತಿರುವ ರೀತಿ ಖಂಡನೀಯ,  ಆಡಳಿತಾತ್ಮಕ ಸರ್ವಾಧಿಕಾರತ್ವ, ದಮನ ಮತ್ತು ಹೊಣೆಗಾರಿಕೆಯ ಕೊರತೆಯನ್ನು ಸಾಮೂಹಿಕವಾಗಿ ಪ್ರತಿರೋಧಿಸಲು ಎಲ್ಲಾ ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಮಾಯಾ ಜಾನ್ ಹೇಳಿದ್ದಾರೆ.

ಚಂದ್ರಶೇಖರ್ ಆಝಾದ್

ಚಂದ್ರಶೇಖರ್ ಆಝಾದ್ ಸಾಮಾಜಿಕ ಕಾರ್ಯಕರ್ತ, ಅಂಬೇಡ್ಕರ್ ವಾದಿ, ವಕೀಲ ಮತ್ತು ರಾಜಕಾರಣಿಯಾಗಿದ್ದಾರೆ. ಅವರು ಆಝಾದ್‌ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ ಮತ್ತು ಭೀಮ್‌ ಆರ್ಮಿಯ ಸಹ-ಸಂಸ್ಥಾಪಕರಾಗಿದ್ದಾರೆ.  ಫೆಬ್ರವರಿ 2021ರಲ್ಲಿ ಟೈಮ್ ನಿಯತಕಾಲಿಕವು ಸಿದ್ದಪಡಿಸಿದ್ದ 100 ನಾಯಕರ ವಾರ್ಷಿಕ ಪಟ್ಟಿಯಲ್ಲಿ ಚಂದ್ರಶೇಖರ್ ಆಜಾದ್ ಸ್ಥಾನವನ್ನು ಪಡೆದಿದ್ದರು.

ಏನಿದು ರೀತು ಸಿಂಗ್ ಪ್ರಕರಣ?

ದೆಹಲಿ ವಿಶ್ವವಿದ್ಯಾನಿಲಯದಿಂದ ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರು. ಅವರನ್ನು ಯಾವುದೇ ಸೂಚನೆ ನೀಡದೆ ದೌಲತ್ ರಾಮ್ ಕಾಲೇಜಿನಿಂದ ವಜಾಗೊಳಿಸಲಾಗಿತ್ತು.

ನಾನು ದಲಿತ ಸಮುದಾಯಕ್ಕೆ ಸೇರಿದ ಕಾರಣ ನನ್ನನ್ನು ವಜಾಗೊಳಿಸಲಾಗಿದೆ ಎಂದು ಡಾ.ರೀತು ಸಿಂಗ್ ಹೇಳಿದ್ದರು. ದೆಹಲಿ ವಿಶ್ವವಿದ್ಯಾನಿಲಯದ ಕಲಾ ವಿಭಾಗದ ಹೊರಗೆ ಜಾತಿ ತಾರತಮ್ಯದ ವಿರುದ್ಧ ಡಾ.ರೀತು ಸಿಂಗ್ ಪ್ರತಿಭಟನೆ ನಡೆಸಿದ್ದರು. ದೌಲತ್ ರಾಮ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಸವಿತಾ ರಾಯ್ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಅವರು ಪ್ರತಿಭಟಿಸಿದ್ದರು. ಅವರು ನನ್ನ ಜಾತಿಯ ಆಧಾರದ ಮೇಲೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಆಗಸ್ಟ್ 2019ರಲ್ಲಿ ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾದ ತಾತ್ಕಾಲಿಕ ಉದ್ಯೋಗ ಕೋಟಾದಲ್ಲಿ ಅವರನ್ನು ನೇಮಿಸಲಾಗಿತ್ತು. ಆದರೆ ಒಂದು ವರ್ಷದ ನಂತರ ಅವರನ್ನು ಆ.2020ರಲ್ಲಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

ಇದನ್ನು ಓದಿ: ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...