Homeಮುಖಪುಟದೆಹಲಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಪೊಲೀಸ್‌ ವಶಕ್ಕೆ

ದೆಹಲಿ: ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಪೊಲೀಸ್‌ ವಶಕ್ಕೆ

- Advertisement -
- Advertisement -

ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ವೇಳೆ ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಝಾದ್ ಮತ್ತು ದೆಹಲಿ ವಿಶ್ವವಿದ್ಯಾಲಯದ 80 ವಿದ್ಯಾರ್ಥಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ದೌಲತ್ ರಾಮ್ ಕಾಲೇಜಿನ ಮಾಜಿ ಸಹಾಯಕ ಪ್ರೊಫೆಸರ್ ರಿತು ಸಿಂಗ್ ಅವರನ್ನು ಬೆಂಬಲಿಸಿ ದೆಹಲಿ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ ನಡೆಸಲಾಗಿದೆ. 2020ರಲ್ಲಿ ರೀತು ಸಿಂಗ್ ಅವರನ್ನು ದೌಲತ್ ರಾಮ್ ಕಾಲೇಜು ಸೇವೆಯಿಂದ ವಜಾಗೊಳಿಸಿತ್ತು. ಅವರು ಕಾಲೇಜು ಆಡಳಿತ ಮಂಡಳಿಯ ಜಾತಿ ಆಧಾರಿತ ತಾರತಮ್ಯ ಹಾಗೂ ಕಿರುಕುಳದ ವಿರುದ್ಧ ಪ್ರತಿಭಟಿಸುತ್ತಿದ್ದರು. ಈ ವಿಷಯವು ಇದೀಗ ನ್ಯಾಯಾಲಯದಲ್ಲಿದೆ.

ಆಜಾದ್ ತನ್ನ ಬೆಂಬಲಿಗರು ಮತ್ತು ಇತರ ವಿದ್ಯಾರ್ಥಿಗಳೊಂದಿಗೆ ಪ್ರತಿಭಟನೆ ನಡೆಸಲು ಉತ್ತರ ಕ್ಯಾಂಪಸ್‌ಗೆ ಬಂದಿದ್ದರು. ಪ್ರತಿಭಟನೆ ನಡೆಸಲು ಅನುಮತಿ ಇಲ್ಲದ ಕಾರಣ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಚಂದ್ರಶೇಖರ್‌ ಆಝಾದ್ ಸೇರಿದಂತೆ ಸುಮಾರು 80 ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬುರಾರಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಕುರಿತು ದೆಹಲಿ ವಿಶ್ವವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್‌ನ ಸದಸ್ಯೆ ಮಾಯಾ ಜಾನ್ ಅವರು ಪ್ರತಿಕ್ರಿಯಿಸಿದ್ದು, ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನ ಒಳಗೆ ಮತ್ತು ಕ್ಯಾಂಪಸ್‌ನ ಹೊರಗೆ ಪ್ರಜಾಪ್ರಭುತ್ವವು  ವೇಗವಾಗಿ ಕುಗ್ಗುತ್ತಿದೆ ಮತ್ತು ಇದು ಅತ್ಯಂತ ದುರದೃಷ್ಟಕರ. ಇಂದು ನಡೆದಿರುವುದು ನಿಜಕ್ಕೂ ಖಂಡನೀಯ ಅಧಿಕಾರಿಗಳು ಪ್ರತಿಭಟನೆಗೆ ಕಡಿವಾಣ ಹಾಕುತ್ತಿರುವ ರೀತಿ ಖಂಡನೀಯ,  ಆಡಳಿತಾತ್ಮಕ ಸರ್ವಾಧಿಕಾರತ್ವ, ದಮನ ಮತ್ತು ಹೊಣೆಗಾರಿಕೆಯ ಕೊರತೆಯನ್ನು ಸಾಮೂಹಿಕವಾಗಿ ಪ್ರತಿರೋಧಿಸಲು ಎಲ್ಲಾ ಪ್ರಜಾಸತ್ತಾತ್ಮಕ ಶಕ್ತಿಗಳು ಒಂದಾಗಬೇಕು ಎಂದು ಮಾಯಾ ಜಾನ್ ಹೇಳಿದ್ದಾರೆ.

ಚಂದ್ರಶೇಖರ್ ಆಝಾದ್

ಚಂದ್ರಶೇಖರ್ ಆಝಾದ್ ಸಾಮಾಜಿಕ ಕಾರ್ಯಕರ್ತ, ಅಂಬೇಡ್ಕರ್ ವಾದಿ, ವಕೀಲ ಮತ್ತು ರಾಜಕಾರಣಿಯಾಗಿದ್ದಾರೆ. ಅವರು ಆಝಾದ್‌ ಸಮಾಜ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ ಮತ್ತು ಭೀಮ್‌ ಆರ್ಮಿಯ ಸಹ-ಸಂಸ್ಥಾಪಕರಾಗಿದ್ದಾರೆ.  ಫೆಬ್ರವರಿ 2021ರಲ್ಲಿ ಟೈಮ್ ನಿಯತಕಾಲಿಕವು ಸಿದ್ದಪಡಿಸಿದ್ದ 100 ನಾಯಕರ ವಾರ್ಷಿಕ ಪಟ್ಟಿಯಲ್ಲಿ ಚಂದ್ರಶೇಖರ್ ಆಜಾದ್ ಸ್ಥಾನವನ್ನು ಪಡೆದಿದ್ದರು.

ಏನಿದು ರೀತು ಸಿಂಗ್ ಪ್ರಕರಣ?

ದೆಹಲಿ ವಿಶ್ವವಿದ್ಯಾನಿಲಯದಿಂದ ಮನೋವಿಜ್ಞಾನದಲ್ಲಿ ಡಾಕ್ಟರೇಟ್ ಪದವಿ ಪಡೆದಿರುವ ಡಾ.ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದರು. ಅವರನ್ನು ಯಾವುದೇ ಸೂಚನೆ ನೀಡದೆ ದೌಲತ್ ರಾಮ್ ಕಾಲೇಜಿನಿಂದ ವಜಾಗೊಳಿಸಲಾಗಿತ್ತು.

ನಾನು ದಲಿತ ಸಮುದಾಯಕ್ಕೆ ಸೇರಿದ ಕಾರಣ ನನ್ನನ್ನು ವಜಾಗೊಳಿಸಲಾಗಿದೆ ಎಂದು ಡಾ.ರೀತು ಸಿಂಗ್ ಹೇಳಿದ್ದರು. ದೆಹಲಿ ವಿಶ್ವವಿದ್ಯಾನಿಲಯದ ಕಲಾ ವಿಭಾಗದ ಹೊರಗೆ ಜಾತಿ ತಾರತಮ್ಯದ ವಿರುದ್ಧ ಡಾ.ರೀತು ಸಿಂಗ್ ಪ್ರತಿಭಟನೆ ನಡೆಸಿದ್ದರು. ದೌಲತ್ ರಾಮ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಸವಿತಾ ರಾಯ್ ಅವರನ್ನು ಪದಚ್ಯುತಗೊಳಿಸುವಂತೆ ಒತ್ತಾಯಿಸಿ ಅವರು ಪ್ರತಿಭಟಿಸಿದ್ದರು. ಅವರು ನನ್ನ ಜಾತಿಯ ಆಧಾರದ ಮೇಲೆ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಆಗಸ್ಟ್ 2019ರಲ್ಲಿ ರೀತು ಸಿಂಗ್ ಅವರು ದೌಲತ್ ರಾಮ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ನೇಮಕಗೊಂಡಿದ್ದರು. ಪರಿಶಿಷ್ಟ ಜಾತಿ ವರ್ಗಕ್ಕೆ ಮೀಸಲಾದ ತಾತ್ಕಾಲಿಕ ಉದ್ಯೋಗ ಕೋಟಾದಲ್ಲಿ ಅವರನ್ನು ನೇಮಿಸಲಾಗಿತ್ತು. ಆದರೆ ಒಂದು ವರ್ಷದ ನಂತರ ಅವರನ್ನು ಆ.2020ರಲ್ಲಿ ಹುದ್ದೆಯಿಂದ ವಜಾಗೊಳಿಸಲಾಗಿತ್ತು.

ಇದನ್ನು ಓದಿ: ವಿಜಯವಾಡದಲ್ಲಿ ವಿಶ್ವದ ಅತಿದೊಡ್ಡ ‘ಅಂಬೇಡ್ಕರ್’ ಪ್ರತಿಮೆ ಅನಾವರಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...