Homeಮುಖಪುಟಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

ಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

- Advertisement -
- Advertisement -

ಉತ್ತರ ಪ್ರದೇಶದ ಗೋರಖ್‌ಪುರದಿಂದ ಕಣಕ್ಕಿಳಿದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ರಾವಣ್‌ ಕಣಕ್ಕಿಳಿಯಲಿದ್ದಾರೆ.

ಚಂದ್ರಶೇಖರ್‌ ಆಜಾದ್‌ ಸ್ಪರ್ಧೆಯಿಂದಾಗಿ ಗೋರಕ್‌ಪುರ ವಿಧಾನಸಭಾ ಕ್ಷೇತ್ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಗಮನ ಸೆಳೆಯುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ದಲಿತ ನಾಯಕ ಚಂದ್ರಶೇಖರ್‌ ಅವರ ‘ಆಜಾದ್‌ ಸಮಾಜ್‌ ಪಾರ್ಟಿ’ ಈ ಕುರಿತು ಟ್ವೀಟ್‌ ಮಾಡಿದೆ.

ಉತ್ತರ ಪ್ರದೇಶದ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಹರಡಿತ್ತು. ಆದರೆ ಗೋರಖ್‌ಪುರದಿಂದ ಸ್ಪರ್ಧಿಸುವುದು ಅಂತಿಮವಾಯಿತು.

ಆದಿತ್ಯನಾಥ್ ಅವರು ಐದು ಬಾರಿ ಸಂಸದರಾಗಿ ಆಯ್ಕೆಯಾದ ಗೋರಖ್‌ಪುರದ ತವರು ನೆಲಕ್ಕೆ ಕಳುಹಿಸುವ ಮೂಲಕ ಕೇಂದ್ರದ ನಾಯಕರು ಯೋಗಿ ಆದಿತ್ಯನಾಥ್‌ ಓಟಕ್ಕೆ ಬ್ರೇಕ್‌ ಹಾಕಿದ್ದರು. ಒಂದು ವೇಳೆ ಯೋಗಿಯವರು ಆಯೋಧ್ಯೆಯಿಂದ ಸ್ಪರ್ಧಿಸಿದ್ದರೆ ಹಿಂದುತ್ವದ ಪ್ರಬಲ ನಾಯಕರಾಗಲು ಹೆಚ್ಚಿನ ಅನುಕೂಲವಾಗುತ್ತಿತ್ತು ಎಂದು ವಿಶ್ಲೇಷಣೆಗಳು ಬಂದಿವೆ.

ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ದಲಿತ ನಾಯಕರಾಗಿ ಬೆಳೆದಿರುವ ಭೀಮ್‌ ಆರ್ಮಿಯ ಆಜಾದ್‌ ಚಂದ್ರಶೇಖರ್‌ ಸ್ಪರ್ಧೆ ಗೋರಕ್‌ಪುರ ವಿಧಾನಸಭಾ ಕ್ಷೇತ್ರದತ್ತ ಎಲ್ಲರ ದೃಷ್ಟಿ ನಡೆಯುವುದಕ್ಕೆ ಕಾರಣವಾಗುವುದು ಸುಳ್ಳಲ್ಲ. ಚಂದ್ರಶೇಖರ್ ಆಜಾದ್ ಅವರೂ ಮೊದಲ ಭಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹಿಂದೆ ಸರಿದಿದ್ದರು. ಆ ಸಮಯದಲ್ಲಿ “ತನಗೆ ಯಾವುದೇ ಪಕ್ಷವಿಲ್ಲದ ಕಾರಣ ಮಾಯಾವತಿ ಅವರ ಪಕ್ಷ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡುವುದು ಉತ್ತಮ” ಎಂದು ಅವರು ಹೇಳಿಕೆ ನೀಡಿದ್ದರು.

ಉತ್ತರ ಪ್ರದೇಶ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಚಂದ್ರಶೇಖರ್ ಆಜಾದ್ ಸೂಚನೆ ನೀಡಿದ್ದರು.

“ಯುಪಿ ವಿಧಾನಸಭೆಯಲ್ಲಿ ಸ್ಥಾನ ಗೆಲ್ಲುವುದು ನನಗೆ ಮುಖ್ಯವಲ್ಲ. ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಗೆ ಬರಬಾರದು ಎಂಬುದು ನನಗೆ ಮುಖ್ಯವಾಗಿದೆ. ಹಾಗಾಗಿ ಅವರು ಎಲ್ಲಿ ಸ್ಪರ್ಧಿಸಿದರೂ ನಾನು ಸ್ಪರ್ಧಿಸುತ್ತೇನೆ” ಎಂದು ಅವರು ಕಳೆದ ವರ್ಷ ಹೇಳಿದ್ದರು.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಚಂದ್ರಶೇಖರ್ ಆಜಾದ್, “ನಾವು ಯುಪಿಯಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗುತ್ತೇವೆ. ನಾನು ಶಾಸಕ ಮತ್ತು ಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ” ಎಂದು ಹೇಳಿದ್ದರು.

ಚಂದ್ರಶೇಖರ್‌ ಅವರ ಪಕ್ಷಕ್ಕೆ ಗೋರಕ್‌ಪುರ ಅಥವಾ ಪೂರ್ವ ಉತ್ತರ ಪ್ರದೇಶದಲ್ಲಿ ಯಾವುದೇ ನೆಲೆ ಇಲ್ಲ. ಗೋರಖ್‌ಪುರ್ ಸದರ್ ಅಸೆಂಬ್ಲಿ ಸ್ಥಾನವು 1989ರಿಂದ ನಿರಂತರವಾಗಿ ಬಿಜೆಪಿ ಹಿಡಿತದಲ್ಲಿದೆ. ಒಮ್ಮೆ ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾತ್ರ ಗೆದ್ದಿತ್ತು. 2017ರಲ್ಲಿ, ಬಿಜೆಪಿಯ ರಾಧಾ ಮೋಹನ್ ದಾಸ್ ಅಗರ್ವಾಲ್ 60,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು.

ಸಮಾಜವಾದಿ ಪಕ್ಷವು ನಮಗೆ 100 ಸೀಟು ನೀಡಿದರೂ ನಾನು ಅವರೊಂದಿಗೆ ಹೋಗುವುದಿಲ್ಲ. ಚುನಾವಣೆಯ ನಂತರ ಬಿಜೆಪಿಯನ್ನು ತಡೆಯಲು ನಾವು ಇತರ ಪಕ್ಷಗಳಿಗೆ ಸಹಾಯ ಮಾಡುತ್ತೇವೆ ಎಂದಿದ್ದರು. “ನಾನು ಮಾಯಾವತಿ ಜತೆ ಕೂಡಾ ಮೈತ್ರಿಗೆ ಯತ್ನಿಸಿದ್ದೆ, ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ” ಎಂದು ಆಜಾದ್ ತಿಳಿಸಿದ್ದರು.

“ನಾನು ವೈಯಕ್ತಿಕ ಸಂತೋಷದ ಬಗ್ಗೆ ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕಳೆದುಕೊಂಡಿದ್ದೇನೆ. ಹತ್ರಾಸ್, ಪ್ರಯಾಗ್ರಾಜ್ ಮತ್ತು ಉನ್ನಾವೋದಂತಹ ಪ್ರತಿಭಟನೆಯ ಘಟನೆಗಳಿಗಾಗಿ ನಾನು ಜೈಲಿಗೆ ಹೋಗಿದ್ದೆ” ಎಂದು ಹೇಳಿಕೆ ನೀಡಿದ್ದರು.

‘‘ಪ್ರತಿಪಕ್ಷಗಳ ವಿಭಜನೆಯಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ನಷ್ಟ” ಎಂದು ಹೇಳಿರುವ ಚಂದ್ರಶೇಖರ್‌ ಆಜಾದ್, ಭೀಮ್ ಆರ್ಮಿಯ ಕಾರ್ಯಕರ್ತರು ನಮ್ಮ ಶಕ್ತಿ ಎಂದು ತಿಳಿಸಿದ್ದರು.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವಾದ ಆಜಾದ್ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜನವರಿ 15 ರಂದು ತಳ್ಳಿಹಾಕಿದ್ದರು.


ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...