Homeಮುಖಪುಟಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

ಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

- Advertisement -
- Advertisement -

ಉತ್ತರ ಪ್ರದೇಶದ ಗೋರಖ್‌ಪುರದಿಂದ ಕಣಕ್ಕಿಳಿದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ರಾವಣ್‌ ಕಣಕ್ಕಿಳಿಯಲಿದ್ದಾರೆ.

ಚಂದ್ರಶೇಖರ್‌ ಆಜಾದ್‌ ಸ್ಪರ್ಧೆಯಿಂದಾಗಿ ಗೋರಕ್‌ಪುರ ವಿಧಾನಸಭಾ ಕ್ಷೇತ್ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಗಮನ ಸೆಳೆಯುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ದಲಿತ ನಾಯಕ ಚಂದ್ರಶೇಖರ್‌ ಅವರ ‘ಆಜಾದ್‌ ಸಮಾಜ್‌ ಪಾರ್ಟಿ’ ಈ ಕುರಿತು ಟ್ವೀಟ್‌ ಮಾಡಿದೆ.

ಉತ್ತರ ಪ್ರದೇಶದ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಹರಡಿತ್ತು. ಆದರೆ ಗೋರಖ್‌ಪುರದಿಂದ ಸ್ಪರ್ಧಿಸುವುದು ಅಂತಿಮವಾಯಿತು.

ಆದಿತ್ಯನಾಥ್ ಅವರು ಐದು ಬಾರಿ ಸಂಸದರಾಗಿ ಆಯ್ಕೆಯಾದ ಗೋರಖ್‌ಪುರದ ತವರು ನೆಲಕ್ಕೆ ಕಳುಹಿಸುವ ಮೂಲಕ ಕೇಂದ್ರದ ನಾಯಕರು ಯೋಗಿ ಆದಿತ್ಯನಾಥ್‌ ಓಟಕ್ಕೆ ಬ್ರೇಕ್‌ ಹಾಕಿದ್ದರು. ಒಂದು ವೇಳೆ ಯೋಗಿಯವರು ಆಯೋಧ್ಯೆಯಿಂದ ಸ್ಪರ್ಧಿಸಿದ್ದರೆ ಹಿಂದುತ್ವದ ಪ್ರಬಲ ನಾಯಕರಾಗಲು ಹೆಚ್ಚಿನ ಅನುಕೂಲವಾಗುತ್ತಿತ್ತು ಎಂದು ವಿಶ್ಲೇಷಣೆಗಳು ಬಂದಿವೆ.

ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ದಲಿತ ನಾಯಕರಾಗಿ ಬೆಳೆದಿರುವ ಭೀಮ್‌ ಆರ್ಮಿಯ ಆಜಾದ್‌ ಚಂದ್ರಶೇಖರ್‌ ಸ್ಪರ್ಧೆ ಗೋರಕ್‌ಪುರ ವಿಧಾನಸಭಾ ಕ್ಷೇತ್ರದತ್ತ ಎಲ್ಲರ ದೃಷ್ಟಿ ನಡೆಯುವುದಕ್ಕೆ ಕಾರಣವಾಗುವುದು ಸುಳ್ಳಲ್ಲ. ಚಂದ್ರಶೇಖರ್ ಆಜಾದ್ ಅವರೂ ಮೊದಲ ಭಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹಿಂದೆ ಸರಿದಿದ್ದರು. ಆ ಸಮಯದಲ್ಲಿ “ತನಗೆ ಯಾವುದೇ ಪಕ್ಷವಿಲ್ಲದ ಕಾರಣ ಮಾಯಾವತಿ ಅವರ ಪಕ್ಷ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡುವುದು ಉತ್ತಮ” ಎಂದು ಅವರು ಹೇಳಿಕೆ ನೀಡಿದ್ದರು.

ಉತ್ತರ ಪ್ರದೇಶ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಚಂದ್ರಶೇಖರ್ ಆಜಾದ್ ಸೂಚನೆ ನೀಡಿದ್ದರು.

“ಯುಪಿ ವಿಧಾನಸಭೆಯಲ್ಲಿ ಸ್ಥಾನ ಗೆಲ್ಲುವುದು ನನಗೆ ಮುಖ್ಯವಲ್ಲ. ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಗೆ ಬರಬಾರದು ಎಂಬುದು ನನಗೆ ಮುಖ್ಯವಾಗಿದೆ. ಹಾಗಾಗಿ ಅವರು ಎಲ್ಲಿ ಸ್ಪರ್ಧಿಸಿದರೂ ನಾನು ಸ್ಪರ್ಧಿಸುತ್ತೇನೆ” ಎಂದು ಅವರು ಕಳೆದ ವರ್ಷ ಹೇಳಿದ್ದರು.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಚಂದ್ರಶೇಖರ್ ಆಜಾದ್, “ನಾವು ಯುಪಿಯಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗುತ್ತೇವೆ. ನಾನು ಶಾಸಕ ಮತ್ತು ಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ” ಎಂದು ಹೇಳಿದ್ದರು.

ಚಂದ್ರಶೇಖರ್‌ ಅವರ ಪಕ್ಷಕ್ಕೆ ಗೋರಕ್‌ಪುರ ಅಥವಾ ಪೂರ್ವ ಉತ್ತರ ಪ್ರದೇಶದಲ್ಲಿ ಯಾವುದೇ ನೆಲೆ ಇಲ್ಲ. ಗೋರಖ್‌ಪುರ್ ಸದರ್ ಅಸೆಂಬ್ಲಿ ಸ್ಥಾನವು 1989ರಿಂದ ನಿರಂತರವಾಗಿ ಬಿಜೆಪಿ ಹಿಡಿತದಲ್ಲಿದೆ. ಒಮ್ಮೆ ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾತ್ರ ಗೆದ್ದಿತ್ತು. 2017ರಲ್ಲಿ, ಬಿಜೆಪಿಯ ರಾಧಾ ಮೋಹನ್ ದಾಸ್ ಅಗರ್ವಾಲ್ 60,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು.

ಸಮಾಜವಾದಿ ಪಕ್ಷವು ನಮಗೆ 100 ಸೀಟು ನೀಡಿದರೂ ನಾನು ಅವರೊಂದಿಗೆ ಹೋಗುವುದಿಲ್ಲ. ಚುನಾವಣೆಯ ನಂತರ ಬಿಜೆಪಿಯನ್ನು ತಡೆಯಲು ನಾವು ಇತರ ಪಕ್ಷಗಳಿಗೆ ಸಹಾಯ ಮಾಡುತ್ತೇವೆ ಎಂದಿದ್ದರು. “ನಾನು ಮಾಯಾವತಿ ಜತೆ ಕೂಡಾ ಮೈತ್ರಿಗೆ ಯತ್ನಿಸಿದ್ದೆ, ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ” ಎಂದು ಆಜಾದ್ ತಿಳಿಸಿದ್ದರು.

“ನಾನು ವೈಯಕ್ತಿಕ ಸಂತೋಷದ ಬಗ್ಗೆ ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕಳೆದುಕೊಂಡಿದ್ದೇನೆ. ಹತ್ರಾಸ್, ಪ್ರಯಾಗ್ರಾಜ್ ಮತ್ತು ಉನ್ನಾವೋದಂತಹ ಪ್ರತಿಭಟನೆಯ ಘಟನೆಗಳಿಗಾಗಿ ನಾನು ಜೈಲಿಗೆ ಹೋಗಿದ್ದೆ” ಎಂದು ಹೇಳಿಕೆ ನೀಡಿದ್ದರು.

‘‘ಪ್ರತಿಪಕ್ಷಗಳ ವಿಭಜನೆಯಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ನಷ್ಟ” ಎಂದು ಹೇಳಿರುವ ಚಂದ್ರಶೇಖರ್‌ ಆಜಾದ್, ಭೀಮ್ ಆರ್ಮಿಯ ಕಾರ್ಯಕರ್ತರು ನಮ್ಮ ಶಕ್ತಿ ಎಂದು ತಿಳಿಸಿದ್ದರು.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವಾದ ಆಜಾದ್ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜನವರಿ 15 ರಂದು ತಳ್ಳಿಹಾಕಿದ್ದರು.


ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...