Homeಮುಖಪುಟಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

ಯೋಗಿ ವಿರುದ್ಧ ಗೋರಕ್‌ಪುರ ಕ್ಷೇತ್ರದಿಂದ ಭೀಮ್‌ ಆರ್ಮಿಯ ಚಂದ್ರಶೇಖರ್‌ ಆಜಾದ್‌ ಸ್ಪರ್ಧೆ

- Advertisement -
- Advertisement -

ಉತ್ತರ ಪ್ರದೇಶದ ಗೋರಖ್‌ಪುರದಿಂದ ಕಣಕ್ಕಿಳಿದಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಭೀಮ್ ಆರ್ಮಿಯ ಚಂದ್ರಶೇಖರ್ ಆಜಾದ್ ರಾವಣ್‌ ಕಣಕ್ಕಿಳಿಯಲಿದ್ದಾರೆ.

ಚಂದ್ರಶೇಖರ್‌ ಆಜಾದ್‌ ಸ್ಪರ್ಧೆಯಿಂದಾಗಿ ಗೋರಕ್‌ಪುರ ವಿಧಾನಸಭಾ ಕ್ಷೇತ್ರ ಉತ್ತರ ಪ್ರದೇಶದ ಚುನಾವಣೆಯಲ್ಲಿ ಗಮನ ಸೆಳೆಯುವ ಎಲ್ಲ ಸಾಧ್ಯತೆಗಳು ದಟ್ಟವಾಗಿವೆ. ದಲಿತ ನಾಯಕ ಚಂದ್ರಶೇಖರ್‌ ಅವರ ‘ಆಜಾದ್‌ ಸಮಾಜ್‌ ಪಾರ್ಟಿ’ ಈ ಕುರಿತು ಟ್ವೀಟ್‌ ಮಾಡಿದೆ.

ಉತ್ತರ ಪ್ರದೇಶದ ಅಯೋಧ್ಯೆ ವಿಧಾನಸಭಾ ಕ್ಷೇತ್ರದಿಂದ ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್‌ ಅವರು ಸ್ಪರ್ಧಿಸುತ್ತಾರೆಂಬ ಸುದ್ದಿ ಹರಡಿತ್ತು. ಆದರೆ ಗೋರಖ್‌ಪುರದಿಂದ ಸ್ಪರ್ಧಿಸುವುದು ಅಂತಿಮವಾಯಿತು.

ಆದಿತ್ಯನಾಥ್ ಅವರು ಐದು ಬಾರಿ ಸಂಸದರಾಗಿ ಆಯ್ಕೆಯಾದ ಗೋರಖ್‌ಪುರದ ತವರು ನೆಲಕ್ಕೆ ಕಳುಹಿಸುವ ಮೂಲಕ ಕೇಂದ್ರದ ನಾಯಕರು ಯೋಗಿ ಆದಿತ್ಯನಾಥ್‌ ಓಟಕ್ಕೆ ಬ್ರೇಕ್‌ ಹಾಕಿದ್ದರು. ಒಂದು ವೇಳೆ ಯೋಗಿಯವರು ಆಯೋಧ್ಯೆಯಿಂದ ಸ್ಪರ್ಧಿಸಿದ್ದರೆ ಹಿಂದುತ್ವದ ಪ್ರಬಲ ನಾಯಕರಾಗಲು ಹೆಚ್ಚಿನ ಅನುಕೂಲವಾಗುತ್ತಿತ್ತು ಎಂದು ವಿಶ್ಲೇಷಣೆಗಳು ಬಂದಿವೆ.

ಆದಿತ್ಯನಾಥ್ ಅವರು ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ದಲಿತ ನಾಯಕರಾಗಿ ಬೆಳೆದಿರುವ ಭೀಮ್‌ ಆರ್ಮಿಯ ಆಜಾದ್‌ ಚಂದ್ರಶೇಖರ್‌ ಸ್ಪರ್ಧೆ ಗೋರಕ್‌ಪುರ ವಿಧಾನಸಭಾ ಕ್ಷೇತ್ರದತ್ತ ಎಲ್ಲರ ದೃಷ್ಟಿ ನಡೆಯುವುದಕ್ಕೆ ಕಾರಣವಾಗುವುದು ಸುಳ್ಳಲ್ಲ. ಚಂದ್ರಶೇಖರ್ ಆಜಾದ್ ಅವರೂ ಮೊದಲ ಭಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ ಚುನಾವಣೆ: ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಾಯಿಗೆ ಕಾಂಗ್ರೆಸ್‌ನಿಂದ ಟಿಕೆಟ್

2019ರಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ ಹಿಂದೆ ಸರಿದಿದ್ದರು. ಆ ಸಮಯದಲ್ಲಿ “ತನಗೆ ಯಾವುದೇ ಪಕ್ಷವಿಲ್ಲದ ಕಾರಣ ಮಾಯಾವತಿ ಅವರ ಪಕ್ಷ ಮತ್ತು ಕಾಂಗ್ರೆಸ್‌ಗೆ ಬೆಂಬಲ ನೀಡುವುದು ಉತ್ತಮ” ಎಂದು ಅವರು ಹೇಳಿಕೆ ನೀಡಿದ್ದರು.

ಉತ್ತರ ಪ್ರದೇಶ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಹೇಳಿದ್ದಾರೆ. ಆದರೆ, ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಚಂದ್ರಶೇಖರ್ ಆಜಾದ್ ಸೂಚನೆ ನೀಡಿದ್ದರು.

“ಯುಪಿ ವಿಧಾನಸಭೆಯಲ್ಲಿ ಸ್ಥಾನ ಗೆಲ್ಲುವುದು ನನಗೆ ಮುಖ್ಯವಲ್ಲ. ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಗೆ ಬರಬಾರದು ಎಂಬುದು ನನಗೆ ಮುಖ್ಯವಾಗಿದೆ. ಹಾಗಾಗಿ ಅವರು ಎಲ್ಲಿ ಸ್ಪರ್ಧಿಸಿದರೂ ನಾನು ಸ್ಪರ್ಧಿಸುತ್ತೇನೆ” ಎಂದು ಅವರು ಕಳೆದ ವರ್ಷ ಹೇಳಿದ್ದರು.

ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿರುವ ಚಂದ್ರಶೇಖರ್ ಆಜಾದ್, “ನಾವು ಯುಪಿಯಲ್ಲಿ ಇತರ ರಾಜಕೀಯ ಪಕ್ಷಗಳಿಗೆ ಪರ್ಯಾಯವಾಗುತ್ತೇವೆ. ನಾನು ಶಾಸಕ ಮತ್ತು ಮಂತ್ರಿಯಾಗುವ ಪ್ರಸ್ತಾಪವನ್ನು ತಿರಸ್ಕರಿಸಿದ್ದೇನೆ” ಎಂದು ಹೇಳಿದ್ದರು.

ಚಂದ್ರಶೇಖರ್‌ ಅವರ ಪಕ್ಷಕ್ಕೆ ಗೋರಕ್‌ಪುರ ಅಥವಾ ಪೂರ್ವ ಉತ್ತರ ಪ್ರದೇಶದಲ್ಲಿ ಯಾವುದೇ ನೆಲೆ ಇಲ್ಲ. ಗೋರಖ್‌ಪುರ್ ಸದರ್ ಅಸೆಂಬ್ಲಿ ಸ್ಥಾನವು 1989ರಿಂದ ನಿರಂತರವಾಗಿ ಬಿಜೆಪಿ ಹಿಡಿತದಲ್ಲಿದೆ. ಒಮ್ಮೆ ಅಖಿಲ ಭಾರತೀಯ ಹಿಂದೂ ಮಹಾಸಭಾ ಮಾತ್ರ ಗೆದ್ದಿತ್ತು. 2017ರಲ್ಲಿ, ಬಿಜೆಪಿಯ ರಾಧಾ ಮೋಹನ್ ದಾಸ್ ಅಗರ್ವಾಲ್ 60,000ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದರು.

ಸಮಾಜವಾದಿ ಪಕ್ಷವು ನಮಗೆ 100 ಸೀಟು ನೀಡಿದರೂ ನಾನು ಅವರೊಂದಿಗೆ ಹೋಗುವುದಿಲ್ಲ. ಚುನಾವಣೆಯ ನಂತರ ಬಿಜೆಪಿಯನ್ನು ತಡೆಯಲು ನಾವು ಇತರ ಪಕ್ಷಗಳಿಗೆ ಸಹಾಯ ಮಾಡುತ್ತೇವೆ ಎಂದಿದ್ದರು. “ನಾನು ಮಾಯಾವತಿ ಜತೆ ಕೂಡಾ ಮೈತ್ರಿಗೆ ಯತ್ನಿಸಿದ್ದೆ, ಆದರೆ ಯಾರೂ ನನ್ನನ್ನು ಸಂಪರ್ಕಿಸಿಲ್ಲ” ಎಂದು ಆಜಾದ್ ತಿಳಿಸಿದ್ದರು.

“ನಾನು ವೈಯಕ್ತಿಕ ಸಂತೋಷದ ಬಗ್ಗೆ ಎಂದಿಗೂ ತಲೆಕೆಡಿಸಿಕೊಂಡಿಲ್ಲ. ಕಳೆದ ಐದು ವರ್ಷಗಳಲ್ಲಿ ನಾನು ಬಹಳಷ್ಟು ಕಳೆದುಕೊಂಡಿದ್ದೇನೆ. ಹತ್ರಾಸ್, ಪ್ರಯಾಗ್ರಾಜ್ ಮತ್ತು ಉನ್ನಾವೋದಂತಹ ಪ್ರತಿಭಟನೆಯ ಘಟನೆಗಳಿಗಾಗಿ ನಾನು ಜೈಲಿಗೆ ಹೋಗಿದ್ದೆ” ಎಂದು ಹೇಳಿಕೆ ನೀಡಿದ್ದರು.

‘‘ಪ್ರತಿಪಕ್ಷಗಳ ವಿಭಜನೆಯಿಂದ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಎಲ್ಲರಿಗೂ ನಷ್ಟ” ಎಂದು ಹೇಳಿರುವ ಚಂದ್ರಶೇಖರ್‌ ಆಜಾದ್, ಭೀಮ್ ಆರ್ಮಿಯ ಕಾರ್ಯಕರ್ತರು ನಮ್ಮ ಶಕ್ತಿ ಎಂದು ತಿಳಿಸಿದ್ದರು.

ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತಮ್ಮ ಪಕ್ಷವಾದ ಆಜಾದ್ ಸಮಾಜ ಪಕ್ಷ ಮತ್ತು ಸಮಾಜವಾದಿ ಪಕ್ಷ (ಎಸ್‌ಪಿ)ದ ನಡುವೆ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಯನ್ನು ಭೀಮ್ ಆರ್ಮಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಜನವರಿ 15 ರಂದು ತಳ್ಳಿಹಾಕಿದ್ದರು.


ಇದನ್ನೂ ಓದಿರಿ: ಭೂ ಹಗರಣ, ಬ್ರಾಹ್ಮಣರ ಮತಗಳು ಕೈ ತಪ್ಪುವ ಭಯ: ಅಯೋಧ್ಯೆಯ ಟಿಕೆಟ್‌ ಯೋಗಿ ಕಳೆದುಕೊಳ್ಳಲು ಕಾರಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...