Homeಕರ್ನಾಟಕಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು

- Advertisement -
- Advertisement -

“ಇಲ್ಲಿನ ಪೊಲೀಸರು ನನಗೆ ಆಕ್ಷೇಪಾರ್ಯ ಭಾಷಣ ಮಾಡಬಾರದೆಂಬ ಹೇಳಿಕೆಗೆ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ ನಾನು ಏನು ಮಾತಾಡಲು ಬಂದಿದ್ದೇನೋ ಅದನ್ನು ಮಾತಾಡುತ್ತೇನೆ. ಬಂಧನಕ್ಕೋ, ಜೈಲಿಗೋ ಹೆದರಿಕೊಂಡು ನಾನು ಸುಮ್ಮನಿರಲಾರೆ. ದಲಿತರ ಪರವಾಗಿ ಹೋರಾಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಒಂದೂವರೆ ವರ್ಷ ಜೈಲುವಾಸ ಅನುಭವಿಸಿದ್ದೀನಿ. ಇಲ್ಲಿ ತಳಸಮುದಾಯಗಳಿಗೆ ಭೂಮಿಗಾಗಿ ಹೋರಾಡಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿ ಉಳಿದರೆ ಅದು ಅಪರಾಧ. ಇಂತಹ ತಪ್ಪನ್ನು ನಾವ್ಯಾರೂ ಮಾಡಬಾರದು. ಅನ್ಯಾಯದ ವಿರುದ್ದ ನಾವು ಮಾಡುವ ಹೋರಾಟ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸವಾಗಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಒಗ್ಗಟ್ಟನ್ನು ಮುರಿಯುವ ಹಲವಾರು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಒಗ್ಗಟ್ಟು ಮುರಿಯಲು ನಾವು ಅವಕಾಶ ಕೊಡಬಾರದು. ಭೂಮಿ-ವಸತಿಯ ಹೋರಾಟವನ್ನು ದೇಶಮಟ್ಟದಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ. ಸರ್ಕಾರಕ್ಕೆ ಸಂವಿಧಾನವನ್ನು, ಈ ನೆಲದ ಕಾನೂನನ್ನು ಗೌರವಿಸೋದನ್ನು ನಾವೆಲ್ಲರೂ ಸೇರಿ ಕಲಿಸಿಕೊಡಬೇಕಿದೆ.” ಈ ಕಿಡಿನುಡಿಗಳು ಹೊರಬಂದಿದ್ದು ಭೀಮ್ ಆರ್ಮಿ ಸಂಘಟನೆಯ ಚಂದ್ರಶೇಖರ್ ಆಝಾದ್ ರಾವಣ್ ರವರಿಂದ..

ಬುಧವಾರ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ; ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ‘ನಮ್ಮ ಹೋರಾಟದ ಗಂಭೀರತೆಯನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಇವತ್ತು ಆಳುವವರು ಶ್ರೀಮಂತರಾಗಿದ್ದಾರೆ. ಬಡವರ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಹಕ್ಕುಗಳನ್ನು ಜಾರಿಗೊಳಿಸಿಕೊಳ್ಳಬಹುದು. ಸರ್ಕಾರದ ನಿರ್ಲಕ್ಷ್ಯತನವನ್ನು ಬದಲಾಯಿಸಿಕೊಳ್ಳಬೇಕು ಮತ್ತು ಬಡವರ ಹಕ್ಕಗಳಿಗೆ ಸ್ಪಂದಿಸಬೇಕು. ಈ ಕಿವುಡರ ಕಿವಿಗೆ ಕೇಳಿಸಲು ನಮ್ಮ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು. ನಗಾರಿಯ ಮೂಲಕ ಉದ್ಘಾಟನೆಯಾದ ಈ ಸಮಾವೇಶದ ದನಿ ಕಿವುಡು ಸರ್ಕಾರಕ್ಕೆ ಎಚ್ಚರಿಕೆಯ ದನಿಯಾಗಬೇಕು’ ಎಂದರು.

ಶ್ರೀಮಂತರು ಈ ದೇಶವನ್ನು ತಮ್ಮ ಹಣದ ಶಕ್ತಿಯಿಂದ ಆಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಭೂಮಿ ಕಸಿಯಲು ಸಾಧ್ಯವಿಲ್ಲ ಎಂಬುದನ್ನು ಈ ಸರ್ಕಾರಗಳಿಗೆ ತೋರಿಸಬೇಕಿದೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸಬಹುದು ಆದರೆ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ. ಅವರು ನಮ್ಮನ್ನು ಬೆದರಿಸಿ ಓಡಿಸಲು ಸಾಧ್ಯವಿಲ್ಲ. ಬಡವರ ಹಕ್ಕುಗಳ ಸಾಕಾರಕ್ಕಾಗಿ ಭೀಮ್ ಆರ್ಮಿ ಸಂಘರ್ಷಕ್ಕೆ ಮುಂದಾಗಲಿದೆ ನಿಮ್ಮೊಡನೆ ಯಾವಾಗಲೂ ಜೊತೆಗಿರುತ್ತೇನೆ ಎಂದರು. ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು “ಹಳ್ಳಿ ಬಿಟ್ಟು ನಗರಕ್ಕೆ ಜನ ವಲಸೆ ಬಂದರೆ ಗಟಾರಗಳ ಪಕ್ಕ ಕೆಟ್ಟ ವಾಸನೆಯ ಜೊತೆ ಬದುಕುವ ಪರಿಸ್ಥಿತಿ ಇದೆ. ಆ ಗಟಾರದ ಪಕ್ಕ ಇರುವ ಜಾಗವನ್ನೂ ಸಹ ಸರ್ಕಾರ ಬಡವರಿಗೆ ಬಿಟ್ಟು ಕೊಡುತ್ತಿಲ್ಲ. ಇಡೀ ದಿಡ್ಡಳ್ಳಿ ಜನ ಕೇಳಿದ್ದು ಏನು? ಕೂಲಿ ಮಾಡಲು ಸ್ವಾತಂತ್ರ್ಯ ಕೊಡಿ ಎಂದು. ಕೂಲಿಗೆ ಹೋಗಲು ನನ್ನದೇ ಒಂದು ಜಾಗ ಬೇಕು ಎಂದು ಕೇಳಿದರೆ ಅದನ್ನು ಕೊಡಲು ಆಗಲ್ಲ ಅಂದಿತು ಸರ್ಕಾರ. ಬೆಂಗಳೂರಿನ ಜಗಮಗಿಸುವ ಬೆಳಕಿನ ಕೆಳಗೆ ಗಂಭೀರವಾದ ಕತ್ತಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತೋಷದಿಂದ ಆಚರಿಸಬೇಕಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದುಃಖ ಹಾಗೂ ನೋವಿನಿಂದ ಆಚರಿಸುತ್ತಿದ್ದೇವೆ. ಈ ದೇಶದ ಶೋಷಿತರಿಗೆ, ದಲಿತರಿಗೆ, ಮಹಿಳೆಯರಿಗೆ ನೈಜ ಸ್ವಾತಂತ್ರ್ಯ ಕೈಗೆಟುಕಿಲ್ಲ. ಈ ವರ್ಗಗಳಿಗೆ ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಜೀವನ ನಡೆಸಲು ಸಾಧ್ಯವಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ. ಇದು ಕೇವಲ ಗ್ರಾಮೀಣ, ಬುಡಕಟ್ಟು ಜನಗಳ ಸಮಸ್ಯೆಯಲ್ಲ. ನಗರವಾಸಿಗಳಾದ ಶ್ರಮಿಕನಗರವಾಸಿಗಳು (ಸ್ಲಂ ನಿವಾಸಿಗಳು) ಕೂಡಾ ದಿನನಿತ್ಯ ನರಳುತ್ತಿದ್ದಾರೆ. ಅವರು ಕೇಳುತ್ತಿರುವುದು ಸಾವಿರಾರು ಎಕರೆ ಭೂಮಿಯನ್ನಲ್ಲ ಬದಲಿಗೆ ಸ್ವಾಭಿಮಾನದಿಂದ ಬದುಕು ನಡೆಸಲು ಬೇಕಾದ ‘ತುಂಡು ಭೂಮಿ ಮತ್ತು ವಸತಿ ಮಾತ್ರ’ ಎಂದರು.

ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ: ಸಭೆ ಕರೆಯಲು ನಿರ್ಧಾರ

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಡಾ.ಎ.ಲೋಕೇಶ್, ಸಂಪುಟ ರಚನೆಯಾದ 2 ದಿನಗಳಲ್ಲಿ ಭೂಮಿ ವಸತಿಯ ಹೈಪವರ್ ಸಮಿತಿಯ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಅಲ್ಲಿ ಈ ಎಲ್ಲಾ ವಿಚಾರಗಳು ಕುರಿತು ಸವಿವರವಾಗಿ ಚರ್ಚೆ ನಡೆಸಿ ಪರಿಹಾರಕ್ಕೆ ಮುಂದಾಗೋಣ ಎಂದರು.

ಹಣತೆಯ ಮೆರವಣಿಗೆ

ಆಗಸ್ಟ್ 14ರ ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ‘ಹಣತೆಯೊಂದಿಗೆ ಮೆರವಣಿಗೆ’ಯನ್ನು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷರಾದ ಕೆಜೆಎಸ್ ಮರಿಯಪ್ಪನವರು ಉದ್ಘಾಟಿಸಿದರು. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭೂಮಿ-ವಸತಿ ವಂಚಿತ ಬಡಜನರು ಮೇಣದ ಹಣತೆಯೊಂದಿಗೆ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಂತ್ರಿ ಮಾಲ್ ಬಳಿಯ ಸಿರೂರ್ ಪಾರ್ಕ್ ಮೈದಾನದಲ್ಲಿ ಸೇರಿ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಿದರು.

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಶಿ ಎಚ್.ಎಸ್.ದೊರೆಸ್ವಾಮಿಯವರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿ ಭೂಮಿ-ವಸತಿ ಹಕ್ಕು ವಂಚಿತರನ್ನು ಉದ್ದೇಶಿಸಿ ಬಡವರ ವಿಮುಕ್ತಿಯೇ ನಿಜವಾದ ಸ್ವಾತಂತ್ರ್ಯ ಅದಕ್ಕಾಗಿ ಕೊನೆಯುಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಶಪಥ ಮಾಡಿದರು.

ಸಿರೂರ್ ಪಾರ್ಕ್ ಮೈದಾನದಲ್ಲಿ ನಡುರಾತ್ರಿ ಸ್ವಾತಂತ್ರ್ಯದ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ನೆರೆದ ಹೋರಾಟಗಾರರು ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್, ಡಾ.ವಿಜಯ, ನೂರ್ ಶ್ರೀಧರ್, ಡಿ.ಎಚ್.ಪೂಜಾರ್, ಸಿದ್ದನಗೌಡ ಪಾಟೀಲ್, ಆರ್. ಮಾನಸಯ್ಯ, ಇಂದಿರಾ ಕೃಷ್ಣಪ್ಪ, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ಹೆಗ್ಗೋಡು ಪ್ರಸನ್ನ, ಸಿದ್ಧನಗೌಡ ಮೋದಿಗೆ, ವೆಂಕಟೇಶ್ ಅಗಲಗಂಚಿ, ವಿಶ್ವಶಾಂತಿ ಸೌಹಾರ್ದ ಪೀಠದ ಸಂಸ್ಥಾಪಕರಾದ ವಿಜಯಾನಂದ ಸ್ವಾಮೀಜಿಗಳು ಮುಂತಾದವರು ಉಪಸ್ಥಿತರಿದ್ದರು.

ರಾತ್ರಿಯೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಡಜನರ ಪರ ಘೋಷಣೆಗಳು ಮೊಳಗಿದವು. ಬೆಳಿಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಪೇರೇಡ್ ಮೈದಾನದ ಕಡೆಗೆ ಮೆರವಣಿಗೆ ಮಾಡಲು ಸಮಿತಿಯು ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳು ಬಂದು ಬಡಜನರ ಸಮಸ್ಯೆಯನ್ನು ಆಲಿಸಿ ಸಭೆ ನಿಗಧಿ ಮಾಡಿದ್ದರಿಂದ ಹೋರಾಟವನ್ನು 12 ಗಂಟೆಗೆ ಅಂತ್ಯಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...