Homeಕರ್ನಾಟಕಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು

- Advertisement -
- Advertisement -

“ಇಲ್ಲಿನ ಪೊಲೀಸರು ನನಗೆ ಆಕ್ಷೇಪಾರ್ಯ ಭಾಷಣ ಮಾಡಬಾರದೆಂಬ ಹೇಳಿಕೆಗೆ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ ನಾನು ಏನು ಮಾತಾಡಲು ಬಂದಿದ್ದೇನೋ ಅದನ್ನು ಮಾತಾಡುತ್ತೇನೆ. ಬಂಧನಕ್ಕೋ, ಜೈಲಿಗೋ ಹೆದರಿಕೊಂಡು ನಾನು ಸುಮ್ಮನಿರಲಾರೆ. ದಲಿತರ ಪರವಾಗಿ ಹೋರಾಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಒಂದೂವರೆ ವರ್ಷ ಜೈಲುವಾಸ ಅನುಭವಿಸಿದ್ದೀನಿ. ಇಲ್ಲಿ ತಳಸಮುದಾಯಗಳಿಗೆ ಭೂಮಿಗಾಗಿ ಹೋರಾಡಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿ ಉಳಿದರೆ ಅದು ಅಪರಾಧ. ಇಂತಹ ತಪ್ಪನ್ನು ನಾವ್ಯಾರೂ ಮಾಡಬಾರದು. ಅನ್ಯಾಯದ ವಿರುದ್ದ ನಾವು ಮಾಡುವ ಹೋರಾಟ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸವಾಗಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಒಗ್ಗಟ್ಟನ್ನು ಮುರಿಯುವ ಹಲವಾರು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಒಗ್ಗಟ್ಟು ಮುರಿಯಲು ನಾವು ಅವಕಾಶ ಕೊಡಬಾರದು. ಭೂಮಿ-ವಸತಿಯ ಹೋರಾಟವನ್ನು ದೇಶಮಟ್ಟದಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ. ಸರ್ಕಾರಕ್ಕೆ ಸಂವಿಧಾನವನ್ನು, ಈ ನೆಲದ ಕಾನೂನನ್ನು ಗೌರವಿಸೋದನ್ನು ನಾವೆಲ್ಲರೂ ಸೇರಿ ಕಲಿಸಿಕೊಡಬೇಕಿದೆ.” ಈ ಕಿಡಿನುಡಿಗಳು ಹೊರಬಂದಿದ್ದು ಭೀಮ್ ಆರ್ಮಿ ಸಂಘಟನೆಯ ಚಂದ್ರಶೇಖರ್ ಆಝಾದ್ ರಾವಣ್ ರವರಿಂದ..

ಬುಧವಾರ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ; ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ‘ನಮ್ಮ ಹೋರಾಟದ ಗಂಭೀರತೆಯನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಇವತ್ತು ಆಳುವವರು ಶ್ರೀಮಂತರಾಗಿದ್ದಾರೆ. ಬಡವರ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಹಕ್ಕುಗಳನ್ನು ಜಾರಿಗೊಳಿಸಿಕೊಳ್ಳಬಹುದು. ಸರ್ಕಾರದ ನಿರ್ಲಕ್ಷ್ಯತನವನ್ನು ಬದಲಾಯಿಸಿಕೊಳ್ಳಬೇಕು ಮತ್ತು ಬಡವರ ಹಕ್ಕಗಳಿಗೆ ಸ್ಪಂದಿಸಬೇಕು. ಈ ಕಿವುಡರ ಕಿವಿಗೆ ಕೇಳಿಸಲು ನಮ್ಮ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು. ನಗಾರಿಯ ಮೂಲಕ ಉದ್ಘಾಟನೆಯಾದ ಈ ಸಮಾವೇಶದ ದನಿ ಕಿವುಡು ಸರ್ಕಾರಕ್ಕೆ ಎಚ್ಚರಿಕೆಯ ದನಿಯಾಗಬೇಕು’ ಎಂದರು.

ಶ್ರೀಮಂತರು ಈ ದೇಶವನ್ನು ತಮ್ಮ ಹಣದ ಶಕ್ತಿಯಿಂದ ಆಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಭೂಮಿ ಕಸಿಯಲು ಸಾಧ್ಯವಿಲ್ಲ ಎಂಬುದನ್ನು ಈ ಸರ್ಕಾರಗಳಿಗೆ ತೋರಿಸಬೇಕಿದೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸಬಹುದು ಆದರೆ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ. ಅವರು ನಮ್ಮನ್ನು ಬೆದರಿಸಿ ಓಡಿಸಲು ಸಾಧ್ಯವಿಲ್ಲ. ಬಡವರ ಹಕ್ಕುಗಳ ಸಾಕಾರಕ್ಕಾಗಿ ಭೀಮ್ ಆರ್ಮಿ ಸಂಘರ್ಷಕ್ಕೆ ಮುಂದಾಗಲಿದೆ ನಿಮ್ಮೊಡನೆ ಯಾವಾಗಲೂ ಜೊತೆಗಿರುತ್ತೇನೆ ಎಂದರು. ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು “ಹಳ್ಳಿ ಬಿಟ್ಟು ನಗರಕ್ಕೆ ಜನ ವಲಸೆ ಬಂದರೆ ಗಟಾರಗಳ ಪಕ್ಕ ಕೆಟ್ಟ ವಾಸನೆಯ ಜೊತೆ ಬದುಕುವ ಪರಿಸ್ಥಿತಿ ಇದೆ. ಆ ಗಟಾರದ ಪಕ್ಕ ಇರುವ ಜಾಗವನ್ನೂ ಸಹ ಸರ್ಕಾರ ಬಡವರಿಗೆ ಬಿಟ್ಟು ಕೊಡುತ್ತಿಲ್ಲ. ಇಡೀ ದಿಡ್ಡಳ್ಳಿ ಜನ ಕೇಳಿದ್ದು ಏನು? ಕೂಲಿ ಮಾಡಲು ಸ್ವಾತಂತ್ರ್ಯ ಕೊಡಿ ಎಂದು. ಕೂಲಿಗೆ ಹೋಗಲು ನನ್ನದೇ ಒಂದು ಜಾಗ ಬೇಕು ಎಂದು ಕೇಳಿದರೆ ಅದನ್ನು ಕೊಡಲು ಆಗಲ್ಲ ಅಂದಿತು ಸರ್ಕಾರ. ಬೆಂಗಳೂರಿನ ಜಗಮಗಿಸುವ ಬೆಳಕಿನ ಕೆಳಗೆ ಗಂಭೀರವಾದ ಕತ್ತಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತೋಷದಿಂದ ಆಚರಿಸಬೇಕಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದುಃಖ ಹಾಗೂ ನೋವಿನಿಂದ ಆಚರಿಸುತ್ತಿದ್ದೇವೆ. ಈ ದೇಶದ ಶೋಷಿತರಿಗೆ, ದಲಿತರಿಗೆ, ಮಹಿಳೆಯರಿಗೆ ನೈಜ ಸ್ವಾತಂತ್ರ್ಯ ಕೈಗೆಟುಕಿಲ್ಲ. ಈ ವರ್ಗಗಳಿಗೆ ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಜೀವನ ನಡೆಸಲು ಸಾಧ್ಯವಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ. ಇದು ಕೇವಲ ಗ್ರಾಮೀಣ, ಬುಡಕಟ್ಟು ಜನಗಳ ಸಮಸ್ಯೆಯಲ್ಲ. ನಗರವಾಸಿಗಳಾದ ಶ್ರಮಿಕನಗರವಾಸಿಗಳು (ಸ್ಲಂ ನಿವಾಸಿಗಳು) ಕೂಡಾ ದಿನನಿತ್ಯ ನರಳುತ್ತಿದ್ದಾರೆ. ಅವರು ಕೇಳುತ್ತಿರುವುದು ಸಾವಿರಾರು ಎಕರೆ ಭೂಮಿಯನ್ನಲ್ಲ ಬದಲಿಗೆ ಸ್ವಾಭಿಮಾನದಿಂದ ಬದುಕು ನಡೆಸಲು ಬೇಕಾದ ‘ತುಂಡು ಭೂಮಿ ಮತ್ತು ವಸತಿ ಮಾತ್ರ’ ಎಂದರು.

ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ: ಸಭೆ ಕರೆಯಲು ನಿರ್ಧಾರ

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಡಾ.ಎ.ಲೋಕೇಶ್, ಸಂಪುಟ ರಚನೆಯಾದ 2 ದಿನಗಳಲ್ಲಿ ಭೂಮಿ ವಸತಿಯ ಹೈಪವರ್ ಸಮಿತಿಯ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಅಲ್ಲಿ ಈ ಎಲ್ಲಾ ವಿಚಾರಗಳು ಕುರಿತು ಸವಿವರವಾಗಿ ಚರ್ಚೆ ನಡೆಸಿ ಪರಿಹಾರಕ್ಕೆ ಮುಂದಾಗೋಣ ಎಂದರು.

ಹಣತೆಯ ಮೆರವಣಿಗೆ

ಆಗಸ್ಟ್ 14ರ ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ‘ಹಣತೆಯೊಂದಿಗೆ ಮೆರವಣಿಗೆ’ಯನ್ನು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷರಾದ ಕೆಜೆಎಸ್ ಮರಿಯಪ್ಪನವರು ಉದ್ಘಾಟಿಸಿದರು. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭೂಮಿ-ವಸತಿ ವಂಚಿತ ಬಡಜನರು ಮೇಣದ ಹಣತೆಯೊಂದಿಗೆ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಂತ್ರಿ ಮಾಲ್ ಬಳಿಯ ಸಿರೂರ್ ಪಾರ್ಕ್ ಮೈದಾನದಲ್ಲಿ ಸೇರಿ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಿದರು.

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಶಿ ಎಚ್.ಎಸ್.ದೊರೆಸ್ವಾಮಿಯವರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿ ಭೂಮಿ-ವಸತಿ ಹಕ್ಕು ವಂಚಿತರನ್ನು ಉದ್ದೇಶಿಸಿ ಬಡವರ ವಿಮುಕ್ತಿಯೇ ನಿಜವಾದ ಸ್ವಾತಂತ್ರ್ಯ ಅದಕ್ಕಾಗಿ ಕೊನೆಯುಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಶಪಥ ಮಾಡಿದರು.

ಸಿರೂರ್ ಪಾರ್ಕ್ ಮೈದಾನದಲ್ಲಿ ನಡುರಾತ್ರಿ ಸ್ವಾತಂತ್ರ್ಯದ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ನೆರೆದ ಹೋರಾಟಗಾರರು ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್, ಡಾ.ವಿಜಯ, ನೂರ್ ಶ್ರೀಧರ್, ಡಿ.ಎಚ್.ಪೂಜಾರ್, ಸಿದ್ದನಗೌಡ ಪಾಟೀಲ್, ಆರ್. ಮಾನಸಯ್ಯ, ಇಂದಿರಾ ಕೃಷ್ಣಪ್ಪ, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ಹೆಗ್ಗೋಡು ಪ್ರಸನ್ನ, ಸಿದ್ಧನಗೌಡ ಮೋದಿಗೆ, ವೆಂಕಟೇಶ್ ಅಗಲಗಂಚಿ, ವಿಶ್ವಶಾಂತಿ ಸೌಹಾರ್ದ ಪೀಠದ ಸಂಸ್ಥಾಪಕರಾದ ವಿಜಯಾನಂದ ಸ್ವಾಮೀಜಿಗಳು ಮುಂತಾದವರು ಉಪಸ್ಥಿತರಿದ್ದರು.

ರಾತ್ರಿಯೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಡಜನರ ಪರ ಘೋಷಣೆಗಳು ಮೊಳಗಿದವು. ಬೆಳಿಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಪೇರೇಡ್ ಮೈದಾನದ ಕಡೆಗೆ ಮೆರವಣಿಗೆ ಮಾಡಲು ಸಮಿತಿಯು ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳು ಬಂದು ಬಡಜನರ ಸಮಸ್ಯೆಯನ್ನು ಆಲಿಸಿ ಸಭೆ ನಿಗಧಿ ಮಾಡಿದ್ದರಿಂದ ಹೋರಾಟವನ್ನು 12 ಗಂಟೆಗೆ ಅಂತ್ಯಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...