Homeಕರ್ನಾಟಕಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು

- Advertisement -
- Advertisement -

“ಇಲ್ಲಿನ ಪೊಲೀಸರು ನನಗೆ ಆಕ್ಷೇಪಾರ್ಯ ಭಾಷಣ ಮಾಡಬಾರದೆಂಬ ಹೇಳಿಕೆಗೆ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ ನಾನು ಏನು ಮಾತಾಡಲು ಬಂದಿದ್ದೇನೋ ಅದನ್ನು ಮಾತಾಡುತ್ತೇನೆ. ಬಂಧನಕ್ಕೋ, ಜೈಲಿಗೋ ಹೆದರಿಕೊಂಡು ನಾನು ಸುಮ್ಮನಿರಲಾರೆ. ದಲಿತರ ಪರವಾಗಿ ಹೋರಾಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಒಂದೂವರೆ ವರ್ಷ ಜೈಲುವಾಸ ಅನುಭವಿಸಿದ್ದೀನಿ. ಇಲ್ಲಿ ತಳಸಮುದಾಯಗಳಿಗೆ ಭೂಮಿಗಾಗಿ ಹೋರಾಡಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿ ಉಳಿದರೆ ಅದು ಅಪರಾಧ. ಇಂತಹ ತಪ್ಪನ್ನು ನಾವ್ಯಾರೂ ಮಾಡಬಾರದು. ಅನ್ಯಾಯದ ವಿರುದ್ದ ನಾವು ಮಾಡುವ ಹೋರಾಟ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸವಾಗಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಒಗ್ಗಟ್ಟನ್ನು ಮುರಿಯುವ ಹಲವಾರು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಒಗ್ಗಟ್ಟು ಮುರಿಯಲು ನಾವು ಅವಕಾಶ ಕೊಡಬಾರದು. ಭೂಮಿ-ವಸತಿಯ ಹೋರಾಟವನ್ನು ದೇಶಮಟ್ಟದಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ. ಸರ್ಕಾರಕ್ಕೆ ಸಂವಿಧಾನವನ್ನು, ಈ ನೆಲದ ಕಾನೂನನ್ನು ಗೌರವಿಸೋದನ್ನು ನಾವೆಲ್ಲರೂ ಸೇರಿ ಕಲಿಸಿಕೊಡಬೇಕಿದೆ.” ಈ ಕಿಡಿನುಡಿಗಳು ಹೊರಬಂದಿದ್ದು ಭೀಮ್ ಆರ್ಮಿ ಸಂಘಟನೆಯ ಚಂದ್ರಶೇಖರ್ ಆಝಾದ್ ರಾವಣ್ ರವರಿಂದ..

ಬುಧವಾರ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ; ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ‘ನಮ್ಮ ಹೋರಾಟದ ಗಂಭೀರತೆಯನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಇವತ್ತು ಆಳುವವರು ಶ್ರೀಮಂತರಾಗಿದ್ದಾರೆ. ಬಡವರ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಹಕ್ಕುಗಳನ್ನು ಜಾರಿಗೊಳಿಸಿಕೊಳ್ಳಬಹುದು. ಸರ್ಕಾರದ ನಿರ್ಲಕ್ಷ್ಯತನವನ್ನು ಬದಲಾಯಿಸಿಕೊಳ್ಳಬೇಕು ಮತ್ತು ಬಡವರ ಹಕ್ಕಗಳಿಗೆ ಸ್ಪಂದಿಸಬೇಕು. ಈ ಕಿವುಡರ ಕಿವಿಗೆ ಕೇಳಿಸಲು ನಮ್ಮ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು. ನಗಾರಿಯ ಮೂಲಕ ಉದ್ಘಾಟನೆಯಾದ ಈ ಸಮಾವೇಶದ ದನಿ ಕಿವುಡು ಸರ್ಕಾರಕ್ಕೆ ಎಚ್ಚರಿಕೆಯ ದನಿಯಾಗಬೇಕು’ ಎಂದರು.

ಶ್ರೀಮಂತರು ಈ ದೇಶವನ್ನು ತಮ್ಮ ಹಣದ ಶಕ್ತಿಯಿಂದ ಆಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಭೂಮಿ ಕಸಿಯಲು ಸಾಧ್ಯವಿಲ್ಲ ಎಂಬುದನ್ನು ಈ ಸರ್ಕಾರಗಳಿಗೆ ತೋರಿಸಬೇಕಿದೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸಬಹುದು ಆದರೆ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ. ಅವರು ನಮ್ಮನ್ನು ಬೆದರಿಸಿ ಓಡಿಸಲು ಸಾಧ್ಯವಿಲ್ಲ. ಬಡವರ ಹಕ್ಕುಗಳ ಸಾಕಾರಕ್ಕಾಗಿ ಭೀಮ್ ಆರ್ಮಿ ಸಂಘರ್ಷಕ್ಕೆ ಮುಂದಾಗಲಿದೆ ನಿಮ್ಮೊಡನೆ ಯಾವಾಗಲೂ ಜೊತೆಗಿರುತ್ತೇನೆ ಎಂದರು. ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು “ಹಳ್ಳಿ ಬಿಟ್ಟು ನಗರಕ್ಕೆ ಜನ ವಲಸೆ ಬಂದರೆ ಗಟಾರಗಳ ಪಕ್ಕ ಕೆಟ್ಟ ವಾಸನೆಯ ಜೊತೆ ಬದುಕುವ ಪರಿಸ್ಥಿತಿ ಇದೆ. ಆ ಗಟಾರದ ಪಕ್ಕ ಇರುವ ಜಾಗವನ್ನೂ ಸಹ ಸರ್ಕಾರ ಬಡವರಿಗೆ ಬಿಟ್ಟು ಕೊಡುತ್ತಿಲ್ಲ. ಇಡೀ ದಿಡ್ಡಳ್ಳಿ ಜನ ಕೇಳಿದ್ದು ಏನು? ಕೂಲಿ ಮಾಡಲು ಸ್ವಾತಂತ್ರ್ಯ ಕೊಡಿ ಎಂದು. ಕೂಲಿಗೆ ಹೋಗಲು ನನ್ನದೇ ಒಂದು ಜಾಗ ಬೇಕು ಎಂದು ಕೇಳಿದರೆ ಅದನ್ನು ಕೊಡಲು ಆಗಲ್ಲ ಅಂದಿತು ಸರ್ಕಾರ. ಬೆಂಗಳೂರಿನ ಜಗಮಗಿಸುವ ಬೆಳಕಿನ ಕೆಳಗೆ ಗಂಭೀರವಾದ ಕತ್ತಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತೋಷದಿಂದ ಆಚರಿಸಬೇಕಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದುಃಖ ಹಾಗೂ ನೋವಿನಿಂದ ಆಚರಿಸುತ್ತಿದ್ದೇವೆ. ಈ ದೇಶದ ಶೋಷಿತರಿಗೆ, ದಲಿತರಿಗೆ, ಮಹಿಳೆಯರಿಗೆ ನೈಜ ಸ್ವಾತಂತ್ರ್ಯ ಕೈಗೆಟುಕಿಲ್ಲ. ಈ ವರ್ಗಗಳಿಗೆ ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಜೀವನ ನಡೆಸಲು ಸಾಧ್ಯವಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ. ಇದು ಕೇವಲ ಗ್ರಾಮೀಣ, ಬುಡಕಟ್ಟು ಜನಗಳ ಸಮಸ್ಯೆಯಲ್ಲ. ನಗರವಾಸಿಗಳಾದ ಶ್ರಮಿಕನಗರವಾಸಿಗಳು (ಸ್ಲಂ ನಿವಾಸಿಗಳು) ಕೂಡಾ ದಿನನಿತ್ಯ ನರಳುತ್ತಿದ್ದಾರೆ. ಅವರು ಕೇಳುತ್ತಿರುವುದು ಸಾವಿರಾರು ಎಕರೆ ಭೂಮಿಯನ್ನಲ್ಲ ಬದಲಿಗೆ ಸ್ವಾಭಿಮಾನದಿಂದ ಬದುಕು ನಡೆಸಲು ಬೇಕಾದ ‘ತುಂಡು ಭೂಮಿ ಮತ್ತು ವಸತಿ ಮಾತ್ರ’ ಎಂದರು.

ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ: ಸಭೆ ಕರೆಯಲು ನಿರ್ಧಾರ

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಡಾ.ಎ.ಲೋಕೇಶ್, ಸಂಪುಟ ರಚನೆಯಾದ 2 ದಿನಗಳಲ್ಲಿ ಭೂಮಿ ವಸತಿಯ ಹೈಪವರ್ ಸಮಿತಿಯ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಅಲ್ಲಿ ಈ ಎಲ್ಲಾ ವಿಚಾರಗಳು ಕುರಿತು ಸವಿವರವಾಗಿ ಚರ್ಚೆ ನಡೆಸಿ ಪರಿಹಾರಕ್ಕೆ ಮುಂದಾಗೋಣ ಎಂದರು.

ಹಣತೆಯ ಮೆರವಣಿಗೆ

ಆಗಸ್ಟ್ 14ರ ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ‘ಹಣತೆಯೊಂದಿಗೆ ಮೆರವಣಿಗೆ’ಯನ್ನು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷರಾದ ಕೆಜೆಎಸ್ ಮರಿಯಪ್ಪನವರು ಉದ್ಘಾಟಿಸಿದರು. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭೂಮಿ-ವಸತಿ ವಂಚಿತ ಬಡಜನರು ಮೇಣದ ಹಣತೆಯೊಂದಿಗೆ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಂತ್ರಿ ಮಾಲ್ ಬಳಿಯ ಸಿರೂರ್ ಪಾರ್ಕ್ ಮೈದಾನದಲ್ಲಿ ಸೇರಿ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಿದರು.

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಶಿ ಎಚ್.ಎಸ್.ದೊರೆಸ್ವಾಮಿಯವರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿ ಭೂಮಿ-ವಸತಿ ಹಕ್ಕು ವಂಚಿತರನ್ನು ಉದ್ದೇಶಿಸಿ ಬಡವರ ವಿಮುಕ್ತಿಯೇ ನಿಜವಾದ ಸ್ವಾತಂತ್ರ್ಯ ಅದಕ್ಕಾಗಿ ಕೊನೆಯುಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಶಪಥ ಮಾಡಿದರು.

ಸಿರೂರ್ ಪಾರ್ಕ್ ಮೈದಾನದಲ್ಲಿ ನಡುರಾತ್ರಿ ಸ್ವಾತಂತ್ರ್ಯದ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ನೆರೆದ ಹೋರಾಟಗಾರರು ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್, ಡಾ.ವಿಜಯ, ನೂರ್ ಶ್ರೀಧರ್, ಡಿ.ಎಚ್.ಪೂಜಾರ್, ಸಿದ್ದನಗೌಡ ಪಾಟೀಲ್, ಆರ್. ಮಾನಸಯ್ಯ, ಇಂದಿರಾ ಕೃಷ್ಣಪ್ಪ, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ಹೆಗ್ಗೋಡು ಪ್ರಸನ್ನ, ಸಿದ್ಧನಗೌಡ ಮೋದಿಗೆ, ವೆಂಕಟೇಶ್ ಅಗಲಗಂಚಿ, ವಿಶ್ವಶಾಂತಿ ಸೌಹಾರ್ದ ಪೀಠದ ಸಂಸ್ಥಾಪಕರಾದ ವಿಜಯಾನಂದ ಸ್ವಾಮೀಜಿಗಳು ಮುಂತಾದವರು ಉಪಸ್ಥಿತರಿದ್ದರು.

ರಾತ್ರಿಯೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಡಜನರ ಪರ ಘೋಷಣೆಗಳು ಮೊಳಗಿದವು. ಬೆಳಿಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಪೇರೇಡ್ ಮೈದಾನದ ಕಡೆಗೆ ಮೆರವಣಿಗೆ ಮಾಡಲು ಸಮಿತಿಯು ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳು ಬಂದು ಬಡಜನರ ಸಮಸ್ಯೆಯನ್ನು ಆಲಿಸಿ ಸಭೆ ನಿಗಧಿ ಮಾಡಿದ್ದರಿಂದ ಹೋರಾಟವನ್ನು 12 ಗಂಟೆಗೆ ಅಂತ್ಯಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...