Homeಕರ್ನಾಟಕಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು

- Advertisement -
- Advertisement -

“ಇಲ್ಲಿನ ಪೊಲೀಸರು ನನಗೆ ಆಕ್ಷೇಪಾರ್ಯ ಭಾಷಣ ಮಾಡಬಾರದೆಂಬ ಹೇಳಿಕೆಗೆ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ ನಾನು ಏನು ಮಾತಾಡಲು ಬಂದಿದ್ದೇನೋ ಅದನ್ನು ಮಾತಾಡುತ್ತೇನೆ. ಬಂಧನಕ್ಕೋ, ಜೈಲಿಗೋ ಹೆದರಿಕೊಂಡು ನಾನು ಸುಮ್ಮನಿರಲಾರೆ. ದಲಿತರ ಪರವಾಗಿ ಹೋರಾಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಒಂದೂವರೆ ವರ್ಷ ಜೈಲುವಾಸ ಅನುಭವಿಸಿದ್ದೀನಿ. ಇಲ್ಲಿ ತಳಸಮುದಾಯಗಳಿಗೆ ಭೂಮಿಗಾಗಿ ಹೋರಾಡಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿ ಉಳಿದರೆ ಅದು ಅಪರಾಧ. ಇಂತಹ ತಪ್ಪನ್ನು ನಾವ್ಯಾರೂ ಮಾಡಬಾರದು. ಅನ್ಯಾಯದ ವಿರುದ್ದ ನಾವು ಮಾಡುವ ಹೋರಾಟ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸವಾಗಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಒಗ್ಗಟ್ಟನ್ನು ಮುರಿಯುವ ಹಲವಾರು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಒಗ್ಗಟ್ಟು ಮುರಿಯಲು ನಾವು ಅವಕಾಶ ಕೊಡಬಾರದು. ಭೂಮಿ-ವಸತಿಯ ಹೋರಾಟವನ್ನು ದೇಶಮಟ್ಟದಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ. ಸರ್ಕಾರಕ್ಕೆ ಸಂವಿಧಾನವನ್ನು, ಈ ನೆಲದ ಕಾನೂನನ್ನು ಗೌರವಿಸೋದನ್ನು ನಾವೆಲ್ಲರೂ ಸೇರಿ ಕಲಿಸಿಕೊಡಬೇಕಿದೆ.” ಈ ಕಿಡಿನುಡಿಗಳು ಹೊರಬಂದಿದ್ದು ಭೀಮ್ ಆರ್ಮಿ ಸಂಘಟನೆಯ ಚಂದ್ರಶೇಖರ್ ಆಝಾದ್ ರಾವಣ್ ರವರಿಂದ..

ಬುಧವಾರ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ; ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ‘ನಮ್ಮ ಹೋರಾಟದ ಗಂಭೀರತೆಯನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಇವತ್ತು ಆಳುವವರು ಶ್ರೀಮಂತರಾಗಿದ್ದಾರೆ. ಬಡವರ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಹಕ್ಕುಗಳನ್ನು ಜಾರಿಗೊಳಿಸಿಕೊಳ್ಳಬಹುದು. ಸರ್ಕಾರದ ನಿರ್ಲಕ್ಷ್ಯತನವನ್ನು ಬದಲಾಯಿಸಿಕೊಳ್ಳಬೇಕು ಮತ್ತು ಬಡವರ ಹಕ್ಕಗಳಿಗೆ ಸ್ಪಂದಿಸಬೇಕು. ಈ ಕಿವುಡರ ಕಿವಿಗೆ ಕೇಳಿಸಲು ನಮ್ಮ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು. ನಗಾರಿಯ ಮೂಲಕ ಉದ್ಘಾಟನೆಯಾದ ಈ ಸಮಾವೇಶದ ದನಿ ಕಿವುಡು ಸರ್ಕಾರಕ್ಕೆ ಎಚ್ಚರಿಕೆಯ ದನಿಯಾಗಬೇಕು’ ಎಂದರು.

ಶ್ರೀಮಂತರು ಈ ದೇಶವನ್ನು ತಮ್ಮ ಹಣದ ಶಕ್ತಿಯಿಂದ ಆಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಭೂಮಿ ಕಸಿಯಲು ಸಾಧ್ಯವಿಲ್ಲ ಎಂಬುದನ್ನು ಈ ಸರ್ಕಾರಗಳಿಗೆ ತೋರಿಸಬೇಕಿದೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸಬಹುದು ಆದರೆ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ. ಅವರು ನಮ್ಮನ್ನು ಬೆದರಿಸಿ ಓಡಿಸಲು ಸಾಧ್ಯವಿಲ್ಲ. ಬಡವರ ಹಕ್ಕುಗಳ ಸಾಕಾರಕ್ಕಾಗಿ ಭೀಮ್ ಆರ್ಮಿ ಸಂಘರ್ಷಕ್ಕೆ ಮುಂದಾಗಲಿದೆ ನಿಮ್ಮೊಡನೆ ಯಾವಾಗಲೂ ಜೊತೆಗಿರುತ್ತೇನೆ ಎಂದರು. ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು “ಹಳ್ಳಿ ಬಿಟ್ಟು ನಗರಕ್ಕೆ ಜನ ವಲಸೆ ಬಂದರೆ ಗಟಾರಗಳ ಪಕ್ಕ ಕೆಟ್ಟ ವಾಸನೆಯ ಜೊತೆ ಬದುಕುವ ಪರಿಸ್ಥಿತಿ ಇದೆ. ಆ ಗಟಾರದ ಪಕ್ಕ ಇರುವ ಜಾಗವನ್ನೂ ಸಹ ಸರ್ಕಾರ ಬಡವರಿಗೆ ಬಿಟ್ಟು ಕೊಡುತ್ತಿಲ್ಲ. ಇಡೀ ದಿಡ್ಡಳ್ಳಿ ಜನ ಕೇಳಿದ್ದು ಏನು? ಕೂಲಿ ಮಾಡಲು ಸ್ವಾತಂತ್ರ್ಯ ಕೊಡಿ ಎಂದು. ಕೂಲಿಗೆ ಹೋಗಲು ನನ್ನದೇ ಒಂದು ಜಾಗ ಬೇಕು ಎಂದು ಕೇಳಿದರೆ ಅದನ್ನು ಕೊಡಲು ಆಗಲ್ಲ ಅಂದಿತು ಸರ್ಕಾರ. ಬೆಂಗಳೂರಿನ ಜಗಮಗಿಸುವ ಬೆಳಕಿನ ಕೆಳಗೆ ಗಂಭೀರವಾದ ಕತ್ತಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತೋಷದಿಂದ ಆಚರಿಸಬೇಕಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದುಃಖ ಹಾಗೂ ನೋವಿನಿಂದ ಆಚರಿಸುತ್ತಿದ್ದೇವೆ. ಈ ದೇಶದ ಶೋಷಿತರಿಗೆ, ದಲಿತರಿಗೆ, ಮಹಿಳೆಯರಿಗೆ ನೈಜ ಸ್ವಾತಂತ್ರ್ಯ ಕೈಗೆಟುಕಿಲ್ಲ. ಈ ವರ್ಗಗಳಿಗೆ ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಜೀವನ ನಡೆಸಲು ಸಾಧ್ಯವಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ. ಇದು ಕೇವಲ ಗ್ರಾಮೀಣ, ಬುಡಕಟ್ಟು ಜನಗಳ ಸಮಸ್ಯೆಯಲ್ಲ. ನಗರವಾಸಿಗಳಾದ ಶ್ರಮಿಕನಗರವಾಸಿಗಳು (ಸ್ಲಂ ನಿವಾಸಿಗಳು) ಕೂಡಾ ದಿನನಿತ್ಯ ನರಳುತ್ತಿದ್ದಾರೆ. ಅವರು ಕೇಳುತ್ತಿರುವುದು ಸಾವಿರಾರು ಎಕರೆ ಭೂಮಿಯನ್ನಲ್ಲ ಬದಲಿಗೆ ಸ್ವಾಭಿಮಾನದಿಂದ ಬದುಕು ನಡೆಸಲು ಬೇಕಾದ ‘ತುಂಡು ಭೂಮಿ ಮತ್ತು ವಸತಿ ಮಾತ್ರ’ ಎಂದರು.

ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ: ಸಭೆ ಕರೆಯಲು ನಿರ್ಧಾರ

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಡಾ.ಎ.ಲೋಕೇಶ್, ಸಂಪುಟ ರಚನೆಯಾದ 2 ದಿನಗಳಲ್ಲಿ ಭೂಮಿ ವಸತಿಯ ಹೈಪವರ್ ಸಮಿತಿಯ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಅಲ್ಲಿ ಈ ಎಲ್ಲಾ ವಿಚಾರಗಳು ಕುರಿತು ಸವಿವರವಾಗಿ ಚರ್ಚೆ ನಡೆಸಿ ಪರಿಹಾರಕ್ಕೆ ಮುಂದಾಗೋಣ ಎಂದರು.

ಹಣತೆಯ ಮೆರವಣಿಗೆ

ಆಗಸ್ಟ್ 14ರ ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ‘ಹಣತೆಯೊಂದಿಗೆ ಮೆರವಣಿಗೆ’ಯನ್ನು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷರಾದ ಕೆಜೆಎಸ್ ಮರಿಯಪ್ಪನವರು ಉದ್ಘಾಟಿಸಿದರು. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭೂಮಿ-ವಸತಿ ವಂಚಿತ ಬಡಜನರು ಮೇಣದ ಹಣತೆಯೊಂದಿಗೆ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಂತ್ರಿ ಮಾಲ್ ಬಳಿಯ ಸಿರೂರ್ ಪಾರ್ಕ್ ಮೈದಾನದಲ್ಲಿ ಸೇರಿ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಿದರು.

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಶಿ ಎಚ್.ಎಸ್.ದೊರೆಸ್ವಾಮಿಯವರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿ ಭೂಮಿ-ವಸತಿ ಹಕ್ಕು ವಂಚಿತರನ್ನು ಉದ್ದೇಶಿಸಿ ಬಡವರ ವಿಮುಕ್ತಿಯೇ ನಿಜವಾದ ಸ್ವಾತಂತ್ರ್ಯ ಅದಕ್ಕಾಗಿ ಕೊನೆಯುಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಶಪಥ ಮಾಡಿದರು.

ಸಿರೂರ್ ಪಾರ್ಕ್ ಮೈದಾನದಲ್ಲಿ ನಡುರಾತ್ರಿ ಸ್ವಾತಂತ್ರ್ಯದ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ನೆರೆದ ಹೋರಾಟಗಾರರು ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್, ಡಾ.ವಿಜಯ, ನೂರ್ ಶ್ರೀಧರ್, ಡಿ.ಎಚ್.ಪೂಜಾರ್, ಸಿದ್ದನಗೌಡ ಪಾಟೀಲ್, ಆರ್. ಮಾನಸಯ್ಯ, ಇಂದಿರಾ ಕೃಷ್ಣಪ್ಪ, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ಹೆಗ್ಗೋಡು ಪ್ರಸನ್ನ, ಸಿದ್ಧನಗೌಡ ಮೋದಿಗೆ, ವೆಂಕಟೇಶ್ ಅಗಲಗಂಚಿ, ವಿಶ್ವಶಾಂತಿ ಸೌಹಾರ್ದ ಪೀಠದ ಸಂಸ್ಥಾಪಕರಾದ ವಿಜಯಾನಂದ ಸ್ವಾಮೀಜಿಗಳು ಮುಂತಾದವರು ಉಪಸ್ಥಿತರಿದ್ದರು.

ರಾತ್ರಿಯೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಡಜನರ ಪರ ಘೋಷಣೆಗಳು ಮೊಳಗಿದವು. ಬೆಳಿಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಪೇರೇಡ್ ಮೈದಾನದ ಕಡೆಗೆ ಮೆರವಣಿಗೆ ಮಾಡಲು ಸಮಿತಿಯು ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳು ಬಂದು ಬಡಜನರ ಸಮಸ್ಯೆಯನ್ನು ಆಲಿಸಿ ಸಭೆ ನಿಗಧಿ ಮಾಡಿದ್ದರಿಂದ ಹೋರಾಟವನ್ನು 12 ಗಂಟೆಗೆ ಅಂತ್ಯಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...