Homeಕರ್ನಾಟಕಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು

- Advertisement -
- Advertisement -

“ಇಲ್ಲಿನ ಪೊಲೀಸರು ನನಗೆ ಆಕ್ಷೇಪಾರ್ಯ ಭಾಷಣ ಮಾಡಬಾರದೆಂಬ ಹೇಳಿಕೆಗೆ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ ನಾನು ಏನು ಮಾತಾಡಲು ಬಂದಿದ್ದೇನೋ ಅದನ್ನು ಮಾತಾಡುತ್ತೇನೆ. ಬಂಧನಕ್ಕೋ, ಜೈಲಿಗೋ ಹೆದರಿಕೊಂಡು ನಾನು ಸುಮ್ಮನಿರಲಾರೆ. ದಲಿತರ ಪರವಾಗಿ ಹೋರಾಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಒಂದೂವರೆ ವರ್ಷ ಜೈಲುವಾಸ ಅನುಭವಿಸಿದ್ದೀನಿ. ಇಲ್ಲಿ ತಳಸಮುದಾಯಗಳಿಗೆ ಭೂಮಿಗಾಗಿ ಹೋರಾಡಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿ ಉಳಿದರೆ ಅದು ಅಪರಾಧ. ಇಂತಹ ತಪ್ಪನ್ನು ನಾವ್ಯಾರೂ ಮಾಡಬಾರದು. ಅನ್ಯಾಯದ ವಿರುದ್ದ ನಾವು ಮಾಡುವ ಹೋರಾಟ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸವಾಗಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಒಗ್ಗಟ್ಟನ್ನು ಮುರಿಯುವ ಹಲವಾರು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಒಗ್ಗಟ್ಟು ಮುರಿಯಲು ನಾವು ಅವಕಾಶ ಕೊಡಬಾರದು. ಭೂಮಿ-ವಸತಿಯ ಹೋರಾಟವನ್ನು ದೇಶಮಟ್ಟದಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ. ಸರ್ಕಾರಕ್ಕೆ ಸಂವಿಧಾನವನ್ನು, ಈ ನೆಲದ ಕಾನೂನನ್ನು ಗೌರವಿಸೋದನ್ನು ನಾವೆಲ್ಲರೂ ಸೇರಿ ಕಲಿಸಿಕೊಡಬೇಕಿದೆ.” ಈ ಕಿಡಿನುಡಿಗಳು ಹೊರಬಂದಿದ್ದು ಭೀಮ್ ಆರ್ಮಿ ಸಂಘಟನೆಯ ಚಂದ್ರಶೇಖರ್ ಆಝಾದ್ ರಾವಣ್ ರವರಿಂದ..

ಬುಧವಾರ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ; ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ‘ನಮ್ಮ ಹೋರಾಟದ ಗಂಭೀರತೆಯನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಇವತ್ತು ಆಳುವವರು ಶ್ರೀಮಂತರಾಗಿದ್ದಾರೆ. ಬಡವರ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಹಕ್ಕುಗಳನ್ನು ಜಾರಿಗೊಳಿಸಿಕೊಳ್ಳಬಹುದು. ಸರ್ಕಾರದ ನಿರ್ಲಕ್ಷ್ಯತನವನ್ನು ಬದಲಾಯಿಸಿಕೊಳ್ಳಬೇಕು ಮತ್ತು ಬಡವರ ಹಕ್ಕಗಳಿಗೆ ಸ್ಪಂದಿಸಬೇಕು. ಈ ಕಿವುಡರ ಕಿವಿಗೆ ಕೇಳಿಸಲು ನಮ್ಮ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು. ನಗಾರಿಯ ಮೂಲಕ ಉದ್ಘಾಟನೆಯಾದ ಈ ಸಮಾವೇಶದ ದನಿ ಕಿವುಡು ಸರ್ಕಾರಕ್ಕೆ ಎಚ್ಚರಿಕೆಯ ದನಿಯಾಗಬೇಕು’ ಎಂದರು.

ಶ್ರೀಮಂತರು ಈ ದೇಶವನ್ನು ತಮ್ಮ ಹಣದ ಶಕ್ತಿಯಿಂದ ಆಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಭೂಮಿ ಕಸಿಯಲು ಸಾಧ್ಯವಿಲ್ಲ ಎಂಬುದನ್ನು ಈ ಸರ್ಕಾರಗಳಿಗೆ ತೋರಿಸಬೇಕಿದೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸಬಹುದು ಆದರೆ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ. ಅವರು ನಮ್ಮನ್ನು ಬೆದರಿಸಿ ಓಡಿಸಲು ಸಾಧ್ಯವಿಲ್ಲ. ಬಡವರ ಹಕ್ಕುಗಳ ಸಾಕಾರಕ್ಕಾಗಿ ಭೀಮ್ ಆರ್ಮಿ ಸಂಘರ್ಷಕ್ಕೆ ಮುಂದಾಗಲಿದೆ ನಿಮ್ಮೊಡನೆ ಯಾವಾಗಲೂ ಜೊತೆಗಿರುತ್ತೇನೆ ಎಂದರು. ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು “ಹಳ್ಳಿ ಬಿಟ್ಟು ನಗರಕ್ಕೆ ಜನ ವಲಸೆ ಬಂದರೆ ಗಟಾರಗಳ ಪಕ್ಕ ಕೆಟ್ಟ ವಾಸನೆಯ ಜೊತೆ ಬದುಕುವ ಪರಿಸ್ಥಿತಿ ಇದೆ. ಆ ಗಟಾರದ ಪಕ್ಕ ಇರುವ ಜಾಗವನ್ನೂ ಸಹ ಸರ್ಕಾರ ಬಡವರಿಗೆ ಬಿಟ್ಟು ಕೊಡುತ್ತಿಲ್ಲ. ಇಡೀ ದಿಡ್ಡಳ್ಳಿ ಜನ ಕೇಳಿದ್ದು ಏನು? ಕೂಲಿ ಮಾಡಲು ಸ್ವಾತಂತ್ರ್ಯ ಕೊಡಿ ಎಂದು. ಕೂಲಿಗೆ ಹೋಗಲು ನನ್ನದೇ ಒಂದು ಜಾಗ ಬೇಕು ಎಂದು ಕೇಳಿದರೆ ಅದನ್ನು ಕೊಡಲು ಆಗಲ್ಲ ಅಂದಿತು ಸರ್ಕಾರ. ಬೆಂಗಳೂರಿನ ಜಗಮಗಿಸುವ ಬೆಳಕಿನ ಕೆಳಗೆ ಗಂಭೀರವಾದ ಕತ್ತಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತೋಷದಿಂದ ಆಚರಿಸಬೇಕಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದುಃಖ ಹಾಗೂ ನೋವಿನಿಂದ ಆಚರಿಸುತ್ತಿದ್ದೇವೆ. ಈ ದೇಶದ ಶೋಷಿತರಿಗೆ, ದಲಿತರಿಗೆ, ಮಹಿಳೆಯರಿಗೆ ನೈಜ ಸ್ವಾತಂತ್ರ್ಯ ಕೈಗೆಟುಕಿಲ್ಲ. ಈ ವರ್ಗಗಳಿಗೆ ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಜೀವನ ನಡೆಸಲು ಸಾಧ್ಯವಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ. ಇದು ಕೇವಲ ಗ್ರಾಮೀಣ, ಬುಡಕಟ್ಟು ಜನಗಳ ಸಮಸ್ಯೆಯಲ್ಲ. ನಗರವಾಸಿಗಳಾದ ಶ್ರಮಿಕನಗರವಾಸಿಗಳು (ಸ್ಲಂ ನಿವಾಸಿಗಳು) ಕೂಡಾ ದಿನನಿತ್ಯ ನರಳುತ್ತಿದ್ದಾರೆ. ಅವರು ಕೇಳುತ್ತಿರುವುದು ಸಾವಿರಾರು ಎಕರೆ ಭೂಮಿಯನ್ನಲ್ಲ ಬದಲಿಗೆ ಸ್ವಾಭಿಮಾನದಿಂದ ಬದುಕು ನಡೆಸಲು ಬೇಕಾದ ‘ತುಂಡು ಭೂಮಿ ಮತ್ತು ವಸತಿ ಮಾತ್ರ’ ಎಂದರು.

ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ: ಸಭೆ ಕರೆಯಲು ನಿರ್ಧಾರ

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಡಾ.ಎ.ಲೋಕೇಶ್, ಸಂಪುಟ ರಚನೆಯಾದ 2 ದಿನಗಳಲ್ಲಿ ಭೂಮಿ ವಸತಿಯ ಹೈಪವರ್ ಸಮಿತಿಯ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಅಲ್ಲಿ ಈ ಎಲ್ಲಾ ವಿಚಾರಗಳು ಕುರಿತು ಸವಿವರವಾಗಿ ಚರ್ಚೆ ನಡೆಸಿ ಪರಿಹಾರಕ್ಕೆ ಮುಂದಾಗೋಣ ಎಂದರು.

ಹಣತೆಯ ಮೆರವಣಿಗೆ

ಆಗಸ್ಟ್ 14ರ ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ‘ಹಣತೆಯೊಂದಿಗೆ ಮೆರವಣಿಗೆ’ಯನ್ನು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷರಾದ ಕೆಜೆಎಸ್ ಮರಿಯಪ್ಪನವರು ಉದ್ಘಾಟಿಸಿದರು. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭೂಮಿ-ವಸತಿ ವಂಚಿತ ಬಡಜನರು ಮೇಣದ ಹಣತೆಯೊಂದಿಗೆ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಂತ್ರಿ ಮಾಲ್ ಬಳಿಯ ಸಿರೂರ್ ಪಾರ್ಕ್ ಮೈದಾನದಲ್ಲಿ ಸೇರಿ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಿದರು.

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಶಿ ಎಚ್.ಎಸ್.ದೊರೆಸ್ವಾಮಿಯವರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿ ಭೂಮಿ-ವಸತಿ ಹಕ್ಕು ವಂಚಿತರನ್ನು ಉದ್ದೇಶಿಸಿ ಬಡವರ ವಿಮುಕ್ತಿಯೇ ನಿಜವಾದ ಸ್ವಾತಂತ್ರ್ಯ ಅದಕ್ಕಾಗಿ ಕೊನೆಯುಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಶಪಥ ಮಾಡಿದರು.

ಸಿರೂರ್ ಪಾರ್ಕ್ ಮೈದಾನದಲ್ಲಿ ನಡುರಾತ್ರಿ ಸ್ವಾತಂತ್ರ್ಯದ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ನೆರೆದ ಹೋರಾಟಗಾರರು ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್, ಡಾ.ವಿಜಯ, ನೂರ್ ಶ್ರೀಧರ್, ಡಿ.ಎಚ್.ಪೂಜಾರ್, ಸಿದ್ದನಗೌಡ ಪಾಟೀಲ್, ಆರ್. ಮಾನಸಯ್ಯ, ಇಂದಿರಾ ಕೃಷ್ಣಪ್ಪ, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ಹೆಗ್ಗೋಡು ಪ್ರಸನ್ನ, ಸಿದ್ಧನಗೌಡ ಮೋದಿಗೆ, ವೆಂಕಟೇಶ್ ಅಗಲಗಂಚಿ, ವಿಶ್ವಶಾಂತಿ ಸೌಹಾರ್ದ ಪೀಠದ ಸಂಸ್ಥಾಪಕರಾದ ವಿಜಯಾನಂದ ಸ್ವಾಮೀಜಿಗಳು ಮುಂತಾದವರು ಉಪಸ್ಥಿತರಿದ್ದರು.

ರಾತ್ರಿಯೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಡಜನರ ಪರ ಘೋಷಣೆಗಳು ಮೊಳಗಿದವು. ಬೆಳಿಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಪೇರೇಡ್ ಮೈದಾನದ ಕಡೆಗೆ ಮೆರವಣಿಗೆ ಮಾಡಲು ಸಮಿತಿಯು ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳು ಬಂದು ಬಡಜನರ ಸಮಸ್ಯೆಯನ್ನು ಆಲಿಸಿ ಸಭೆ ನಿಗಧಿ ಮಾಡಿದ್ದರಿಂದ ಹೋರಾಟವನ್ನು 12 ಗಂಟೆಗೆ ಅಂತ್ಯಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....