Homeಕರ್ನಾಟಕಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು

- Advertisement -
- Advertisement -

“ಇಲ್ಲಿನ ಪೊಲೀಸರು ನನಗೆ ಆಕ್ಷೇಪಾರ್ಯ ಭಾಷಣ ಮಾಡಬಾರದೆಂಬ ಹೇಳಿಕೆಗೆ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ ನಾನು ಏನು ಮಾತಾಡಲು ಬಂದಿದ್ದೇನೋ ಅದನ್ನು ಮಾತಾಡುತ್ತೇನೆ. ಬಂಧನಕ್ಕೋ, ಜೈಲಿಗೋ ಹೆದರಿಕೊಂಡು ನಾನು ಸುಮ್ಮನಿರಲಾರೆ. ದಲಿತರ ಪರವಾಗಿ ಹೋರಾಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಒಂದೂವರೆ ವರ್ಷ ಜೈಲುವಾಸ ಅನುಭವಿಸಿದ್ದೀನಿ. ಇಲ್ಲಿ ತಳಸಮುದಾಯಗಳಿಗೆ ಭೂಮಿಗಾಗಿ ಹೋರಾಡಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿ ಉಳಿದರೆ ಅದು ಅಪರಾಧ. ಇಂತಹ ತಪ್ಪನ್ನು ನಾವ್ಯಾರೂ ಮಾಡಬಾರದು. ಅನ್ಯಾಯದ ವಿರುದ್ದ ನಾವು ಮಾಡುವ ಹೋರಾಟ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸವಾಗಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಒಗ್ಗಟ್ಟನ್ನು ಮುರಿಯುವ ಹಲವಾರು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಒಗ್ಗಟ್ಟು ಮುರಿಯಲು ನಾವು ಅವಕಾಶ ಕೊಡಬಾರದು. ಭೂಮಿ-ವಸತಿಯ ಹೋರಾಟವನ್ನು ದೇಶಮಟ್ಟದಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ. ಸರ್ಕಾರಕ್ಕೆ ಸಂವಿಧಾನವನ್ನು, ಈ ನೆಲದ ಕಾನೂನನ್ನು ಗೌರವಿಸೋದನ್ನು ನಾವೆಲ್ಲರೂ ಸೇರಿ ಕಲಿಸಿಕೊಡಬೇಕಿದೆ.” ಈ ಕಿಡಿನುಡಿಗಳು ಹೊರಬಂದಿದ್ದು ಭೀಮ್ ಆರ್ಮಿ ಸಂಘಟನೆಯ ಚಂದ್ರಶೇಖರ್ ಆಝಾದ್ ರಾವಣ್ ರವರಿಂದ..

ಬುಧವಾರ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ; ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ‘ನಮ್ಮ ಹೋರಾಟದ ಗಂಭೀರತೆಯನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಇವತ್ತು ಆಳುವವರು ಶ್ರೀಮಂತರಾಗಿದ್ದಾರೆ. ಬಡವರ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಹಕ್ಕುಗಳನ್ನು ಜಾರಿಗೊಳಿಸಿಕೊಳ್ಳಬಹುದು. ಸರ್ಕಾರದ ನಿರ್ಲಕ್ಷ್ಯತನವನ್ನು ಬದಲಾಯಿಸಿಕೊಳ್ಳಬೇಕು ಮತ್ತು ಬಡವರ ಹಕ್ಕಗಳಿಗೆ ಸ್ಪಂದಿಸಬೇಕು. ಈ ಕಿವುಡರ ಕಿವಿಗೆ ಕೇಳಿಸಲು ನಮ್ಮ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು. ನಗಾರಿಯ ಮೂಲಕ ಉದ್ಘಾಟನೆಯಾದ ಈ ಸಮಾವೇಶದ ದನಿ ಕಿವುಡು ಸರ್ಕಾರಕ್ಕೆ ಎಚ್ಚರಿಕೆಯ ದನಿಯಾಗಬೇಕು’ ಎಂದರು.

ಶ್ರೀಮಂತರು ಈ ದೇಶವನ್ನು ತಮ್ಮ ಹಣದ ಶಕ್ತಿಯಿಂದ ಆಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಭೂಮಿ ಕಸಿಯಲು ಸಾಧ್ಯವಿಲ್ಲ ಎಂಬುದನ್ನು ಈ ಸರ್ಕಾರಗಳಿಗೆ ತೋರಿಸಬೇಕಿದೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸಬಹುದು ಆದರೆ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ. ಅವರು ನಮ್ಮನ್ನು ಬೆದರಿಸಿ ಓಡಿಸಲು ಸಾಧ್ಯವಿಲ್ಲ. ಬಡವರ ಹಕ್ಕುಗಳ ಸಾಕಾರಕ್ಕಾಗಿ ಭೀಮ್ ಆರ್ಮಿ ಸಂಘರ್ಷಕ್ಕೆ ಮುಂದಾಗಲಿದೆ ನಿಮ್ಮೊಡನೆ ಯಾವಾಗಲೂ ಜೊತೆಗಿರುತ್ತೇನೆ ಎಂದರು. ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು “ಹಳ್ಳಿ ಬಿಟ್ಟು ನಗರಕ್ಕೆ ಜನ ವಲಸೆ ಬಂದರೆ ಗಟಾರಗಳ ಪಕ್ಕ ಕೆಟ್ಟ ವಾಸನೆಯ ಜೊತೆ ಬದುಕುವ ಪರಿಸ್ಥಿತಿ ಇದೆ. ಆ ಗಟಾರದ ಪಕ್ಕ ಇರುವ ಜಾಗವನ್ನೂ ಸಹ ಸರ್ಕಾರ ಬಡವರಿಗೆ ಬಿಟ್ಟು ಕೊಡುತ್ತಿಲ್ಲ. ಇಡೀ ದಿಡ್ಡಳ್ಳಿ ಜನ ಕೇಳಿದ್ದು ಏನು? ಕೂಲಿ ಮಾಡಲು ಸ್ವಾತಂತ್ರ್ಯ ಕೊಡಿ ಎಂದು. ಕೂಲಿಗೆ ಹೋಗಲು ನನ್ನದೇ ಒಂದು ಜಾಗ ಬೇಕು ಎಂದು ಕೇಳಿದರೆ ಅದನ್ನು ಕೊಡಲು ಆಗಲ್ಲ ಅಂದಿತು ಸರ್ಕಾರ. ಬೆಂಗಳೂರಿನ ಜಗಮಗಿಸುವ ಬೆಳಕಿನ ಕೆಳಗೆ ಗಂಭೀರವಾದ ಕತ್ತಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತೋಷದಿಂದ ಆಚರಿಸಬೇಕಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದುಃಖ ಹಾಗೂ ನೋವಿನಿಂದ ಆಚರಿಸುತ್ತಿದ್ದೇವೆ. ಈ ದೇಶದ ಶೋಷಿತರಿಗೆ, ದಲಿತರಿಗೆ, ಮಹಿಳೆಯರಿಗೆ ನೈಜ ಸ್ವಾತಂತ್ರ್ಯ ಕೈಗೆಟುಕಿಲ್ಲ. ಈ ವರ್ಗಗಳಿಗೆ ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಜೀವನ ನಡೆಸಲು ಸಾಧ್ಯವಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ. ಇದು ಕೇವಲ ಗ್ರಾಮೀಣ, ಬುಡಕಟ್ಟು ಜನಗಳ ಸಮಸ್ಯೆಯಲ್ಲ. ನಗರವಾಸಿಗಳಾದ ಶ್ರಮಿಕನಗರವಾಸಿಗಳು (ಸ್ಲಂ ನಿವಾಸಿಗಳು) ಕೂಡಾ ದಿನನಿತ್ಯ ನರಳುತ್ತಿದ್ದಾರೆ. ಅವರು ಕೇಳುತ್ತಿರುವುದು ಸಾವಿರಾರು ಎಕರೆ ಭೂಮಿಯನ್ನಲ್ಲ ಬದಲಿಗೆ ಸ್ವಾಭಿಮಾನದಿಂದ ಬದುಕು ನಡೆಸಲು ಬೇಕಾದ ‘ತುಂಡು ಭೂಮಿ ಮತ್ತು ವಸತಿ ಮಾತ್ರ’ ಎಂದರು.

ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ: ಸಭೆ ಕರೆಯಲು ನಿರ್ಧಾರ

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಡಾ.ಎ.ಲೋಕೇಶ್, ಸಂಪುಟ ರಚನೆಯಾದ 2 ದಿನಗಳಲ್ಲಿ ಭೂಮಿ ವಸತಿಯ ಹೈಪವರ್ ಸಮಿತಿಯ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಅಲ್ಲಿ ಈ ಎಲ್ಲಾ ವಿಚಾರಗಳು ಕುರಿತು ಸವಿವರವಾಗಿ ಚರ್ಚೆ ನಡೆಸಿ ಪರಿಹಾರಕ್ಕೆ ಮುಂದಾಗೋಣ ಎಂದರು.

ಹಣತೆಯ ಮೆರವಣಿಗೆ

ಆಗಸ್ಟ್ 14ರ ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ‘ಹಣತೆಯೊಂದಿಗೆ ಮೆರವಣಿಗೆ’ಯನ್ನು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷರಾದ ಕೆಜೆಎಸ್ ಮರಿಯಪ್ಪನವರು ಉದ್ಘಾಟಿಸಿದರು. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭೂಮಿ-ವಸತಿ ವಂಚಿತ ಬಡಜನರು ಮೇಣದ ಹಣತೆಯೊಂದಿಗೆ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಂತ್ರಿ ಮಾಲ್ ಬಳಿಯ ಸಿರೂರ್ ಪಾರ್ಕ್ ಮೈದಾನದಲ್ಲಿ ಸೇರಿ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಿದರು.

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಶಿ ಎಚ್.ಎಸ್.ದೊರೆಸ್ವಾಮಿಯವರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿ ಭೂಮಿ-ವಸತಿ ಹಕ್ಕು ವಂಚಿತರನ್ನು ಉದ್ದೇಶಿಸಿ ಬಡವರ ವಿಮುಕ್ತಿಯೇ ನಿಜವಾದ ಸ್ವಾತಂತ್ರ್ಯ ಅದಕ್ಕಾಗಿ ಕೊನೆಯುಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಶಪಥ ಮಾಡಿದರು.

ಸಿರೂರ್ ಪಾರ್ಕ್ ಮೈದಾನದಲ್ಲಿ ನಡುರಾತ್ರಿ ಸ್ವಾತಂತ್ರ್ಯದ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ನೆರೆದ ಹೋರಾಟಗಾರರು ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್, ಡಾ.ವಿಜಯ, ನೂರ್ ಶ್ರೀಧರ್, ಡಿ.ಎಚ್.ಪೂಜಾರ್, ಸಿದ್ದನಗೌಡ ಪಾಟೀಲ್, ಆರ್. ಮಾನಸಯ್ಯ, ಇಂದಿರಾ ಕೃಷ್ಣಪ್ಪ, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ಹೆಗ್ಗೋಡು ಪ್ರಸನ್ನ, ಸಿದ್ಧನಗೌಡ ಮೋದಿಗೆ, ವೆಂಕಟೇಶ್ ಅಗಲಗಂಚಿ, ವಿಶ್ವಶಾಂತಿ ಸೌಹಾರ್ದ ಪೀಠದ ಸಂಸ್ಥಾಪಕರಾದ ವಿಜಯಾನಂದ ಸ್ವಾಮೀಜಿಗಳು ಮುಂತಾದವರು ಉಪಸ್ಥಿತರಿದ್ದರು.

ರಾತ್ರಿಯೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಡಜನರ ಪರ ಘೋಷಣೆಗಳು ಮೊಳಗಿದವು. ಬೆಳಿಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಪೇರೇಡ್ ಮೈದಾನದ ಕಡೆಗೆ ಮೆರವಣಿಗೆ ಮಾಡಲು ಸಮಿತಿಯು ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳು ಬಂದು ಬಡಜನರ ಸಮಸ್ಯೆಯನ್ನು ಆಲಿಸಿ ಸಭೆ ನಿಗಧಿ ಮಾಡಿದ್ದರಿಂದ ಹೋರಾಟವನ್ನು 12 ಗಂಟೆಗೆ ಅಂತ್ಯಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...