Homeಕರ್ನಾಟಕಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿದ್ದರೆ ಅದು ಅಪರಾಧ: ಚಂದ್ರಶೇಖರ್ ಆಝಾದ್ ರಾವಣ್

ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು

- Advertisement -
- Advertisement -

“ಇಲ್ಲಿನ ಪೊಲೀಸರು ನನಗೆ ಆಕ್ಷೇಪಾರ್ಯ ಭಾಷಣ ಮಾಡಬಾರದೆಂಬ ಹೇಳಿಕೆಗೆ ಸಹಿ ಹಾಕಿಸಿಕೊಂಡಿದ್ದಾರೆ. ಆದರೆ ನಾನು ಏನು ಮಾತಾಡಲು ಬಂದಿದ್ದೇನೋ ಅದನ್ನು ಮಾತಾಡುತ್ತೇನೆ. ಬಂಧನಕ್ಕೋ, ಜೈಲಿಗೋ ಹೆದರಿಕೊಂಡು ನಾನು ಸುಮ್ಮನಿರಲಾರೆ. ದಲಿತರ ಪರವಾಗಿ ಹೋರಾಡಿದ್ದಕ್ಕೆ ಉತ್ತರ ಪ್ರದೇಶದಲ್ಲಿ ಒಂದೂವರೆ ವರ್ಷ ಜೈಲುವಾಸ ಅನುಭವಿಸಿದ್ದೀನಿ. ಇಲ್ಲಿ ತಳಸಮುದಾಯಗಳಿಗೆ ಭೂಮಿಗಾಗಿ ಹೋರಾಡಿ ಜೈಲಿಗೆ ಹೋಗಲು ಸಿದ್ದನಿದ್ದೇನೆ. ನಾವು ಅನ್ಯಾಯವನ್ನು ಸಹಿಸಿಕೊಂಡು ಮೌನವಾಗಿ ಉಳಿದರೆ ಅದು ಅಪರಾಧ. ಇಂತಹ ತಪ್ಪನ್ನು ನಾವ್ಯಾರೂ ಮಾಡಬಾರದು. ಅನ್ಯಾಯದ ವಿರುದ್ದ ನಾವು ಮಾಡುವ ಹೋರಾಟ ಸಂವಿಧಾನವನ್ನು ಉಳಿಸಿಕೊಳ್ಳುವ ಕೆಲಸವಾಗಿದೆ.

ಈ ಹೋರಾಟದ ಸಂದರ್ಭದಲ್ಲಿ ನಮ್ಮ ಒಗ್ಗಟ್ಟನ್ನು ಮುರಿಯುವ ಹಲವಾರು ದುಷ್ಟ ಶಕ್ತಿಗಳು ಪ್ರಯತ್ನಿಸುತ್ತಿವೆ. ನಮ್ಮ ಒಗ್ಗಟ್ಟು ಮುರಿಯಲು ನಾವು ಅವಕಾಶ ಕೊಡಬಾರದು. ಭೂಮಿ-ವಸತಿಯ ಹೋರಾಟವನ್ನು ದೇಶಮಟ್ಟದಲ್ಲಿ ಮಾಡಲು ಪ್ರಯತ್ನ ಪಡುತ್ತೇನೆ. ಸರ್ಕಾರಕ್ಕೆ ಸಂವಿಧಾನವನ್ನು, ಈ ನೆಲದ ಕಾನೂನನ್ನು ಗೌರವಿಸೋದನ್ನು ನಾವೆಲ್ಲರೂ ಸೇರಿ ಕಲಿಸಿಕೊಡಬೇಕಿದೆ.” ಈ ಕಿಡಿನುಡಿಗಳು ಹೊರಬಂದಿದ್ದು ಭೀಮ್ ಆರ್ಮಿ ಸಂಘಟನೆಯ ಚಂದ್ರಶೇಖರ್ ಆಝಾದ್ ರಾವಣ್ ರವರಿಂದ..

ಬುಧವಾರ ಬೆಂಗಳೂರಿನಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ‘ನಡುರಾತ್ರಿ ಸ್ವಾತಂತ್ರ್ಯೋತ್ಸವ; ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ‘ನಮ್ಮ ಹೋರಾಟದ ಗಂಭೀರತೆಯನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ಇವತ್ತು ಆಳುವವರು ಶ್ರೀಮಂತರಾಗಿದ್ದಾರೆ. ಬಡವರ ಸರ್ಕಾರ ಅಧಿಕಾರಕ್ಕೆ ಬಂದಾಗ ನಮ್ಮ ಹಕ್ಕುಗಳನ್ನು ಜಾರಿಗೊಳಿಸಿಕೊಳ್ಳಬಹುದು. ಸರ್ಕಾರದ ನಿರ್ಲಕ್ಷ್ಯತನವನ್ನು ಬದಲಾಯಿಸಿಕೊಳ್ಳಬೇಕು ಮತ್ತು ಬಡವರ ಹಕ್ಕಗಳಿಗೆ ಸ್ಪಂದಿಸಬೇಕು. ಈ ಕಿವುಡರ ಕಿವಿಗೆ ಕೇಳಿಸಲು ನಮ್ಮ ಧ್ವನಿ ಮತ್ತಷ್ಟು ಗಟ್ಟಿಯಾಗಬೇಕು. ನಗಾರಿಯ ಮೂಲಕ ಉದ್ಘಾಟನೆಯಾದ ಈ ಸಮಾವೇಶದ ದನಿ ಕಿವುಡು ಸರ್ಕಾರಕ್ಕೆ ಎಚ್ಚರಿಕೆಯ ದನಿಯಾಗಬೇಕು’ ಎಂದರು.

ಶ್ರೀಮಂತರು ಈ ದೇಶವನ್ನು ತಮ್ಮ ಹಣದ ಶಕ್ತಿಯಿಂದ ಆಳುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಭೂಮಿ ಕಸಿಯಲು ಸಾಧ್ಯವಿಲ್ಲ ಎಂಬುದನ್ನು ಈ ಸರ್ಕಾರಗಳಿಗೆ ತೋರಿಸಬೇಕಿದೆ. ಸರ್ಕಾರ ನಮ್ಮ ಮೇಲೆ ದಬ್ಬಾಳಿಕೆ ನಡೆಸಬಹುದು ಆದರೆ ನಮ್ಮನ್ನು ಬಗ್ಗಿಸಲು ಸಾಧ್ಯವಿಲ್ಲ. ಅವರು ನಮ್ಮನ್ನು ಬೆದರಿಸಿ ಓಡಿಸಲು ಸಾಧ್ಯವಿಲ್ಲ. ಬಡವರ ಹಕ್ಕುಗಳ ಸಾಕಾರಕ್ಕಾಗಿ ಭೀಮ್ ಆರ್ಮಿ ಸಂಘರ್ಷಕ್ಕೆ ಮುಂದಾಗಲಿದೆ ನಿಮ್ಮೊಡನೆ ಯಾವಾಗಲೂ ಜೊತೆಗಿರುತ್ತೇನೆ ಎಂದರು. ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಆಗಮಿಸಿದ್ದ ದಲಿತರ ಸಿಡಿಲ ದನಿ ಚಂದ್ರಶೇಖರ್ ಆಝಾದ್ ರಾವಣ್ ಅವರ ಮಾತುಗಳನ್ನು ಕೇಳಲು ಸಾವಿರಾರು ಜನ ಮಂತ್ರಿ ಮಾಲ್ ಬಳಿಯ ಶಿರೂರ್ ಪಾರ್ಕ್ ನಲ್ಲಿ ಮಳೆ ನಡುವೆಯೂ ಆಗಮಿಸಿದ್ದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ನೂರ್ ಶ್ರೀಧರ್ ಅವರು “ಹಳ್ಳಿ ಬಿಟ್ಟು ನಗರಕ್ಕೆ ಜನ ವಲಸೆ ಬಂದರೆ ಗಟಾರಗಳ ಪಕ್ಕ ಕೆಟ್ಟ ವಾಸನೆಯ ಜೊತೆ ಬದುಕುವ ಪರಿಸ್ಥಿತಿ ಇದೆ. ಆ ಗಟಾರದ ಪಕ್ಕ ಇರುವ ಜಾಗವನ್ನೂ ಸಹ ಸರ್ಕಾರ ಬಡವರಿಗೆ ಬಿಟ್ಟು ಕೊಡುತ್ತಿಲ್ಲ. ಇಡೀ ದಿಡ್ಡಳ್ಳಿ ಜನ ಕೇಳಿದ್ದು ಏನು? ಕೂಲಿ ಮಾಡಲು ಸ್ವಾತಂತ್ರ್ಯ ಕೊಡಿ ಎಂದು. ಕೂಲಿಗೆ ಹೋಗಲು ನನ್ನದೇ ಒಂದು ಜಾಗ ಬೇಕು ಎಂದು ಕೇಳಿದರೆ ಅದನ್ನು ಕೊಡಲು ಆಗಲ್ಲ ಅಂದಿತು ಸರ್ಕಾರ. ಬೆಂಗಳೂರಿನ ಜಗಮಗಿಸುವ ಬೆಳಕಿನ ಕೆಳಗೆ ಗಂಭೀರವಾದ ಕತ್ತಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸಂತೋಷದಿಂದ ಆಚರಿಸಬೇಕಿದ್ದ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ದುಃಖ ಹಾಗೂ ನೋವಿನಿಂದ ಆಚರಿಸುತ್ತಿದ್ದೇವೆ. ಈ ದೇಶದ ಶೋಷಿತರಿಗೆ, ದಲಿತರಿಗೆ, ಮಹಿಳೆಯರಿಗೆ ನೈಜ ಸ್ವಾತಂತ್ರ್ಯ ಕೈಗೆಟುಕಿಲ್ಲ. ಈ ವರ್ಗಗಳಿಗೆ ಗೌರವಯುತವಾಗಿ ಹಾಗೂ ಸ್ವಾಭಿಮಾನದಿಂದ ಜೀವನ ನಡೆಸಲು ಸಾಧ್ಯವಾದಾಗ ಮಾತ್ರ ಸ್ವಾತಂತ್ರ್ಯಕ್ಕೆ ಒಂದು ಅರ್ಥ ಬರುತ್ತದೆ. ಇದು ಕೇವಲ ಗ್ರಾಮೀಣ, ಬುಡಕಟ್ಟು ಜನಗಳ ಸಮಸ್ಯೆಯಲ್ಲ. ನಗರವಾಸಿಗಳಾದ ಶ್ರಮಿಕನಗರವಾಸಿಗಳು (ಸ್ಲಂ ನಿವಾಸಿಗಳು) ಕೂಡಾ ದಿನನಿತ್ಯ ನರಳುತ್ತಿದ್ದಾರೆ. ಅವರು ಕೇಳುತ್ತಿರುವುದು ಸಾವಿರಾರು ಎಕರೆ ಭೂಮಿಯನ್ನಲ್ಲ ಬದಲಿಗೆ ಸ್ವಾಭಿಮಾನದಿಂದ ಬದುಕು ನಡೆಸಲು ಬೇಕಾದ ‘ತುಂಡು ಭೂಮಿ ಮತ್ತು ವಸತಿ ಮಾತ್ರ’ ಎಂದರು.

ಹೋರಾಟಕ್ಕೆ ಸ್ಪಂದಿಸಿದ ಸರ್ಕಾರ: ಸಭೆ ಕರೆಯಲು ನಿರ್ಧಾರ

ಮುಖ್ಯಮಂತ್ರಿಗಳ ಸೂಚನೆಯ ಮೇರೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳ ವಿಶೇಷಾಧಿಕಾರಿ ಡಾ.ಎ.ಲೋಕೇಶ್, ಸಂಪುಟ ರಚನೆಯಾದ 2 ದಿನಗಳಲ್ಲಿ ಭೂಮಿ ವಸತಿಯ ಹೈಪವರ್ ಸಮಿತಿಯ ಸಭೆ ಕರೆಯುವುದಾಗಿ ಭರವಸೆ ನೀಡಿದರು. ಅಲ್ಲಿ ಈ ಎಲ್ಲಾ ವಿಚಾರಗಳು ಕುರಿತು ಸವಿವರವಾಗಿ ಚರ್ಚೆ ನಡೆಸಿ ಪರಿಹಾರಕ್ಕೆ ಮುಂದಾಗೋಣ ಎಂದರು.

ಹಣತೆಯ ಮೆರವಣಿಗೆ

ಆಗಸ್ಟ್ 14ರ ಬುಧವಾರ ಸಂಜೆ 6 ಗಂಟೆಗೆ ಬೆಂಗಳೂರಿನ ರೈಲ್ವೇ ನಿಲ್ದಾಣದಿಂದ ‘ಹಣತೆಯೊಂದಿಗೆ ಮೆರವಣಿಗೆ’ಯನ್ನು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷರಾದ ಕೆಜೆಎಸ್ ಮರಿಯಪ್ಪನವರು ಉದ್ಘಾಟಿಸಿದರು. ರಾಜ್ಯದ ಹಲವು ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಭೂಮಿ-ವಸತಿ ವಂಚಿತ ಬಡಜನರು ಮೇಣದ ಹಣತೆಯೊಂದಿಗೆ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಮಂತ್ರಿ ಮಾಲ್ ಬಳಿಯ ಸಿರೂರ್ ಪಾರ್ಕ್ ಮೈದಾನದಲ್ಲಿ ಸೇರಿ ಅಹೋರಾತ್ರಿ ಸತ್ಯಾಗ್ರಹವನ್ನು ನಡೆಸಿದರು.

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಶಿ ಎಚ್.ಎಸ್.ದೊರೆಸ್ವಾಮಿಯವರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣವನ್ನು ನೆರವೇರಿಸಿ ಭೂಮಿ-ವಸತಿ ಹಕ್ಕು ವಂಚಿತರನ್ನು ಉದ್ದೇಶಿಸಿ ಬಡವರ ವಿಮುಕ್ತಿಯೇ ನಿಜವಾದ ಸ್ವಾತಂತ್ರ್ಯ ಅದಕ್ಕಾಗಿ ಕೊನೆಯುಸಿರು ಇರುವವರೆಗೂ ಹೋರಾಡುತ್ತೇನೆ ಎಂದು ಶಪಥ ಮಾಡಿದರು.

ಸಿರೂರ್ ಪಾರ್ಕ್ ಮೈದಾನದಲ್ಲಿ ನಡುರಾತ್ರಿ ಸ್ವಾತಂತ್ರ್ಯದ ಸಮಾವೇಶವನ್ನು ನಗಾರಿ ಬಾರಿಸುವ ಮೂಲಕ ನೆರೆದ ಹೋರಾಟಗಾರರು ಉದ್ಘಾಟಿಸಿದರು. ಉದ್ಘಾಟನೆಯಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ, ಭೀಮ್ ಆರ್ಮಿಯ ಸಂಸ್ಥಾಪಕರಾದ ಚಂದ್ರಶೇಖರ್ ರಾವಣ್, ಡಾ.ವಿಜಯ, ನೂರ್ ಶ್ರೀಧರ್, ಡಿ.ಎಚ್.ಪೂಜಾರ್, ಸಿದ್ದನಗೌಡ ಪಾಟೀಲ್, ಆರ್. ಮಾನಸಯ್ಯ, ಇಂದಿರಾ ಕೃಷ್ಣಪ್ಪ, ಕುಮಾರ್ ಸಮತಳ, ಸಿರಿಮನೆ ನಾಗರಾಜ್, ಹೆಗ್ಗೋಡು ಪ್ರಸನ್ನ, ಸಿದ್ಧನಗೌಡ ಮೋದಿಗೆ, ವೆಂಕಟೇಶ್ ಅಗಲಗಂಚಿ, ವಿಶ್ವಶಾಂತಿ ಸೌಹಾರ್ದ ಪೀಠದ ಸಂಸ್ಥಾಪಕರಾದ ವಿಜಯಾನಂದ ಸ್ವಾಮೀಜಿಗಳು ಮುಂತಾದವರು ಉಪಸ್ಥಿತರಿದ್ದರು.

ರಾತ್ರಿಯೆಲ್ಲಾ ಸಾಂಸ್ಕೃತಿಕ ಕಾರ್ಯಕ್ರಮಗಳು, ಬಡಜನರ ಪರ ಘೋಷಣೆಗಳು ಮೊಳಗಿದವು. ಬೆಳಿಗ್ಗೆ ಸರ್ಕಾರದಿಂದ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಪೇರೇಡ್ ಮೈದಾನದ ಕಡೆಗೆ ಮೆರವಣಿಗೆ ಮಾಡಲು ಸಮಿತಿಯು ಸಿದ್ಧತೆ ನಡೆಸಿತ್ತು. ಆದರೆ ಸರ್ಕಾರದ ವತಿಯಿಂದ ಪ್ರತಿನಿಧಿಗಳು ಬಂದು ಬಡಜನರ ಸಮಸ್ಯೆಯನ್ನು ಆಲಿಸಿ ಸಭೆ ನಿಗಧಿ ಮಾಡಿದ್ದರಿಂದ ಹೋರಾಟವನ್ನು 12 ಗಂಟೆಗೆ ಅಂತ್ಯಗೊಳಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...