Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...