Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...