Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...