Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...