Homeಕರ್ನಾಟಕಇಂದು 'ಚಂದ್ರಯಾನ- 3' ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

ಇಂದು ‘ಚಂದ್ರಯಾನ- 3’ ಉಡಾವಣೆ; ತಿರುಪತಿಯಲ್ಲಿ ಪೂಜೆ ಸಲ್ಲಿಸಿದ ಇಸ್ರೋ ನಡೆಗೆ ಖಂಡನೆ ವ್ಯಕ್ತ

- Advertisement -
- Advertisement -

ಚಂದ್ರನ ಮೇಲ್ಮೈ ಮೇಲೆ ಗಗನನೌಕೆ ಇಳಿಸಿ, ಅಧ್ಯಯನ ಕೈಗೊಳ್ಳುವ ಉದ್ದೇಶದ ‘ಚಂದ್ರಯಾನ- 3’ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀಹರಿಕೋಟದ ಸತೀಶ್ ಧವನ್ ಉಡ್ಡಯನ ಕೇಂದ್ರದಿಂದ ಲ್ಯಾಂಡ‌ (ವಿಕ್ರಮ್) ಹಾಗೂ ರೋವರ್ (ಪ್ರಜ್ಞಾನ) ಹೊತ್ತರಾಕೆಟ್ ಶುಕ್ರವಾರ ಮಧ್ಯಾಹ್ನ ನಭಕ್ಕೆ ಉಡಾವಣೆಯಾಗಲಿದೆ.

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿಗಳು, ತಂತ್ರಜ್ಞರ ತಂಡ ಸಿದ್ಧತೆಯನ್ನು ಪೂರ್ಣಗೊಳಿಸಿದೆ. ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿದ್ದಾರೆ. ಅವರ ಈ ನಡೆಯಯನ್ನು ನಾಡಿನ ಪ್ರಜ್ಞಾವಂತರು ಹಾಗೂ ಸಾಹಿತಿಗಳು ಖಂಡಿಸಿದ್ದಾರೆ.

2019ರಲ್ಲಿ ಕೈಗೊಂಡಿದ್ದ ‘ಚಂದ್ರಯಾನ-2’ ಕಾರ್ಯಕ್ರಮ ಕೊನೆ ಗಳಿಗೆಯಲ್ಲಿ ವಿಫಲವಾಗಿತ್ತು. ಹಾಗಾಗಿ, ಈ ಬಾರಿ ವಿಜ್ಞಾನಿಗಳು ‘ಸಾಫ್ಟ್ ಲ್ಯಾಂಡಿಂಗ್’ ಬಗ್ಗೆ ಗಮನ ಕೇಂದ್ರೀಕರಿಸಲಿದ್ದಾರೆ. ಲ್ಯಾಂಡರ್‌ಗೆ ಯಾವುದೇ ರೀತಿಯ ಹಾನಿ ಆಗದಂತೆ, ಅದನ್ನು ಚಂದ್ರನ ಮೇಲೆ ಇಳಿಸುವುದನ್ನು ‘ಸಾಫ್ಟ್ ಲ್ಯಾಂಡಿಂಗ್’ ಎಂದು ಕರೆಯುತ್ತಾರೆ. ವಿಜ್ಞಾನಿಗಳು ಇಂಥ ಕೌಶಲವನ್ನು ಕರಗತ ಮಾಡಿಕೊಳ್ಳುವ ಗುರಿ ಹೊಂದಿದ್ದಾರೆ.

ಚಂದ್ರಯಾನ-2 ಕಾರ್ಯಕ್ರಮದ ವೇಳೆ, ಅರ್ಬಿಟರ್‌ನಿಂದ ಲ್ಯಾಂಡರ್ ಯಶಸ್ವಿಯಾಗಿ ಬೇರ್ಪಟ್ಟಿತ್ತು. ಚಂದ್ರನಿಂದ 100 ಕಿ.ಮೀ. ಅಂತರದಲ್ಲಿ ಲ್ಯಾಂಡರ್ ಯಶಸ್ವಿಯಾಗಿ ಪರಿಭ್ರಮಿಸಿತ್ತು. ಪೂರ್ವನಿಗದಿಯಂತೆ ಚಂದ್ರನ ಮೇಯಿಂದ 2.1 ಕಿ.ಮೀ. ಅಂತರದ ವರೆಗೆ ಇಳಿದಿದ್ದ ಲ್ಯಾಂಡ‌ ನಂತರ ಅಪ್ಪಳಿಸಿತ್ತು. ವಿಜ್ಞಾನಿಗಳಿಗೆ ಅದರ ಸಂಪರ್ಕವೂ ಕಡಿದು ಹೋಗಿತ್ತು.

‘ಸಾಫ್ಟ್ ಲ್ಯಾಂಡಿಂಗ್’ನಲ್ಲಿ ಯಶಸ್ಸು ಸಿಕ್ಕಲ್ಲಿ, ಭಾರತವು ಈ ಸಾಧನೆ ಮಾಡಿದ ನಾಲ್ಕನೇ ದೇಶವಾಗಲಿದೆ. ಅಮೆರಿಕ, ಚೀನಾ ಹಾಗೂ ಈ ಹಿಂದಿನ ಸೋವಿಯತ್ ಒಕ್ಕೂಟ ಈ ಸಾಧನೆ ಮಾಡಿರುವ ದೇಶಗಳಾಗಿವೆ.

ಇಸ್ರೋ ಸಂಸ್ಥೆಯ ನಡೆಗೆ ಸಾಹಿತಿಗಳಿಂದ ಖಂಡನೀಯ

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಾಹಿತಿಗಳು, ”ಚಂದ್ರಯಾನ-3ಕ್ಕೆ ಇಸ್ರೋ ಸಂಸ್ಥೆ ಸಜ್ಜಾಗಿರುವುದು ಅಭಿನಂದನೀಯ. ಇದೇ ಸಂದರ್ಭದಲ್ಲಿ ಚಂದ್ರಯಾನದ ಯಶಸ್ವಿಗಾಗಿ ಇಸ್ರೋದ ಕೆಲವು ವಿಜ್ಞಾನಿಗಳು ಚಂದ್ರಯಾನದ ಮಾದರಿಯನ್ನು ತಿರುಪತಿಗೆ ಕೊಂಡೊಯ್ದು ಪೂಜೆ ನೆರವೇರಿಸಿರುವುದು ತಿಳಿದುಬಂದಿದೆ. ಪ್ರಪಂಚದಲ್ಲೇ ಖ್ಯಾತಿ ಹೊಂದಿರುವ ಇಸ್ರೋದಂತಹ ಸರ್ಕಾರಿ ಸ್ವಾಮ್ಯದ ಸಂಸ್ಥೆಯ ಈ ರೀತಿಯ ನಡೆ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸುವಂತಿದೆ” ಎಂದಿದ್ದಾರೆ.

”ಭಾರತದ ಸಂವಿಧಾನ 51ಎ(ಹೆಚ್) ಪ್ರಕಾರ ವೈಜ್ಞಾನಿಕ ಮನೋವೃತ್ತಿ, ಮಾನವ ಹಿತಾಸಕ್ತಿ, ಜಿಜ್ಞಾಸೆ ಮತ್ತು ಸುಧಾರಣಾ ಮನೋಭಾವವನ್ನು ಬೆಳೆಸುವುದು ದೇಶದ ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಆದರೆ ಇಸ್ರೋದ ವಿಜ್ಞಾನಿಗಳು ತಾವು ಸತತವಾಗಿ ಹಲವಾರು ವರ್ಷಗಳಿಂದ ಎಲ್ಲ ಎಡರು ತೊಡರುಗಳ ನಡುವೆ ಸಂಶೋಧಿಸಿ, ಪರೀಕ್ಷಿಸಿ ರೂಪಿಸಿರುವ ಯಾನದ ಬಗೆಗೆ ತಮಗೇ ನಂಬಿಕೆ ಇಲ್ಲವೆಂಬುದನ್ನು ಈ ಮೂಲಕ ಸಾಬೀತುಗೊಳಿಸಿದ್ದಾರೆ. ಇದರಿಂದ ಆತ್ಮಸ್ಥೆರ್ಯ ಮತ್ತು ಸಂಶೋಧನೆಗಳ ಬಗೆಗೆ ಇರುವ ಅನುಮಾನಗಳು ವ್ಯಕ್ತವಾಗುತ್ತವೆ. ವೈಜ್ಞಾನಿಕ ನಡೆಯ ಬಗೆಗೆ ಈ ರೀತಿಯಾದ ಅನುಮಾನ ಮತ್ತು ಸಂಶಯ ದೃಷ್ಟಿಗೆ ಎಡೆಯಿಲ್ಲದಂತೆ ನಡೆದುಕೊಳ್ಳಬೇಕಾಗಿರುವುದು ವೈಜ್ಞಾನಿಕ ಸಂಸ್ಥೆಗಳ ಆಶಯವಾಗಿರುತ್ತದೆ. ಈ ನಿಟ್ಟಿನಲ್ಲಿ ಮೇಲೆ ಎಸಗಿರುವ ಕೃತ್ಯವು ಖಂಡನಾರ್ಹವಾಗಿದೆ ಮತ್ತು ಜನರನ್ನು ಮಾನಸಿಕವಾಗಿ ದುರ್ಬಲಗೊಳಿಸುತ್ತದೆ” ಎಂದು ಹೇಳಿದ್ದಾರೆ.

”ಈ ಹಿಂದೆಯೂ ಇದೇ ರೀತಿಯ ಅತಾಚುರ್ಯವನ್ನು ಆಗಿರುವುದನ್ನು ಅನೇಕ ಪ್ರಾಜ್ಞರು ಖಂಡಿಸಿದ್ದರೂ ಸಹ ಮತ್ತೊಮ್ಮೆ ಪುನರಾವರ್ತನೆಯಾಗಿರುವುದು ಒಪ್ಪತಕ್ಕ ವಿಚಾರವಲ್ಲ. ಈ ನಡೆಯು ಸಂಸ್ಥೆಯ ಸಂವಿದಾನವಿರೋಧಿ ಮನಸ್ಥಿತಿಯನ್ನು ಪ್ರದರ್ಶಿಸಿದೆ. ಇದಕ್ಕೆ ಕಾರಣೀಭೂತರಾದ ವ್ಯಕ್ತಿಗಳಿಗೆ ಸೂಕ್ತ ಸಲಹೆ ನೀಡುವುದು ಪ್ರಧಾನ ಮಂತ್ರಿಗಳ ವೈಜ್ಞಾನಿಕ ಸಲಹೆಗಾರರ ಕರ್ತವ್ಯವಾಗಿದೆ” ಎಂದು ತಿಳಿಸಿದ್ದಾರೆ.

ನಾಡಿನ ಖ್ಯಾತ ಪ್ರಜ್ಞರು ಹಾಗೂ ಸಾಹಿತಿಗಳಾದ ಡಾ. ಮೂಡ್ಯಾಕೂಡು ಚಿನ್ನಸ್ವಾಮಿ, ಪ್ರೊ. ಅಲ್ಲಮಪ್ರಭು ಬೆಟ್ಟದೂರು, ಡಾ. ವೆಂಕಟಯ್ಯ ಅಪ್ಪಗೆರೆ. ಸನತ್ ಕುಮಾರ್ ಬೆಳಗಲಿ, ಎಲ್. ಎನ್‌. ಮುಕುಂದರಾಜ್, ಡಾ.ಆರ್.ಎನ್. ರಾಜಾನಾಯಕ್ ಕೆ. ಬಿ. ಮಹದೇವಪ್ಪ ನಾಗೇಶ್ ಅರಳಕುಪ್ಪೆ ಡಾ. ಹುಲಿಕುಂಟೆ ಮೂರ್ತಿ ಹೆಚ್‌.ಕೆ. ವಿವೇಕಾನಂದ ಡಾ.ಹೆಚ್.ಕೆ.ಎಸ್.ಸ್ವಾಮಿ ಡಿ. ಎಂ. ಮಂಜುನಾಥಸ್ವಾಮಿ ಕೆ. ಮಹಂತೇಶ್ ಡಾ. ನಾಗೇಶ್‌ ಕೆ.ಎನ್ ಪ್ರಭಾ ಬೆಳವಂಗಲ ಹಾಗೂ ಆಲ್ಲೂರು ಶಿವರಾಜ ಅವರು ಇಸ್ರೋ ಸಂಸ್ಥೆಯ ನಡೆಯನ್ನು ಖಂಡಿಸಿ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಹೆಲಿಕಾಪ್ಟರ್‌, ಚಂದ್ರಯಾನ, ಐಪೋನ್, ಕೋಟಿ ಹಣ-ತಮಿಳುನಾಡು ಚುನಾವಣಾ ಅಭ್ಯರ್ಥಿಯ ಪ್ರಣಾಳಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. What is the problem in doing Pooja?. All nonsense. You are learning the universe support now. What you do , invent today were there lakh years ago these were done. Now only reinventing, reasearch not the new.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...