Homeಮುಖಪುಟಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

- Advertisement -
- Advertisement -

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ಅವರು ಶನಿವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇದರಿಂದಾಗಿ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಬಣಕ್ಕೆ ಸಂಕಷ್ಟದ ಸರಮಾಲೆಯೇ ಸೃಷ್ಟಿಯಾದಂತಾಗಿದೆ.

ಟಿಎಂಸಿ ಅಧ್ಯಕ್ಷೆಗೆ ಬರೆದಿರುವ ಪತ್ರದಲ್ಲಿ ಭಟ್ಟಾಚಾರ್ಯ ಅವರು ಪಕ್ಷದ ಇತರ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದು, ಇದು ಅವರು ಪಕ್ಷದೊಂದಿಗಿನ ಎಲ್ಲಾ ಪ್ರಾಯೋಗಿಕ ಸಂಬಂಧಗಳನ್ನು ಸಂಪೂರ್ಣವಾಗಿ ಕಡಿದುಕೊಂಡಿದ್ದಾರೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮತ್ತು ಚರ್ಚೆಗಳನ್ನು ಹುಟ್ಟುಹಾಕಿದೆ.

ಕೊನೆಯದಾಗಿ, ನಾನು ನಿಮ್ಮ ಬಗ್ಗೆ ಅತ್ಯುನ್ನತ ಗೌರವವನ್ನು ಹೊಂದಿದ್ದೇನೆ ಮತ್ತು ಯಾವಾಗಲೂ ನಿಮಗೆ ಗೌರವ ಪೂರ್ವಕವಾಗಿ ನಡೆದುಕೊಳ್ಳುತ್ತೇನೆ ಎಂದು ಹೇಳಲು ಬಯಸುತ್ತೇನೆ, ಎಂದು ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮಮತಾ ಬ್ಯಾನರ್ಜಿ ಸಂಪುಟದಲ್ಲಿ ಸಚಿವೆಯಾಗಿದ್ದ ಭಟ್ಟಾಚಾರ್ಯ ಅವರು ಹಣಕಾಸು ಮತ್ತು ಆರೋಗ್ಯದಂತಹ ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಜೊತೆಗೆ ಪಕ್ಷದ ಮಹಿಳಾ ಘಟಕದ ನೇತೃತ್ವ ವಹಿಸಿದ್ದ ಪ್ರಮುಖ ನಾಯಕಿಯೂ ಆಗಿದ್ದಾರೆ.

ಇದರೊಂದಿಗೆ, ವಿವಿಧ ಬ್ಯಾಂಕ್‌ಗಳಲ್ಲಿರುವ ಪಕ್ಷದ ಖಾತೆಗಳ ಅಧಿಕೃತ ಸಹಿದಾರರ ಜವಾಬ್ದಾರಿಯಿಂದ ಹಾಗೂ ಚುನಾವಣಾ ಆಯೋಗದ ಮುಂದೆ ಹಾಜರಾಗಲು ಮಮತಾ ಬ್ಯಾನರ್ಜಿ ಅವರ ಅಧಿಕೃತ ಪ್ರತಿನಿಧಿಯಾಗಿದ್ದ ಹೊಣೆಗಾರಿಕೆಯಿಂದಲೂ ಭಟ್ಟಾಚಾರ್ಯ ಅವರು ತಮ್ಮನ್ನು ಮುಕ್ತಗೊಳಿಸಿಕೊಂಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲ್ಕತ್ತಾದಲ್ಲಿರುವ ಪಕ್ಷದ ಪ್ರಧಾನ ಕಚೇರಿಯಾದ ‘ತೃಣಮೂಲ ಭವನ’ದ ಕಾರ್ಯಾಚರಣೆಯ ನಿಯಂತ್ರಣವನ್ನು ರಿತಬ್ರತಾ ಬ್ಯಾನರ್ಜಿ ನೇತೃತ್ವದ ಬಂಡಾಯ ಬಣದ ಕೈಗೆ ಸಿಗುವಂತೆ ಮಾಡಿದ್ದಾರೆ ಎಂದು ಆರೋಪಿಸಿ, ಮಮತಾ ಬ್ಯಾನರ್ಜಿ ಅವರು ಫೋನ್‌ನಲ್ಲಿ ತಮಗೆ ತರಾಟೆಗೆ ತೆಗೆದುಕೊಂಡಿದ್ದೇ ಈ ನಿರ್ಧಾರಕ್ಕೆ ಪ್ರಮುಖ ಕಾರಣ ಎಂದು ಸ್ಪಷ್ಟಪಡಿಸಿದರು.

“ನಾನು ಬಂಡಾಯಗಾರರಿಗೆ ಪಕ್ಷದ ಕಚೇರಿಯನ್ನು ಹಸ್ತಾಂತರಿಸಿದ್ದೇನೆ ಎಂದು ಅವರು (ಮಮತಾ ಬ್ಯಾನರ್ಜಿ) ನನಗೆ ಕರೆ ಮಾಡಿ ಹೇಳಿದಾಗ ನನಗೆ ತೀವ್ರ ಆಘಾತವಾಯಿತು ಮತ್ತು ನೋವಾಯಿತು. ಆದರೆ ನಾನು ಹಾಗೆ ಹೇಗೆ ಮಾಡಿದೆ ಎಂಬುದು ನನಗೇ ತಿಳಿಯುತ್ತಿಲ್ಲ. ನನ್ನ ನಿಷ್ಠೆ ಮತ್ತು ನಂಬಿಕೆಯನ್ನು ಬುಡಮೇಲು ಮಾಡಿರುವುದು ಇದರಿಂದ ಸ್ಪಷ್ಟವಾಗಿದೆ. ಈ ಹಿಂದೆ ಎಂದೂ ಹೀಗೆ ಆಗಿರಲಿಲ್ಲ. ಒಮ್ಮೆ ಆ ಮೂಲಭೂತ ನಂಬಿಕೆಯೇ ಹೋದಮೇಲೆ, ನಾನು ಪಕ್ಷದಲ್ಲಿ ಉಳಿಯಲು ಅಥವಾ ಅದಕ್ಕೆ ಮರಳಲು ಯಾವುದೇ ಕಾರಣವಿಲ್ಲ, ಎಂದು ಭಟ್ಟಾಚಾರ್ಯ ಪತ್ರಕರ್ತರಿಗೆ ತಿಳಿಸಿದ್ದಾರೆ.

ಆದರೆ, ಪಕ್ಷದೊಳಗಿನ ತೀವ್ರಗೊಳ್ಳುತ್ತಿರುವ ಬಣ ರಾಜಕೀಯದ ಕುರಿತು ಮತ್ತು ತಾವು ಯಾವ ಬಣವನ್ನು ಬೆಂಬಲಿಸುತ್ತೀರಿ ಎಂಬ ಬಗ್ಗೆ ಪ್ರತಿಕ್ರಿಯಿಸಲು ಭಟ್ಟಾಚಾರ್ಯ ನಿರಾಕರಿಸಿದರು. “ಈ ವಿಷಯಗಳು ಚುನಾವಣಾ ಆಯೋಗ ಅಥವಾ ನ್ಯಾಯಾಲಯದ ಮುಂದೆ ಇರುವುದರಿಂದ ಸದ್ಯಕ್ಕೆ ಇದು ನ್ಯಾಯಾಲಯದ ಪರಿಧಿಯಲ್ಲಿದೆ ಎಂಬ ಕಾರಣ ನೀಡಿದರು.

ಇದಾದ ಕೆಲವೇ ಕ್ಷಣಗಳಲ್ಲಿ, ಭಟ್ಟಾಚಾರ್ಯ ಅವರು ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಿತಬ್ರತಾ ಬ್ಯಾನರ್ಜಿ ಅವರ ಕೊಠಡಿಯಲ್ಲಿ ಬಂಡಾಯ ಬಣದ ನಾಯಕರೊಂದಿಗೆ ಸಭೆ ನಡೆಸಿದರು.

ವಿಧಾನಸಭೆಯ ಗೇಟ್ ಬಳಿ ಬಂಡಾಯ ಬಣದ ಪ್ರಮುಖ ಸದಸ್ಯ ಮತ್ತು ವಿರೋಧ ಪಕ್ಷದ ಉಪ ನಾಯಕರಾದ ಸಂದೀಪನ್ ಸಹಾ ಅವರು ಭಟ್ಟಾಚಾರ್ಯ ಅವರನ್ನು ಸ್ವಾಗತಿಸಿದರು. ಇತ್ತೀಚೆಗಷ್ಟೇ ಕೋಲ್ಕತ್ತಾ ಮಹಾನಗರ ಪಾಲಿಕೆಯ ಮಾಜಿ ಟಿಎಂಸಿ ಕೌನ್ಸಿಲರ್ ಆಗಿರುವ ಇವರ ಪುತ್ರ ಸೌರವ್ ಬಸು ಬಂಡಾಯ ಬಣವನ್ನು ಸೇರಿಕೊಂಡು ಅದರ ಸಭೆಗಳಲ್ಲಿ ಭಾಗವಹಿಸಿದ್ದರು. ಈ ವಿಧಾನಸಭೆಯ ಆಂತರಿಕ ಸಭೆಯಲ್ಲೂ ಅವರು ಉಪಸ್ಥಿತರಿದ್ದುದು ಕಂಡುಬಂದಿತು ಎಂದು ಪಿಟಿಐ ವರದಿ ಮಾಡಿದೆ.

ಜೂನ್ 5 ರಂದು ಮಮತಾ ಬ್ಯಾನರ್ಜಿ ಅವರ ಕಾಳೀಘಾಟ್ ನಿವಾಸದಲ್ಲಿ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ನಾಯಕ ಸುಬ್ರತಾ ಬಕ್ಷಿ ಅವರ ಸ್ಥಾನಕ್ಕೆ ಭಟ್ಟಾಚಾರ್ಯ ಅವರನ್ನು ಹೊಸ ರಾಜ್ಯ ಅಧ್ಯಕ್ಷರನ್ನಾಗಿ ಘೋಷಿಸಲಾಗಿತ್ತು. ಪಶ್ಚಿಮ ಬಂಗಾಳದ ಮೂರು ಬಾರಿಯ ಶಾಸಕಿಯಾಗಿದ್ದ ಇವರು 2026ರ ವಿಧಾನಸಭಾ ಚುನಾವಣೆಯಲ್ಲಿ ದಮ್ ದಮ್ ಉತ್ತರ್ ಕ್ಷೇತ್ರದಲ್ಲಿ ಬಿಜೆಪಿಯ ಸೌರವ್ ಸಿಕ್ದರ್ ವಿರುದ್ಧ ಸೋಲು ಕಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...