Homeಕರ್ನಾಟಕಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌...

ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

ಕೊಲೆ ಪ್ರಕರಣವೊಂದನ್ನು ರಾಜಕೀಯಗೊಳಿಸಲು ಯತ್ನಿಸುತ್ತಿರುವ ಬೆಳವಣಿಗೆಗಳನ್ನು ಮಾಜಿ ಪೊಲೀಸ್‌ ಕಮಿಷನರ್‌, ಎಎಪಿ ರಾಜ್ಯ ನಾಯಕ ಭಾಸ್ಕರ್‌ ರಾವ್‌ ಟೀಕಿಸಿದ್ದಾರೆ.

‌ʼಪೊಲೀಸ್‌ ಕಮಿಷನರ್‌ ಸುಳ್ಳು ಹೇಳುತ್ತಾರೆʼ ಎಂದು ಆಡಳಿತ ಪಕ್ಷದ ಹಿರಿಯ ನಾಯಕರೇ ಹೇಳುವುದು ಸ್ವತಃ ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಮಾಡುವ ಅವಮಾನ ಎಂದು ಭಾಸ್ಕರ್‌ ರಾವ್‌ ಅಭಿಪ್ರಾಯಪಟ್ಟಿದ್ದಾರೆ.

ಸ್ವಯಂ ನಿವೃತ್ತಿ ಪಡೆದು ಇತ್ತೀಚೆಗೆ ಆಮ್‌ ಆದ್ಮಿ ಪಕ್ಷ ಸೇರಿರುವ ಅವರು, ಸೋಮವಾರ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜವಾಬ್ದಾರಿಯುತವಾದ ಪೊಲೀಸ್ ಸಂಸ್ಥೆಯ ಆಯುಕ್ತರು ಸುಳ್ಳು ಹೇಳುತ್ತಾರೆ ಎಂದು ಆಡಳಿತ ಪಕ್ಷದ ಹಿರಿಯ ನಾಯಕರೇ ಹೇಳುತ್ತಿರುವುದು ಆಕ್ಷೇಪಾರ್ಹ. ಪೊಲೀಸ್ ಆಯುಕ್ತರು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಏನೇ ಭಿನ್ನಾಭಿಪ್ರಾಯವಿದ್ದರೂ ಅವರನ್ನು ನೇರವಾಗಿ ಭೇಟಿ ಮಾಡುವುದು ಸೂಕ್ತ. ಈ ವಿಷಯದಲ್ಲಿ ಆಡಳಿತ ಪಕ್ಷ ತನ್ನ ಹಿರಿಯ ನಾಯಕರಿಗೆ ತಿಳಿ ಹೇಳಬೇಕು ಎಂದು ಜನ ಬಯಸುತ್ತಾರೆ. ಅದು ಬಿಟ್ಟು 1.5 ಕೋಟಿ ನಾಗರಿಕರನ್ನು ರಕ್ಷಣೆ ಮಾಡುವ ಪೊಲೀಸ್‌ ಕಮಿಷನರ್ ಸಂಸ್ಥೆಯನ್ನು ಹೀಗೆ ಬಹಿರಂಗವಾಗಿ ಅವಮಾನ ಮಾಡುವುದು ಸರಿಯಲ್ಲ. ಇದು ಅವಿವೇಕಿತನದ ರಾಜಕೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ನಗರದ ಜೆ ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್‌ 5 ರಂದು ಚಂದ್ರಶೇಖರ್(22)‌ ಎಂಬ ಯುವಕನ ಹತ್ಯೆ ನಡೆದಿತ್ತು. ಘಟನೆಯ ಬೆನ್ನಲ್ಲೇ “ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಚಂದ್ರು ಹತ್ಯೆಯಾಗಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು.

ಆದರೆ, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್ ಅವರು ‌ʼಬೈಕ್‌ ಡಿಕ್ಕಿಯಿಂದಾಗಿ ಯುವಕರ ಮಧ್ಯೆ ಜಗಳ ಉಂಟಾಗಿ, ಕೊಲೆಯಾಗಿದೆ. ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಅಲ್ಲʼ ಎಂದು ಸ್ಪಷ್ಟನೆ ನೀಡಿದರು. ತಕ್ಷಣವೇ ಸಚಿವ ಆರಗ ಜ್ಞಾನೇಂದ್ರ ತಮ್ಮ ಹೇಳಿಕೆ ವಾಪಸ್ ಪಡೆದಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮತ್ತು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಕೂಡ “ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು ಚಂದ್ರು ಎಂಬ ಯುವಕನನ್ನು ಕೊಲೆ ಮಾಡಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ, “ಈ ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತರು ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಚಚಿರ್ಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ನಿರ್ಧರಿಸಲಾಗಿದೆ” ಎಂದಿದ್ದರು.

ಈ ನಡುವೆ, ಬಿಜೆಪಿ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಕಮಿಷನರ್‌ ಸುಳ್ಳು ಹೇಳಿದ್ದಾರೆ. ಗೃಹ ಸಚಿವರನ್ನು ದಾರಿತಪ್ಪಿಸಿದ್ದಾರೆ. ವಾಸ್ತವವಾಗಿ ಗೃಹ ಸಚಿವರು ಮೊದಲು ಹೇಳಿದಂತೆ ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೇ ಕೊಲೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಭಾಸ್ಕರ್‌ ರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...