Homeಕರ್ನಾಟಕಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌...

ಚಂದ್ರು ಕೊಲೆ ಪ್ರಕರಣ: ಪೊಲೀಸ್‌ ಕಮಿಷನರ್‌ ಹೇಳಿಕೆ ಅಲ್ಲಗಳೆದ ಬಿಜೆಪಿ ನಾಯಕರಿಗೆ ಭಾಸ್ಕರ್‌ ರಾವ್‌ ಖಡಕ್‌ ಪ್ರತಿಕ್ರಿಯೆ

- Advertisement -
- Advertisement -

ಕೊಲೆ ಪ್ರಕರಣವೊಂದನ್ನು ರಾಜಕೀಯಗೊಳಿಸಲು ಯತ್ನಿಸುತ್ತಿರುವ ಬೆಳವಣಿಗೆಗಳನ್ನು ಮಾಜಿ ಪೊಲೀಸ್‌ ಕಮಿಷನರ್‌, ಎಎಪಿ ರಾಜ್ಯ ನಾಯಕ ಭಾಸ್ಕರ್‌ ರಾವ್‌ ಟೀಕಿಸಿದ್ದಾರೆ.

‌ʼಪೊಲೀಸ್‌ ಕಮಿಷನರ್‌ ಸುಳ್ಳು ಹೇಳುತ್ತಾರೆʼ ಎಂದು ಆಡಳಿತ ಪಕ್ಷದ ಹಿರಿಯ ನಾಯಕರೇ ಹೇಳುವುದು ಸ್ವತಃ ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಮಾಡುವ ಅವಮಾನ ಎಂದು ಭಾಸ್ಕರ್‌ ರಾವ್‌ ಅಭಿಪ್ರಾಯಪಟ್ಟಿದ್ದಾರೆ.

ಸ್ವಯಂ ನಿವೃತ್ತಿ ಪಡೆದು ಇತ್ತೀಚೆಗೆ ಆಮ್‌ ಆದ್ಮಿ ಪಕ್ಷ ಸೇರಿರುವ ಅವರು, ಸೋಮವಾರ ತಮ್ಮ ಫೇಸ್‌ಬುಕ್‌ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಪ್ರತಿಕ್ರಿಯೆ ನೀಡಿದ್ದು, ಬೆಂಗಳೂರಿನ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಹೇಳಿಕೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಜವಾಬ್ದಾರಿಯುತವಾದ ಪೊಲೀಸ್ ಸಂಸ್ಥೆಯ ಆಯುಕ್ತರು ಸುಳ್ಳು ಹೇಳುತ್ತಾರೆ ಎಂದು ಆಡಳಿತ ಪಕ್ಷದ ಹಿರಿಯ ನಾಯಕರೇ ಹೇಳುತ್ತಿರುವುದು ಆಕ್ಷೇಪಾರ್ಹ. ಪೊಲೀಸ್ ಆಯುಕ್ತರು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ಏನೇ ಭಿನ್ನಾಭಿಪ್ರಾಯವಿದ್ದರೂ ಅವರನ್ನು ನೇರವಾಗಿ ಭೇಟಿ ಮಾಡುವುದು ಸೂಕ್ತ. ಈ ವಿಷಯದಲ್ಲಿ ಆಡಳಿತ ಪಕ್ಷ ತನ್ನ ಹಿರಿಯ ನಾಯಕರಿಗೆ ತಿಳಿ ಹೇಳಬೇಕು ಎಂದು ಜನ ಬಯಸುತ್ತಾರೆ. ಅದು ಬಿಟ್ಟು 1.5 ಕೋಟಿ ನಾಗರಿಕರನ್ನು ರಕ್ಷಣೆ ಮಾಡುವ ಪೊಲೀಸ್‌ ಕಮಿಷನರ್ ಸಂಸ್ಥೆಯನ್ನು ಹೀಗೆ ಬಹಿರಂಗವಾಗಿ ಅವಮಾನ ಮಾಡುವುದು ಸರಿಯಲ್ಲ. ಇದು ಅವಿವೇಕಿತನದ ರಾಜಕೀಯ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ನಗರದ ಜೆ ಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್‌ 5 ರಂದು ಚಂದ್ರಶೇಖರ್(22)‌ ಎಂಬ ಯುವಕನ ಹತ್ಯೆ ನಡೆದಿತ್ತು. ಘಟನೆಯ ಬೆನ್ನಲ್ಲೇ “ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಚಂದ್ರು ಹತ್ಯೆಯಾಗಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದರು.

ಆದರೆ, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್ ಅವರು ‌ʼಬೈಕ್‌ ಡಿಕ್ಕಿಯಿಂದಾಗಿ ಯುವಕರ ಮಧ್ಯೆ ಜಗಳ ಉಂಟಾಗಿ, ಕೊಲೆಯಾಗಿದೆ. ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ಅಲ್ಲʼ ಎಂದು ಸ್ಪಷ್ಟನೆ ನೀಡಿದರು. ತಕ್ಷಣವೇ ಸಚಿವ ಆರಗ ಜ್ಞಾನೇಂದ್ರ ತಮ್ಮ ಹೇಳಿಕೆ ವಾಪಸ್ ಪಡೆದಿದ್ದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಮತ್ತು ವಿಧಾನ ಪರಿಷತ್‌ ಸದಸ್ಯ ರವಿಕುಮಾರ್‌ ಕೂಡ “ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೆ ದುಷ್ಕರ್ಮಿಗಳು ಚಂದ್ರು ಎಂಬ ಯುವಕನನ್ನು ಕೊಲೆ ಮಾಡಿದ್ದಾರೆ” ಎಂದು ಹೇಳಿಕೆ ನೀಡಿದ್ದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ, “ಈ ಪ್ರಕರಣದಲ್ಲಿ ಸತ್ಯಾಂಶ ಹೊರಬರಬೇಕಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಆಯುಕ್ತರು ಹಾಗೂ ರಾಜ್ಯ ಪೊಲೀಸ್‌ ಮಹಾನಿರ್ದೇಶಕರೊಂದಿಗೆ ಚಚಿರ್ಸಿ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಲು ನಿರ್ಧರಿಸಲಾಗಿದೆ” ಎಂದಿದ್ದರು.

ಈ ನಡುವೆ, ಬಿಜೆಪಿ ವಿಧಾನಪರಿಷತ್‌ ಸದಸ್ಯ ರವಿಕುಮಾರ್‌, “ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್‌ ಕಮಿಷನರ್‌ ಸುಳ್ಳು ಹೇಳಿದ್ದಾರೆ. ಗೃಹ ಸಚಿವರನ್ನು ದಾರಿತಪ್ಪಿಸಿದ್ದಾರೆ. ವಾಸ್ತವವಾಗಿ ಗೃಹ ಸಚಿವರು ಮೊದಲು ಹೇಳಿದಂತೆ ಉರ್ದು ಮಾತನಾಡಲಿಲ್ಲ ಎಂಬ ಕಾರಣಕ್ಕೇ ಕೊಲೆ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ಭಾಸ್ಕರ್‌ ರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿರಿ: ಮಾಂಸಾಹಾರ ವಿರೋಧಿಸಿ JNU ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ದಾಳಿ ನಡೆಸಿದ ABVP ದುಷ್ಕರ್ಮಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...