Homeಕರ್ನಾಟಕಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

- Advertisement -
- Advertisement -

4ನೇ ಹಂತದ ಮತದಾನದ ಹಿಂದಿನ ದಿನ ರಿಪ್ಲಬಿಕ್ ಟಿವಿಯಲ್ಲಿ, ‘ಸಂಡೇ ಡಿಬೇಟ್ ವಿತ್ ಅರ್ನಾಬ್ ಗೋಸ್ವಾಮಿ’ ಕಾರ್ಯಕ್ರಮದ ಟೈಟಲ್ಲೇ #ModiWaveElection…

ಚರ್ಚೆಯ ಸಂದೇಶ ಏನಾಗಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿಯೇ ಗೋಸ್ವಾಮಿ ಕಾರ್ಯಕ್ರಮ ರೂಪಿಸಿರುತ್ತಾರಲ್ಲವಾ? ಚರ್ಚೆ ಶುರುವಾಗುತ್ತಲೇ ಮರಿ ಗೋಸ್ವಾಮಿಗಳಾಗಿರುವ ಅವರ ಅಭಿಮಾನಿಗಳು ತಮ್ಮ ಮನದಿಂಗಿತವನ್ನು ಟ್ವೀಟ್ ಮಾಡಲು ಶುರು ಮಾಡಿಬಿಡುತ್ತಾರೆ.

ಚರ್ಚೆಯಲ್ಲಿ ಬಿಜೆಪಿ ವಿರೋಧಿ ಪ್ಯಾನಲಿಸ್ಟ್ ಅರ್ಥಪೂರ್ಣವಾಗಿ ವಾದ ಮಂಡಿಸತೊಡಗಿದರೆ, ಗೋಸ್ವಾಮಿ ಚೀರಾಡಿ, ಹಾರಾಡಿ ವಿಷಯವನ್ನು ಎತ್ತೆತ್ತಲೋ ಒಯ್ದು ಬಿಡುತ್ತಾರೆ. ಮೊನ್ನೆ ರವಿವಾರವೂ ಅವರೂ ಅದನ್ನೇ ಮಾಡಿದರು. ಇದು ‘ಮೋದಿ ಅಲೆ ಚುನಾವಣೆ’ ಎಂಬ ಅವರ ನಿಲುವನ್ನು ಮುನ್ನೆಲೆಗೆ ತರಲು ಹರಸಾಹಸ ಮಾಡಿದರು….

ಮಂಡ್ಯದ ನಂತರ ನಮ್ಮ ಚಾನೆಲಗಳಿಗೆ ಆಕರ್ಷಕವಾಗಿ ಕಂಡಿದ್ದು ವಾರಣಾಸಿ. ಮೋದಿಯವರ ನಾಮಿನೇಶನ್ ಅವುಗಳ ಪಾಲಿಗೆ ‘ಸ್ವಾಮಿ-ನೇಷನ್’ ಅನಿಸಿರಬೇಕು. ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಚಾನೆಲ್ಲುಗಳಲ್ಲಿ ಎರಡು ದಿನ ವಾರಣಾಸಿಯ ಜಪ. ಪ್ರಧಾನಿಯ ನಾಮಪತ್ರ ಸಲ್ಲಿಕೆ ಓಕೆ, ಜನರಿಗೆ ಅಲ್ಲಿನ ವಾತಾವರಣ ತೋರಿಸಬೇಕು, ಅದೂ ಸರಿ. ಆದರೆ, ರಾಜಕೀಯದೊಂದಿಗೆ ಧಾರ್ಮಿಕತೆಯನ್ನು ಬೆರೆಸಿ, ವೀಕ್ಷಕರಲ್ಲಿ ಕಾಶಿ ವಿಶ್ವನಾಥನ ಬಗ್ಗೆ ಇರಬಹುದಾದ ಭಕ್ತಿಯನ್ನು ಮೋದಿಗೆ ‘ಟ್ರಾನ್ಸ್‍ಫರ್’ ಮಾಡಲು ಹೆಣಗಲಾಯಿತು.

ರಾಜ್ಯದಲ್ಲಿ ಮತದಾನ ಮುಗಿದಿದ್ದರೂ ಕನ್ನಡದ ಚಾನೆಲ್‍ಗಳೂ ಹಿಂದಿಯವರಂತೆ ಉತ್ಸುಕವಾಗಿಯೇ ನಾಮಪತ್ರ ಸಲ್ಲಿಕೆಯನ್ನು ಪ್ರಸಾರ ಮಾಡಿದರು. ಬಹುಷ: ಇದು ಪ್ಯಾಕೇಜ್‍ನ ಭಾಗವಾಗಿರಬಹುದು.

ದಿಗ್ವಿಜಯಕ್ಕೆ ಯುದ್ಧ ಗೆದ್ದ ಸಂಭ್ರಮ. ನೇರ ಪ್ರಸಾರದ ಜೊತೆಗೆ ವಿಶೇಷ ಕಾರ್ಯಕ್ರಮ ಬೇರೆ! ‘ವೈರಿಪಡೆಗೆ ನಮೋ ಖಬರ್‍ದಾರ್ ಮೆಸೇಜ್!’ – ಮೋದಿ ನಾಮಿನೇಶನ್ ಭಾಷಣ ಮಾಡುವ ಮೊದಲೇ ಈ ತರಹದ ಹೆಡ್ಡಿಂಗ್! ಗಂಗಾ ಆರತಿ ಮೂಲಕ ವಿಪಕ್ಷಗಳಿಗೆ ವಾರ್ನಿಂಗ್ ಕೊಟ್ಟರೆಂದೇ? ಅಲ್ಲಿ ಸೇರಿಸಿದ ಜನರನ್ನು ಇಟ್ಟುಕೊಂಡು ದಿಗ್ವಿಜಯ ಹೀಗೆ ಹೇಳಿತೋ ಗೊತ್ತಾಗಲಿಲ್ಲ!

ಟಿವಿ9 ಪಾಲಿಗೆ ಮೋದಿ ‘ಕಾಶಿಯ ಕೊತ್ವಾಲ’… ವಿಶ್ವನಾಥನೇ ಬಲ್ಲ ಇದರ ಮರ್ಮ! ನ್ಯೂಸ್18ನಲ್ಲಿ ವಿಶೇಷ ಕಾರ್ಯಕ್ರಮ- ‘ದಶಾಶ್ವಮೇಧ ರಹಸ್ಯ, ಗಂಗಾ ಆರತಿ (ಅವರ ಪರದೆ ಮೇಲೆ ಗಂಗಾರತಿ ಎಂದಿತ್ತು!) ವಿಸ್ಮಯ, ಪ್ರತ್ಯಕ್ಷರಾದ ಸಾಧುಗಳು’….ಸೂಪರ್ ಮಾಮ! ಪ್ರತ್ಯಕ್ಷವಾಗುವವರೆಗೆ ಸಾಧುಗಳು ಎಲ್ಲಿದ್ದರು? ಅಥವಾ ಮೇಲಿಂದ ಉದುರಿ ಬಿದ್ದರಾ?

ಬಿಟಿವಿಯವರಂತೂ ರಾಧಿಕಾ ಹಿರೇಗೌಡರ್ ಅವರನ್ನೇ ವಾರಣಾಸಿಯಲ್ಲಿ ಲ್ಯಾಂಡ್ ಮಾಡಿಸಿದ್ದರು. ರಾಧಮ್ಮರಂತೂ ‘ಏನ್ ವೈಭವ, ಹಬ್ಬದ ಸಂಭ್ರಮ, ಎಲ್ಲೆಲ್ಲೂ ಎಲ್ಲೆಲ್ಲೂ ಎಲ್ಲೆಲ್ಲೂ…ಎಲ್ಲೆಲ್ಲೂ (ನಾಲ್ಕು ದಿಕ್ಕುಗಳ ಹೊರಳಿದ್ದರಿಂದ 4 ಸಲ ಹೇಳಿದರೋ?)…ಜನ ಸ್ವ-ಇಚ್ಛೆಯಿಂದ ಪಾಲ್ಗೊಂಡು ತಾವೇ ನಗರವನ್ನು ಸಿಂಗರಿಸಿದ್ದಾರೆ…’ -ನಾನ್‍ಸ್ಟಾಪ್ ಹೊಗಳಿಕೆಯಲ್ಲೇ ಕಾಲ ಕಳೆದರು.

ಮುಂದಿನ ಹಂತದ ಚುನಾವಣೆಗಳು ಹಿಂದಿ ಬೆಲ್ಟ್‍ನಲ್ಲೇ ಜಾಸ್ತಿ. ಹೀಗಾಗಿ ಹಿಂದಿ ಚಾನೆಲ್‍ಗಳಿಗೆ ವಿಶೇಷ ಪ್ಯಾಕೇಜ್ ಇದ್ದಂತಿತ್ತು. ಝೀ ಚಾನೆಲ್ ಪಾಲಿಗೆ ಶಿವನೇ ನಾಮಿನೇಶನ್‍ಗೆ ಬಂದಂತಿತ್ತು. ಆಜ್‍ತಕ್‍ನಲ್ಲಿ ನಿರೂಪಕಿ ಮತ್ತು ವಾರಣಾಸಿಯಲ್ಲಿ ಓಡಾಡುತ್ತಿದ್ದ ವರದಿಗಾರ್ತಿಯ ನಡುವಿನ ಮಾತು ಹೇಗಿದ್ದವು ಎಂದರೆ,

-ಯಾ ಪರಿ ಮಂದಿ…ಸಂದಿಗೊಂದಿಯಲ್ಲೆಲ್ಲ ಮಂದಿ…ಅಬಬಾ….ನಾ ನೋಡೆ ಇಲ್‍ಬಿಡು ಇಂತಹ ಸಂಭ್ರಮ…

-ಹೌದು ಹೌದು ನಾವು ನೋಡ್ತಾ ಇದ್ದೇವಲ್ಲ. ನೀನೇ ಲಕ್ಕಿ ಕಣೆ…ವಾರಣಾಸಿಯಲ್ಲೇ ನಿಂತು ಇದನ್ನ ಕಣ್ತುಂಬಿಕೊಳ್ಳೋ ಭಾಗ್ಯ…

-ಧೂಮ್‍ಧಾಮ್ ಸೆ ಆಯೇಗಿ ಸರ್ಕಾರ್

ಈ ಲೈವ್ ವರದಿಯ ಪ್ರಾಯೋಜಕರು: ಬಿಗ್‍ಬಾಸ್ ಡಾಲರ್ ಬನಿಯನ್ ಮತ್ತು ಅಂಡರ್‍ವೇರ್ ಕಂಪನಿ!

‘ವೀಕೆಂಡ್ ವಿಥ್ ರಮೇಶ್’ ನೋಡಿದ ಮೇಲೆ ಅನಿಸಿದ್ದು: ಮೋದಿಯವರನ್ನು ಅತಿಥಿಯಾಗಿ ಕರೆದರೆ ಹೇಗೆ? ಓದಿದ ಸ್ಕೂಲ್, ಚಾ ಮಾರಿದ ಸ್ಟೇಷನ್, ಅವರ ಬಾಲ್ಯದ ಸಹಪಾಠಿಗಳನ್ನು ಕರೆಸಲು ಸಾಧ್ಯವಾ? ಅವರ ತಾಯಿ ಕರೆಸಬಹುದು, ಪತ್ನಿ ಬರುವುದು ಡೌಟು… ಸರ್, ಮಾವಿನ ಹಣ್ಣು ತಿಂದು ತೋರಿಸಿ ಅನ್ನೋದು…..ಇವೆಲ್ಲ ಕಷ್ಟ ಅಲ್ಲವಾ ರಮೇಶ್ ಅರವಿಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...