Homeಕರ್ನಾಟಕಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

- Advertisement -
- Advertisement -

4ನೇ ಹಂತದ ಮತದಾನದ ಹಿಂದಿನ ದಿನ ರಿಪ್ಲಬಿಕ್ ಟಿವಿಯಲ್ಲಿ, ‘ಸಂಡೇ ಡಿಬೇಟ್ ವಿತ್ ಅರ್ನಾಬ್ ಗೋಸ್ವಾಮಿ’ ಕಾರ್ಯಕ್ರಮದ ಟೈಟಲ್ಲೇ #ModiWaveElection…

ಚರ್ಚೆಯ ಸಂದೇಶ ಏನಾಗಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿಯೇ ಗೋಸ್ವಾಮಿ ಕಾರ್ಯಕ್ರಮ ರೂಪಿಸಿರುತ್ತಾರಲ್ಲವಾ? ಚರ್ಚೆ ಶುರುವಾಗುತ್ತಲೇ ಮರಿ ಗೋಸ್ವಾಮಿಗಳಾಗಿರುವ ಅವರ ಅಭಿಮಾನಿಗಳು ತಮ್ಮ ಮನದಿಂಗಿತವನ್ನು ಟ್ವೀಟ್ ಮಾಡಲು ಶುರು ಮಾಡಿಬಿಡುತ್ತಾರೆ.

ಚರ್ಚೆಯಲ್ಲಿ ಬಿಜೆಪಿ ವಿರೋಧಿ ಪ್ಯಾನಲಿಸ್ಟ್ ಅರ್ಥಪೂರ್ಣವಾಗಿ ವಾದ ಮಂಡಿಸತೊಡಗಿದರೆ, ಗೋಸ್ವಾಮಿ ಚೀರಾಡಿ, ಹಾರಾಡಿ ವಿಷಯವನ್ನು ಎತ್ತೆತ್ತಲೋ ಒಯ್ದು ಬಿಡುತ್ತಾರೆ. ಮೊನ್ನೆ ರವಿವಾರವೂ ಅವರೂ ಅದನ್ನೇ ಮಾಡಿದರು. ಇದು ‘ಮೋದಿ ಅಲೆ ಚುನಾವಣೆ’ ಎಂಬ ಅವರ ನಿಲುವನ್ನು ಮುನ್ನೆಲೆಗೆ ತರಲು ಹರಸಾಹಸ ಮಾಡಿದರು….

ಮಂಡ್ಯದ ನಂತರ ನಮ್ಮ ಚಾನೆಲಗಳಿಗೆ ಆಕರ್ಷಕವಾಗಿ ಕಂಡಿದ್ದು ವಾರಣಾಸಿ. ಮೋದಿಯವರ ನಾಮಿನೇಶನ್ ಅವುಗಳ ಪಾಲಿಗೆ ‘ಸ್ವಾಮಿ-ನೇಷನ್’ ಅನಿಸಿರಬೇಕು. ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಚಾನೆಲ್ಲುಗಳಲ್ಲಿ ಎರಡು ದಿನ ವಾರಣಾಸಿಯ ಜಪ. ಪ್ರಧಾನಿಯ ನಾಮಪತ್ರ ಸಲ್ಲಿಕೆ ಓಕೆ, ಜನರಿಗೆ ಅಲ್ಲಿನ ವಾತಾವರಣ ತೋರಿಸಬೇಕು, ಅದೂ ಸರಿ. ಆದರೆ, ರಾಜಕೀಯದೊಂದಿಗೆ ಧಾರ್ಮಿಕತೆಯನ್ನು ಬೆರೆಸಿ, ವೀಕ್ಷಕರಲ್ಲಿ ಕಾಶಿ ವಿಶ್ವನಾಥನ ಬಗ್ಗೆ ಇರಬಹುದಾದ ಭಕ್ತಿಯನ್ನು ಮೋದಿಗೆ ‘ಟ್ರಾನ್ಸ್‍ಫರ್’ ಮಾಡಲು ಹೆಣಗಲಾಯಿತು.

ರಾಜ್ಯದಲ್ಲಿ ಮತದಾನ ಮುಗಿದಿದ್ದರೂ ಕನ್ನಡದ ಚಾನೆಲ್‍ಗಳೂ ಹಿಂದಿಯವರಂತೆ ಉತ್ಸುಕವಾಗಿಯೇ ನಾಮಪತ್ರ ಸಲ್ಲಿಕೆಯನ್ನು ಪ್ರಸಾರ ಮಾಡಿದರು. ಬಹುಷ: ಇದು ಪ್ಯಾಕೇಜ್‍ನ ಭಾಗವಾಗಿರಬಹುದು.

ದಿಗ್ವಿಜಯಕ್ಕೆ ಯುದ್ಧ ಗೆದ್ದ ಸಂಭ್ರಮ. ನೇರ ಪ್ರಸಾರದ ಜೊತೆಗೆ ವಿಶೇಷ ಕಾರ್ಯಕ್ರಮ ಬೇರೆ! ‘ವೈರಿಪಡೆಗೆ ನಮೋ ಖಬರ್‍ದಾರ್ ಮೆಸೇಜ್!’ – ಮೋದಿ ನಾಮಿನೇಶನ್ ಭಾಷಣ ಮಾಡುವ ಮೊದಲೇ ಈ ತರಹದ ಹೆಡ್ಡಿಂಗ್! ಗಂಗಾ ಆರತಿ ಮೂಲಕ ವಿಪಕ್ಷಗಳಿಗೆ ವಾರ್ನಿಂಗ್ ಕೊಟ್ಟರೆಂದೇ? ಅಲ್ಲಿ ಸೇರಿಸಿದ ಜನರನ್ನು ಇಟ್ಟುಕೊಂಡು ದಿಗ್ವಿಜಯ ಹೀಗೆ ಹೇಳಿತೋ ಗೊತ್ತಾಗಲಿಲ್ಲ!

ಟಿವಿ9 ಪಾಲಿಗೆ ಮೋದಿ ‘ಕಾಶಿಯ ಕೊತ್ವಾಲ’… ವಿಶ್ವನಾಥನೇ ಬಲ್ಲ ಇದರ ಮರ್ಮ! ನ್ಯೂಸ್18ನಲ್ಲಿ ವಿಶೇಷ ಕಾರ್ಯಕ್ರಮ- ‘ದಶಾಶ್ವಮೇಧ ರಹಸ್ಯ, ಗಂಗಾ ಆರತಿ (ಅವರ ಪರದೆ ಮೇಲೆ ಗಂಗಾರತಿ ಎಂದಿತ್ತು!) ವಿಸ್ಮಯ, ಪ್ರತ್ಯಕ್ಷರಾದ ಸಾಧುಗಳು’….ಸೂಪರ್ ಮಾಮ! ಪ್ರತ್ಯಕ್ಷವಾಗುವವರೆಗೆ ಸಾಧುಗಳು ಎಲ್ಲಿದ್ದರು? ಅಥವಾ ಮೇಲಿಂದ ಉದುರಿ ಬಿದ್ದರಾ?

ಬಿಟಿವಿಯವರಂತೂ ರಾಧಿಕಾ ಹಿರೇಗೌಡರ್ ಅವರನ್ನೇ ವಾರಣಾಸಿಯಲ್ಲಿ ಲ್ಯಾಂಡ್ ಮಾಡಿಸಿದ್ದರು. ರಾಧಮ್ಮರಂತೂ ‘ಏನ್ ವೈಭವ, ಹಬ್ಬದ ಸಂಭ್ರಮ, ಎಲ್ಲೆಲ್ಲೂ ಎಲ್ಲೆಲ್ಲೂ ಎಲ್ಲೆಲ್ಲೂ…ಎಲ್ಲೆಲ್ಲೂ (ನಾಲ್ಕು ದಿಕ್ಕುಗಳ ಹೊರಳಿದ್ದರಿಂದ 4 ಸಲ ಹೇಳಿದರೋ?)…ಜನ ಸ್ವ-ಇಚ್ಛೆಯಿಂದ ಪಾಲ್ಗೊಂಡು ತಾವೇ ನಗರವನ್ನು ಸಿಂಗರಿಸಿದ್ದಾರೆ…’ -ನಾನ್‍ಸ್ಟಾಪ್ ಹೊಗಳಿಕೆಯಲ್ಲೇ ಕಾಲ ಕಳೆದರು.

ಮುಂದಿನ ಹಂತದ ಚುನಾವಣೆಗಳು ಹಿಂದಿ ಬೆಲ್ಟ್‍ನಲ್ಲೇ ಜಾಸ್ತಿ. ಹೀಗಾಗಿ ಹಿಂದಿ ಚಾನೆಲ್‍ಗಳಿಗೆ ವಿಶೇಷ ಪ್ಯಾಕೇಜ್ ಇದ್ದಂತಿತ್ತು. ಝೀ ಚಾನೆಲ್ ಪಾಲಿಗೆ ಶಿವನೇ ನಾಮಿನೇಶನ್‍ಗೆ ಬಂದಂತಿತ್ತು. ಆಜ್‍ತಕ್‍ನಲ್ಲಿ ನಿರೂಪಕಿ ಮತ್ತು ವಾರಣಾಸಿಯಲ್ಲಿ ಓಡಾಡುತ್ತಿದ್ದ ವರದಿಗಾರ್ತಿಯ ನಡುವಿನ ಮಾತು ಹೇಗಿದ್ದವು ಎಂದರೆ,

-ಯಾ ಪರಿ ಮಂದಿ…ಸಂದಿಗೊಂದಿಯಲ್ಲೆಲ್ಲ ಮಂದಿ…ಅಬಬಾ….ನಾ ನೋಡೆ ಇಲ್‍ಬಿಡು ಇಂತಹ ಸಂಭ್ರಮ…

-ಹೌದು ಹೌದು ನಾವು ನೋಡ್ತಾ ಇದ್ದೇವಲ್ಲ. ನೀನೇ ಲಕ್ಕಿ ಕಣೆ…ವಾರಣಾಸಿಯಲ್ಲೇ ನಿಂತು ಇದನ್ನ ಕಣ್ತುಂಬಿಕೊಳ್ಳೋ ಭಾಗ್ಯ…

-ಧೂಮ್‍ಧಾಮ್ ಸೆ ಆಯೇಗಿ ಸರ್ಕಾರ್

ಈ ಲೈವ್ ವರದಿಯ ಪ್ರಾಯೋಜಕರು: ಬಿಗ್‍ಬಾಸ್ ಡಾಲರ್ ಬನಿಯನ್ ಮತ್ತು ಅಂಡರ್‍ವೇರ್ ಕಂಪನಿ!

‘ವೀಕೆಂಡ್ ವಿಥ್ ರಮೇಶ್’ ನೋಡಿದ ಮೇಲೆ ಅನಿಸಿದ್ದು: ಮೋದಿಯವರನ್ನು ಅತಿಥಿಯಾಗಿ ಕರೆದರೆ ಹೇಗೆ? ಓದಿದ ಸ್ಕೂಲ್, ಚಾ ಮಾರಿದ ಸ್ಟೇಷನ್, ಅವರ ಬಾಲ್ಯದ ಸಹಪಾಠಿಗಳನ್ನು ಕರೆಸಲು ಸಾಧ್ಯವಾ? ಅವರ ತಾಯಿ ಕರೆಸಬಹುದು, ಪತ್ನಿ ಬರುವುದು ಡೌಟು… ಸರ್, ಮಾವಿನ ಹಣ್ಣು ತಿಂದು ತೋರಿಸಿ ಅನ್ನೋದು…..ಇವೆಲ್ಲ ಕಷ್ಟ ಅಲ್ಲವಾ ರಮೇಶ್ ಅರವಿಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...