Homeಕರ್ನಾಟಕಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

- Advertisement -
- Advertisement -

4ನೇ ಹಂತದ ಮತದಾನದ ಹಿಂದಿನ ದಿನ ರಿಪ್ಲಬಿಕ್ ಟಿವಿಯಲ್ಲಿ, ‘ಸಂಡೇ ಡಿಬೇಟ್ ವಿತ್ ಅರ್ನಾಬ್ ಗೋಸ್ವಾಮಿ’ ಕಾರ್ಯಕ್ರಮದ ಟೈಟಲ್ಲೇ #ModiWaveElection…

ಚರ್ಚೆಯ ಸಂದೇಶ ಏನಾಗಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿಯೇ ಗೋಸ್ವಾಮಿ ಕಾರ್ಯಕ್ರಮ ರೂಪಿಸಿರುತ್ತಾರಲ್ಲವಾ? ಚರ್ಚೆ ಶುರುವಾಗುತ್ತಲೇ ಮರಿ ಗೋಸ್ವಾಮಿಗಳಾಗಿರುವ ಅವರ ಅಭಿಮಾನಿಗಳು ತಮ್ಮ ಮನದಿಂಗಿತವನ್ನು ಟ್ವೀಟ್ ಮಾಡಲು ಶುರು ಮಾಡಿಬಿಡುತ್ತಾರೆ.

ಚರ್ಚೆಯಲ್ಲಿ ಬಿಜೆಪಿ ವಿರೋಧಿ ಪ್ಯಾನಲಿಸ್ಟ್ ಅರ್ಥಪೂರ್ಣವಾಗಿ ವಾದ ಮಂಡಿಸತೊಡಗಿದರೆ, ಗೋಸ್ವಾಮಿ ಚೀರಾಡಿ, ಹಾರಾಡಿ ವಿಷಯವನ್ನು ಎತ್ತೆತ್ತಲೋ ಒಯ್ದು ಬಿಡುತ್ತಾರೆ. ಮೊನ್ನೆ ರವಿವಾರವೂ ಅವರೂ ಅದನ್ನೇ ಮಾಡಿದರು. ಇದು ‘ಮೋದಿ ಅಲೆ ಚುನಾವಣೆ’ ಎಂಬ ಅವರ ನಿಲುವನ್ನು ಮುನ್ನೆಲೆಗೆ ತರಲು ಹರಸಾಹಸ ಮಾಡಿದರು….

ಮಂಡ್ಯದ ನಂತರ ನಮ್ಮ ಚಾನೆಲಗಳಿಗೆ ಆಕರ್ಷಕವಾಗಿ ಕಂಡಿದ್ದು ವಾರಣಾಸಿ. ಮೋದಿಯವರ ನಾಮಿನೇಶನ್ ಅವುಗಳ ಪಾಲಿಗೆ ‘ಸ್ವಾಮಿ-ನೇಷನ್’ ಅನಿಸಿರಬೇಕು. ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಚಾನೆಲ್ಲುಗಳಲ್ಲಿ ಎರಡು ದಿನ ವಾರಣಾಸಿಯ ಜಪ. ಪ್ರಧಾನಿಯ ನಾಮಪತ್ರ ಸಲ್ಲಿಕೆ ಓಕೆ, ಜನರಿಗೆ ಅಲ್ಲಿನ ವಾತಾವರಣ ತೋರಿಸಬೇಕು, ಅದೂ ಸರಿ. ಆದರೆ, ರಾಜಕೀಯದೊಂದಿಗೆ ಧಾರ್ಮಿಕತೆಯನ್ನು ಬೆರೆಸಿ, ವೀಕ್ಷಕರಲ್ಲಿ ಕಾಶಿ ವಿಶ್ವನಾಥನ ಬಗ್ಗೆ ಇರಬಹುದಾದ ಭಕ್ತಿಯನ್ನು ಮೋದಿಗೆ ‘ಟ್ರಾನ್ಸ್‍ಫರ್’ ಮಾಡಲು ಹೆಣಗಲಾಯಿತು.

ರಾಜ್ಯದಲ್ಲಿ ಮತದಾನ ಮುಗಿದಿದ್ದರೂ ಕನ್ನಡದ ಚಾನೆಲ್‍ಗಳೂ ಹಿಂದಿಯವರಂತೆ ಉತ್ಸುಕವಾಗಿಯೇ ನಾಮಪತ್ರ ಸಲ್ಲಿಕೆಯನ್ನು ಪ್ರಸಾರ ಮಾಡಿದರು. ಬಹುಷ: ಇದು ಪ್ಯಾಕೇಜ್‍ನ ಭಾಗವಾಗಿರಬಹುದು.

ದಿಗ್ವಿಜಯಕ್ಕೆ ಯುದ್ಧ ಗೆದ್ದ ಸಂಭ್ರಮ. ನೇರ ಪ್ರಸಾರದ ಜೊತೆಗೆ ವಿಶೇಷ ಕಾರ್ಯಕ್ರಮ ಬೇರೆ! ‘ವೈರಿಪಡೆಗೆ ನಮೋ ಖಬರ್‍ದಾರ್ ಮೆಸೇಜ್!’ – ಮೋದಿ ನಾಮಿನೇಶನ್ ಭಾಷಣ ಮಾಡುವ ಮೊದಲೇ ಈ ತರಹದ ಹೆಡ್ಡಿಂಗ್! ಗಂಗಾ ಆರತಿ ಮೂಲಕ ವಿಪಕ್ಷಗಳಿಗೆ ವಾರ್ನಿಂಗ್ ಕೊಟ್ಟರೆಂದೇ? ಅಲ್ಲಿ ಸೇರಿಸಿದ ಜನರನ್ನು ಇಟ್ಟುಕೊಂಡು ದಿಗ್ವಿಜಯ ಹೀಗೆ ಹೇಳಿತೋ ಗೊತ್ತಾಗಲಿಲ್ಲ!

ಟಿವಿ9 ಪಾಲಿಗೆ ಮೋದಿ ‘ಕಾಶಿಯ ಕೊತ್ವಾಲ’… ವಿಶ್ವನಾಥನೇ ಬಲ್ಲ ಇದರ ಮರ್ಮ! ನ್ಯೂಸ್18ನಲ್ಲಿ ವಿಶೇಷ ಕಾರ್ಯಕ್ರಮ- ‘ದಶಾಶ್ವಮೇಧ ರಹಸ್ಯ, ಗಂಗಾ ಆರತಿ (ಅವರ ಪರದೆ ಮೇಲೆ ಗಂಗಾರತಿ ಎಂದಿತ್ತು!) ವಿಸ್ಮಯ, ಪ್ರತ್ಯಕ್ಷರಾದ ಸಾಧುಗಳು’….ಸೂಪರ್ ಮಾಮ! ಪ್ರತ್ಯಕ್ಷವಾಗುವವರೆಗೆ ಸಾಧುಗಳು ಎಲ್ಲಿದ್ದರು? ಅಥವಾ ಮೇಲಿಂದ ಉದುರಿ ಬಿದ್ದರಾ?

ಬಿಟಿವಿಯವರಂತೂ ರಾಧಿಕಾ ಹಿರೇಗೌಡರ್ ಅವರನ್ನೇ ವಾರಣಾಸಿಯಲ್ಲಿ ಲ್ಯಾಂಡ್ ಮಾಡಿಸಿದ್ದರು. ರಾಧಮ್ಮರಂತೂ ‘ಏನ್ ವೈಭವ, ಹಬ್ಬದ ಸಂಭ್ರಮ, ಎಲ್ಲೆಲ್ಲೂ ಎಲ್ಲೆಲ್ಲೂ ಎಲ್ಲೆಲ್ಲೂ…ಎಲ್ಲೆಲ್ಲೂ (ನಾಲ್ಕು ದಿಕ್ಕುಗಳ ಹೊರಳಿದ್ದರಿಂದ 4 ಸಲ ಹೇಳಿದರೋ?)…ಜನ ಸ್ವ-ಇಚ್ಛೆಯಿಂದ ಪಾಲ್ಗೊಂಡು ತಾವೇ ನಗರವನ್ನು ಸಿಂಗರಿಸಿದ್ದಾರೆ…’ -ನಾನ್‍ಸ್ಟಾಪ್ ಹೊಗಳಿಕೆಯಲ್ಲೇ ಕಾಲ ಕಳೆದರು.

ಮುಂದಿನ ಹಂತದ ಚುನಾವಣೆಗಳು ಹಿಂದಿ ಬೆಲ್ಟ್‍ನಲ್ಲೇ ಜಾಸ್ತಿ. ಹೀಗಾಗಿ ಹಿಂದಿ ಚಾನೆಲ್‍ಗಳಿಗೆ ವಿಶೇಷ ಪ್ಯಾಕೇಜ್ ಇದ್ದಂತಿತ್ತು. ಝೀ ಚಾನೆಲ್ ಪಾಲಿಗೆ ಶಿವನೇ ನಾಮಿನೇಶನ್‍ಗೆ ಬಂದಂತಿತ್ತು. ಆಜ್‍ತಕ್‍ನಲ್ಲಿ ನಿರೂಪಕಿ ಮತ್ತು ವಾರಣಾಸಿಯಲ್ಲಿ ಓಡಾಡುತ್ತಿದ್ದ ವರದಿಗಾರ್ತಿಯ ನಡುವಿನ ಮಾತು ಹೇಗಿದ್ದವು ಎಂದರೆ,

-ಯಾ ಪರಿ ಮಂದಿ…ಸಂದಿಗೊಂದಿಯಲ್ಲೆಲ್ಲ ಮಂದಿ…ಅಬಬಾ….ನಾ ನೋಡೆ ಇಲ್‍ಬಿಡು ಇಂತಹ ಸಂಭ್ರಮ…

-ಹೌದು ಹೌದು ನಾವು ನೋಡ್ತಾ ಇದ್ದೇವಲ್ಲ. ನೀನೇ ಲಕ್ಕಿ ಕಣೆ…ವಾರಣಾಸಿಯಲ್ಲೇ ನಿಂತು ಇದನ್ನ ಕಣ್ತುಂಬಿಕೊಳ್ಳೋ ಭಾಗ್ಯ…

-ಧೂಮ್‍ಧಾಮ್ ಸೆ ಆಯೇಗಿ ಸರ್ಕಾರ್

ಈ ಲೈವ್ ವರದಿಯ ಪ್ರಾಯೋಜಕರು: ಬಿಗ್‍ಬಾಸ್ ಡಾಲರ್ ಬನಿಯನ್ ಮತ್ತು ಅಂಡರ್‍ವೇರ್ ಕಂಪನಿ!

‘ವೀಕೆಂಡ್ ವಿಥ್ ರಮೇಶ್’ ನೋಡಿದ ಮೇಲೆ ಅನಿಸಿದ್ದು: ಮೋದಿಯವರನ್ನು ಅತಿಥಿಯಾಗಿ ಕರೆದರೆ ಹೇಗೆ? ಓದಿದ ಸ್ಕೂಲ್, ಚಾ ಮಾರಿದ ಸ್ಟೇಷನ್, ಅವರ ಬಾಲ್ಯದ ಸಹಪಾಠಿಗಳನ್ನು ಕರೆಸಲು ಸಾಧ್ಯವಾ? ಅವರ ತಾಯಿ ಕರೆಸಬಹುದು, ಪತ್ನಿ ಬರುವುದು ಡೌಟು… ಸರ್, ಮಾವಿನ ಹಣ್ಣು ತಿಂದು ತೋರಿಸಿ ಅನ್ನೋದು…..ಇವೆಲ್ಲ ಕಷ್ಟ ಅಲ್ಲವಾ ರಮೇಶ್ ಅರವಿಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಸ್ಲಾಮಾಬಾದ್ ಸಂದಾನ ವಿಫಲ; ಇರಾನ್ ಜೊತೆ ಹೊಸ ಮಾತುಕತೆ ನಡೆಸಲು ಅಮೆರಿಕ ಚಿಂತನೆ

ಪ್ರಸ್ತುತ ಅಮೆರಿಕ ಮತ್ತು ಇರಾನ್‌ ನಡುವಿನ ಕದನ ವಿರಾಮವು ತನ್ನ ಗಡುವನ್ನು ಸಮೀಪಿಸುತ್ತಿದ್ದಂತೆ ಇರಾನ್ ಅಧಿಕಾರಿಗಳೊಂದಿಗೆ ಮತ್ತೊಂದು ಮುಖಾಮುಖಿ ಸಭೆ ನಡೆಸುವ ಆಯ್ಕೆಯನ್ನು ಅಮೆರಿಕ ಪರಿಗಣಿಸುತ್ತಿದೆ ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ವರದಿ ತಿಳಿಸಿದೆ. ಸಭೆಯ...

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...