Homeಕರ್ನಾಟಕಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

ಚಾನೆಲ್ ಚಿತ್ರಾನ್ನ ಕಾಶಿಯ ಕೊತ್ವಾಲ, ಪ್ರತ್ಯಕ್ಷರಾದ ಸಾಧುಗಳು, ಖಬರ್ ದಾರ್ ಮೆಸೇಜ್

- Advertisement -
- Advertisement -

4ನೇ ಹಂತದ ಮತದಾನದ ಹಿಂದಿನ ದಿನ ರಿಪ್ಲಬಿಕ್ ಟಿವಿಯಲ್ಲಿ, ‘ಸಂಡೇ ಡಿಬೇಟ್ ವಿತ್ ಅರ್ನಾಬ್ ಗೋಸ್ವಾಮಿ’ ಕಾರ್ಯಕ್ರಮದ ಟೈಟಲ್ಲೇ #ModiWaveElection…

ಚರ್ಚೆಯ ಸಂದೇಶ ಏನಾಗಿರಬೇಕು ಎಂಬುದನ್ನು ಮೊದಲೇ ನಿರ್ಧರಿಸಿಯೇ ಗೋಸ್ವಾಮಿ ಕಾರ್ಯಕ್ರಮ ರೂಪಿಸಿರುತ್ತಾರಲ್ಲವಾ? ಚರ್ಚೆ ಶುರುವಾಗುತ್ತಲೇ ಮರಿ ಗೋಸ್ವಾಮಿಗಳಾಗಿರುವ ಅವರ ಅಭಿಮಾನಿಗಳು ತಮ್ಮ ಮನದಿಂಗಿತವನ್ನು ಟ್ವೀಟ್ ಮಾಡಲು ಶುರು ಮಾಡಿಬಿಡುತ್ತಾರೆ.

ಚರ್ಚೆಯಲ್ಲಿ ಬಿಜೆಪಿ ವಿರೋಧಿ ಪ್ಯಾನಲಿಸ್ಟ್ ಅರ್ಥಪೂರ್ಣವಾಗಿ ವಾದ ಮಂಡಿಸತೊಡಗಿದರೆ, ಗೋಸ್ವಾಮಿ ಚೀರಾಡಿ, ಹಾರಾಡಿ ವಿಷಯವನ್ನು ಎತ್ತೆತ್ತಲೋ ಒಯ್ದು ಬಿಡುತ್ತಾರೆ. ಮೊನ್ನೆ ರವಿವಾರವೂ ಅವರೂ ಅದನ್ನೇ ಮಾಡಿದರು. ಇದು ‘ಮೋದಿ ಅಲೆ ಚುನಾವಣೆ’ ಎಂಬ ಅವರ ನಿಲುವನ್ನು ಮುನ್ನೆಲೆಗೆ ತರಲು ಹರಸಾಹಸ ಮಾಡಿದರು….

ಮಂಡ್ಯದ ನಂತರ ನಮ್ಮ ಚಾನೆಲಗಳಿಗೆ ಆಕರ್ಷಕವಾಗಿ ಕಂಡಿದ್ದು ವಾರಣಾಸಿ. ಮೋದಿಯವರ ನಾಮಿನೇಶನ್ ಅವುಗಳ ಪಾಲಿಗೆ ‘ಸ್ವಾಮಿ-ನೇಷನ್’ ಅನಿಸಿರಬೇಕು. ಇಂಗ್ಲಿಷ್, ಹಿಂದಿ ಮತ್ತು ಪ್ರಾದೇಶಿಕ ಚಾನೆಲ್ಲುಗಳಲ್ಲಿ ಎರಡು ದಿನ ವಾರಣಾಸಿಯ ಜಪ. ಪ್ರಧಾನಿಯ ನಾಮಪತ್ರ ಸಲ್ಲಿಕೆ ಓಕೆ, ಜನರಿಗೆ ಅಲ್ಲಿನ ವಾತಾವರಣ ತೋರಿಸಬೇಕು, ಅದೂ ಸರಿ. ಆದರೆ, ರಾಜಕೀಯದೊಂದಿಗೆ ಧಾರ್ಮಿಕತೆಯನ್ನು ಬೆರೆಸಿ, ವೀಕ್ಷಕರಲ್ಲಿ ಕಾಶಿ ವಿಶ್ವನಾಥನ ಬಗ್ಗೆ ಇರಬಹುದಾದ ಭಕ್ತಿಯನ್ನು ಮೋದಿಗೆ ‘ಟ್ರಾನ್ಸ್‍ಫರ್’ ಮಾಡಲು ಹೆಣಗಲಾಯಿತು.

ರಾಜ್ಯದಲ್ಲಿ ಮತದಾನ ಮುಗಿದಿದ್ದರೂ ಕನ್ನಡದ ಚಾನೆಲ್‍ಗಳೂ ಹಿಂದಿಯವರಂತೆ ಉತ್ಸುಕವಾಗಿಯೇ ನಾಮಪತ್ರ ಸಲ್ಲಿಕೆಯನ್ನು ಪ್ರಸಾರ ಮಾಡಿದರು. ಬಹುಷ: ಇದು ಪ್ಯಾಕೇಜ್‍ನ ಭಾಗವಾಗಿರಬಹುದು.

ದಿಗ್ವಿಜಯಕ್ಕೆ ಯುದ್ಧ ಗೆದ್ದ ಸಂಭ್ರಮ. ನೇರ ಪ್ರಸಾರದ ಜೊತೆಗೆ ವಿಶೇಷ ಕಾರ್ಯಕ್ರಮ ಬೇರೆ! ‘ವೈರಿಪಡೆಗೆ ನಮೋ ಖಬರ್‍ದಾರ್ ಮೆಸೇಜ್!’ – ಮೋದಿ ನಾಮಿನೇಶನ್ ಭಾಷಣ ಮಾಡುವ ಮೊದಲೇ ಈ ತರಹದ ಹೆಡ್ಡಿಂಗ್! ಗಂಗಾ ಆರತಿ ಮೂಲಕ ವಿಪಕ್ಷಗಳಿಗೆ ವಾರ್ನಿಂಗ್ ಕೊಟ್ಟರೆಂದೇ? ಅಲ್ಲಿ ಸೇರಿಸಿದ ಜನರನ್ನು ಇಟ್ಟುಕೊಂಡು ದಿಗ್ವಿಜಯ ಹೀಗೆ ಹೇಳಿತೋ ಗೊತ್ತಾಗಲಿಲ್ಲ!

ಟಿವಿ9 ಪಾಲಿಗೆ ಮೋದಿ ‘ಕಾಶಿಯ ಕೊತ್ವಾಲ’… ವಿಶ್ವನಾಥನೇ ಬಲ್ಲ ಇದರ ಮರ್ಮ! ನ್ಯೂಸ್18ನಲ್ಲಿ ವಿಶೇಷ ಕಾರ್ಯಕ್ರಮ- ‘ದಶಾಶ್ವಮೇಧ ರಹಸ್ಯ, ಗಂಗಾ ಆರತಿ (ಅವರ ಪರದೆ ಮೇಲೆ ಗಂಗಾರತಿ ಎಂದಿತ್ತು!) ವಿಸ್ಮಯ, ಪ್ರತ್ಯಕ್ಷರಾದ ಸಾಧುಗಳು’….ಸೂಪರ್ ಮಾಮ! ಪ್ರತ್ಯಕ್ಷವಾಗುವವರೆಗೆ ಸಾಧುಗಳು ಎಲ್ಲಿದ್ದರು? ಅಥವಾ ಮೇಲಿಂದ ಉದುರಿ ಬಿದ್ದರಾ?

ಬಿಟಿವಿಯವರಂತೂ ರಾಧಿಕಾ ಹಿರೇಗೌಡರ್ ಅವರನ್ನೇ ವಾರಣಾಸಿಯಲ್ಲಿ ಲ್ಯಾಂಡ್ ಮಾಡಿಸಿದ್ದರು. ರಾಧಮ್ಮರಂತೂ ‘ಏನ್ ವೈಭವ, ಹಬ್ಬದ ಸಂಭ್ರಮ, ಎಲ್ಲೆಲ್ಲೂ ಎಲ್ಲೆಲ್ಲೂ ಎಲ್ಲೆಲ್ಲೂ…ಎಲ್ಲೆಲ್ಲೂ (ನಾಲ್ಕು ದಿಕ್ಕುಗಳ ಹೊರಳಿದ್ದರಿಂದ 4 ಸಲ ಹೇಳಿದರೋ?)…ಜನ ಸ್ವ-ಇಚ್ಛೆಯಿಂದ ಪಾಲ್ಗೊಂಡು ತಾವೇ ನಗರವನ್ನು ಸಿಂಗರಿಸಿದ್ದಾರೆ…’ -ನಾನ್‍ಸ್ಟಾಪ್ ಹೊಗಳಿಕೆಯಲ್ಲೇ ಕಾಲ ಕಳೆದರು.

ಮುಂದಿನ ಹಂತದ ಚುನಾವಣೆಗಳು ಹಿಂದಿ ಬೆಲ್ಟ್‍ನಲ್ಲೇ ಜಾಸ್ತಿ. ಹೀಗಾಗಿ ಹಿಂದಿ ಚಾನೆಲ್‍ಗಳಿಗೆ ವಿಶೇಷ ಪ್ಯಾಕೇಜ್ ಇದ್ದಂತಿತ್ತು. ಝೀ ಚಾನೆಲ್ ಪಾಲಿಗೆ ಶಿವನೇ ನಾಮಿನೇಶನ್‍ಗೆ ಬಂದಂತಿತ್ತು. ಆಜ್‍ತಕ್‍ನಲ್ಲಿ ನಿರೂಪಕಿ ಮತ್ತು ವಾರಣಾಸಿಯಲ್ಲಿ ಓಡಾಡುತ್ತಿದ್ದ ವರದಿಗಾರ್ತಿಯ ನಡುವಿನ ಮಾತು ಹೇಗಿದ್ದವು ಎಂದರೆ,

-ಯಾ ಪರಿ ಮಂದಿ…ಸಂದಿಗೊಂದಿಯಲ್ಲೆಲ್ಲ ಮಂದಿ…ಅಬಬಾ….ನಾ ನೋಡೆ ಇಲ್‍ಬಿಡು ಇಂತಹ ಸಂಭ್ರಮ…

-ಹೌದು ಹೌದು ನಾವು ನೋಡ್ತಾ ಇದ್ದೇವಲ್ಲ. ನೀನೇ ಲಕ್ಕಿ ಕಣೆ…ವಾರಣಾಸಿಯಲ್ಲೇ ನಿಂತು ಇದನ್ನ ಕಣ್ತುಂಬಿಕೊಳ್ಳೋ ಭಾಗ್ಯ…

-ಧೂಮ್‍ಧಾಮ್ ಸೆ ಆಯೇಗಿ ಸರ್ಕಾರ್

ಈ ಲೈವ್ ವರದಿಯ ಪ್ರಾಯೋಜಕರು: ಬಿಗ್‍ಬಾಸ್ ಡಾಲರ್ ಬನಿಯನ್ ಮತ್ತು ಅಂಡರ್‍ವೇರ್ ಕಂಪನಿ!

‘ವೀಕೆಂಡ್ ವಿಥ್ ರಮೇಶ್’ ನೋಡಿದ ಮೇಲೆ ಅನಿಸಿದ್ದು: ಮೋದಿಯವರನ್ನು ಅತಿಥಿಯಾಗಿ ಕರೆದರೆ ಹೇಗೆ? ಓದಿದ ಸ್ಕೂಲ್, ಚಾ ಮಾರಿದ ಸ್ಟೇಷನ್, ಅವರ ಬಾಲ್ಯದ ಸಹಪಾಠಿಗಳನ್ನು ಕರೆಸಲು ಸಾಧ್ಯವಾ? ಅವರ ತಾಯಿ ಕರೆಸಬಹುದು, ಪತ್ನಿ ಬರುವುದು ಡೌಟು… ಸರ್, ಮಾವಿನ ಹಣ್ಣು ತಿಂದು ತೋರಿಸಿ ಅನ್ನೋದು…..ಇವೆಲ್ಲ ಕಷ್ಟ ಅಲ್ಲವಾ ರಮೇಶ್ ಅರವಿಂದ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...