Homeಮುಖಪುಟಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ 'ಮೊಟ್ಟೆ' ಔಟ್

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

- Advertisement -
- Advertisement -

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಬಿಸಿಯೂಟ ಒದಗಿಸುವ ಜವಾಬ್ದಾರಿಯನ್ನು ಹಿಂದೂ ಧಾರ್ಮಿಕ ಸಂಸ್ಥೆಯಾದ ಇಸ್ಕಾನ್‌ಗೆ ವಹಿಸಲಾಗಿದ್ದು, ಇದರ ಮೊದಲ ಪ್ರಮುಖ ಬದಲಾವಣೆಯಾಗಿ ಮೆನುವಿನಿಂದ ಮಾಂಸಾಹಾರಿ/ಮೊಟ್ಟೆ ಪದಾರ್ಥಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದೆ.

ಇಸ್ಕಾನ್ ಸಂಸ್ಥೆಯು ತನ್ನ ಆವರಣದಲ್ಲಿ ನೀಡುವ ಶುದ್ಧ ಸಸ್ಯಾಹಾರಿ ಊಟವು ಜನಪ್ರಿಯವಾಗಿದ್ದರೂ, ಈಗ ಸರ್ಕಾರದ ಹೊಸ ನಿರ್ಧಾರದಿಂದಾಗಿ ಶಾಲಾ ಮಕ್ಕಳಿಗೆ ತಮಗೆ ಇಷ್ಟಬಂದದ್ದನ್ನು ತಿನ್ನುವ ಆಯ್ಕೆ ಇಲ್ಲದಂತಾಗಿದೆ.

ಸೋಮವಾರ ಬಜೆಟ್ ಭಾಷಣದಲ್ಲಿ ಈ ಕುರಿತು ಪ್ರಕಟಿಸಿರುವ ಬಂಗಾಳದ ಹಣಕಾಸು ಸಚಿವ ಸ್ವಪನ್ ದಾಸ್‌ಗುಪ್ತಾ, “ಪ್ರಾಥಮಿಕ ಶಾಲೆಗಳಲ್ಲಿ ಬಿಸಿಯೂಟದ ಸಾಮಗ್ರಿ ವೆಚ್ಚವನ್ನು ಪ್ರತಿ ವಿದ್ಯಾರ್ಥಿಗೆ ₹6.78 ರಿಂದ ₹10 ಕ್ಕೆ ಹೆಚ್ಚಿಸಲಾಗುವುದು. ಕೋಲ್ಕತ್ತಾ ಪಾಲಿಕೆ ವ್ಯಾಪ್ತಿಯ ಶಾಲೆಗಳಲ್ಲಿ ಪೌಷ್ಟಿಕಾಂಶಯುಕ್ತ ಬೇಯಿಸಿದ ಬಿಸಿಯೂಟವನ್ನು ಒದಗಿಸಲು ಇಸ್ಕಾನ್ ಸಂಸ್ಥೆಯನ್ನು ತೊಡಗಿಸಿಕೊಳ್ಳಲಾಗುವುದು,” ಎಂದು ತಿಳಿಸಿದ್ದಾರೆ.

1995 ರ ಆಗಸ್ಟ್ 15 ರಂದು ಕೇಂದ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಆರಂಭವಾದ ಈ ಯೋಜನೆಗೆ ನಂತರದ ವರ್ಷಗಳಲ್ಲಿ ಅನ್ನ, ಬೇಳೆ ಸಾರು ನೀಡುವ ವ್ಯವಸ್ಥೆ ತರಲಾಯಿತು. ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಮೊಟ್ಟೆಯನ್ನು ನೀಡಲಾಗುತ್ತಿತ್ತು. ಉಳಿದ ಐದು ದಿನಗಳಲ್ಲಿ ಅನ್ನ, ದಾಲ್ ಮತ್ತು ಆಲೂಗಡ್ಡೆ ಪಲ್ಯವನ್ನು ನೀಡಲಾಗುತ್ತಿತ್ತು. ಮಕ್ಕಳಲ್ಲಿನ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಮೊಟ್ಟೆಯನ್ನು ಪ್ರೋಟೀನ್‌ನ ಪ್ರಮುಖ ಮೂಲವೆಂದು ಪರಿಗಣಿಸಲಾಗುತ್ತದೆ.

ಹಲವು ಶಾಲೆಗಳಲ್ಲಿ ಶಿಕ್ಷಕರೇ ಸ್ವತಃ ಹಣವನ್ನು ಸಂಗ್ರಹಿಸಿ ಮಕ್ಕಳಿಗೆ ಅಪರೂಪಕ್ಕೆ ಚಿಕನ್ ಅಥವಾ ಮೀನಿನ ಊಟವನ್ನು ಸಹ ಕೊಡಿಸುತ್ತಿದ್ದರು. ಮೊಟ್ಟೆ ಇಷ್ಟಪಡದ ಅಥವಾ ಸಸ್ಯಾಹಾರಿಗಳಾಗಿದ್ದ ವಿದ್ಯಾರ್ಥಿಗಳು ಅದನ್ನು ಬಿಟ್ಟು ಇತರ ಪದಾರ್ಥಗಳನ್ನು ಆಯ್ದುಕೊಳ್ಳುತ್ತಿದ್ದರು. ಆದರೆ ಈಗ ಇಡೀ ಮೆನುವನ್ನೇ ಬದಲಾಯಿಸಿರುವುದಕ್ಕೆ ವಿರೋಧ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಬಿಜೆಪಿ ಸರ್ಕಾರವು ಸಸ್ಯಾಹಾರವನ್ನು ಬಲವಂತವಾಗಿ ಹೇರುತ್ತಿದೆ ಎಂದು ಆರೋಪಿಸಿವೆ.

ಕೋಲ್ಕತ್ತಾದ ಇಸ್ಕಾನ್ ಉಪಾಧ್ಯಕ್ಷ ಮತ್ತು ವಕ್ತಾರ ರಾಧಾರಮಣ್ ದಾಸ್ ಮಾತನಾಡಿ, “ನಮ್ಮ ಬಿಸಿಯೂಟದಲ್ಲಿ ಮೊಟ್ಟೆ ಇರದಿದ್ದರೂ ಪೌಷ್ಟಿಕಾಂಶದಲ್ಲಿ ಯಾವುದೇ ಕೊರತೆಯಾಗುವುದಿಲ್ಲ. ನಾವು ಕಿಚಡಿಯೊಂದಿಗೆ ಪನೀರ್, ರಾಜ್ಮಾ ಮತ್ತು ಸೋಯಾಬೀನ್‌ಗಳಂತಹ ಪೌಷ್ಟಿಕಯುಕ್ತ ಪದಾರ್ಥಗಳನ್ನು ನೀಡುವ ಮೂಲಕ ಅದನ್ನು ಸರಿದೂಗಿಸುತ್ತೇವೆ. ಪ್ರಾಯೋಗಿಕ ಯೋಜನೆಯಾಗಿ ನಮ್ಮ ‘ಅನ್ನಮಿತ್ರ ಫೌಂಡೇಶನ್’ ಮೂಲಕ ಇದನ್ನು ಜಾರಿಗೊಳಿಸುತ್ತಿದ್ದೇವೆ. ಮಹಾರಾಷ್ಟ್ರ, ಹರಿಯಾಣ ಸೇರಿದಂತೆ ದೇಶದ ಎಂಟು ರಾಜ್ಯಗಳ 12 ಲಕ್ಷ ವಿದ್ಯಾರ್ಥಿಗಳಿಗೆ ನಾವು ಈಗಾಗಲೇ ಇದೇ ರೀತಿ ಶುದ್ಧ ಸಸ್ಯಾಹಾರಿ ಬಿಸಿಯೂಟ ನೀಡುತ್ತಿದ್ದೇವೆ,” ಎಂದು ಸಮರ್ಥಿಸಿಕೊಂಡಿದ್ದಾರೆ.

ಬಿಸಿಯೂಟದ ವೆಚ್ಚ ಹೆಚ್ಚಿಸಿರುವುದನ್ನು ಶಿಕ್ಷಕರು ಸ್ವಾಗತಿಸಿದ್ದಾರಾದರೂ, ಮಕ್ಕಳು ಸಂಪೂರ್ಣ ಸಸ್ಯಾಹಾರಿ ಮೆನುವಿಗೆ ಹೇಗೆ ಒಗ್ಗಿಕೊಳ್ಳುತ್ತಾರೆ ಎಂಬ ಗೊಂದಲದಲ್ಲಿದ್ದಾರೆ ಅಲ್ಲದೆ ಅವರ ಆಯ್ಕೆಗೆ ಅವಕಾಶವಿಲ್ಲ ಎಂದಿದ್ದಾರೆ ಎಂದು ‘ಟೆಲಿಗ್ರಾಫ್ ಇಂಡಿಯಾ’ ವರದಿ ಮಾಡಿದೆ.

“ಶಾಲೆಗಳಲ್ಲಿ ಮೊಟ್ಟೆ ನೀಡುವ ದಿನದಂದು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುತ್ತಾರೆ. ಇಸ್ಕಾನ್ ಸ್ವಚ್ಛವಾದ ಆಹಾರ ನೀಡುತ್ತದೆ ಎಂಬ ಭರವಸೆ ನಮಗಿದೆ, ಆದರೆ ಮಕ್ಕಳು ಸಂಪೂರ್ಣ ಸಸ್ಯಾಹಾರಕ್ಕೆ ಒಗ್ಗಿಕೊಳ್ಳುವುದು ಕಷ್ಟವಾಗಬಹುದು. ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲಿಸಿದರೆ ಒಳ್ಳೆಯದು.” ಎಂದು ರಾಜಾ ಡೇ (ಮುಖ್ಯೋಪಾಧ್ಯಾಯರು, ಮಿತ್ರ ಇನ್ಸ್ಟಿಟ್ಯೂಷನ್) ಟಿಲಿಗ್ರಾಫ್‌ ಇಂಡಿಯಾ ವರದಿ ಮಾಡಿದೆ.

“ನಮ್ಮ ಶಾಲೆಯ ಅನೇಕ ಬಡ ಮಕ್ಕಳಿಗೆ ಪನೀರ್ ಅಥವಾ ರಾಜ್ಮಾ ಎಂದರೆ ಏನೆಂದೇ ಗೊತ್ತಿಲ್ಲ. ಹೀಗಿದ್ದಾಗ ಇದು ಮಕ್ಕಳ ಮೇಲೆ ನಿರ್ದಿಷ್ಟ ಆಹಾರ ಪದ್ಧತಿಯನ್ನು ಬಲವಂತವಾಗಿ ಹೇರಿದಂತಾಗುತ್ತದೆ.” ಎಂದು ಸರ್ಕಾರಿ ಶಾಲಾ ಶಿಕ್ಷಕರಾದ ಸೌಗತ ಬಸು ತಿಳಿಸಿದ್ದಾರೆ.

ಬಿಜೆಪಿಯ ಶಿಕ್ಷಕರ ಸಂಘದ ಸಹ-ಸಂಚಾಲಕರಾದ ಪಿಂಟು ಪಾರುಯಿ ಮಾತನಾಡಿ, ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತಲೇ, “ಆಹಾರ ಪದಾರ್ಥಗಳನ್ನು ವಿದ್ಯಾರ್ಥಿಗಳ ಇಷ್ಟ ಮತ್ತು ಆದ್ಯತೆಗಳಿಗೆ ಅನುಗುಣವಾಗಿ ಸಿದ್ಧಪಡಿಸಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...