Homeಮುಖಪುಟಎನ್‌ಪಿಎಸ್‌ ನಿಯಮಗಳಲ್ಲಿ ಬದಲಾವಣೆ: ದಾಖಲೆಗಳ ಡಿಜಿಟಲೀಕರಣಕ್ಕೆ ಒತ್ತು

ಎನ್‌ಪಿಎಸ್‌ ನಿಯಮಗಳಲ್ಲಿ ಬದಲಾವಣೆ: ದಾಖಲೆಗಳ ಡಿಜಿಟಲೀಕರಣಕ್ಕೆ ಒತ್ತು

- Advertisement -
- Advertisement -

ಎನ್‌ಪಿಎಸ್ ಚಂದಾದಾರರಿಗೆ ವರ್ಷಾಸನ/ಅನ್ಯುಯಿಟಿ (ಚಂದಾದಾರರ ಶೇರುಗಳಿಗೆ ಏಜೆಂಟ್‌ಗಳು ಪಾವತಿಸುವ ಮೊತ್ತ) ಆದಾಯವನ್ನು ಸಕಾಲಿಕವಾಗಿ ಪಾವತಿಸುವುದನ್ನು ಖಚಿತಪಡಿಸಿಕೊಳ್ಳಲು ‘ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ’ (ಪಿಎಫ್‌ಆರ್‌ಡಿಎ) ಮಹತ್ವದ ಹೆಜ್ಜೆಯನ್ನು ಇಟ್ಟಿದೆ ಎಂದು ‘ಬಿಸಿನೆಸ್ ಲೈನ್’ ವರದಿ ಮಾಡಿದೆ.

ಸೆಂಟ್ರಲ್ ರೆಕಾರ್ಡ್ ಕೀಪಿಂಗ್ ಏಜೆನ್ಸಿಯ (CRA) ಬಳಕೆದಾರರ ಇಂಟರ್ಫೇಸ್‌ನಲ್ಲಿ ನಾಲ್ಕು ನಿರ್ದಿಷ್ಟ ದಾಖಲೆಗಳನ್ನು ಕಡ್ಡಾಯವಾಗಿ ಎನ್‌ಪಿಎಸ್‌ಪಿ ಚಂದಾದಾರರು ಡಿಜಿಟಲ್ ಮೂಲಕ ಅಪ್‌ಲೋಡ್ ಮಾಡಬೇಕಾಗುತ್ತಿದೆ.

ಸಾಮಾನ್ಯವಾಗಿ ನೋಡಲ್ ಕಚೇರಿಗಳಿಗೆ ನೇರವಾಗಿಯೇ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ ಪ್ರಸ್ತುತ ಚಾಲ್ತಿಯಲ್ಲಿತ್ತು. ಈಗ ಈ ವ್ಯವಸ್ಥೆಯನ್ನು ಸಂಪೂರ್ಣವಾಗಿ ಡಿಜಿಟಲ್‌ಗೆ ಬದಲಿಸಲಾಗುತ್ತಿದೆ.

(ವರ್ಷಾಸನ ಸೇವಾ ಪೂರೈಕೆದಾರರಾಗಿ ಕಾರ್ಯನಿರ್ವಹಿಸುತ್ತಿರುವ) ಜೀವ ವಿಮಾ ಕಂಪನಿಗಳಿಗೆ ವೇಗವಾಗಿ ಪಾವತಿ ಮಾಡಲು ಈ ವ್ಯವಸ್ಥೆಯಿಂದ ಅನುಕೂಲವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಎನ್‌ಪಿಎಸ್ ಚಂದಾದಾರರು ದಾಖಲೆಗಳನ್ನು ತಾವಾಗಿಯೇ ಅಪ್‌ ಲೋಡ್ ಮಾಡಬೇಕಾಗುತ್ತದೆ. ಆಧಾರ್ ಮೂಲಕ ಅವುಗಳನ್ನು ದೃಢೀಕರಿಸಬೇಕಾಗುತ್ತದೆ.

ಎನ್‌ಪಿಎಸ್‌ ನಿರ್ಗಮನ ಅರ್ಜಿ, ವಿಳಾಸದ ಪುರಾವೆ, ಬ್ಯಾಂಕ್ ಖಾತೆಯ ಪುರಾವೆ ಮತ್ತು ಪಿಆರ್‌‌ಎಎನ್‌ (Permanent Retirement Account Number) ಕಾರ್ಡ್‌ನ ಪ್ರತಿ- ಈ ನಾಲ್ಕು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.

ಏಪ್ರಿಲ್ 1, 2023ರಿಂದ ಚಂದಾದಾರರಿಗೆ ಆಯ್ದ ದಾಖಲೆಗಳನ್ನು ಅಪ್‌ಲೋಡ್ ಮಾಡುವುದನ್ನು ಪಿಎಫ್‌ಆರ್‌ಡಿಎ ಕಡ್ಡಾಯಗೊಳಿಸಿದೆ.

ಇದನ್ನೂ ಓದಿರಿ: ಎನ್‌ಪಿಎಸ್‌ ನೌಕರರ ಮೇಲೆ ಸರ್ಕಾರಿ ನೌಕರರ ಸಂಘದಿಂದ ಹಲ್ಲೆ; ಷಡಕ್ಷರಿ ಮೇಲೆ ಗಂಭೀರ ಆರೋಪ

ಎನ್‌ಪಿಎಸ್‌ ಪ್ರಸ್ತುತ ನಿಯಮ

ಪ್ರಸ್ತುತವಾಗಿ ಎನ್‌ಪಿಎಸ್‌ ಚಂದಾದಾರರು ತಮ್ಮ ಪೂರ್ಣಾವಧಿಯ ಬಳಿಕ ಅನ್ಯುಯಿಟಿ ಯೋಜನೆಯನ್ನು ಖರೀದಿಸಬೇಕೆಂದರೆ ಒಟ್ಟು ಸಂಗ್ರಹವಾದ ಕಾರ್ಪಸ್‌ನ (ಅಂದರೆ ನಿರ್ದಿಷ್ಟ ಯೋಜನೆಯಲ್ಲಿ ಹೂಡಿಕೆ ಮಾಡಿದ ಒಟ್ಟು ಹಣದ) ಕನಿಷ್ಠ 40 ಪ್ರತಿಶತವನ್ನು ಬಳಸಬೇಕು. ಉಳಿದ ಶೇಕಡ 60ರಷ್ಟು ಎನ್‌ಪಿಎಸ್‌ ಕಾರ್ಪಸ್ ಅನ್ನು ಒಟ್ಟು ಮೊತ್ತವಾಗಿ ಹಿಂಪಡೆಯಬಹುದು.

ಒಟ್ಟು ಕಾರ್ಪಸ್ 5 ಲಕ್ಷಕ್ಕಿಂತ ಕಡಿಮೆ ಅಥವಾ ಸಮನಾಗಿದ್ದರೆ, ಚಂದಾದಾರರು ಸಂಪೂರ್ಣ ಒಟ್ಟು ಮೊತ್ತವನ್ನು ಹಿಂತೆಗೆದುಕೊಳ್ಳುವ ಆಯ್ಕೆಯನ್ನು ಹೊಂದಿರುತ್ತಾರೆ. 60 ವರ್ಷಕ್ಕಿಂತ ಮೊದಲು ಯೋಜನೆಯಿಂದ ಹೊರಗೆ ಬರುವುದಾದರೆ ಜೀವ ವಿಮಾ ಕಂಪನಿಯಿಂದ ಪಿಂಚಣಿ ಯೋಜನೆಯನ್ನು (ವರ್ಷಾಶನ) ಖರೀದಿಸಲು ಎನ್‌ಪಿಎಸ್‌ ಚಂದಾದಾರರು ಒಟ್ಟು ಎನ್‌ಪಿಎಸ್‌ ಕಾರ್ಪಸ್‌ನ ಶೇ. 80 ಪಾಲನ್ನು ನೀಡಬೇಕಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು ಬಾಂಗ್ಲಾದೇಶಿ ಎಂದು ನಿಂದನೆ; ಬುಲಂದ್‌ಶಹರ್‌ನಲ್ಲಿ ಹಿಂದೂ ರಕ್ಷಾ ದಳ ನಾಯಕನ ಬಂಧನ

ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಹಿಂದೂ ರಕ್ಷಾ ದಳದ ನಾಯಕನೊಬ್ಬ ಮುಸ್ಲಿಂ ಗ್ಯಾಸ್ ಏಜೆನ್ಸಿ ಮಾಲೀಕರನ್ನು "ಬಾಂಗ್ಲಾದೇಶಿ" ಎಂದು ಕರೆದು ಬೆದರಿಕೆ ಹಾಕುತ್ತಿರುವ ವೀಡಿಯೊ ಕಾಣಿಸಿಕೊಂಡ ನಂತರ ಆತನನ್ನು ಬಂಧಿಸಲಾಗಿದೆ. ಜಿಲ್ಲೆಯ ಖುರ್ಜಾ ನಗರದಲ್ಲಿ...

ಭಾರತ 6ನೇ ಅತ್ಯಂತ ಕಲುಷಿತ ರಾಷ್ಟ್ರ; ಉತ್ತರ ಪ್ರದೇಶದ ಲೋನಿ ವಿಶ್ವದ ಅತ್ಯಂತ ಕಲುಷಿತ ನಗರ: ವರದಿ

ಪ್ರಮುಖ ವಾಯು ಮಾಲಿನ್ಯಕಾರಕ ಸೂಕ್ಷ್ಮ ಕಣಗಳ ಮಟ್ಟದಲ್ಲಿ ಭಾರತ ಆರನೇ ಅತ್ಯಂತ ಕಲುಷಿತ ರಾಷ್ಟ್ರವಾಗಿದ್ದರೆ, ಉತ್ತರ ಪ್ರದೇಶದ ಲೋನಿ ಜಗತ್ತಿನಾದ್ಯಂತ ಅತ್ಯಂತ ಕಲುಷಿತ ನಗರವಾಗಿದೆ. ದೆಹಲಿ ನಾಲ್ಕನೇ ಸ್ಥಾನದಲ್ಲಿದೆ ಎಂದು ವಿಶ್ವ ವಾಯು...

ನಿಷ್ಕ್ರಿಯ ದಯಾಮರಣಕ್ಕೆ ಅನುಮತಿ ಪಡೆದ ಭಾರತದ ಮೊದಲ ವ್ಯಕ್ತಿ ಹರೀಶ್ ರಾಣಾ ದೆಹಲಿ ಏಮ್ಸ್‌ನಲ್ಲಿ ನಿಧನ

ಕಳೆದ 13 ವರ್ಷಗಳಿಂದ ಕೋಮಾದಲ್ಲಿದ್ದು ಜೀವನ್ಮರಣ ಹೋರಾಟ ನಡೆಸಿ, ಅಂತಿಮವಾಗಿ 2026ರ ಮಾರ್ಚ್ 11ರಂದು ನಿಷ್ಕ್ರಿಯ ದಯಾಮರಣಕ್ಕೆ ಸುಪ್ರೀಂ ಕೋರ್ಟ್‌ನಿಂದ ಅನುಮತಿ ಪಡೆದ 32 ವರ್ಷದ ಯುವಕ ಹರೀಶ್ ರಾಣಾ, ಮಂಗಳವಾರ (ಮಾ.24)...

ಪಶ್ಚಿಮ ಏಷ್ಯಾ ಸಂಘರ್ಷ: ಪಾಕಿಸ್ತಾನ ಮಧ್ಯವರ್ತಿಯಾದರೆ ಅದು ಭಾರತದ ರಾಜತಾಂತ್ರಿಕ ಹಿನ್ನೆಡೆಯಾಗಬಹುದು; ಕಾಂಗ್ರೆಸ್ 

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂವಹನದಲ್ಲಿ ಪಾಕಿಸ್ತಾನ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ವರದಿಗಳು ದೃಢಪಟ್ಟರೆ ಭಾರತಕ್ಕೆ ರಾಜತಾಂತ್ರಿಕ ಹಿನ್ನಡೆಯಾಗಬಹುದು ಎಂದು ಕಾಂಗ್ರೆಸ್ ಪಕ್ಷ ಮಂಗಳವಾರ ಹೇಳಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ಮಧ್ಯೆ,...

ಭಯೋತ್ಪಾದಕ ಚಟುವಟಿಕೆಗಳ ಆರೋಪ; ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ

ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನಾ ಚಟುವಟಿಕೆಗಳ ಆರೋಪದ ಮೇಲೆ ದೆಹಲಿಯ ವಿಶೇಷ ನ್ಯಾಯಾಲಯವು ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಆಕೆಯ ಸಹಚರರಾದ ಸೋಫಿ...

ಬಿಜೆಪಿ ಸೀಲ್ ಇರುವ ಚು.ಆಯೋಗದ ಪತ್ರದ ಕುರಿತ ಪೋಸ್ಟ್‌ಗಳನ್ನು ತೆಗೆದು ಹಾಕಲು ಕೇರಳ ಪೊಲೀಸರಿಂದ ಸೂಚನೆ

ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಕೇರಳ ರಾಜ್ಯ ಘಟಕದ ಸೀಲ್ ಇದ್ದ ಬಗ್ಗೆ ಸೋಮವಾರದಿಂದ (ಮಾ.23) ಭಾರೀ ಚರ್ಚೆಯಾಗುತ್ತಿದೆ. ಸಿಪಿಐ(ಎಂ), ಕಾಂಗ್ರೆಸ್, ಟಿಎಂಸಿ ಸೇರಿದಂತೆ ಪ್ರತಿಪಕ್ಷಗಳು ಮತ್ತು ಸಾಮಾಜಿಕ ಜಾಲತಾಣ ಬಳಕೆದಾರರು ಚುನಾವಣಾ...

ಪಂಜಾಬ್: ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳಕ್ಕೆ ಅಧಿಕಾರಿ ಆತ್ಮಹತ್ಯೆ; ಅಮೃತಸರದಲ್ಲಿ ಶವಪರೀಕ್ಷೆಗೆ ಕುಟುಂಬ ಒಪ್ಪಿಗೆ

ಪಂಜಾಬ್‌ನ ಮಾಜಿ ಸಚಿವ ಲಾಲ್‌ಜಿತ್ ಸಿಂಗ್ ಭುಲ್ಲರ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಗೋದಾಮು ನಿಗಮದ ಅಧಿಕಾರಿ ಗಗನ್‌ದೀಪ್ ಸಿಂಗ್ ರಾಂಧವ ಅವರ ಮರಣೋತ್ತರ ಪರೀಕ್ಷೆಯನ್ನು ಮಂಗಳವಾರ ಅಮೃತಸರದಲ್ಲಿ ನಡೆಸಲಾಗುವುದು...

ಮುಸ್ಲಿಂ ಮಹಿಳೆಯರು ‘ನಮಾಜ್’ ಮಾಡುತ್ತಿದ್ದ ಕೊಠಡಿಯಲ್ಲಿ ಮಂತ್ರ ಪಠಿಸಿದ ಬಿಜೆಪಿ ನಾಯಕಿ ಮಾಧವಿ ಲತಾ

ತೆಲಂಗಾಣದ ಭಾರತೀಯ ಜನತಾ ಪಕ್ಷದ (ಬಿಜೆಪಿ)ದ ವಿವಾದಾತ್ಮಕ ನಾಯಕಿ ಮಾಧವಿ ಲತಾ ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ಸುದ್ದಿಯಾಗಿದ್ದಾರೆ. ನಮಾಜ್‌ ಮಾಡುತ್ತಿದ್ದವರ ಹಿಂದೆ ಮಂತ್ರ ಪಠಿಸುತ್ತಿರುವ ಅವರ ವೀಡಿಯೊವೊಂದು ಮತ್ತೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್...

ತೂತುಕುಡಿ ಸಾತನ್‌ಕುಳಂ ತಂದೆ ಮಗನ ಕಸ್ಟಡಿ ಸಾವು ಪ್ರಕರಣ : ಒಂಬತ್ತು ಪೊಲೀಸರು ದೋಷಿಗಳು ಎಂದ ಕೋರ್ಟ್

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

4 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣ; ಗುರುಗ್ರಾಮ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್

ಹರಿಯಾಣದ ಗುರುಗ್ರಾಮದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ನಿರ್ವಹಿಸಿದ ಬಗ್ಗೆ ಹರಿಯಾಣ ಪೊಲೀಸರು ಮತ್ತು ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅವರನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಮಗುವಿನೊಂದಿಗೆ...