Homeಮುಖಪುಟಬೆದರಿಕೆಯಿಂದಾಗಿ ಅಪ್ರಾಪ್ತ ಕುಸ್ತಿಪಟು ಬ್ರಿಜ್ ಭೂಷಣ್ ವಿರುದ್ಧ ಹೇಳಿಕೆ ಬದಲಾಯಿಸಿದ್ದಾರೆ: ಸಾಕ್ಷಿ ಮಲಿಕ್ ಆರೋಪ

ಬೆದರಿಕೆಯಿಂದಾಗಿ ಅಪ್ರಾಪ್ತ ಕುಸ್ತಿಪಟು ಬ್ರಿಜ್ ಭೂಷಣ್ ವಿರುದ್ಧ ಹೇಳಿಕೆ ಬದಲಾಯಿಸಿದ್ದಾರೆ: ಸಾಕ್ಷಿ ಮಲಿಕ್ ಆರೋಪ

- Advertisement -
- Advertisement -

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದವರಲ್ಲಿ ಅಪ್ರಾಪ್ತ ಕುಸ್ತಿಪಟು ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿದ್ದರಿಂದ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಶನಿವಾರ ಹೇಳಿದ್ದಾರೆ.

ಬಿಜೆಪಿ ಸಂಸದ ಸಿಂಗ್ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ದೇಶದ ಅಗ್ರ ಕುಸ್ತಿಪಟುಗಳು ಏಪ್ರಿಲ್‌ನಿಂದ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಲ್ಲಿ ಸಾಕ್ಷಿ ಮಲಿಕ್ ಕೂಡ ಒಬ್ಬರು.

ಜೂನ್ 15 ರಂದು, ದೆಹಲಿ ಪೊಲೀಸರು ಸಿಂಗ್ ವಿರುದ್ಧ ಯಾವುದೇ ದೃಢೀಕರಿಸುವ ಸಾಕ್ಷ್ಯಗಳಿಲ್ಲ ಎಂದು ಹೇಳುವ ಮೂಲಕ ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣವನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿದರು. ಬಾಲಕಿ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ನಾವು ಶಿಫಾರಸು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲಿಕ್ ಮತ್ತು ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯನ್ ಶನಿವಾರ ಟ್ವಿಟರ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಿದರು, ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಅವರ ವಿರುದ್ಧ ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದರು.

ಇದನ್ನೂ ಓದಿ: ಲೈಂಗಿಕ ಕಿರುಕುಳದ ಆರೋಪಿ ಬ್ರಿಜ್‌ಭೂಷಣ್ ಸಿಂಗ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ; ಪೋಕ್ಸೊ ಕೈಬಿಡಲು ಶಿಫಾರಸು

ಒಲಂಪಿಕ್ ಕಂಚಿನ ಪದಕ ವಿಜೇತೆ ಅಪ್ರಾಪ್ತ ಕುಸ್ತಿಪಟು ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾರೆ. ಅವಳ ಕುಟುಂಬದವರು ಬೆದರಿಕೆಗಳನ್ನು ಎದುರಿಸಿದ್ದರಿಂದ ತನ್ನ ಹೇಳಿಕೆಯನ್ನು ಬದಲಾಯಿಸಿದೆ ಎಂದು ಹೇಳಿಕೊಂಡಿದ್ದಾಳೆ. ಕ್ರೀಡಾಪಟುಗಳು ತಮ್ಮ ಮೇಲೆ ನಡೆಯುವ ಲೈಂಗಿಕ ಕಿರುಕುಳದ ಬಗ್ಗೆ ಮಾತನಾಡುವುದು ಕಷ್ಟ ಎಂದು ಅವರು ಹೇಳಿದರು.

”ಕುಸ್ತಿಯಲ್ಲಿ ತೊಡಗುವವರೆಲ್ಲರೂ ಬಡ ಕುಟುಂಬದಿಂದ ಬಂದವರು. ಅವರಿಗೆ ವ್ಯವಸ್ಥೆಯ ವಿರುದ್ಧ ಮತ್ತು ಅಂತಹ ಪ್ರಬಲ ವ್ಯಕ್ತಿಯ ವಿರುದ್ಧ ಮಾತನಾಡಲು ಧೈರ್ಯ ಬರುವುದಿಲ್ಲ” ಎಂದು ಹೇಳಿದ್ದಾರೆ.

ವೀಡಿಯೊದಲ್ಲಿ, ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ ಎಂಬ ಆರೋಪವನ್ನು ಕಡಿಯನ್ ನಿರಾಕರಿಸಿದರು. ಜನವರಿಯಲ್ಲಿ ಮೊದಲು ಪ್ರತಿಭಟನೆಯನ್ನು ಪ್ರಾರಂಭಿಸಿದಾಗ ಪೊಲೀಸರ ಅನುಮತಿ ಪಡೆಯಲು ಪತ್ರ ಬರೆದಿದ್ದಾರೆ ಎಂದು ಹೇಳಲು ಬಿಜೆಪಿ ನಾಯಕರಾದ ತಿರತ್ ರಾಣಾ ಮತ್ತು ಬಬಿತಾ ಫೋಗಟ್ ಅವರ ಹೆಸರಿರುವ ಪತ್ರವನ್ನು ತೋರಿಸಲಾಗಿದೆ.

ಕಡಿಯನ್ ಮತ್ತು ಮಲಿಕ್ ಶನಿವಾರ ತೋರಿಸಿದ ಪತ್ರದಲ್ಲಿ ರಾಣಾ ಮತ್ತು ಫೋಗಟ್ ಇಬ್ಬರ ಹೆಸರನ್ನು ಉಲ್ಲೇಖಿಸಲಾಗಿದೆ, ಆದರೆ ರಾಣಾ ಅವರ ಸಹಿ ಮಾತ್ರ ಇತ್ತು.

ಪ್ರತಿಭಟನಾಕಾರರು ಕಾಂಗ್ರೆಸ್ ನಾಯಕರ ಬೆಂಬಲ ಪಡೆಯುವ ಬದಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಬೇಕಿತ್ತು ಎಂದು ಬಬಿತಾ ಫೋಗಟ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...